AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಹರಾಜಿಗೂ ಮುನ್ನ ಆರ್​ಸಿಬಿ ಉಳಿಸಿಕೊಳ್ಳಬಹುದಾದ ಐವರು ಆಟಗಾರರರು ಇವರೇ..

RCB: ಐಪಿಎಲ್ 2025 ರ ಮೊದಲು ಮೆಗಾ ಹರಾಜು ನಡೆಯಲಿದೆ. ಅದಕ್ಕೂ ಮುನ್ನ ಆಟಗಾರರನ್ನು ಉಳಿಸಿಕೊಳ್ಳಲು ಬಿಸಿಸಿಐ ನಿಯಮಗಳನ್ನು ಹೊರಡಿಸಿದೆ. ಅದರಂತೆ ಪ್ರತಿ ಫ್ರಾಂಚೈಸಿ ಗರಿಷ್ಠ ಐವರು ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು. ಇದರಲ್ಲಿ ಒಮ್ಮೆಯೂ ಐಪಿಎಲ್ ಪ್ರಶಸ್ತಿ ಗೆಲ್ಲದ ಆರ್​ಸಿಬಿ ಫ್ರಾಂಚೈಸಿ ಹರಾಜಿಗೂ ಮುನ್ನ ಯಾವ್ಯಾವ ಆಟಗಾರನನ್ನು ಉಳಿಸಿಕೊಳ್ಳಬಹುದು ಎಂಬುದರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

ಪೃಥ್ವಿಶಂಕರ
|

Updated on: Sep 29, 2024 | 7:22 PM

ಐಪಿಎಲ್ 2025 ರ ಮೊದಲು ಮೆಗಾ ಹರಾಜು ನಡೆಯಲಿದೆ. ಅದಕ್ಕೂ ಮುನ್ನ ಆಟಗಾರರನ್ನು ಉಳಿಸಿಕೊಳ್ಳಲು ಬಿಸಿಸಿಐ ನಿಯಮಗಳನ್ನು ಹೊರಡಿಸಿದೆ. ಅದರಂತೆ ಪ್ರತಿ ಫ್ರಾಂಚೈಸಿ ಗರಿಷ್ಠ ಐವರು ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು. ಇದರಲ್ಲಿ ಒಮ್ಮೆಯೂ ಐಪಿಎಲ್ ಪ್ರಶಸ್ತಿ ಗೆಲ್ಲದ ಆರ್​ಸಿಬಿ ಫ್ರಾಂಚೈಸಿ ಹರಾಜಿಗೂ ಮುನ್ನ ಯಾವ್ಯಾವ ಆಟಗಾರನನ್ನು ಉಳಿಸಿಕೊಳ್ಳಬಹುದು ಎಂಬುದರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

ಐಪಿಎಲ್ 2025 ರ ಮೊದಲು ಮೆಗಾ ಹರಾಜು ನಡೆಯಲಿದೆ. ಅದಕ್ಕೂ ಮುನ್ನ ಆಟಗಾರರನ್ನು ಉಳಿಸಿಕೊಳ್ಳಲು ಬಿಸಿಸಿಐ ನಿಯಮಗಳನ್ನು ಹೊರಡಿಸಿದೆ. ಅದರಂತೆ ಪ್ರತಿ ಫ್ರಾಂಚೈಸಿ ಗರಿಷ್ಠ ಐವರು ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು. ಇದರಲ್ಲಿ ಒಮ್ಮೆಯೂ ಐಪಿಎಲ್ ಪ್ರಶಸ್ತಿ ಗೆಲ್ಲದ ಆರ್​ಸಿಬಿ ಫ್ರಾಂಚೈಸಿ ಹರಾಜಿಗೂ ಮುನ್ನ ಯಾವ್ಯಾವ ಆಟಗಾರನನ್ನು ಉಳಿಸಿಕೊಳ್ಳಬಹುದು ಎಂಬುದರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

1 / 6
ವಿರಾಟ್ ಕೊಹ್ಲಿ ಐಪಿಎಲ್ ಮೊದಲ ಸೀಸನ್‌ನಿಂದ ಆರ್‌ಸಿಬಿ ಪರ ಆಡುತ್ತಿದ್ದಾರೆ. ಲೀಗ್ ಇತಿಹಾಸದಲ್ಲಿ ಎಲ್ಲಾ ಸೀಸನ್​ನಲ್ಲೂ ಒಂದೇ ತಂಡದ ಪರ ಕಣಕ್ಕಿಳಿದ ಏಕೈಕ ಆಟಗಾರ ಕೊಹ್ಲಿ. ಹೀಗಾಗಿ ವಿರಾಟ್ ಮತ್ತೊಮ್ಮೆ ಆರ್ಸಿಬಿಯ ಭಾಗವಾಗುವುದು ಬಹುತೇಕ ಖಚಿತವಾಗಿದೆ.

ವಿರಾಟ್ ಕೊಹ್ಲಿ ಐಪಿಎಲ್ ಮೊದಲ ಸೀಸನ್‌ನಿಂದ ಆರ್‌ಸಿಬಿ ಪರ ಆಡುತ್ತಿದ್ದಾರೆ. ಲೀಗ್ ಇತಿಹಾಸದಲ್ಲಿ ಎಲ್ಲಾ ಸೀಸನ್​ನಲ್ಲೂ ಒಂದೇ ತಂಡದ ಪರ ಕಣಕ್ಕಿಳಿದ ಏಕೈಕ ಆಟಗಾರ ಕೊಹ್ಲಿ. ಹೀಗಾಗಿ ವಿರಾಟ್ ಮತ್ತೊಮ್ಮೆ ಆರ್ಸಿಬಿಯ ಭಾಗವಾಗುವುದು ಬಹುತೇಕ ಖಚಿತವಾಗಿದೆ.

2 / 6
ಟೀಂ ಇಂಡಿಯಾದ ಪ್ರಮುಖ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವುದು ಬಹುತೇಕ ಖಚಿತ. ಸಿರಾಜ್ ಎಲ್ಲಾ ಮೂರು ಮಾದರಿಗಳಲ್ಲಿ ಭಾರತ ತಂಡದ ಭಾಗವಾಗಿದ್ದಾರೆ. ಹೊಸ ಚೆಂಡು ಹಾಗೂ ಡೆತ್ ಓವರ್‌ಗಳಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಬಲ್ಲರು. ಅಂತಹ ಪರಿಸ್ಥಿತಿಯಲ್ಲಿ, ಫ್ರ್ಯಾಂಚೈಸ್ ಅವರನ್ನು ತಂಡದಿಂದ ಕೈಬಿಡುವ ಯೋಚನೆ ಮಾಡುವುದಿಲ್ಲ.

ಟೀಂ ಇಂಡಿಯಾದ ಪ್ರಮುಖ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವುದು ಬಹುತೇಕ ಖಚಿತ. ಸಿರಾಜ್ ಎಲ್ಲಾ ಮೂರು ಮಾದರಿಗಳಲ್ಲಿ ಭಾರತ ತಂಡದ ಭಾಗವಾಗಿದ್ದಾರೆ. ಹೊಸ ಚೆಂಡು ಹಾಗೂ ಡೆತ್ ಓವರ್‌ಗಳಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಬಲ್ಲರು. ಅಂತಹ ಪರಿಸ್ಥಿತಿಯಲ್ಲಿ, ಫ್ರ್ಯಾಂಚೈಸ್ ಅವರನ್ನು ತಂಡದಿಂದ ಕೈಬಿಡುವ ಯೋಚನೆ ಮಾಡುವುದಿಲ್ಲ.

3 / 6
ಇಂಗ್ಲೆಂಡ್​ನ ಸ್ಫೋಟಕ ಬ್ಯಾಟ್ಸ್‌ಮನ್ ವಿಲ್ ಜಾಕ್ಸ್ ಕಳೆದ ಐಪಿಎಲ್​ನಲ್ಲಿ ಸಿಡಿಲಬ್ಬರದ ಶತಕ ಬಾರಿಸಿದ್ದರು. ಇದಲ್ಲದೇ ಬೌಲಿಂಗ್​ನಲ್ಲೂ ಎರಡು ವಿಕೆಟ್ ಪಡೆದಿದ್ದರು. ಜಾಕ್ಸ್ ತನ್ನ ಸ್ಫೋಟಕ ಬ್ಯಾಟಿಂಗ್​ನಿಂದ ಪಂದ್ಯದ ದಿಕ್ಕು ಬದಲಿಸುವ ಸಾಮಥ್ಯ್ರ ಹೊಂದಿದ್ದಾರೆ. ಇದೇ ಕಾರಣಕ್ಕೆ ಆರ್‌ಸಿಬಿ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು.

ಇಂಗ್ಲೆಂಡ್​ನ ಸ್ಫೋಟಕ ಬ್ಯಾಟ್ಸ್‌ಮನ್ ವಿಲ್ ಜಾಕ್ಸ್ ಕಳೆದ ಐಪಿಎಲ್​ನಲ್ಲಿ ಸಿಡಿಲಬ್ಬರದ ಶತಕ ಬಾರಿಸಿದ್ದರು. ಇದಲ್ಲದೇ ಬೌಲಿಂಗ್​ನಲ್ಲೂ ಎರಡು ವಿಕೆಟ್ ಪಡೆದಿದ್ದರು. ಜಾಕ್ಸ್ ತನ್ನ ಸ್ಫೋಟಕ ಬ್ಯಾಟಿಂಗ್​ನಿಂದ ಪಂದ್ಯದ ದಿಕ್ಕು ಬದಲಿಸುವ ಸಾಮಥ್ಯ್ರ ಹೊಂದಿದ್ದಾರೆ. ಇದೇ ಕಾರಣಕ್ಕೆ ಆರ್‌ಸಿಬಿ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು.

4 / 6
ಆಸ್ಟ್ರೇಲಿಯಾದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಉಳಿಯಬಹುದು. ಕಳೆದ ಐಪಿಎಲ್​ನಲ್ಲಿ ಟ್ರೇಡಿಂಗ್ ಮೂಲಕ ಮುಂಬೈ ಇಂಡಿಯನ್ಸ್​ ತಂಡದಿಂದ ಆರ್​ಸಿಬಿಗೆ ಸೇರಿಕೊಂಡಿದ್ದ ಗ್ರೀನ್, ಆಲ್​ರೌಂಡರ್ ಪಾತ್ರವನ್ನು ಉತ್ತಮವಾಗಿ ನಿರ್ವಹಿಸಿದ್ದರು. ಅಲ್ಲದೆ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಬಿಡುಗಡೆ ಮಾಡುವ ಮೂಲಕ ಫ್ರಾಂಚೈಸ್ ಗ್ರೀನ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು.

ಆಸ್ಟ್ರೇಲಿಯಾದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಉಳಿಯಬಹುದು. ಕಳೆದ ಐಪಿಎಲ್​ನಲ್ಲಿ ಟ್ರೇಡಿಂಗ್ ಮೂಲಕ ಮುಂಬೈ ಇಂಡಿಯನ್ಸ್​ ತಂಡದಿಂದ ಆರ್​ಸಿಬಿಗೆ ಸೇರಿಕೊಂಡಿದ್ದ ಗ್ರೀನ್, ಆಲ್​ರೌಂಡರ್ ಪಾತ್ರವನ್ನು ಉತ್ತಮವಾಗಿ ನಿರ್ವಹಿಸಿದ್ದರು. ಅಲ್ಲದೆ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಬಿಡುಗಡೆ ಮಾಡುವ ಮೂಲಕ ಫ್ರಾಂಚೈಸ್ ಗ್ರೀನ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು.

5 / 6
ರಜತ್ ಪಾಟಿದಾರ್ ಸ್ಪಿನ್ ಹಾಗೂ ಪೇಸ್ ಬೌಲಿಂಗ್ ವಿರುದ್ಧ ಉತ್ತಮವಾಗಿ ಬ್ಯಾಟ್ ಮಾಡುವ ಸಾಮಥ್ರ್ಯ ಹೊಂದಿದ್ದಾರೆ. ಐಪಿಎಲ್‌ನ ಕಳೆದ 24 ಇನ್ನಿಂಗ್ಸ್‌ಗಳಲ್ಲಿ, ಅವರು 35 ರ ಸರಾಸರಿ ಮತ್ತು 159 ಸ್ಟ್ರೈಕ್ ರೇಟ್‌ನಲ್ಲಿ 799 ರನ್ ಗಳಿಸಿದ್ದಾರೆ. ಇದರಲ್ಲಿ 51 ಬೌಂಡರಿ ಹಾಗೂ 54 ಸಿಕ್ಸರ್‌ಗಳು ಸೇರಿವೆ. ಅಂತಹ ಪರಿಸ್ಥಿತಿಯಲ್ಲಿ, ಅವರು ತಂಡದಲ್ಲಿ ಉಳಿಯುವುದು ಬಹುತೇಕ ಖಚಿತವಾಗಿದೆ.

ರಜತ್ ಪಾಟಿದಾರ್ ಸ್ಪಿನ್ ಹಾಗೂ ಪೇಸ್ ಬೌಲಿಂಗ್ ವಿರುದ್ಧ ಉತ್ತಮವಾಗಿ ಬ್ಯಾಟ್ ಮಾಡುವ ಸಾಮಥ್ರ್ಯ ಹೊಂದಿದ್ದಾರೆ. ಐಪಿಎಲ್‌ನ ಕಳೆದ 24 ಇನ್ನಿಂಗ್ಸ್‌ಗಳಲ್ಲಿ, ಅವರು 35 ರ ಸರಾಸರಿ ಮತ್ತು 159 ಸ್ಟ್ರೈಕ್ ರೇಟ್‌ನಲ್ಲಿ 799 ರನ್ ಗಳಿಸಿದ್ದಾರೆ. ಇದರಲ್ಲಿ 51 ಬೌಂಡರಿ ಹಾಗೂ 54 ಸಿಕ್ಸರ್‌ಗಳು ಸೇರಿವೆ. ಅಂತಹ ಪರಿಸ್ಥಿತಿಯಲ್ಲಿ, ಅವರು ತಂಡದಲ್ಲಿ ಉಳಿಯುವುದು ಬಹುತೇಕ ಖಚಿತವಾಗಿದೆ.

6 / 6
Follow us
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ