AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡದ್ದು ಅಂತಿಂಥ ಗೆಲುವಲ್ಲ, ಐಪಿಎಲ್ ಇತಿಹಾಸದಲ್ಲೇ ಮೊದಲು..!

IPL 2025 RCB vs PBSK: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು ಕೇವಲ 101 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ಹೊಸ ಇತಿಹಾಸ ನಿರ್ಮಿಸಿದೆ.

ಝಾಹಿರ್ ಯೂಸುಫ್
|

Updated on: May 30, 2025 | 7:09 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಜಯಭೇರಿ ಬಾರಿಸಿದೆ. ಅದು ಕೂಡ ಪಂಜಾಬ್ ಕಿಂಗ್ಸ್ (PBKS) ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ. ಮುಲ್ಲನ್​ಪುರ್​ನ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಜಯಭೇರಿ ಬಾರಿಸಿದೆ. ಅದು ಕೂಡ ಪಂಜಾಬ್ ಕಿಂಗ್ಸ್ (PBKS) ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ. ಮುಲ್ಲನ್​ಪುರ್​ನ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಮಾರಕ ದಾಳಿ ಸಂಘಟಿಸಿದ ಆರ್​ಸಿಬಿ ಬೌಲರ್​ಗಳು ಪವರ್​ಪ್ಲೇನಲ್ಲೇ ಪವರ್​ ತೋರಿಸಿದ್ದರು. ಪರಿಣಾಮ 50 ರನ್​ಗಳಿಸುವಷ್ಟರಲ್ಲಿ ಪಂಜಾಬ್ ಪಡೆಯು 5 ವಿಕೆಟ್ ಕಳೆದುಕೊಂಡಿತು. ಇನ್ನು 14.1 ಓವರ್​ಗಳಲ್ಲಿ 101 ರನ್​ಗಳಿಸುವಲಷ್ಟರಲ್ಲಿ ಆಲೌಟ್ ಆಯಿತು.

ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಮಾರಕ ದಾಳಿ ಸಂಘಟಿಸಿದ ಆರ್​ಸಿಬಿ ಬೌಲರ್​ಗಳು ಪವರ್​ಪ್ಲೇನಲ್ಲೇ ಪವರ್​ ತೋರಿಸಿದ್ದರು. ಪರಿಣಾಮ 50 ರನ್​ಗಳಿಸುವಷ್ಟರಲ್ಲಿ ಪಂಜಾಬ್ ಪಡೆಯು 5 ವಿಕೆಟ್ ಕಳೆದುಕೊಂಡಿತು. ಇನ್ನು 14.1 ಓವರ್​ಗಳಲ್ಲಿ 101 ರನ್​ಗಳಿಸುವಲಷ್ಟರಲ್ಲಿ ಆಲೌಟ್ ಆಯಿತು.

2 / 6
ಅದರಂತೆ 102 ರನ್​ಗಳ ಸುಲಭ ಗುರಿ ಪಡೆದ ಆರ್​ಸಿಬಿ ತಂಡಕ್ಕೆ ಫಿಲ್ ಸಾಲ್ಟ್ ಸ್ಫೋಟಕ ಆರಂಭ ಒದಗಿಸಿದರು. ಆರಂಭದಲ್ಲಿ ತುಸು ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ಸಾಲ್ಟ್ ಆ ಬಳಿಕ ಅಬ್ಬರಿಸಿದರು. ಪರಿಣಾಮ  10 ಓವರ್​ಗಳಲ್ಲಿ ಆರ್​ಸಿಬಿ ತಂಡವು 2 ವಿಕೆಟ್ ಕಳೆದುಕೊಂಡು 106 ರನ್ ಕಲೆಹಾಕಿತು.

ಅದರಂತೆ 102 ರನ್​ಗಳ ಸುಲಭ ಗುರಿ ಪಡೆದ ಆರ್​ಸಿಬಿ ತಂಡಕ್ಕೆ ಫಿಲ್ ಸಾಲ್ಟ್ ಸ್ಫೋಟಕ ಆರಂಭ ಒದಗಿಸಿದರು. ಆರಂಭದಲ್ಲಿ ತುಸು ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ಸಾಲ್ಟ್ ಆ ಬಳಿಕ ಅಬ್ಬರಿಸಿದರು. ಪರಿಣಾಮ  10 ಓವರ್​ಗಳಲ್ಲಿ ಆರ್​ಸಿಬಿ ತಂಡವು 2 ವಿಕೆಟ್ ಕಳೆದುಕೊಂಡು 106 ರನ್ ಕಲೆಹಾಕಿತು.

3 / 6
ಈ ಮೂಲಕ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದ ಆರ್​ಸಿಬಿ ತಂಡವು 9 ವರ್ಷಗಳ ಬಳಿಕ ಫೈನಲ್​ಗೆ ಪ್ರವೇಶಿಸಿದೆ. ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆ ಐಪಿಎಲ್​ನಲ್ಲಿ ವಿಶೇಷ ದಾಖಲೆಯನ್ನು ಸಹ ಬರೆದಿದೆ. ಅದು ಕೂಡ ಹಾಲಿ ಚಾಂಪಿಯನ್ ಕೆಕೆಆರ್ ತಂಡದ ದಾಖಲೆಯನ್ನು ಮುರಿಯುವ ಮೂಲಕ.

ಈ ಮೂಲಕ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದ ಆರ್​ಸಿಬಿ ತಂಡವು 9 ವರ್ಷಗಳ ಬಳಿಕ ಫೈನಲ್​ಗೆ ಪ್ರವೇಶಿಸಿದೆ. ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆ ಐಪಿಎಲ್​ನಲ್ಲಿ ವಿಶೇಷ ದಾಖಲೆಯನ್ನು ಸಹ ಬರೆದಿದೆ. ಅದು ಕೂಡ ಹಾಲಿ ಚಾಂಪಿಯನ್ ಕೆಕೆಆರ್ ತಂಡದ ದಾಖಲೆಯನ್ನು ಮುರಿಯುವ ಮೂಲಕ.

4 / 6
ಅಂದರೆ ಐಪಿಎಲ್​ ಇತಿಹಾಸದಲ್ಲೇ ಯಾವುದೇ ತಂಡ 60 ಎಸೆತಗಳನ್ನು ಬಾಕಿಯಿರಿಸಿ ಪ್ಲೇಆಫ್​ಗೆ ಪ್ರವೇಶಿಸಿರಲಿಲ್ಲ. ಇದೇ ಮೊದಲ ಬಾರಿಗೆ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ರಾಯಲ್ ಪಡೆ ಫೈನಲ್​ಗೇರಿದೆ. ಇದಕ್ಕೂ ಮುನ್ನ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ 57 ಬಾಲ್​ಗಳನ್ನು ಬಾಕಿಯಿರಿಸಿ ಪ್ಲೇಆಫ್ ಪಂದ್ಯ ಗೆದ್ದಿದ್ದು ದಾಖಲೆಯಾಗಿತ್ತು.

ಅಂದರೆ ಐಪಿಎಲ್​ ಇತಿಹಾಸದಲ್ಲೇ ಯಾವುದೇ ತಂಡ 60 ಎಸೆತಗಳನ್ನು ಬಾಕಿಯಿರಿಸಿ ಪ್ಲೇಆಫ್​ಗೆ ಪ್ರವೇಶಿಸಿರಲಿಲ್ಲ. ಇದೇ ಮೊದಲ ಬಾರಿಗೆ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ರಾಯಲ್ ಪಡೆ ಫೈನಲ್​ಗೇರಿದೆ. ಇದಕ್ಕೂ ಮುನ್ನ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ 57 ಬಾಲ್​ಗಳನ್ನು ಬಾಕಿಯಿರಿಸಿ ಪ್ಲೇಆಫ್ ಪಂದ್ಯ ಗೆದ್ದಿದ್ದು ದಾಖಲೆಯಾಗಿತ್ತು.

5 / 6
ಆದರೆ ಈ ಬಾರಿ ಹೊಸ ಇತಿಹಾಸ ಸೃಷ್ಟಿಸುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ. ಕೇವಲ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ಐಪಿಎಲ್ ಇತಿಹಾಸದಲ್ಲೇ ಫೈನಲ್​ಗೇರಿದ ಮೊದಲ ತಂಡ ಎನಿಸಿಕೊಂಡಿದೆ. ಇದೀಗ ಫೈನಲ್​ನಲ್ಲಿರುವ ಆರ್​ಸಿಬಿ ಇನ್ನೊಂದು ಪಂದ್ಯ ಗೆದ್ದರೆ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿಯಬಹುದು. ಈ ಮೂಲಕ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಇತಿಹಾಸ ನಿರ್ಮಿಸಲಿದೆಯಾ ಕಾದು ನೋಡಬೇಕಿದೆ.

ಆದರೆ ಈ ಬಾರಿ ಹೊಸ ಇತಿಹಾಸ ಸೃಷ್ಟಿಸುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ. ಕೇವಲ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ಐಪಿಎಲ್ ಇತಿಹಾಸದಲ್ಲೇ ಫೈನಲ್​ಗೇರಿದ ಮೊದಲ ತಂಡ ಎನಿಸಿಕೊಂಡಿದೆ. ಇದೀಗ ಫೈನಲ್​ನಲ್ಲಿರುವ ಆರ್​ಸಿಬಿ ಇನ್ನೊಂದು ಪಂದ್ಯ ಗೆದ್ದರೆ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿಯಬಹುದು. ಈ ಮೂಲಕ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಇತಿಹಾಸ ನಿರ್ಮಿಸಲಿದೆಯಾ ಕಾದು ನೋಡಬೇಕಿದೆ.

6 / 6
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?