Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡದ 8 ನಾಯಕರುಗಳು ಯಾರು ಗೊತ್ತಾ?

IPL 2025 RCB Captain: ಐಪಿಎಲ್ ಸೀಸನ್-17 ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಒಟ್ಟು 7 ನಾಯಕರುಗಳು ಮುನ್ನಡೆಸಿದ್ದಾರೆ. ಇವರಲ್ಲಿ ಕೊನೆಯವರು ಫಾಫ್ ಡುಪ್ಲೆಸಿಸ್. ಐಪಿಎಲ್ 2024 ರಲ್ಲಿ ಆರ್​ಸಿಬಿ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಫಾಫ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯಲಿದ್ದಾರೆ. ಅದರಂತೆ ಇದೀಗ ಆರ್​ಸಿಬಿ ತಂಡದ ಹೊಸ ನಾಯಕನಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 13, 2025 | 1:23 PM

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಈವರೆಗೆ 7 ಕ್ಯಾಪ್ಟನ್​ಗಳು ಮುನ್ನಡೆಸಿದ್ದಾರೆ. ಇದೀಗ 8ನೇ ನಾಯಕನಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಅದರಂತೆ ಐಪಿಎಲ್ 2025 ರಲ್ಲಿ ಆರ್​ಸಿಬಿ ತಂಡವು ಪಾಟಿದಾರ್ ಸಾರಥ್ಯದಲ್ಲಿ ಕಣಕ್ಕಿಳಿಯಲಿದೆ. ಇದಕ್ಕೂ ಮುನ್ನ ಆರ್​ಸಿಬಿ ತಂಡವನ್ನು ಮುನ್ನಡೆಸಿದ ನಾಯಕರುಗಳು ಯಾರೆಲ್ಲಾ ಎಂದು ನೋಡುವುದಾದರೆ...

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಈವರೆಗೆ 7 ಕ್ಯಾಪ್ಟನ್​ಗಳು ಮುನ್ನಡೆಸಿದ್ದಾರೆ. ಇದೀಗ 8ನೇ ನಾಯಕನಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಅದರಂತೆ ಐಪಿಎಲ್ 2025 ರಲ್ಲಿ ಆರ್​ಸಿಬಿ ತಂಡವು ಪಾಟಿದಾರ್ ಸಾರಥ್ಯದಲ್ಲಿ ಕಣಕ್ಕಿಳಿಯಲಿದೆ. ಇದಕ್ಕೂ ಮುನ್ನ ಆರ್​ಸಿಬಿ ತಂಡವನ್ನು ಮುನ್ನಡೆಸಿದ ನಾಯಕರುಗಳು ಯಾರೆಲ್ಲಾ ಎಂದು ನೋಡುವುದಾದರೆ...

1 / 9
ರಾಹುಲ್ ದ್ರಾವಿಡ್: ಆರ್​ಸಿಬಿ ತಂಡದ ಮೊದಲ ನಾಯಕ ರಾಹುಲ್ ದ್ರಾವಿಡ್. 2008 ರ ಚೊಚ್ಚಲ ಐಪಿಎಲ್​ನಲ್ಲಿ ಆರ್​ಸಿಬಿ ತಂಡವನ್ನು 14 ಪಂದ್ಯಗಳಲ್ಲಿ ದ್ರಾವಿಡ್ ಮುನ್ನಡೆಸಿದ್ದರು. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆ ಕೇವಲ 4 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು.

ರಾಹುಲ್ ದ್ರಾವಿಡ್: ಆರ್​ಸಿಬಿ ತಂಡದ ಮೊದಲ ನಾಯಕ ರಾಹುಲ್ ದ್ರಾವಿಡ್. 2008 ರ ಚೊಚ್ಚಲ ಐಪಿಎಲ್​ನಲ್ಲಿ ಆರ್​ಸಿಬಿ ತಂಡವನ್ನು 14 ಪಂದ್ಯಗಳಲ್ಲಿ ದ್ರಾವಿಡ್ ಮುನ್ನಡೆಸಿದ್ದರು. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆ ಕೇವಲ 4 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು.

2 / 9
ಕೆವಿನ್ ಪೀಟರ್ಸನ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ 2ನೇ ನಾಯಕ ಇಂಗ್ಲೆಂಡ್ ಕ್ರಿಕೆಟಿಗ ಕೆವಿನ್ ಪೀಟರ್ಸನ್. 2009 ರಲ್ಲಿ ಪೀಟರ್ಸನ್ ಆರ್​ಸಿಬಿ ತಂಡವನ್ನು 6 ಪಂದ್ಯಗಳಲ್ಲಿ ಮುನ್ನಡೆಸಿದ್ದರು. ಈ ವೇಳೆ ಆರ್​ಸಿಬಿ ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ದಾಖಲಿಸಿತ್ತು.

ಕೆವಿನ್ ಪೀಟರ್ಸನ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ 2ನೇ ನಾಯಕ ಇಂಗ್ಲೆಂಡ್ ಕ್ರಿಕೆಟಿಗ ಕೆವಿನ್ ಪೀಟರ್ಸನ್. 2009 ರಲ್ಲಿ ಪೀಟರ್ಸನ್ ಆರ್​ಸಿಬಿ ತಂಡವನ್ನು 6 ಪಂದ್ಯಗಳಲ್ಲಿ ಮುನ್ನಡೆಸಿದ್ದರು. ಈ ವೇಳೆ ಆರ್​ಸಿಬಿ ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ದಾಖಲಿಸಿತ್ತು.

3 / 9
ಅನಿಲ್ ಕುಂಬ್ಳೆ: 2009 ರಲ್ಲಿ ಕೆವಿನ್ ಪೀಟರ್ಸನ್ ಅರ್ಧದಲ್ಲೇ ಟೂರ್ನಿ ತೊರೆದಿದ್ದರು. ಹೀಗಾಗಿ ಅನಿಲ್ ಕುಂಬ್ಳೆ ಉಳಿದ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆರ್​ಸಿಬಿ ಅಂತಿಮ ಮ್ಯಾಚ್​ನಲ್ಲಿ ಡೆಕ್ಕನ್ ಚಾರ್ಜರ್ಸ್​ ವಿರುದ್ದ ಸೋತು ಪ್ರಶಸ್ತಿಯನ್ನು ಕೈಚೆಲ್ಲಿಕೊಂಡಿತು. ಇನ್ನು 2010ರಲ್ಲೂ ನಾಯಕರಾಗಿ ಮುಂದುವರೆದ ಕುಂಬ್ಳೆ ಒಟ್ಟು 35 ಪಂದ್ಯಗಳಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದಾರೆ. ಕುಂಬ್ಳೆ ನಾಯಕತ್ವದಲ್ಲಿ ಆರ್​ಸಿಬಿ 19 ಪಂದ್ಯಗಳಲ್ಲಿ ಜಯ ಸಾಧಿಸಿದೆ.

ಅನಿಲ್ ಕುಂಬ್ಳೆ: 2009 ರಲ್ಲಿ ಕೆವಿನ್ ಪೀಟರ್ಸನ್ ಅರ್ಧದಲ್ಲೇ ಟೂರ್ನಿ ತೊರೆದಿದ್ದರು. ಹೀಗಾಗಿ ಅನಿಲ್ ಕುಂಬ್ಳೆ ಉಳಿದ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆರ್​ಸಿಬಿ ಅಂತಿಮ ಮ್ಯಾಚ್​ನಲ್ಲಿ ಡೆಕ್ಕನ್ ಚಾರ್ಜರ್ಸ್​ ವಿರುದ್ದ ಸೋತು ಪ್ರಶಸ್ತಿಯನ್ನು ಕೈಚೆಲ್ಲಿಕೊಂಡಿತು. ಇನ್ನು 2010ರಲ್ಲೂ ನಾಯಕರಾಗಿ ಮುಂದುವರೆದ ಕುಂಬ್ಳೆ ಒಟ್ಟು 35 ಪಂದ್ಯಗಳಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದಾರೆ. ಕುಂಬ್ಳೆ ನಾಯಕತ್ವದಲ್ಲಿ ಆರ್​ಸಿಬಿ 19 ಪಂದ್ಯಗಳಲ್ಲಿ ಜಯ ಸಾಧಿಸಿದೆ.

4 / 9
ಡೇನಿಯಲ್ ವೆಟ್ಟೋರಿ: ಆರ್​ಸಿಬಿ ತಂಡದ ನಾಲ್ಕನೇ ನಾಯಕ ಡೇನಿಯಲ್ ವೆಟ್ಟೋರಿ. 2011 ರಲ್ಲಿ ವೆಟ್ಟೋರಿ ನಾಯಕತ್ವದಲ್ಲಿ ಆರ್​ಸಿಬಿ 2ನೇ ಬಾರಿ ಫೈನಲ್ ಪ್ರವೇಶಿಸಿತ್ತು. ಆದರೆ ಸಿಎಸ್​ಕೆ ವಿರುದ್ದ ಸೋಲುವ ಮೂಲಕ ಮತ್ತೊಮ್ಮೆ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಯಿತು. ಇನ್ನು 2012 ರ ಸೀಸನ್​ನಲ್ಲೂ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ವೆಟ್ಟೋರಿ ಒಟ್ಟು 28 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಆರ್​ಸಿಬಿ 15 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ.

ಡೇನಿಯಲ್ ವೆಟ್ಟೋರಿ: ಆರ್​ಸಿಬಿ ತಂಡದ ನಾಲ್ಕನೇ ನಾಯಕ ಡೇನಿಯಲ್ ವೆಟ್ಟೋರಿ. 2011 ರಲ್ಲಿ ವೆಟ್ಟೋರಿ ನಾಯಕತ್ವದಲ್ಲಿ ಆರ್​ಸಿಬಿ 2ನೇ ಬಾರಿ ಫೈನಲ್ ಪ್ರವೇಶಿಸಿತ್ತು. ಆದರೆ ಸಿಎಸ್​ಕೆ ವಿರುದ್ದ ಸೋಲುವ ಮೂಲಕ ಮತ್ತೊಮ್ಮೆ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಯಿತು. ಇನ್ನು 2012 ರ ಸೀಸನ್​ನಲ್ಲೂ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ವೆಟ್ಟೋರಿ ಒಟ್ಟು 28 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಆರ್​ಸಿಬಿ 15 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ.

5 / 9
ವಿರಾಟ್ ಕೊಹ್ಲಿ: ಕಿಂಗ್ ಕೊಹ್ಲಿ 2013 ರಿಂದ 2021 ರವರೆಗೆ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದಾರೆ. 2016 ರಲ್ಲಿ ಫೈನಲ್​ ಪ್ರವೇಶಿಸಿದ್ದ ಆರ್​ಸಿಬಿ ಎಸ್​ಆರ್​ಹೆಚ್ ವಿರುದ್ದ ಸೋಲುವ ಮೂಲಕ ಮತ್ತೊಮ್ಮೆ ನಿರಾಸೆ ಅನುಭವಿಸಿತು. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ 143 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ಈ ವೇಳೆ 66 ಪಂದ್ಯಗಳಲ್ಲಿ ಜಯ ಸಾಧಿಸಿದೆ.

ವಿರಾಟ್ ಕೊಹ್ಲಿ: ಕಿಂಗ್ ಕೊಹ್ಲಿ 2013 ರಿಂದ 2021 ರವರೆಗೆ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದಾರೆ. 2016 ರಲ್ಲಿ ಫೈನಲ್​ ಪ್ರವೇಶಿಸಿದ್ದ ಆರ್​ಸಿಬಿ ಎಸ್​ಆರ್​ಹೆಚ್ ವಿರುದ್ದ ಸೋಲುವ ಮೂಲಕ ಮತ್ತೊಮ್ಮೆ ನಿರಾಸೆ ಅನುಭವಿಸಿತು. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ 143 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ಈ ವೇಳೆ 66 ಪಂದ್ಯಗಳಲ್ಲಿ ಜಯ ಸಾಧಿಸಿದೆ.

6 / 9
ಶೇನ್ ವಾಟ್ಸನ್: 2017 ರ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಅಲಭ್ಯತೆಯ ನಡುವೆ ಶೇನ್ ವಾಟ್ಸನ್ ಮೂರು ಪಂದ್ಯಗಳಲ್ಲಿ ಆರ್​ಸಿಬಿ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದು ಪಂದ್ಯದಲ್ಲಿ ಮಾತ್ರ ಜಯ ಸಾಧಿಸಿದೆ.

ಶೇನ್ ವಾಟ್ಸನ್: 2017 ರ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಅಲಭ್ಯತೆಯ ನಡುವೆ ಶೇನ್ ವಾಟ್ಸನ್ ಮೂರು ಪಂದ್ಯಗಳಲ್ಲಿ ಆರ್​ಸಿಬಿ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದು ಪಂದ್ಯದಲ್ಲಿ ಮಾತ್ರ ಜಯ ಸಾಧಿಸಿದೆ.

7 / 9
ಫಾಫ್ ಡುಪ್ಲೆಸಿಸ್: ಆರ್​ಸಿಬಿ ತಂಡವನ್ನು ಕಳೆದ ಮೂರು ಸೀಸನ್​ಗಳಲ್ಲಿ ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದಾರೆ. ಐಪಿಎಲ್ 2022 ರಲ್ಲಿ ಆರ್​ಸಿಬಿಗೆ ಎಂಟ್ರಿ ಕೊಟ್ಟಿದ್ದ ಫಾಫ್ 42 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.

ಫಾಫ್ ಡುಪ್ಲೆಸಿಸ್: ಆರ್​ಸಿಬಿ ತಂಡವನ್ನು ಕಳೆದ ಮೂರು ಸೀಸನ್​ಗಳಲ್ಲಿ ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದಾರೆ. ಐಪಿಎಲ್ 2022 ರಲ್ಲಿ ಆರ್​ಸಿಬಿಗೆ ಎಂಟ್ರಿ ಕೊಟ್ಟಿದ್ದ ಫಾಫ್ 42 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.

8 / 9
ರಜತ್ ಪಾಟಿದಾರ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ನಾಯಕನಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ 8ನೇ ನಾಯಕನೊಂದಿಗೆ ಕಣಕ್ಕಿಳಿಯಲಿರುವ ಆರ್​ಸಿಬಿ ಚೊಚ್ಚಲ ಬಾರಿ ಟ್ರೋಫಿ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

ರಜತ್ ಪಾಟಿದಾರ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ನಾಯಕನಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ 8ನೇ ನಾಯಕನೊಂದಿಗೆ ಕಣಕ್ಕಿಳಿಯಲಿರುವ ಆರ್​ಸಿಬಿ ಚೊಚ್ಚಲ ಬಾರಿ ಟ್ರೋಫಿ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

9 / 9
Follow us
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ