AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡವನ್ನು ಮುನ್ನಡೆಸಿ ವಿಶೇಷ ದಾಖಲೆ ಬರೆದ ಜಿತೇಶ್ ಶರ್ಮಾ

IPL 2025 RCB Captain: ಐಪಿಎಲ್ ಸೀಸನ್-17 ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಒಟ್ಟು 7 ನಾಯಕರುಗಳು ಮುನ್ನಡೆಸಿದ್ದಾರೆ. ಇವರಲ್ಲಿ ಕೊನೆಯವರು ಫಾಫ್ ಡುಪ್ಲೆಸಿಸ್. ಇದೀಗ ಐಪಿಎಲ್ 2025 ರಲ್ಲಿ ಆರ್​ಸಿಬಿ ತಂಡವನ್ನು ಇಬ್ಬರು ಮುನ್ನಡೆಸಿದ್ದಾರೆ. ಇದರೊಂದಿಗೆ ಆರ್​ಸಿಬಿ ತಂಡದ ನಾಯಕರುಗಳ ಸಂಖ್ಯೆ 9 ಕ್ಕೇರಿದೆ.

ಝಾಹಿರ್ ಯೂಸುಫ್
|

Updated on: May 24, 2025 | 12:32 PM

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಈವರೆಗೆ 9 ಕ್ಯಾಪ್ಟನ್​ಗಳು ಮುನ್ನಡೆಸಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸುವ ಮೂಲಕ ಜಿತೇಶ್ ಆರ್​ಸಿಬಿ ತಂಡದ 9ನೇ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದರೊಂದಿಗೆ ವಿಶೇಷ ದಾಖಲೆಯನ್ನು ಸಹ ಬರೆದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಈವರೆಗೆ 9 ಕ್ಯಾಪ್ಟನ್​ಗಳು ಮುನ್ನಡೆಸಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸುವ ಮೂಲಕ ಜಿತೇಶ್ ಆರ್​ಸಿಬಿ ತಂಡದ 9ನೇ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದರೊಂದಿಗೆ ವಿಶೇಷ ದಾಖಲೆಯನ್ನು ಸಹ ಬರೆದಿದ್ದಾರೆ.

1 / 11
ಅಂದರೆ ಆರ್​ಸಿಬಿ ತಂಡವನ್ನು ಈವರೆಗೆ ಯಾವುದೇ ವಿಕೆಟ್ ಕೀಪರ್ ಮುನ್ನಡೆಸಿಲ್ಲ. ಇದೇ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಾರಥಿಯಾಗಿ ವಿಕೆಟ್ ಕೀಪರ್ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಆರ್​ಸಿಬಿ ತಂಡವನ್ನು ಮುನ್ನಡೆಸಿದ ಮೊದಲ ವಿಕೆಟ್ ಕೀಪರ್  ನಾಯಕ ಎಂಬ ಹೆಗ್ಗಳಿಕೆಯನ್ನು ಜಿತೇಶ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಆರ್​ಸಿಬಿ ತಂಡವನ್ನು ಈವರೆಗೆ ಮುನ್ನಡೆಸಿದ ನಾಯಕರುಗಳು ಯಾರೆಲ್ಲಾ ಎಂದು ನೋಡುವುದಾದರೆ...

ಅಂದರೆ ಆರ್​ಸಿಬಿ ತಂಡವನ್ನು ಈವರೆಗೆ ಯಾವುದೇ ವಿಕೆಟ್ ಕೀಪರ್ ಮುನ್ನಡೆಸಿಲ್ಲ. ಇದೇ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಾರಥಿಯಾಗಿ ವಿಕೆಟ್ ಕೀಪರ್ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಆರ್​ಸಿಬಿ ತಂಡವನ್ನು ಮುನ್ನಡೆಸಿದ ಮೊದಲ ವಿಕೆಟ್ ಕೀಪರ್  ನಾಯಕ ಎಂಬ ಹೆಗ್ಗಳಿಕೆಯನ್ನು ಜಿತೇಶ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಆರ್​ಸಿಬಿ ತಂಡವನ್ನು ಈವರೆಗೆ ಮುನ್ನಡೆಸಿದ ನಾಯಕರುಗಳು ಯಾರೆಲ್ಲಾ ಎಂದು ನೋಡುವುದಾದರೆ...

2 / 11
ರಾಹುಲ್ ದ್ರಾವಿಡ್: ಆರ್​ಸಿಬಿ ತಂಡದ ಮೊದಲ ನಾಯಕ ರಾಹುಲ್ ದ್ರಾವಿಡ್. 2008 ರ ಚೊಚ್ಚಲ ಐಪಿಎಲ್​ನಲ್ಲಿ ಆರ್​ಸಿಬಿ ತಂಡವನ್ನು 14 ಪಂದ್ಯಗಳಲ್ಲಿ ದ್ರಾವಿಡ್ ಮುನ್ನಡೆಸಿದ್ದರು. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆ ಕೇವಲ 4 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು.

ರಾಹುಲ್ ದ್ರಾವಿಡ್: ಆರ್​ಸಿಬಿ ತಂಡದ ಮೊದಲ ನಾಯಕ ರಾಹುಲ್ ದ್ರಾವಿಡ್. 2008 ರ ಚೊಚ್ಚಲ ಐಪಿಎಲ್​ನಲ್ಲಿ ಆರ್​ಸಿಬಿ ತಂಡವನ್ನು 14 ಪಂದ್ಯಗಳಲ್ಲಿ ದ್ರಾವಿಡ್ ಮುನ್ನಡೆಸಿದ್ದರು. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆ ಕೇವಲ 4 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು.

3 / 11
ಕೆವಿನ್ ಪೀಟರ್ಸನ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ 2ನೇ ನಾಯಕ ಇಂಗ್ಲೆಂಡ್ ಕ್ರಿಕೆಟಿಗ ಕೆವಿನ್ ಪೀಟರ್ಸನ್. 2009 ರಲ್ಲಿ ಪೀಟರ್ಸನ್ ಆರ್​ಸಿಬಿ ತಂಡವನ್ನು 6 ಪಂದ್ಯಗಳಲ್ಲಿ ಮುನ್ನಡೆಸಿದ್ದರು. ಈ ವೇಳೆ ಆರ್​ಸಿಬಿ ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ದಾಖಲಿಸಿತ್ತು.

ಕೆವಿನ್ ಪೀಟರ್ಸನ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ 2ನೇ ನಾಯಕ ಇಂಗ್ಲೆಂಡ್ ಕ್ರಿಕೆಟಿಗ ಕೆವಿನ್ ಪೀಟರ್ಸನ್. 2009 ರಲ್ಲಿ ಪೀಟರ್ಸನ್ ಆರ್​ಸಿಬಿ ತಂಡವನ್ನು 6 ಪಂದ್ಯಗಳಲ್ಲಿ ಮುನ್ನಡೆಸಿದ್ದರು. ಈ ವೇಳೆ ಆರ್​ಸಿಬಿ ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ದಾಖಲಿಸಿತ್ತು.

4 / 11
ಅನಿಲ್ ಕುಂಬ್ಳೆ: 2009 ರಲ್ಲಿ ಕೆವಿನ್ ಪೀಟರ್ಸನ್ ಅರ್ಧದಲ್ಲೇ ಟೂರ್ನಿ ತೊರೆದಿದ್ದರು. ಹೀಗಾಗಿ ಅನಿಲ್ ಕುಂಬ್ಳೆ ಉಳಿದ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆರ್​ಸಿಬಿ ಅಂತಿಮ ಮ್ಯಾಚ್​ನಲ್ಲಿ ಡೆಕ್ಕನ್ ಚಾರ್ಜರ್ಸ್​ ವಿರುದ್ದ ಸೋತು ಪ್ರಶಸ್ತಿಯನ್ನು ಕೈಚೆಲ್ಲಿಕೊಂಡಿತು. ಇನ್ನು 2010ರಲ್ಲೂ ನಾಯಕರಾಗಿ ಮುಂದುವರೆದ ಕುಂಬ್ಳೆ ಒಟ್ಟು 35 ಪಂದ್ಯಗಳಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದಾರೆ. ಕುಂಬ್ಳೆ ನಾಯಕತ್ವದಲ್ಲಿ ಆರ್​ಸಿಬಿ 19 ಪಂದ್ಯಗಳಲ್ಲಿ ಜಯ ಸಾಧಿಸಿದೆ.

ಅನಿಲ್ ಕುಂಬ್ಳೆ: 2009 ರಲ್ಲಿ ಕೆವಿನ್ ಪೀಟರ್ಸನ್ ಅರ್ಧದಲ್ಲೇ ಟೂರ್ನಿ ತೊರೆದಿದ್ದರು. ಹೀಗಾಗಿ ಅನಿಲ್ ಕುಂಬ್ಳೆ ಉಳಿದ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆರ್​ಸಿಬಿ ಅಂತಿಮ ಮ್ಯಾಚ್​ನಲ್ಲಿ ಡೆಕ್ಕನ್ ಚಾರ್ಜರ್ಸ್​ ವಿರುದ್ದ ಸೋತು ಪ್ರಶಸ್ತಿಯನ್ನು ಕೈಚೆಲ್ಲಿಕೊಂಡಿತು. ಇನ್ನು 2010ರಲ್ಲೂ ನಾಯಕರಾಗಿ ಮುಂದುವರೆದ ಕುಂಬ್ಳೆ ಒಟ್ಟು 35 ಪಂದ್ಯಗಳಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದಾರೆ. ಕುಂಬ್ಳೆ ನಾಯಕತ್ವದಲ್ಲಿ ಆರ್​ಸಿಬಿ 19 ಪಂದ್ಯಗಳಲ್ಲಿ ಜಯ ಸಾಧಿಸಿದೆ.

5 / 11
ಡೇನಿಯಲ್ ವೆಟ್ಟೋರಿ: ಆರ್​ಸಿಬಿ ತಂಡದ ನಾಲ್ಕನೇ ನಾಯಕ ಡೇನಿಯಲ್ ವೆಟ್ಟೋರಿ. 2011 ರಲ್ಲಿ ವೆಟ್ಟೋರಿ ನಾಯಕತ್ವದಲ್ಲಿ ಆರ್​ಸಿಬಿ 2ನೇ ಬಾರಿ ಫೈನಲ್ ಪ್ರವೇಶಿಸಿತ್ತು. ಆದರೆ ಸಿಎಸ್​ಕೆ ವಿರುದ್ದ ಸೋಲುವ ಮೂಲಕ ಮತ್ತೊಮ್ಮೆ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಯಿತು. ಇನ್ನು 2012 ರ ಸೀಸನ್​ನಲ್ಲೂ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ವೆಟ್ಟೋರಿ ಒಟ್ಟು 28 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಆರ್​ಸಿಬಿ 15 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ.

ಡೇನಿಯಲ್ ವೆಟ್ಟೋರಿ: ಆರ್​ಸಿಬಿ ತಂಡದ ನಾಲ್ಕನೇ ನಾಯಕ ಡೇನಿಯಲ್ ವೆಟ್ಟೋರಿ. 2011 ರಲ್ಲಿ ವೆಟ್ಟೋರಿ ನಾಯಕತ್ವದಲ್ಲಿ ಆರ್​ಸಿಬಿ 2ನೇ ಬಾರಿ ಫೈನಲ್ ಪ್ರವೇಶಿಸಿತ್ತು. ಆದರೆ ಸಿಎಸ್​ಕೆ ವಿರುದ್ದ ಸೋಲುವ ಮೂಲಕ ಮತ್ತೊಮ್ಮೆ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಯಿತು. ಇನ್ನು 2012 ರ ಸೀಸನ್​ನಲ್ಲೂ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ವೆಟ್ಟೋರಿ ಒಟ್ಟು 28 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಆರ್​ಸಿಬಿ 15 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ.

6 / 11
ವಿರಾಟ್ ಕೊಹ್ಲಿ: ಕಿಂಗ್ ಕೊಹ್ಲಿ 2013 ರಿಂದ 2021 ರವರೆಗೆ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದಾರೆ. 2016 ರಲ್ಲಿ ಫೈನಲ್​ ಪ್ರವೇಶಿಸಿದ್ದ ಆರ್​ಸಿಬಿ ಎಸ್​ಆರ್​ಹೆಚ್ ವಿರುದ್ದ ಸೋಲುವ ಮೂಲಕ ಮತ್ತೊಮ್ಮೆ ನಿರಾಸೆ ಅನುಭವಿಸಿತು. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ 143 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ಈ ವೇಳೆ 66 ಪಂದ್ಯಗಳಲ್ಲಿ ಜಯ ಸಾಧಿಸಿದೆ.

ವಿರಾಟ್ ಕೊಹ್ಲಿ: ಕಿಂಗ್ ಕೊಹ್ಲಿ 2013 ರಿಂದ 2021 ರವರೆಗೆ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದಾರೆ. 2016 ರಲ್ಲಿ ಫೈನಲ್​ ಪ್ರವೇಶಿಸಿದ್ದ ಆರ್​ಸಿಬಿ ಎಸ್​ಆರ್​ಹೆಚ್ ವಿರುದ್ದ ಸೋಲುವ ಮೂಲಕ ಮತ್ತೊಮ್ಮೆ ನಿರಾಸೆ ಅನುಭವಿಸಿತು. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ 143 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ಈ ವೇಳೆ 66 ಪಂದ್ಯಗಳಲ್ಲಿ ಜಯ ಸಾಧಿಸಿದೆ.

7 / 11
ಶೇನ್ ವಾಟ್ಸನ್: 2017 ರ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಅಲಭ್ಯತೆಯ ನಡುವೆ ಶೇನ್ ವಾಟ್ಸನ್ ಮೂರು ಪಂದ್ಯಗಳಲ್ಲಿ ಆರ್​ಸಿಬಿ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದು ಪಂದ್ಯದಲ್ಲಿ ಮಾತ್ರ ಜಯ ಸಾಧಿಸಿದೆ.

ಶೇನ್ ವಾಟ್ಸನ್: 2017 ರ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಅಲಭ್ಯತೆಯ ನಡುವೆ ಶೇನ್ ವಾಟ್ಸನ್ ಮೂರು ಪಂದ್ಯಗಳಲ್ಲಿ ಆರ್​ಸಿಬಿ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದು ಪಂದ್ಯದಲ್ಲಿ ಮಾತ್ರ ಜಯ ಸಾಧಿಸಿದೆ.

8 / 11
ಫಾಫ್ ಡುಪ್ಲೆಸಿಸ್: ಆರ್​ಸಿಬಿ ತಂಡವನ್ನು ಕಳೆದ ಮೂರು ಸೀಸನ್​ಗಳಲ್ಲಿ ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದಾರೆ. ಐಪಿಎಲ್ 2022 ರಲ್ಲಿ ಆರ್​ಸಿಬಿಗೆ ಎಂಟ್ರಿ ಕೊಟ್ಟಿದ್ದ ಫಾಫ್ 42 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.

ಫಾಫ್ ಡುಪ್ಲೆಸಿಸ್: ಆರ್​ಸಿಬಿ ತಂಡವನ್ನು ಕಳೆದ ಮೂರು ಸೀಸನ್​ಗಳಲ್ಲಿ ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದಾರೆ. ಐಪಿಎಲ್ 2022 ರಲ್ಲಿ ಆರ್​ಸಿಬಿಗೆ ಎಂಟ್ರಿ ಕೊಟ್ಟಿದ್ದ ಫಾಫ್ 42 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.

9 / 11
ರಜತ್ ಪಾಟಿದಾರ್: ಈ ಬಾರಿಯ ಐಪಿಎಲ್​ನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ನಾಯಕನಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಅದರಂತೆ ಈವರೆಗೆ 11 ಪಂದ್ಯಗಳಲ್ಲಿ ಮುನ್ನಡೆಸಿರುವ ರಜತ್ 8 ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ರಜತ್ ಪಾಟಿದಾರ್: ಈ ಬಾರಿಯ ಐಪಿಎಲ್​ನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ನಾಯಕನಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಅದರಂತೆ ಈವರೆಗೆ 11 ಪಂದ್ಯಗಳಲ್ಲಿ ಮುನ್ನಡೆಸಿರುವ ರಜತ್ 8 ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

10 / 11
ಜಿತೇಶ್ ಶರ್ಮಾ: ರಜತ್ ಪಾಟಿದಾರ್ ಸಂಪೂರ್ಣ ಫಿಟ್​ನೆಸ್ ಹೊಂದಿಲ್ಲದ ಕಾರಣ, ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಇಂಪ್ಯಾಕ್ಟ್​ ಪ್ಲೇಯರ್ ಆಗಿ ಕಣಕ್ಕಿಳಿದಿದ್ದರು. ಹೀಗಾಗಿ ಆರ್​ಸಿಬಿ ತಂಡವನ್ನು ಜಿತೇಶ್ ಶರ್ಮಾ ಮುನ್ನಡೆಸಿದ್ದಾರೆ. ಇದಾಗ್ಯೂ ಚೊಚ್ಚಲ ಪಂದ್ಯದಲ್ಲೇ ಜಿತೇಶ್ ಸೋಲಿನ ರುಚಿ ನೋಡುವಂತಾಯಿತು.

ಜಿತೇಶ್ ಶರ್ಮಾ: ರಜತ್ ಪಾಟಿದಾರ್ ಸಂಪೂರ್ಣ ಫಿಟ್​ನೆಸ್ ಹೊಂದಿಲ್ಲದ ಕಾರಣ, ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಇಂಪ್ಯಾಕ್ಟ್​ ಪ್ಲೇಯರ್ ಆಗಿ ಕಣಕ್ಕಿಳಿದಿದ್ದರು. ಹೀಗಾಗಿ ಆರ್​ಸಿಬಿ ತಂಡವನ್ನು ಜಿತೇಶ್ ಶರ್ಮಾ ಮುನ್ನಡೆಸಿದ್ದಾರೆ. ಇದಾಗ್ಯೂ ಚೊಚ್ಚಲ ಪಂದ್ಯದಲ್ಲೇ ಜಿತೇಶ್ ಸೋಲಿನ ರುಚಿ ನೋಡುವಂತಾಯಿತು.

11 / 11
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ