AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಪ್ಲೇಆಫ್ ಚರಿತ್ರೆಯನ್ನೇ ಬದಲಿಸಿದ RCB

IPL 2026 RCB vs GT: ಐಪಿಎಲ್​ನ ಕ್ವಾಲಿಫೈಯರ್-1 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 254 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡ 19.3 ಓವರ್​ಗಳಲ್ಲಿ 162 ರನ್​​ಗಳಿಗೆ ಆಲೌಟ್ ಆಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ 92 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 27, 2026 | 9:04 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 19 ವರ್ಷಗಳಾಗಿವೆ. ಈ ಹತ್ತೊಂಬತ್ತು ವರ್ಷಗಳಲ್ಲಿ 19 ಬಾರಿ ಪ್ಲೇಆಫ್ ಪಂದ್ಯಗಳು ನಡೆದಿವೆ. ಈ ವೇಳೆ ಯಾವುದೇ ತಂಡಕ್ಕೂ ಸಾಧ್ಯವಾಗದಿರುವುದನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಾಧಿಸಿ ತೋರಿಸಿದ್ದಾರೆ. ಅದು ಕೂಡ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ..! (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 19 ವರ್ಷಗಳಾಗಿವೆ. ಈ ಹತ್ತೊಂಬತ್ತು ವರ್ಷಗಳಲ್ಲಿ 19 ಬಾರಿ ಪ್ಲೇಆಫ್ ಪಂದ್ಯಗಳು ನಡೆದಿವೆ. ಈ ವೇಳೆ ಯಾವುದೇ ತಂಡಕ್ಕೂ ಸಾಧ್ಯವಾಗದಿರುವುದನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಾಧಿಸಿ ತೋರಿಸಿದ್ದಾರೆ. ಅದು ಕೂಡ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ..! (PC: IPL)

1 / 5
ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸಿಡಿಲಬ್ಬರದೊಂದಿಗೆ ಆರ್​ಸಿಬಿ ಪಡೆ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 254 ರನ್​ಗಳು. (PC: IPL)

ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸಿಡಿಲಬ್ಬರದೊಂದಿಗೆ ಆರ್​ಸಿಬಿ ಪಡೆ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 254 ರನ್​ಗಳು. (PC: IPL)

2 / 5
ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಪ್ಲೇಆಫ್ ಸುತ್ತಿನಲ್ಲಿ 250+ ರನ್​ ಕಲೆಹಾಕಿದ ಮೊದಲ ತಂಡವೆಂಬ ಭರ್ಜರಿ ದಾಖಲೆಯನ್ನು ಆರ್​ಸಿಬಿ ತಂಡ ತನ್ನದಾಗಿಸಿಕೊಂಡಿತು. ಅಂದರೆ ಐಪಿಎಲ್​ ಪ್ಲೇಆಫ್ ಚರಿತ್ರೆಯಲ್ಲಿ ಯಾವುದೇ ತಂಡ 235 ಕ್ಕಿಂತ ಹೆಚ್ಚಿನ ರನ್​ ಗಳಿಸಲು ಸಾಧ್ಯವಾಗಿರಲಿಲ್ಲ. (PC: IPL)

ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಪ್ಲೇಆಫ್ ಸುತ್ತಿನಲ್ಲಿ 250+ ರನ್​ ಕಲೆಹಾಕಿದ ಮೊದಲ ತಂಡವೆಂಬ ಭರ್ಜರಿ ದಾಖಲೆಯನ್ನು ಆರ್​ಸಿಬಿ ತಂಡ ತನ್ನದಾಗಿಸಿಕೊಂಡಿತು. ಅಂದರೆ ಐಪಿಎಲ್​ ಪ್ಲೇಆಫ್ ಚರಿತ್ರೆಯಲ್ಲಿ ಯಾವುದೇ ತಂಡ 235 ಕ್ಕಿಂತ ಹೆಚ್ಚಿನ ರನ್​ ಗಳಿಸಲು ಸಾಧ್ಯವಾಗಿರಲಿಲ್ಲ. (PC: IPL)

3 / 5
ಈ ಹಿಂದೆ, ಅಂದರೆ 2023ರ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 233 ರನ್​ ಬಾರಿಸಿದ್ದು ಈವರೆಗಿನ ಗರಿಷ್ಠ ಸ್ಕೋರ್ ಆಗಿತ್ತು. ಇದೀಗ ಅದೇ ಗುಜರಾತ್ ಟೈಟಾನ್ಸ್ ವಿರುದ್ಧ ಅಬ್ಬರಿಸಿ ಆರ್​ಸಿಬಿ ಹೊಸ ಇತಿಹಾಸ ನಿರ್ಮಿಸಿದೆ. (PC: IPL)

ಈ ಹಿಂದೆ, ಅಂದರೆ 2023ರ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 233 ರನ್​ ಬಾರಿಸಿದ್ದು ಈವರೆಗಿನ ಗರಿಷ್ಠ ಸ್ಕೋರ್ ಆಗಿತ್ತು. ಇದೀಗ ಅದೇ ಗುಜರಾತ್ ಟೈಟಾನ್ಸ್ ವಿರುದ್ಧ ಅಬ್ಬರಿಸಿ ಆರ್​ಸಿಬಿ ಹೊಸ ಇತಿಹಾಸ ನಿರ್ಮಿಸಿದೆ. (PC: IPL)

4 / 5
ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಪ್ಲೇಆಫ್ ಸುತ್ತಿನಲ್ಲಿ 250+ ಸ್ಕೋರ್​ಗಳಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. ಹಾಗೆಯೇ ಈ ಪಂದ್ಯದಲ್ಲಿ 92 ರನ್​ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್​ನಲ್ಲಿ (ನಾಕೌಟ್ ಅಲ್ಲದೇ) ಅತೀ ಹೆಚ್ಚು ರನ್​ಗಳ ಅಂತರದಿಂದ ಗೆದ್ದ ಟೀಮ್ ಎಂಬ ಅಮೋಘ ದಾಖಲೆಯನ್ನು ಕೂಡ ಆರ್​ಸಿಬಿ ನಿರ್ಮಿಸಿದೆ. ಈ ಮೂಲಕ ಗರಿಷ್ಠ ಸ್ಕೋರ್ ಹಾಗೂ ಗರಿಷ್ಠ ರನ್​ಗಳ ವಿಜಯದೊಂದಿಗೆ ಆರ್​ಸಿಬಿ ಪ್ಲೇಆಫ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ. (PC: IPL)

ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಪ್ಲೇಆಫ್ ಸುತ್ತಿನಲ್ಲಿ 250+ ಸ್ಕೋರ್​ಗಳಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. ಹಾಗೆಯೇ ಈ ಪಂದ್ಯದಲ್ಲಿ 92 ರನ್​ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್​ನಲ್ಲಿ (ನಾಕೌಟ್ ಅಲ್ಲದೇ) ಅತೀ ಹೆಚ್ಚು ರನ್​ಗಳ ಅಂತರದಿಂದ ಗೆದ್ದ ಟೀಮ್ ಎಂಬ ಅಮೋಘ ದಾಖಲೆಯನ್ನು ಕೂಡ ಆರ್​ಸಿಬಿ ನಿರ್ಮಿಸಿದೆ. ಈ ಮೂಲಕ ಗರಿಷ್ಠ ಸ್ಕೋರ್ ಹಾಗೂ ಗರಿಷ್ಠ ರನ್​ಗಳ ವಿಜಯದೊಂದಿಗೆ ಆರ್​ಸಿಬಿ ಪ್ಲೇಆಫ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ. (PC: IPL)

5 / 5
Follow Us
ಸದ್ದಿಲ್ಲದೆ ತಮಿಳುನಾಡಿಗೆ ಹರಿಯುತ್ತಿದೆ ಕಾವೇರಿ ನೀರು!
ಸದ್ದಿಲ್ಲದೆ ತಮಿಳುನಾಡಿಗೆ ಹರಿಯುತ್ತಿದೆ ಕಾವೇರಿ ನೀರು!
ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿಕೆಶಿ
ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿಕೆಶಿ
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ