AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡದ್ದು ಅಂತಿಂಥ ಗೆಲುವಲ್ಲ, ಐಪಿಎಲ್ ಇತಿಹಾಸದಲ್ಲೇ ಮೊದಲು..!

IPL 2025 RCB vs PBSK: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು ಕೇವಲ 101 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ಹೊಸ ಇತಿಹಾಸ ನಿರ್ಮಿಸಿದೆ.

ಝಾಹಿರ್ ಯೂಸುಫ್
|

Updated on: May 30, 2025 | 7:09 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಜಯಭೇರಿ ಬಾರಿಸಿದೆ. ಅದು ಕೂಡ ಪಂಜಾಬ್ ಕಿಂಗ್ಸ್ (PBKS) ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ. ಮುಲ್ಲನ್​ಪುರ್​ನ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಜಯಭೇರಿ ಬಾರಿಸಿದೆ. ಅದು ಕೂಡ ಪಂಜಾಬ್ ಕಿಂಗ್ಸ್ (PBKS) ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ. ಮುಲ್ಲನ್​ಪುರ್​ನ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಮಾರಕ ದಾಳಿ ಸಂಘಟಿಸಿದ ಆರ್​ಸಿಬಿ ಬೌಲರ್​ಗಳು ಪವರ್​ಪ್ಲೇನಲ್ಲೇ ಪವರ್​ ತೋರಿಸಿದ್ದರು. ಪರಿಣಾಮ 50 ರನ್​ಗಳಿಸುವಷ್ಟರಲ್ಲಿ ಪಂಜಾಬ್ ಪಡೆಯು 5 ವಿಕೆಟ್ ಕಳೆದುಕೊಂಡಿತು. ಇನ್ನು 14.1 ಓವರ್​ಗಳಲ್ಲಿ 101 ರನ್​ಗಳಿಸುವಲಷ್ಟರಲ್ಲಿ ಆಲೌಟ್ ಆಯಿತು.

ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಮಾರಕ ದಾಳಿ ಸಂಘಟಿಸಿದ ಆರ್​ಸಿಬಿ ಬೌಲರ್​ಗಳು ಪವರ್​ಪ್ಲೇನಲ್ಲೇ ಪವರ್​ ತೋರಿಸಿದ್ದರು. ಪರಿಣಾಮ 50 ರನ್​ಗಳಿಸುವಷ್ಟರಲ್ಲಿ ಪಂಜಾಬ್ ಪಡೆಯು 5 ವಿಕೆಟ್ ಕಳೆದುಕೊಂಡಿತು. ಇನ್ನು 14.1 ಓವರ್​ಗಳಲ್ಲಿ 101 ರನ್​ಗಳಿಸುವಲಷ್ಟರಲ್ಲಿ ಆಲೌಟ್ ಆಯಿತು.

2 / 6
ಅದರಂತೆ 102 ರನ್​ಗಳ ಸುಲಭ ಗುರಿ ಪಡೆದ ಆರ್​ಸಿಬಿ ತಂಡಕ್ಕೆ ಫಿಲ್ ಸಾಲ್ಟ್ ಸ್ಫೋಟಕ ಆರಂಭ ಒದಗಿಸಿದರು. ಆರಂಭದಲ್ಲಿ ತುಸು ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ಸಾಲ್ಟ್ ಆ ಬಳಿಕ ಅಬ್ಬರಿಸಿದರು. ಪರಿಣಾಮ  10 ಓವರ್​ಗಳಲ್ಲಿ ಆರ್​ಸಿಬಿ ತಂಡವು 2 ವಿಕೆಟ್ ಕಳೆದುಕೊಂಡು 106 ರನ್ ಕಲೆಹಾಕಿತು.

ಅದರಂತೆ 102 ರನ್​ಗಳ ಸುಲಭ ಗುರಿ ಪಡೆದ ಆರ್​ಸಿಬಿ ತಂಡಕ್ಕೆ ಫಿಲ್ ಸಾಲ್ಟ್ ಸ್ಫೋಟಕ ಆರಂಭ ಒದಗಿಸಿದರು. ಆರಂಭದಲ್ಲಿ ತುಸು ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ಸಾಲ್ಟ್ ಆ ಬಳಿಕ ಅಬ್ಬರಿಸಿದರು. ಪರಿಣಾಮ  10 ಓವರ್​ಗಳಲ್ಲಿ ಆರ್​ಸಿಬಿ ತಂಡವು 2 ವಿಕೆಟ್ ಕಳೆದುಕೊಂಡು 106 ರನ್ ಕಲೆಹಾಕಿತು.

3 / 6
ಈ ಮೂಲಕ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದ ಆರ್​ಸಿಬಿ ತಂಡವು 9 ವರ್ಷಗಳ ಬಳಿಕ ಫೈನಲ್​ಗೆ ಪ್ರವೇಶಿಸಿದೆ. ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆ ಐಪಿಎಲ್​ನಲ್ಲಿ ವಿಶೇಷ ದಾಖಲೆಯನ್ನು ಸಹ ಬರೆದಿದೆ. ಅದು ಕೂಡ ಹಾಲಿ ಚಾಂಪಿಯನ್ ಕೆಕೆಆರ್ ತಂಡದ ದಾಖಲೆಯನ್ನು ಮುರಿಯುವ ಮೂಲಕ.

ಈ ಮೂಲಕ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದ ಆರ್​ಸಿಬಿ ತಂಡವು 9 ವರ್ಷಗಳ ಬಳಿಕ ಫೈನಲ್​ಗೆ ಪ್ರವೇಶಿಸಿದೆ. ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆ ಐಪಿಎಲ್​ನಲ್ಲಿ ವಿಶೇಷ ದಾಖಲೆಯನ್ನು ಸಹ ಬರೆದಿದೆ. ಅದು ಕೂಡ ಹಾಲಿ ಚಾಂಪಿಯನ್ ಕೆಕೆಆರ್ ತಂಡದ ದಾಖಲೆಯನ್ನು ಮುರಿಯುವ ಮೂಲಕ.

4 / 6
ಅಂದರೆ ಐಪಿಎಲ್​ ಇತಿಹಾಸದಲ್ಲೇ ಯಾವುದೇ ತಂಡ 60 ಎಸೆತಗಳನ್ನು ಬಾಕಿಯಿರಿಸಿ ಪ್ಲೇಆಫ್​ಗೆ ಪ್ರವೇಶಿಸಿರಲಿಲ್ಲ. ಇದೇ ಮೊದಲ ಬಾರಿಗೆ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ರಾಯಲ್ ಪಡೆ ಫೈನಲ್​ಗೇರಿದೆ. ಇದಕ್ಕೂ ಮುನ್ನ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ 57 ಬಾಲ್​ಗಳನ್ನು ಬಾಕಿಯಿರಿಸಿ ಪ್ಲೇಆಫ್ ಪಂದ್ಯ ಗೆದ್ದಿದ್ದು ದಾಖಲೆಯಾಗಿತ್ತು.

ಅಂದರೆ ಐಪಿಎಲ್​ ಇತಿಹಾಸದಲ್ಲೇ ಯಾವುದೇ ತಂಡ 60 ಎಸೆತಗಳನ್ನು ಬಾಕಿಯಿರಿಸಿ ಪ್ಲೇಆಫ್​ಗೆ ಪ್ರವೇಶಿಸಿರಲಿಲ್ಲ. ಇದೇ ಮೊದಲ ಬಾರಿಗೆ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ರಾಯಲ್ ಪಡೆ ಫೈನಲ್​ಗೇರಿದೆ. ಇದಕ್ಕೂ ಮುನ್ನ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ 57 ಬಾಲ್​ಗಳನ್ನು ಬಾಕಿಯಿರಿಸಿ ಪ್ಲೇಆಫ್ ಪಂದ್ಯ ಗೆದ್ದಿದ್ದು ದಾಖಲೆಯಾಗಿತ್ತು.

5 / 6
ಆದರೆ ಈ ಬಾರಿ ಹೊಸ ಇತಿಹಾಸ ಸೃಷ್ಟಿಸುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ. ಕೇವಲ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ಐಪಿಎಲ್ ಇತಿಹಾಸದಲ್ಲೇ ಫೈನಲ್​ಗೇರಿದ ಮೊದಲ ತಂಡ ಎನಿಸಿಕೊಂಡಿದೆ. ಇದೀಗ ಫೈನಲ್​ನಲ್ಲಿರುವ ಆರ್​ಸಿಬಿ ಇನ್ನೊಂದು ಪಂದ್ಯ ಗೆದ್ದರೆ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿಯಬಹುದು. ಈ ಮೂಲಕ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಇತಿಹಾಸ ನಿರ್ಮಿಸಲಿದೆಯಾ ಕಾದು ನೋಡಬೇಕಿದೆ.

ಆದರೆ ಈ ಬಾರಿ ಹೊಸ ಇತಿಹಾಸ ಸೃಷ್ಟಿಸುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ. ಕೇವಲ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ಐಪಿಎಲ್ ಇತಿಹಾಸದಲ್ಲೇ ಫೈನಲ್​ಗೇರಿದ ಮೊದಲ ತಂಡ ಎನಿಸಿಕೊಂಡಿದೆ. ಇದೀಗ ಫೈನಲ್​ನಲ್ಲಿರುವ ಆರ್​ಸಿಬಿ ಇನ್ನೊಂದು ಪಂದ್ಯ ಗೆದ್ದರೆ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿಯಬಹುದು. ಈ ಮೂಲಕ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಇತಿಹಾಸ ನಿರ್ಮಿಸಲಿದೆಯಾ ಕಾದು ನೋಡಬೇಕಿದೆ.

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!