AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಪ್ಲೇಆಫ್ ಚರಿತ್ರೆಯನ್ನೇ ಬದಲಿಸಿದ RCB

IPL 2026 RCB vs GT: ಐಪಿಎಲ್​ನ ಕ್ವಾಲಿಫೈಯರ್-1 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 254 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡ 19.3 ಓವರ್​ಗಳಲ್ಲಿ 162 ರನ್​​ಗಳಿಗೆ ಆಲೌಟ್ ಆಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ 92 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 27, 2026 | 9:04 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 19 ವರ್ಷಗಳಾಗಿವೆ. ಈ ಹತ್ತೊಂಬತ್ತು ವರ್ಷಗಳಲ್ಲಿ 19 ಬಾರಿ ಪ್ಲೇಆಫ್ ಪಂದ್ಯಗಳು ನಡೆದಿವೆ. ಈ ವೇಳೆ ಯಾವುದೇ ತಂಡಕ್ಕೂ ಸಾಧ್ಯವಾಗದಿರುವುದನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಾಧಿಸಿ ತೋರಿಸಿದ್ದಾರೆ. ಅದು ಕೂಡ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ..! (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 19 ವರ್ಷಗಳಾಗಿವೆ. ಈ ಹತ್ತೊಂಬತ್ತು ವರ್ಷಗಳಲ್ಲಿ 19 ಬಾರಿ ಪ್ಲೇಆಫ್ ಪಂದ್ಯಗಳು ನಡೆದಿವೆ. ಈ ವೇಳೆ ಯಾವುದೇ ತಂಡಕ್ಕೂ ಸಾಧ್ಯವಾಗದಿರುವುದನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಾಧಿಸಿ ತೋರಿಸಿದ್ದಾರೆ. ಅದು ಕೂಡ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ..! (PC: IPL)

1 / 5
ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸಿಡಿಲಬ್ಬರದೊಂದಿಗೆ ಆರ್​ಸಿಬಿ ಪಡೆ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 254 ರನ್​ಗಳು. (PC: IPL)

ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸಿಡಿಲಬ್ಬರದೊಂದಿಗೆ ಆರ್​ಸಿಬಿ ಪಡೆ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 254 ರನ್​ಗಳು. (PC: IPL)

2 / 5
ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಪ್ಲೇಆಫ್ ಸುತ್ತಿನಲ್ಲಿ 250+ ರನ್​ ಕಲೆಹಾಕಿದ ಮೊದಲ ತಂಡವೆಂಬ ಭರ್ಜರಿ ದಾಖಲೆಯನ್ನು ಆರ್​ಸಿಬಿ ತಂಡ ತನ್ನದಾಗಿಸಿಕೊಂಡಿತು. ಅಂದರೆ ಐಪಿಎಲ್​ ಪ್ಲೇಆಫ್ ಚರಿತ್ರೆಯಲ್ಲಿ ಯಾವುದೇ ತಂಡ 235 ಕ್ಕಿಂತ ಹೆಚ್ಚಿನ ರನ್​ ಗಳಿಸಲು ಸಾಧ್ಯವಾಗಿರಲಿಲ್ಲ. (PC: IPL)

ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಪ್ಲೇಆಫ್ ಸುತ್ತಿನಲ್ಲಿ 250+ ರನ್​ ಕಲೆಹಾಕಿದ ಮೊದಲ ತಂಡವೆಂಬ ಭರ್ಜರಿ ದಾಖಲೆಯನ್ನು ಆರ್​ಸಿಬಿ ತಂಡ ತನ್ನದಾಗಿಸಿಕೊಂಡಿತು. ಅಂದರೆ ಐಪಿಎಲ್​ ಪ್ಲೇಆಫ್ ಚರಿತ್ರೆಯಲ್ಲಿ ಯಾವುದೇ ತಂಡ 235 ಕ್ಕಿಂತ ಹೆಚ್ಚಿನ ರನ್​ ಗಳಿಸಲು ಸಾಧ್ಯವಾಗಿರಲಿಲ್ಲ. (PC: IPL)

3 / 5
ಈ ಹಿಂದೆ, ಅಂದರೆ 2023ರ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 233 ರನ್​ ಬಾರಿಸಿದ್ದು ಈವರೆಗಿನ ಗರಿಷ್ಠ ಸ್ಕೋರ್ ಆಗಿತ್ತು. ಇದೀಗ ಅದೇ ಗುಜರಾತ್ ಟೈಟಾನ್ಸ್ ವಿರುದ್ಧ ಅಬ್ಬರಿಸಿ ಆರ್​ಸಿಬಿ ಹೊಸ ಇತಿಹಾಸ ನಿರ್ಮಿಸಿದೆ. (PC: IPL)

ಈ ಹಿಂದೆ, ಅಂದರೆ 2023ರ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 233 ರನ್​ ಬಾರಿಸಿದ್ದು ಈವರೆಗಿನ ಗರಿಷ್ಠ ಸ್ಕೋರ್ ಆಗಿತ್ತು. ಇದೀಗ ಅದೇ ಗುಜರಾತ್ ಟೈಟಾನ್ಸ್ ವಿರುದ್ಧ ಅಬ್ಬರಿಸಿ ಆರ್​ಸಿಬಿ ಹೊಸ ಇತಿಹಾಸ ನಿರ್ಮಿಸಿದೆ. (PC: IPL)

4 / 5
ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಪ್ಲೇಆಫ್ ಸುತ್ತಿನಲ್ಲಿ 250+ ಸ್ಕೋರ್​ಗಳಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. ಹಾಗೆಯೇ ಈ ಪಂದ್ಯದಲ್ಲಿ 92 ರನ್​ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್​ನಲ್ಲಿ (ನಾಕೌಟ್ ಅಲ್ಲದೇ) ಅತೀ ಹೆಚ್ಚು ರನ್​ಗಳ ಅಂತರದಿಂದ ಗೆದ್ದ ಟೀಮ್ ಎಂಬ ಅಮೋಘ ದಾಖಲೆಯನ್ನು ಕೂಡ ಆರ್​ಸಿಬಿ ನಿರ್ಮಿಸಿದೆ. ಈ ಮೂಲಕ ಗರಿಷ್ಠ ಸ್ಕೋರ್ ಹಾಗೂ ಗರಿಷ್ಠ ರನ್​ಗಳ ವಿಜಯದೊಂದಿಗೆ ಆರ್​ಸಿಬಿ ಪ್ಲೇಆಫ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ. (PC: IPL)

ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಪ್ಲೇಆಫ್ ಸುತ್ತಿನಲ್ಲಿ 250+ ಸ್ಕೋರ್​ಗಳಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. ಹಾಗೆಯೇ ಈ ಪಂದ್ಯದಲ್ಲಿ 92 ರನ್​ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್​ನಲ್ಲಿ (ನಾಕೌಟ್ ಅಲ್ಲದೇ) ಅತೀ ಹೆಚ್ಚು ರನ್​ಗಳ ಅಂತರದಿಂದ ಗೆದ್ದ ಟೀಮ್ ಎಂಬ ಅಮೋಘ ದಾಖಲೆಯನ್ನು ಕೂಡ ಆರ್​ಸಿಬಿ ನಿರ್ಮಿಸಿದೆ. ಈ ಮೂಲಕ ಗರಿಷ್ಠ ಸ್ಕೋರ್ ಹಾಗೂ ಗರಿಷ್ಠ ರನ್​ಗಳ ವಿಜಯದೊಂದಿಗೆ ಆರ್​ಸಿಬಿ ಪ್ಲೇಆಫ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ. (PC: IPL)

5 / 5
Follow Us
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ಸಿಪಿ ಯೋಗೇಶ್ವರ್ ಪುತ್ರನಿಗೆ ಶುಭ ಹಾರೈಸಿದ ಸಿಎಂ ಹೇಳಿದ್ದೇನು? ವಿಡಿಯೋ ನೋಡಿ
ಸಿಪಿ ಯೋಗೇಶ್ವರ್ ಪುತ್ರನಿಗೆ ಶುಭ ಹಾರೈಸಿದ ಸಿಎಂ ಹೇಳಿದ್ದೇನು? ವಿಡಿಯೋ ನೋಡಿ
ರಾಮ ಮಂದಿರದ ದೇಣಿಗೆ ಲೂಟಿ: ಕದ್ದ ಹಣದಲ್ಲಿ ಪ್ರೇಮ ಪುರಾಣ, ಲವರ್​ಗೆ ಗಿಫ್ಟ್!
ರಾಮ ಮಂದಿರದ ದೇಣಿಗೆ ಲೂಟಿ: ಕದ್ದ ಹಣದಲ್ಲಿ ಪ್ರೇಮ ಪುರಾಣ, ಲವರ್​ಗೆ ಗಿಫ್ಟ್!
ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ?
ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ?
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?