AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡದ್ದು ಅಂತಿಂಥ ಗೆಲುವಲ್ಲ, ಐಪಿಎಲ್ ಇತಿಹಾಸದಲ್ಲೇ ಮೊದಲು..!

IPL 2025 RCB vs PBSK: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು ಕೇವಲ 101 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ಹೊಸ ಇತಿಹಾಸ ನಿರ್ಮಿಸಿದೆ.

ಝಾಹಿರ್ ಯೂಸುಫ್
|

Updated on: May 30, 2025 | 7:09 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಜಯಭೇರಿ ಬಾರಿಸಿದೆ. ಅದು ಕೂಡ ಪಂಜಾಬ್ ಕಿಂಗ್ಸ್ (PBKS) ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ. ಮುಲ್ಲನ್​ಪುರ್​ನ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಜಯಭೇರಿ ಬಾರಿಸಿದೆ. ಅದು ಕೂಡ ಪಂಜಾಬ್ ಕಿಂಗ್ಸ್ (PBKS) ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ. ಮುಲ್ಲನ್​ಪುರ್​ನ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಮಾರಕ ದಾಳಿ ಸಂಘಟಿಸಿದ ಆರ್​ಸಿಬಿ ಬೌಲರ್​ಗಳು ಪವರ್​ಪ್ಲೇನಲ್ಲೇ ಪವರ್​ ತೋರಿಸಿದ್ದರು. ಪರಿಣಾಮ 50 ರನ್​ಗಳಿಸುವಷ್ಟರಲ್ಲಿ ಪಂಜಾಬ್ ಪಡೆಯು 5 ವಿಕೆಟ್ ಕಳೆದುಕೊಂಡಿತು. ಇನ್ನು 14.1 ಓವರ್​ಗಳಲ್ಲಿ 101 ರನ್​ಗಳಿಸುವಲಷ್ಟರಲ್ಲಿ ಆಲೌಟ್ ಆಯಿತು.

ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಮಾರಕ ದಾಳಿ ಸಂಘಟಿಸಿದ ಆರ್​ಸಿಬಿ ಬೌಲರ್​ಗಳು ಪವರ್​ಪ್ಲೇನಲ್ಲೇ ಪವರ್​ ತೋರಿಸಿದ್ದರು. ಪರಿಣಾಮ 50 ರನ್​ಗಳಿಸುವಷ್ಟರಲ್ಲಿ ಪಂಜಾಬ್ ಪಡೆಯು 5 ವಿಕೆಟ್ ಕಳೆದುಕೊಂಡಿತು. ಇನ್ನು 14.1 ಓವರ್​ಗಳಲ್ಲಿ 101 ರನ್​ಗಳಿಸುವಲಷ್ಟರಲ್ಲಿ ಆಲೌಟ್ ಆಯಿತು.

2 / 6
ಅದರಂತೆ 102 ರನ್​ಗಳ ಸುಲಭ ಗುರಿ ಪಡೆದ ಆರ್​ಸಿಬಿ ತಂಡಕ್ಕೆ ಫಿಲ್ ಸಾಲ್ಟ್ ಸ್ಫೋಟಕ ಆರಂಭ ಒದಗಿಸಿದರು. ಆರಂಭದಲ್ಲಿ ತುಸು ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ಸಾಲ್ಟ್ ಆ ಬಳಿಕ ಅಬ್ಬರಿಸಿದರು. ಪರಿಣಾಮ  10 ಓವರ್​ಗಳಲ್ಲಿ ಆರ್​ಸಿಬಿ ತಂಡವು 2 ವಿಕೆಟ್ ಕಳೆದುಕೊಂಡು 106 ರನ್ ಕಲೆಹಾಕಿತು.

ಅದರಂತೆ 102 ರನ್​ಗಳ ಸುಲಭ ಗುರಿ ಪಡೆದ ಆರ್​ಸಿಬಿ ತಂಡಕ್ಕೆ ಫಿಲ್ ಸಾಲ್ಟ್ ಸ್ಫೋಟಕ ಆರಂಭ ಒದಗಿಸಿದರು. ಆರಂಭದಲ್ಲಿ ತುಸು ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ಸಾಲ್ಟ್ ಆ ಬಳಿಕ ಅಬ್ಬರಿಸಿದರು. ಪರಿಣಾಮ  10 ಓವರ್​ಗಳಲ್ಲಿ ಆರ್​ಸಿಬಿ ತಂಡವು 2 ವಿಕೆಟ್ ಕಳೆದುಕೊಂಡು 106 ರನ್ ಕಲೆಹಾಕಿತು.

3 / 6
ಈ ಮೂಲಕ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದ ಆರ್​ಸಿಬಿ ತಂಡವು 9 ವರ್ಷಗಳ ಬಳಿಕ ಫೈನಲ್​ಗೆ ಪ್ರವೇಶಿಸಿದೆ. ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆ ಐಪಿಎಲ್​ನಲ್ಲಿ ವಿಶೇಷ ದಾಖಲೆಯನ್ನು ಸಹ ಬರೆದಿದೆ. ಅದು ಕೂಡ ಹಾಲಿ ಚಾಂಪಿಯನ್ ಕೆಕೆಆರ್ ತಂಡದ ದಾಖಲೆಯನ್ನು ಮುರಿಯುವ ಮೂಲಕ.

ಈ ಮೂಲಕ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದ ಆರ್​ಸಿಬಿ ತಂಡವು 9 ವರ್ಷಗಳ ಬಳಿಕ ಫೈನಲ್​ಗೆ ಪ್ರವೇಶಿಸಿದೆ. ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆ ಐಪಿಎಲ್​ನಲ್ಲಿ ವಿಶೇಷ ದಾಖಲೆಯನ್ನು ಸಹ ಬರೆದಿದೆ. ಅದು ಕೂಡ ಹಾಲಿ ಚಾಂಪಿಯನ್ ಕೆಕೆಆರ್ ತಂಡದ ದಾಖಲೆಯನ್ನು ಮುರಿಯುವ ಮೂಲಕ.

4 / 6
ಅಂದರೆ ಐಪಿಎಲ್​ ಇತಿಹಾಸದಲ್ಲೇ ಯಾವುದೇ ತಂಡ 60 ಎಸೆತಗಳನ್ನು ಬಾಕಿಯಿರಿಸಿ ಪ್ಲೇಆಫ್​ಗೆ ಪ್ರವೇಶಿಸಿರಲಿಲ್ಲ. ಇದೇ ಮೊದಲ ಬಾರಿಗೆ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ರಾಯಲ್ ಪಡೆ ಫೈನಲ್​ಗೇರಿದೆ. ಇದಕ್ಕೂ ಮುನ್ನ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ 57 ಬಾಲ್​ಗಳನ್ನು ಬಾಕಿಯಿರಿಸಿ ಪ್ಲೇಆಫ್ ಪಂದ್ಯ ಗೆದ್ದಿದ್ದು ದಾಖಲೆಯಾಗಿತ್ತು.

ಅಂದರೆ ಐಪಿಎಲ್​ ಇತಿಹಾಸದಲ್ಲೇ ಯಾವುದೇ ತಂಡ 60 ಎಸೆತಗಳನ್ನು ಬಾಕಿಯಿರಿಸಿ ಪ್ಲೇಆಫ್​ಗೆ ಪ್ರವೇಶಿಸಿರಲಿಲ್ಲ. ಇದೇ ಮೊದಲ ಬಾರಿಗೆ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ರಾಯಲ್ ಪಡೆ ಫೈನಲ್​ಗೇರಿದೆ. ಇದಕ್ಕೂ ಮುನ್ನ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ 57 ಬಾಲ್​ಗಳನ್ನು ಬಾಕಿಯಿರಿಸಿ ಪ್ಲೇಆಫ್ ಪಂದ್ಯ ಗೆದ್ದಿದ್ದು ದಾಖಲೆಯಾಗಿತ್ತು.

5 / 6
ಆದರೆ ಈ ಬಾರಿ ಹೊಸ ಇತಿಹಾಸ ಸೃಷ್ಟಿಸುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ. ಕೇವಲ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ಐಪಿಎಲ್ ಇತಿಹಾಸದಲ್ಲೇ ಫೈನಲ್​ಗೇರಿದ ಮೊದಲ ತಂಡ ಎನಿಸಿಕೊಂಡಿದೆ. ಇದೀಗ ಫೈನಲ್​ನಲ್ಲಿರುವ ಆರ್​ಸಿಬಿ ಇನ್ನೊಂದು ಪಂದ್ಯ ಗೆದ್ದರೆ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿಯಬಹುದು. ಈ ಮೂಲಕ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಇತಿಹಾಸ ನಿರ್ಮಿಸಲಿದೆಯಾ ಕಾದು ನೋಡಬೇಕಿದೆ.

ಆದರೆ ಈ ಬಾರಿ ಹೊಸ ಇತಿಹಾಸ ಸೃಷ್ಟಿಸುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ. ಕೇವಲ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ಐಪಿಎಲ್ ಇತಿಹಾಸದಲ್ಲೇ ಫೈನಲ್​ಗೇರಿದ ಮೊದಲ ತಂಡ ಎನಿಸಿಕೊಂಡಿದೆ. ಇದೀಗ ಫೈನಲ್​ನಲ್ಲಿರುವ ಆರ್​ಸಿಬಿ ಇನ್ನೊಂದು ಪಂದ್ಯ ಗೆದ್ದರೆ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿಯಬಹುದು. ಈ ಮೂಲಕ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಇತಿಹಾಸ ನಿರ್ಮಿಸಲಿದೆಯಾ ಕಾದು ನೋಡಬೇಕಿದೆ.

6 / 6
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್