AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravindra Jadeja: 12 ವಿಕೆಟ್ ಉರುಳಿಸಿದ ರವೀಂದ್ರ ಜಡೇಜಾ; ಡೆಲ್ಲಿ ತಂಡಕ್ಕೆ ಹೀನಾಯ ಸೋಲು

Ravindra Jadeja: ರವೀಂದ್ರ ಜಡೇಜಾ ಅವರು ರಣಜಿ ಟ್ರೋಫಿಯಲ್ಲಿ ದೆಹಲಿ ವಿರುದ್ಧ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ಮೊದಲ ಇನಿಂಗ್ಸ್‌ನಲ್ಲಿ ಐದು ಮತ್ತು ಎರಡನೇ ಇನಿಂಗ್ಸ್‌ನಲ್ಲಿ ಏಳು ವಿಕೆಟ್‌ಗಳನ್ನು ಪಡೆದು ಒಟ್ಟು 12 ವಿಕೆಟ್‌ಗಳನ್ನು ಪಡೆದರು. ಜಡೇಜಾ ಅವರ ಸ್ಪಿನ್ ಮ್ಯಾಜಿಕ್​ಹೆ ನಲುಗಿದ ದೆಹಲಿ ತಂಡ ಸಂಪೂರ್ಣವಾಗಿ ಶರಣಾಯಿತು. ಜಡೇಜಾ ಅವರ ಈ ಅದ್ಭುತ ಪ್ರದರ್ಶನ ಸೌರಾಷ್ಟ್ರ ತಂಡಕ್ಕೆ ಅಮೋಘ ಗೆಲುವನ್ನು ತಂದುಕೊಟ್ಟಿತು.

ಪೃಥ್ವಿಶಂಕರ
|

Updated on:Jan 24, 2025 | 8:49 PM

ರಣಜಿ ಟ್ರೋಫಿಯಲ್ಲಿ ಡೆಲ್ಲಿ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಕಬಳಿಸಿದ್ದ ರವೀಂದ್ರ ಜಡೇಜಾ, ಎರಡನೇ ಇನ್ನಿಂಗ್ಸ್‌ನಲ್ಲಿಯೂ ಮಾರಕ ದಾಳಿ ನಡೆಸಿ 7 ವಿಕೆಟ್‌ಗಳನ್ನು ಪಡೆಯುವ ಮೂಲಕ ಎದುರಾಳಿ ತಂಡವನ್ನು ಹೆಡೆಮುರಿ ಕಟ್ಟಿದರು. ಜಡೇಜಾ ಸ್ಪಿನ್ ಮ್ಯಾಜಿಕ್​ನ ಮುಂದೆ ಸ್ಫೋಟಕ ಬ್ಯಾಟ್ಸ್‌ಮನ್ ರಿಷಬ್ ಪಂತ್​ಗೂ ಕ್ರೀಸ್​ನಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲ. ಜಡೇಜಾ ಅವರ ವಿಧ್ವಂಸಕ ಎಸೆತಗಳ ಮುಂದೆ ಡೆಲ್ಲಿ ತಂಡ ಸಂಪೂರ್ಣ ಶರಣಾದಂತಿತ್ತು.

ರಣಜಿ ಟ್ರೋಫಿಯಲ್ಲಿ ಡೆಲ್ಲಿ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಕಬಳಿಸಿದ್ದ ರವೀಂದ್ರ ಜಡೇಜಾ, ಎರಡನೇ ಇನ್ನಿಂಗ್ಸ್‌ನಲ್ಲಿಯೂ ಮಾರಕ ದಾಳಿ ನಡೆಸಿ 7 ವಿಕೆಟ್‌ಗಳನ್ನು ಪಡೆಯುವ ಮೂಲಕ ಎದುರಾಳಿ ತಂಡವನ್ನು ಹೆಡೆಮುರಿ ಕಟ್ಟಿದರು. ಜಡೇಜಾ ಸ್ಪಿನ್ ಮ್ಯಾಜಿಕ್​ನ ಮುಂದೆ ಸ್ಫೋಟಕ ಬ್ಯಾಟ್ಸ್‌ಮನ್ ರಿಷಬ್ ಪಂತ್​ಗೂ ಕ್ರೀಸ್​ನಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲ. ಜಡೇಜಾ ಅವರ ವಿಧ್ವಂಸಕ ಎಸೆತಗಳ ಮುಂದೆ ಡೆಲ್ಲಿ ತಂಡ ಸಂಪೂರ್ಣ ಶರಣಾದಂತಿತ್ತು.

1 / 6
ಎರಡನೇ ಇನ್ನಿಂಗ್ಸ್‌ನಲ್ಲಿ ರವೀಂದ್ರ ಜಡೇಜಾ ಅದ್ಭುತ ಪ್ರದರ್ಶನ ನೀಡಿದರು. ಈ ಎಡಗೈ ಸ್ಪಿನ್ನರ್ ರಾಜ್‌ಕೋಟ್‌ನ ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ತಮ್ಮ ಅನುಭವದ ಧಾರೆ ಎರೆದರು. ಇದರಿಂದಾಗಿ ಡೆಲ್ಲಿ ಬ್ಯಾಟ್ಸ್​ಮನ್​ಗಳಿಗೆ ವಿಕೆಟ್​ನಲ್ಲಿ ಉಳಿಯುವುದು ಕಷ್ಟವಾಯಿತು. ಎರಡನೇ ಇನ್ನಿಂಗ್ಸ್‌ನಲ್ಲಿ ರವೀಂದ್ರ ಜಡೇಜಾ ಕೇವಲ 38 ರನ್‌ ನೀಡಿ 7 ವಿಕೆಟ್‌ ಪಡೆದರು. ಈ ಮೂಲಕ ಜಡೇಜಾ ಪಂದ್ಯದಲ್ಲಿ ಒಟ್ಟು 12 ವಿಕೆಟ್ ಪಡೆದರು.

ಎರಡನೇ ಇನ್ನಿಂಗ್ಸ್‌ನಲ್ಲಿ ರವೀಂದ್ರ ಜಡೇಜಾ ಅದ್ಭುತ ಪ್ರದರ್ಶನ ನೀಡಿದರು. ಈ ಎಡಗೈ ಸ್ಪಿನ್ನರ್ ರಾಜ್‌ಕೋಟ್‌ನ ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ತಮ್ಮ ಅನುಭವದ ಧಾರೆ ಎರೆದರು. ಇದರಿಂದಾಗಿ ಡೆಲ್ಲಿ ಬ್ಯಾಟ್ಸ್​ಮನ್​ಗಳಿಗೆ ವಿಕೆಟ್​ನಲ್ಲಿ ಉಳಿಯುವುದು ಕಷ್ಟವಾಯಿತು. ಎರಡನೇ ಇನ್ನಿಂಗ್ಸ್‌ನಲ್ಲಿ ರವೀಂದ್ರ ಜಡೇಜಾ ಕೇವಲ 38 ರನ್‌ ನೀಡಿ 7 ವಿಕೆಟ್‌ ಪಡೆದರು. ಈ ಮೂಲಕ ಜಡೇಜಾ ಪಂದ್ಯದಲ್ಲಿ ಒಟ್ಟು 12 ವಿಕೆಟ್ ಪಡೆದರು.

2 / 6
ಈ ಎಡಗೈ ಸ್ಪಿನ್ನರ್ ದೆಹಲಿಯ ಆರಂಭಿಕ ಆಟಗಾರ ಸನತ್ ಸಾಂಗ್ವಾನ್ ಅವರನ್ನು ಔಟ್ ಮಾಡಿದರು. ಇದಾದ ಬಳಿಕ ಅರ್ಪಿತ್ ರಾಣಾ ಕೂಡ ಜಡೇಜಾಗೆ ಬಲಿಯಾದರು. ಜಾಂಟಿ ಸಿಧು ಮತ್ತು ನಂತರ ರಿಷಬ್ ಪಂತ್ ಕೂಡ ಜಡೇಜಾಗೆ ವಿಕೆಟ್ ಒಪ್ಪಿಸಿದರು. ಮಯಾಂಕ್ ಗುಸೇನ್ ಅವರನ್ನು ಔಟ್ ಮಾಡುವ ಮೂಲಕ ಜಡೇಜಾ ತಮ್ಮ ಐದು ವಿಕೆಟ್‌ಗಳನ್ನು ಪೂರ್ಣಗೊಳಿಸಿದರು.

ಈ ಎಡಗೈ ಸ್ಪಿನ್ನರ್ ದೆಹಲಿಯ ಆರಂಭಿಕ ಆಟಗಾರ ಸನತ್ ಸಾಂಗ್ವಾನ್ ಅವರನ್ನು ಔಟ್ ಮಾಡಿದರು. ಇದಾದ ಬಳಿಕ ಅರ್ಪಿತ್ ರಾಣಾ ಕೂಡ ಜಡೇಜಾಗೆ ಬಲಿಯಾದರು. ಜಾಂಟಿ ಸಿಧು ಮತ್ತು ನಂತರ ರಿಷಬ್ ಪಂತ್ ಕೂಡ ಜಡೇಜಾಗೆ ವಿಕೆಟ್ ಒಪ್ಪಿಸಿದರು. ಮಯಾಂಕ್ ಗುಸೇನ್ ಅವರನ್ನು ಔಟ್ ಮಾಡುವ ಮೂಲಕ ಜಡೇಜಾ ತಮ್ಮ ಐದು ವಿಕೆಟ್‌ಗಳನ್ನು ಪೂರ್ಣಗೊಳಿಸಿದರು.

3 / 6
ಇದಾದ ಬಳಿಕ ಸುಮಿತ್ ಮಾಥೂರ್ ಕೂಡ ಜಡ್ಡುಗೆ ಬಲಿಯಾದರು. ಅಂತಿಮವಾಗಿ ಡೆಲ್ಲಿ ನಾಯಕ ಆಯುಷ್ ಬಧೋನಿ ಅವರನ್ನು ವಜಾ ಮಾಡುವ ಮೂಲಕ ಜಡೇಜಾ 7 ವಿಕೆಟ್​ಗಳನ್ನು ಪೂರ್ಣಗೊಳಿಸಿದರು. ಇದಲ್ಲದೆ ಜಡೇಜಾ ಎರಡನೇ ಇನ್ನಿಂಗ್ಸ್‌ನಲ್ಲಿ ಐವತ್ತು ಡಾಟ್ ಬಾಲ್‌ಗಳನ್ನು ಎಸೆದರು.

ಇದಾದ ಬಳಿಕ ಸುಮಿತ್ ಮಾಥೂರ್ ಕೂಡ ಜಡ್ಡುಗೆ ಬಲಿಯಾದರು. ಅಂತಿಮವಾಗಿ ಡೆಲ್ಲಿ ನಾಯಕ ಆಯುಷ್ ಬಧೋನಿ ಅವರನ್ನು ವಜಾ ಮಾಡುವ ಮೂಲಕ ಜಡೇಜಾ 7 ವಿಕೆಟ್​ಗಳನ್ನು ಪೂರ್ಣಗೊಳಿಸಿದರು. ಇದಲ್ಲದೆ ಜಡೇಜಾ ಎರಡನೇ ಇನ್ನಿಂಗ್ಸ್‌ನಲ್ಲಿ ಐವತ್ತು ಡಾಟ್ ಬಾಲ್‌ಗಳನ್ನು ಎಸೆದರು.

4 / 6
ರವೀಂದ್ರ ಜಡೇಜಾ ಅವರ ರಣಜಿ ಟ್ರೋಫಿ ದಾಖಲೆಯ ಕುರಿತು ಮಾತನಾಡುವುದಾದರೆ, ಜಡೇಜಾ19 ನೇ ಬಾರಿಗೆ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದಾರೆ. ಆರನೇ ಬಾರಿಗೆ ಪಂದ್ಯದಲ್ಲಿ 10 ವಿಕೆಟ್ ಉರುಳಿಸಿದ ಸಾಧನೆಯನ್ನು ಮಾಡಿದ್ದಾರೆ. ಜಡೇಜಾ ಅವರು 46 ರಣಜಿ ಟ್ರೋಫಿ ಪಂದ್ಯಗಳಲ್ಲಿ 208 ವಿಕೆಟ್‌ಗಳನ್ನು ಪಡೆದಿದ್ದು, ಅವರ ಬೌಲಿಂಗ್ ಸರಾಸರಿ ಕೇವಲ 21.25 ಆಗಿದೆ.

ರವೀಂದ್ರ ಜಡೇಜಾ ಅವರ ರಣಜಿ ಟ್ರೋಫಿ ದಾಖಲೆಯ ಕುರಿತು ಮಾತನಾಡುವುದಾದರೆ, ಜಡೇಜಾ19 ನೇ ಬಾರಿಗೆ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದಾರೆ. ಆರನೇ ಬಾರಿಗೆ ಪಂದ್ಯದಲ್ಲಿ 10 ವಿಕೆಟ್ ಉರುಳಿಸಿದ ಸಾಧನೆಯನ್ನು ಮಾಡಿದ್ದಾರೆ. ಜಡೇಜಾ ಅವರು 46 ರಣಜಿ ಟ್ರೋಫಿ ಪಂದ್ಯಗಳಲ್ಲಿ 208 ವಿಕೆಟ್‌ಗಳನ್ನು ಪಡೆದಿದ್ದು, ಅವರ ಬೌಲಿಂಗ್ ಸರಾಸರಿ ಕೇವಲ 21.25 ಆಗಿದೆ.

5 / 6
ಡೆಲ್ಲಿ ಮೊದಲ ಇನಿಂಗ್ಸ್‌ನಲ್ಲಿ 188 ರನ್ ಗಳಿಸಿತ್ತು, ಇದಕ್ಕೆ ಉತ್ತರವಾಗಿ ರವೀಂದ್ರ ಜಡೇಜಾ ತಂಡ 271 ರನ್ ಗಳಿಸಿ 83 ರನ್‌ಗಳ ಮುನ್ನಡೆ ಸಾಧಿಸಿತ್ತು. ಇದರ ನಂತರ, ಎರಡನೇ ಇನ್ನಿಂಗ್ಸ್‌ನಲ್ಲಿ, ಜಡೇಜಾ ಅವರ ಮಾರಕ ಬೌಲಿಂಗ್‌ನ ಆಧಾರದ ಮೇಲೆ, ಸೌರಾಷ್ಟ್ರ ಡೆಲ್ಲಿಯನ್ನು ಕೇವಲ 94 ರನ್‌ಗಳಿಗೆ ಕಟ್ಟಿಹಾಕಿತು. ಈ ಮೂಲಕ ಕೇವಲ 12 ರನ್‌ಗಳ ಗುರಿಯನ್ನು ಸೌರಾಷ್ಟ್ರ ಕೇವಲ 3.1 ಓವರ್‌ಗಳಲ್ಲಿ 10 ವಿಕೆಟ್‌ಗಳು ಬಾಕಿ ಇರುವಂತೆಯೇ ಸುಲಭವಾಗಿ ಬೆನ್ನಟ್ಟಿತು.

ಡೆಲ್ಲಿ ಮೊದಲ ಇನಿಂಗ್ಸ್‌ನಲ್ಲಿ 188 ರನ್ ಗಳಿಸಿತ್ತು, ಇದಕ್ಕೆ ಉತ್ತರವಾಗಿ ರವೀಂದ್ರ ಜಡೇಜಾ ತಂಡ 271 ರನ್ ಗಳಿಸಿ 83 ರನ್‌ಗಳ ಮುನ್ನಡೆ ಸಾಧಿಸಿತ್ತು. ಇದರ ನಂತರ, ಎರಡನೇ ಇನ್ನಿಂಗ್ಸ್‌ನಲ್ಲಿ, ಜಡೇಜಾ ಅವರ ಮಾರಕ ಬೌಲಿಂಗ್‌ನ ಆಧಾರದ ಮೇಲೆ, ಸೌರಾಷ್ಟ್ರ ಡೆಲ್ಲಿಯನ್ನು ಕೇವಲ 94 ರನ್‌ಗಳಿಗೆ ಕಟ್ಟಿಹಾಕಿತು. ಈ ಮೂಲಕ ಕೇವಲ 12 ರನ್‌ಗಳ ಗುರಿಯನ್ನು ಸೌರಾಷ್ಟ್ರ ಕೇವಲ 3.1 ಓವರ್‌ಗಳಲ್ಲಿ 10 ವಿಕೆಟ್‌ಗಳು ಬಾಕಿ ಇರುವಂತೆಯೇ ಸುಲಭವಾಗಿ ಬೆನ್ನಟ್ಟಿತು.

6 / 6

Published On - 8:43 pm, Fri, 24 January 25

Follow us
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ