AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

17 ಸಿಕ್ಸ್, 51 ಫೋರ್​… RCB ತಂಡದಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಂಡ ದೇವದತ್ ಪಡಿಕ್ಕಲ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ಪರ ಕಳೆದ ಸೀಸನ್​ನಲ್ಲಿ ದೇವದತ್ ಪಡಿಕ್ಕಲ್ 10 ಪಂದ್ಯಗಳನ್ನಾಡಿದ್ದರು. ಈ ವೇಳೆ 2 ಅರ್ಧಶತಕಗಳೊಂದಿಗೆ ಒಟ್ಟು 247 ರನ್ ಕಲೆಹಾಕಿದ್ದರು. ಇದೀಗ ಮಹಾರಾಜ ಟೂರ್ನಿಯಲ್ಲೂ ಪಡಿಕ್ಕಲ್ ಭರ್ಜರಿ ಪ್ರದರ್ಶನ ನೀಡಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 31, 2025 | 7:55 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಸೀಸನ್-19 ರಲ್ಲಿ ದೇವದತ್ ಪಡಿಕ್ಕಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಲ್ಲಿ ಕಾಣಿಸಿಕೊಳ್ಳುವುದು ಖಚಿತ. ಏಕೆಂದರೆ ಇತ್ತೀಚೆಗೆ ನಡೆದ ಮಹಾರಾಜ ಟ್ರೋಫಿ ಟೂರ್ನಿಯ ಮೂಲಕ ಪಡಿಕ್ಕಲ್ ಅಮೋಘ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ಆರ್​ಸಿಬಿ ತಂಡದಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಸೀಸನ್-19 ರಲ್ಲಿ ದೇವದತ್ ಪಡಿಕ್ಕಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಲ್ಲಿ ಕಾಣಿಸಿಕೊಳ್ಳುವುದು ಖಚಿತ. ಏಕೆಂದರೆ ಇತ್ತೀಚೆಗೆ ನಡೆದ ಮಹಾರಾಜ ಟ್ರೋಫಿ ಟೂರ್ನಿಯ ಮೂಲಕ ಪಡಿಕ್ಕಲ್ ಅಮೋಘ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ಆರ್​ಸಿಬಿ ತಂಡದಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

1 / 5
ಕಳೆದ ಸೀಸನ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ದೇವದತ್ ಪಡಿಕ್ಕಲ್ ಕೊನೆಯ ಪಂದ್ಯಗಳ ವೇಳೆ ಗಾಯಗೊಂಡಿದ್ದರು. ಹೀಗಾಗಿ ಅವರ ಬದಲಿಗೆ ಮಯಾಂಕ್ ಅಗರ್ವಾಲ್ ಅವರನ್ನು ಆಯ್ಕೆ ಮಾಡಲಾಗಿತ್ತು. ಇತ್ತ ಬದಲಿಯಾಗಿ ಎಂಟ್ರಿ ಕೊಟ್ಟಿದ್ದ ಮಯಾಂಕ್ ಕೂಡ ಉತ್ತಮ ಪ್ರದರ್ಶನ ನೀಡಿದ್ದರು.

ಕಳೆದ ಸೀಸನ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ದೇವದತ್ ಪಡಿಕ್ಕಲ್ ಕೊನೆಯ ಪಂದ್ಯಗಳ ವೇಳೆ ಗಾಯಗೊಂಡಿದ್ದರು. ಹೀಗಾಗಿ ಅವರ ಬದಲಿಗೆ ಮಯಾಂಕ್ ಅಗರ್ವಾಲ್ ಅವರನ್ನು ಆಯ್ಕೆ ಮಾಡಲಾಗಿತ್ತು. ಇತ್ತ ಬದಲಿಯಾಗಿ ಎಂಟ್ರಿ ಕೊಟ್ಟಿದ್ದ ಮಯಾಂಕ್ ಕೂಡ ಉತ್ತಮ ಪ್ರದರ್ಶನ ನೀಡಿದ್ದರು.

2 / 5
ಹೀಗಾಗಿ ಮುಂದಿನ ಸೀಸನ್​​​ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಯಾರನ್ನು ತಂಡದಲ್ಲಿ ಉಳಿಸಿಕೊಳ್ಳಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಆದರೀಗ ಮಹಾರಾಜ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ದೇವದತ್ ಪಡಿಕ್ಕಲ್ ತನ್ನ ಭರ್ಜರಿ ಫಾರ್ಮ್​ ಅನ್ನು ತೆರೆದಿಟ್ಟಿದ್ದಾರೆ. ಹೀಗಾಗಿ ಆರ್​ಸಿಬಿ ಅವರನ್ನು ತಂಡದಿಂದ ಕೈ ಬಿಡುವ ಸಾಧ್ಯತೆಯೇ ಇಲ್ಲ ಎನ್ನಬಹುದು.

ಹೀಗಾಗಿ ಮುಂದಿನ ಸೀಸನ್​​​ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಯಾರನ್ನು ತಂಡದಲ್ಲಿ ಉಳಿಸಿಕೊಳ್ಳಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಆದರೀಗ ಮಹಾರಾಜ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ದೇವದತ್ ಪಡಿಕ್ಕಲ್ ತನ್ನ ಭರ್ಜರಿ ಫಾರ್ಮ್​ ಅನ್ನು ತೆರೆದಿಟ್ಟಿದ್ದಾರೆ. ಹೀಗಾಗಿ ಆರ್​ಸಿಬಿ ಅವರನ್ನು ತಂಡದಿಂದ ಕೈ ಬಿಡುವ ಸಾಧ್ಯತೆಯೇ ಇಲ್ಲ ಎನ್ನಬಹುದು.

3 / 5
ಈ ಬಾರಿಯ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಹುಬ್ಬಳ್ಳಿ ಟೈಗರ್ಸ್ ಪರ 12 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ದೇವದತ್ ಪಡಿಕ್ಕಲ್ 4 ಅರ್ಧಶತಕಗಳೊಂದಿಗೆ ಒಟ್ಟು 449 ರನ್ ಕಲೆಹಾಕಿದ್ದಾರೆ. ಇದರ ನಡುವೆ 17 ಸಿಕ್ಸ್ ಹಾಗೂ 51 ಫೋರ್​ಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

ಈ ಬಾರಿಯ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಹುಬ್ಬಳ್ಳಿ ಟೈಗರ್ಸ್ ಪರ 12 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ದೇವದತ್ ಪಡಿಕ್ಕಲ್ 4 ಅರ್ಧಶತಕಗಳೊಂದಿಗೆ ಒಟ್ಟು 449 ರನ್ ಕಲೆಹಾಕಿದ್ದಾರೆ. ಇದರ ನಡುವೆ 17 ಸಿಕ್ಸ್ ಹಾಗೂ 51 ಫೋರ್​ಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

4 / 5
ಅತ್ತ ಕಳೆದ ಸೀಸನ್​​ನಲ್ಲಿ RCB ಪರ 10 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ದೇವದತ್ ಪಡಿಕ್ಕಲ್ 2 ಅರ್ಧಶತಕಗಳೊಂದಿಗೆ 247 ರನ್ ಕಲೆಹಾಕಿದ್ದರು. ಇದೀಗ ಮಹಾರಾಜ ಟೂರ್ನಿಯಲ್ಲಿ 154.83ರ ಸ್ಟ್ರೇಕ್ ರೇಟ್​ನಲ್ಲಿ 449 ರನ್​ ಗಳಿಸಿದ್ದಾರೆ. ಈ ಭರ್ಜರಿ ಪ್ರದರ್ಶನದೊಂದಿಗೆ ದೇವದತ್ ಪಡಿಕ್ಕಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಿಟೈನ್ ಆಟಗಾರರ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

ಅತ್ತ ಕಳೆದ ಸೀಸನ್​​ನಲ್ಲಿ RCB ಪರ 10 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ದೇವದತ್ ಪಡಿಕ್ಕಲ್ 2 ಅರ್ಧಶತಕಗಳೊಂದಿಗೆ 247 ರನ್ ಕಲೆಹಾಕಿದ್ದರು. ಇದೀಗ ಮಹಾರಾಜ ಟೂರ್ನಿಯಲ್ಲಿ 154.83ರ ಸ್ಟ್ರೇಕ್ ರೇಟ್​ನಲ್ಲಿ 449 ರನ್​ ಗಳಿಸಿದ್ದಾರೆ. ಈ ಭರ್ಜರಿ ಪ್ರದರ್ಶನದೊಂದಿಗೆ ದೇವದತ್ ಪಡಿಕ್ಕಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಿಟೈನ್ ಆಟಗಾರರ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ