IPL 2026: ಆರ್​ಸಿಬಿಗೆ ತಲೆನೋವಾದ 7 ಕೋಟಿ ಮೊತ್ತದ ಸ್ಟಾರ್ ಆಲ್‌ರೌಂಡರ್ ಕಳಪೆ ಪ್ರದರ್ಶನ

Updated on: Dec 29, 2025 | 10:34 PM

Venkatesh Iyer's Poor Form: ವೆಂಕಟೇಶ್ ಅಯ್ಯರ್ ವಿಜಯ್ ಹಜಾರೆ ಟ್ರೋಫಿಯಲ್ಲಿ ನೀರಸ ಪ್ರದರ್ಶನ ನೀಡಿದ್ದು, ಮೂರು ಪಂದ್ಯಗಳಲ್ಲಿ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿದ್ದಾರೆ. ಆರ್‌ಸಿಬಿ 7 ಕೋಟಿಗೆ ಖರೀದಿಸಿದ ಅಯ್ಯರ್ ಕಳಪೆ ಫಾರ್ಮ್, ಮುಂಬರುವ ಐಪಿಎಲ್‌ಗೆ ತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅವರ ಬದಲಿಗೆ ತಂಡದಲ್ಲಿ ಬೇರೆ ಆಯ್ಕೆಗಳೂ ಇವೆ ಎಂಬುದು ಗಮನಾರ್ಹ.

1 / 6
ವಿಜಯ್ ಹಜಾರೆ ಟ್ರೋಫಿಯ ಮೂರನೇ ಸುತ್ತಿನಲ್ಲಿ ಮಧ್ಯಪ್ರದೇಶ ಹಾಗೂ ಕೇರಳ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮಧ್ಯಪ್ರದೇಶ ಪರ ಕಣಕ್ಕಿಳಿದಿದ್ದ ಸ್ಟಾರ್ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ನೀರಸ ಪ್ರದರ್ಶನ ನೀಡಿದರು. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ವೆಂಕಟೇಶ್ ಅಯ್ಯರ್  ಕೇವಲ 8 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು.

ವಿಜಯ್ ಹಜಾರೆ ಟ್ರೋಫಿಯ ಮೂರನೇ ಸುತ್ತಿನಲ್ಲಿ ಮಧ್ಯಪ್ರದೇಶ ಹಾಗೂ ಕೇರಳ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮಧ್ಯಪ್ರದೇಶ ಪರ ಕಣಕ್ಕಿಳಿದಿದ್ದ ಸ್ಟಾರ್ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ನೀರಸ ಪ್ರದರ್ಶನ ನೀಡಿದರು. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ವೆಂಕಟೇಶ್ ಅಯ್ಯರ್ ಕೇವಲ 8 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು.

2 / 6
ವಿಜಯ್ ಹಜಾರೆ ಟ್ರೋಫಿಯಲ್ಲಿ ಇದುವರೆಗೆ 3 ಪಂದ್ಯಗಳು ನಡೆದಿವೆ. ಈ ಮೂರು ಪಂದ್ಯಗಳಲ್ಲೂ ವೆಂಕಟೇಶ್ ಪ್ರದರ್ಶನ ಹೇಳಿಕೊಳ್ಳುವಂತಿಲ್ಲ. ಈ ಪಂದ್ಯಕ್ಕೂ ಮುನ್ನ ನಡೆದ ಮೊದಲೆರಡು ಪಂದ್ಯಗಳಲ್ಲಿ ವೆಂಕಟೇಶ್ ಉತ್ತಮ ಆರಂಭ ಪಡೆದರಾದರೂ ಅದನ್ನು ಬಿಗ್ ಇನ್ನಿಂಗ್ಸ್ ಆಗಿ ಬದಲಿಸುವಲ್ಲಿ ವಿಫಲರಾಗಿದ್ದಾರೆ.

ವಿಜಯ್ ಹಜಾರೆ ಟ್ರೋಫಿಯಲ್ಲಿ ಇದುವರೆಗೆ 3 ಪಂದ್ಯಗಳು ನಡೆದಿವೆ. ಈ ಮೂರು ಪಂದ್ಯಗಳಲ್ಲೂ ವೆಂಕಟೇಶ್ ಪ್ರದರ್ಶನ ಹೇಳಿಕೊಳ್ಳುವಂತಿಲ್ಲ. ಈ ಪಂದ್ಯಕ್ಕೂ ಮುನ್ನ ನಡೆದ ಮೊದಲೆರಡು ಪಂದ್ಯಗಳಲ್ಲಿ ವೆಂಕಟೇಶ್ ಉತ್ತಮ ಆರಂಭ ಪಡೆದರಾದರೂ ಅದನ್ನು ಬಿಗ್ ಇನ್ನಿಂಗ್ಸ್ ಆಗಿ ಬದಲಿಸುವಲ್ಲಿ ವಿಫಲರಾಗಿದ್ದಾರೆ.

3 / 6
ರಾಜಸ್ಥಾನ್ ವಿರುದ್ಧದ ಮೊದಲ ಪಂದ್ಯದಲ್ಲಿ 34 ರನ್​ಗಳ ಇನ್ನಿಂಗ್ಸ್ ಆಡಿದ್ದ ವೆಂಕಟೇಶ್ ಉತ್ತಮ ಆರಂಭ ಪಡೆದುಕೊಂಡಿದ್ದರು. ಆದರೆ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲಿಲ್ಲ. ಇದೇ ರೀತಿ ತಮಿಳುನಾಡು ವಿರುದ್ಧದ ಪಂದ್ಯದಲ್ಲೂ ವೆಂಕಟೇಶ್ 32 ರನ್ ಬಾರಿಸಿ ಪೆವಿಲಿಯನ್‌ ಸೇರಿಕೊಂಡರು.

ರಾಜಸ್ಥಾನ್ ವಿರುದ್ಧದ ಮೊದಲ ಪಂದ್ಯದಲ್ಲಿ 34 ರನ್​ಗಳ ಇನ್ನಿಂಗ್ಸ್ ಆಡಿದ್ದ ವೆಂಕಟೇಶ್ ಉತ್ತಮ ಆರಂಭ ಪಡೆದುಕೊಂಡಿದ್ದರು. ಆದರೆ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲಿಲ್ಲ. ಇದೇ ರೀತಿ ತಮಿಳುನಾಡು ವಿರುದ್ಧದ ಪಂದ್ಯದಲ್ಲೂ ವೆಂಕಟೇಶ್ 32 ರನ್ ಬಾರಿಸಿ ಪೆವಿಲಿಯನ್‌ ಸೇರಿಕೊಂಡರು.

4 / 6
ವಾಸ್ತವವಾಗಿ ಮುಂಬರುವ ಐಪಿಎಲ್​​ನಲ್ಲಿ ವೆಂಕಟೇಶ್ ಅಯ್ಯರ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಪರ ಆಡಲಿದ್ದಾರೆ.  ಐಪಿಎಲ್ 2026 ರ ಮಿನಿ-ಹರಾಜಿನಲ್ಲಿ ಆರ್‌ಸಿಬಿ, ವೆಂಕಟೇಶ್ ಅಯ್ಯರ್ ಅವರನ್ನು 7 ಕೋಟಿಗೆ ಖರೀದಿಸಿತು.

ವಾಸ್ತವವಾಗಿ ಮುಂಬರುವ ಐಪಿಎಲ್​​ನಲ್ಲಿ ವೆಂಕಟೇಶ್ ಅಯ್ಯರ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಪರ ಆಡಲಿದ್ದಾರೆ. ಐಪಿಎಲ್ 2026 ರ ಮಿನಿ-ಹರಾಜಿನಲ್ಲಿ ಆರ್‌ಸಿಬಿ, ವೆಂಕಟೇಶ್ ಅಯ್ಯರ್ ಅವರನ್ನು 7 ಕೋಟಿಗೆ ಖರೀದಿಸಿತು.

5 / 6
ಈ ಹಿಂದಿನ ಮೆಗಾ ಹರಾಜಿನಲ್ಲಿ ವೆಂಕಟೇಶ್ ಅಯ್ಯರ್ ಅವರನ್ನು ಕೆಕೆಆರ್ ಬರೋಬ್ಬರಿ 23.75 ಕೋಟಿ ನೀಡಿ ಖರೀದಿಸಿತ್ತು. ಆದರೆ ವೆಂಕಟೇಶ್ ಅವರ ಪ್ರದರ್ಶನ ಹೇಳಿಕೊಳ್ಳುವಂತಿರಲಿಲ್ಲ. ಹೀಗಾಗಿ ಅವರನ್ನು ಕೆಕೆಆರ್ ಕೈಬಿಟ್ಟಿತ್ತು. ಇದೀಗ ಆರ್​ಸಿಬಿ ಅವರನ್ನು 7 ಕೋಟಿ ರೂ. ನೀಡಿ ಖರೀದಿಸಿದೆ. ಅಲ್ಲದೆ ವೆಂಕಟೇಶ್​ಗೆ ಮಧ್ಯಮ ಕ್ರಮಾಂಕದಲ್ಲಿ ಆಡುವ ಅವಕಾಶವೂ ಸಿಗಲಿದೆ.

ಈ ಹಿಂದಿನ ಮೆಗಾ ಹರಾಜಿನಲ್ಲಿ ವೆಂಕಟೇಶ್ ಅಯ್ಯರ್ ಅವರನ್ನು ಕೆಕೆಆರ್ ಬರೋಬ್ಬರಿ 23.75 ಕೋಟಿ ನೀಡಿ ಖರೀದಿಸಿತ್ತು. ಆದರೆ ವೆಂಕಟೇಶ್ ಅವರ ಪ್ರದರ್ಶನ ಹೇಳಿಕೊಳ್ಳುವಂತಿರಲಿಲ್ಲ. ಹೀಗಾಗಿ ಅವರನ್ನು ಕೆಕೆಆರ್ ಕೈಬಿಟ್ಟಿತ್ತು. ಇದೀಗ ಆರ್​ಸಿಬಿ ಅವರನ್ನು 7 ಕೋಟಿ ರೂ. ನೀಡಿ ಖರೀದಿಸಿದೆ. ಅಲ್ಲದೆ ವೆಂಕಟೇಶ್​ಗೆ ಮಧ್ಯಮ ಕ್ರಮಾಂಕದಲ್ಲಿ ಆಡುವ ಅವಕಾಶವೂ ಸಿಗಲಿದೆ.

6 / 6
ಆದರೆ ಪ್ರಸ್ತುತ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ವೆಂಕಟೇಶ್ ಆರ್​ಸಿಬಿಗೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತಾರಾ ಎಂಬ ಆತಂಕ ಅಭಿಮಾನಿಗಳಲ್ಲಿ ಮೂಡಿದೆ. ಆದಾಗ್ಯೂ ವೆಂಕಟೇಶ್ ಬದಲಿಯಾಗಿ ತಂಡದಲ್ಲಿ ಬೇರೆ ಆಯ್ಕೆಗಳಿದ್ದು ಒಂದು ವೇಳೆ ವೆಂಕಟೇಶ್ ಉತ್ತಮ ಪ್ರದರ್ಶನ ನೀಡದಿದ್ದರೆ ಅವರ ಬದಲಿಯಾಗಿ ಬೇರೆಯವರಿಗೆ ಅವಕಾಶ ಸಿಗಲಿದೆ.

ಆದರೆ ಪ್ರಸ್ತುತ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ವೆಂಕಟೇಶ್ ಆರ್​ಸಿಬಿಗೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತಾರಾ ಎಂಬ ಆತಂಕ ಅಭಿಮಾನಿಗಳಲ್ಲಿ ಮೂಡಿದೆ. ಆದಾಗ್ಯೂ ವೆಂಕಟೇಶ್ ಬದಲಿಯಾಗಿ ತಂಡದಲ್ಲಿ ಬೇರೆ ಆಯ್ಕೆಗಳಿದ್ದು ಒಂದು ವೇಳೆ ವೆಂಕಟೇಶ್ ಉತ್ತಮ ಪ್ರದರ್ಶನ ನೀಡದಿದ್ದರೆ ಅವರ ಬದಲಿಯಾಗಿ ಬೇರೆಯವರಿಗೆ ಅವಕಾಶ ಸಿಗಲಿದೆ.

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us