AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ಆರ್​ಸಿಬಿ ಖರೀದಿಗೆ ಖಜಾನೆ ತೆರೆದ 2 ಲಕ್ಷ ಕೋಟಿ ರೂ. ಒಡೆಯ

RCB Franchise Sale: ಹಾಲಿ ಚಾಂಪಿಯನ್ ಆರ್​ಸಿಬಿ ಫ್ರಾಂಚೈಸಿಯನ್ನು ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಮಾರಾಟಕ್ಕಿಟ್ಟಿದ್ದು, ಔಷಧ ಉದ್ಯಮಿ ಆದಾರ್ ಪೂನಾವಾಲಾ ಖರೀದಿಗೆ ಬಿಡ್ ಮಾಡಿದ್ದಾರೆ. ವಿರಾಟ್ ಕೊಹ್ಲಿ, ಸ್ಮೃತಿ ಮಂಧನಾ ಅವರಂತಹ ಆಟಗಾರರಿರುವ ಜನಪ್ರಿಯ ಆರ್​ಸಿಬಿ ತಂಡದ ಮೌಲ್ಯ 18,000-20,000 ಕೋಟಿ ರೂಪಾಯಿ ತಲುಪುವ ನಿರೀಕ್ಷೆಯಿದೆ. ಸೀರಮ್ ಇನ್‌ಸ್ಟಿಟ್ಯೂಟ್ ಸಿಇಒ ಆದಾರ್ ಪೂನಾವಾಲಾ ಐಪಿಎಲ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಪೃಥ್ವಿಶಂಕರ
|

Updated on: Jan 22, 2026 | 8:35 PM

Share
ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಾದೋ ಇಲ್ಲವೋ ಎಂಬುದರ ಇದೀಗ ಮತ್ತೊಂದು ತಾಜಾ ಸುದ್ದಿಯೊಂದು ಹೊರಬಿದ್ದಿದೆ. ಅದೆನೇಂದರೆ ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನವೇ ಆರ್​ಸಿಬಿ ಫ್ರಾಂಚೈಸಿಗೆ ಹೊಸ ಮಾಲೀಕ ಸಿಗುವುದು ಖಚಿತವಾಗಿದೆ.

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಾದೋ ಇಲ್ಲವೋ ಎಂಬುದರ ಇದೀಗ ಮತ್ತೊಂದು ತಾಜಾ ಸುದ್ದಿಯೊಂದು ಹೊರಬಿದ್ದಿದೆ. ಅದೆನೇಂದರೆ ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನವೇ ಆರ್​ಸಿಬಿ ಫ್ರಾಂಚೈಸಿಗೆ ಹೊಸ ಮಾಲೀಕ ಸಿಗುವುದು ಖಚಿತವಾಗಿದೆ.

1 / 6
ಈ ಮೊದಲೇ ವರದಿಯಾದಂತೆ, ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ತಂಡದ ಹಾಲಿ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಮಾರಾಟ ಮಾಡಲು ಮುಂದಾಗಿದೆ. ಕಳೆದ ನವೆಂಬರ್‌ನಲ್ಲಿಯೇ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ತಂಡವನ್ನು ಮಾರಾಟಕ್ಕೆ ಇಟ್ಟಿತ್ತು. ಇದಾದ ಬಳಿಕ ಕೆಲವು ಕಂಪನಿಗಳು ಕೂಡ ಆರ್​ಸಿಬಿ ಖರೀದಿಗೆ ಮುಂದಾಗಿದ್ದವು.

ಈ ಮೊದಲೇ ವರದಿಯಾದಂತೆ, ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ತಂಡದ ಹಾಲಿ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಮಾರಾಟ ಮಾಡಲು ಮುಂದಾಗಿದೆ. ಕಳೆದ ನವೆಂಬರ್‌ನಲ್ಲಿಯೇ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ತಂಡವನ್ನು ಮಾರಾಟಕ್ಕೆ ಇಟ್ಟಿತ್ತು. ಇದಾದ ಬಳಿಕ ಕೆಲವು ಕಂಪನಿಗಳು ಕೂಡ ಆರ್​ಸಿಬಿ ಖರೀದಿಗೆ ಮುಂದಾಗಿದ್ದವು.

2 / 6
ಇದೀಗ ಹೊರಬಿದ್ದಿರುವ ಖಚಿತ ಮಾಹಿತಿಯ ಪ್ರಕಾರ, ಔಷಧ ಉದ್ಯಮಿ ಆದರ್ ಪೂನವಲ್ಲ ಆರ್‌ಸಿಬಿ ಫ್ರಾಂಚೈಸಿಯನ್ನು ತಮ್ಮ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನ ಶುರು ಮಾಡಿದ್ದಾರೆ. ಸ್ವತಃ ಈ ವಿಚಾರವನ್ನು ಪೂನವಲ್ಲ ಅವರೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಖಚಿತಪಡಿಸಿದ್ದು, ಆರ್‌ಸಿಬಿಯನ್ನು ಖರೀದಿಸಲು ಬಿಡ್ ಮಾಡುವುದಾಗಿ ಹೇಳಿದ್ದಾರೆ.

ಇದೀಗ ಹೊರಬಿದ್ದಿರುವ ಖಚಿತ ಮಾಹಿತಿಯ ಪ್ರಕಾರ, ಔಷಧ ಉದ್ಯಮಿ ಆದರ್ ಪೂನವಲ್ಲ ಆರ್‌ಸಿಬಿ ಫ್ರಾಂಚೈಸಿಯನ್ನು ತಮ್ಮ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನ ಶುರು ಮಾಡಿದ್ದಾರೆ. ಸ್ವತಃ ಈ ವಿಚಾರವನ್ನು ಪೂನವಲ್ಲ ಅವರೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಖಚಿತಪಡಿಸಿದ್ದು, ಆರ್‌ಸಿಬಿಯನ್ನು ಖರೀದಿಸಲು ಬಿಡ್ ಮಾಡುವುದಾಗಿ ಹೇಳಿದ್ದಾರೆ.

3 / 6
ಆರ್‌ಸಿಬಿ ಫ್ರಾಂಚೈಸಿ ಮಾರಾಟಕ್ಕಿದೆ. ಹೀಗಾಗಿ ಆರ್‌ಸಿಬಿ ಖರೀದಿಗೆ ಎಷ್ಟು ಸಾಧ್ಯವೋ ಅಷ್ಟು ಕಠಿಣ ಪ್ರಯತ್ನ, ಬಲವಾದ ಬಿಡ್ ಮಾಡುವುದಾಗಿ ಆದಾರ್ ಪೂನವಾಲ್ಲಾ ತಮ್ಮ ಸೋಶಿಯಲ್ ಮೀಡಿಯಾ ಖಾತೆ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ. ಆದಾಗ್ಯೂ ಅವರು ಆರ್​ಸಿಬಿ ಖರೀದಿಗಾಗಿ ಎಷ್ಟು ಹಣವನ್ನು ಖರ್ಚು ಮಾಡಲು ಸಿದ್ಧರಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ.

ಆರ್‌ಸಿಬಿ ಫ್ರಾಂಚೈಸಿ ಮಾರಾಟಕ್ಕಿದೆ. ಹೀಗಾಗಿ ಆರ್‌ಸಿಬಿ ಖರೀದಿಗೆ ಎಷ್ಟು ಸಾಧ್ಯವೋ ಅಷ್ಟು ಕಠಿಣ ಪ್ರಯತ್ನ, ಬಲವಾದ ಬಿಡ್ ಮಾಡುವುದಾಗಿ ಆದಾರ್ ಪೂನವಾಲ್ಲಾ ತಮ್ಮ ಸೋಶಿಯಲ್ ಮೀಡಿಯಾ ಖಾತೆ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ. ಆದಾಗ್ಯೂ ಅವರು ಆರ್​ಸಿಬಿ ಖರೀದಿಗಾಗಿ ಎಷ್ಟು ಹಣವನ್ನು ಖರ್ಚು ಮಾಡಲು ಸಿದ್ಧರಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ.

4 / 6
ವರದಿಗಳ ಪ್ರಕಾರ ಆರ್‌ಸಿಬಿ 18,000 ಕೋಟಿಯಿಂದ 20,000 ಕೋಟಿಗೆ ಮಾರಾಟವಾಗುವ ನಿರೀಕ್ಷೆಯನ್ನು ಹಾಲಿ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಹೊಂದಿದೆ. ಇದಕ್ಕೆ ಕಾರಣವೂ ಇದ್ದು ಆರ್​ಸಿಬಿ ಹಾಲಿ ಚಾಂಪಿಯನ್ ಮಾತ್ರವಲ್ಲದೆ ಇದರ ಜನಪ್ರಿಯತೆ ಇದೀಗ ದುಪ್ಪಟ್ಟಾಗಿದೆ. ಹಾಗೆಯೇ ಈ ಫ್ರಾಂಚೈಸಿಯಲ್ಲಿ ವಿರಾಟ್ ಕೊಹ್ಲಿ ಮತ್ತು ಸ್ಮೃತಿ ಮಂಧಾನರಂತಹ ಲೆಜೆಂಡರಿ ಆಟಗಾರರು ಆಡುತ್ತಿರುವುದರಿಂದ ಐಪಿಎಲ್‌ನಲ್ಲಿ ಇದು ಅತ್ಯಂತ ದುಬಾರಿ ತಂಡಗಳಲ್ಲಿ ಒಂದಾಗಿದೆ.

ವರದಿಗಳ ಪ್ರಕಾರ ಆರ್‌ಸಿಬಿ 18,000 ಕೋಟಿಯಿಂದ 20,000 ಕೋಟಿಗೆ ಮಾರಾಟವಾಗುವ ನಿರೀಕ್ಷೆಯನ್ನು ಹಾಲಿ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಹೊಂದಿದೆ. ಇದಕ್ಕೆ ಕಾರಣವೂ ಇದ್ದು ಆರ್​ಸಿಬಿ ಹಾಲಿ ಚಾಂಪಿಯನ್ ಮಾತ್ರವಲ್ಲದೆ ಇದರ ಜನಪ್ರಿಯತೆ ಇದೀಗ ದುಪ್ಪಟ್ಟಾಗಿದೆ. ಹಾಗೆಯೇ ಈ ಫ್ರಾಂಚೈಸಿಯಲ್ಲಿ ವಿರಾಟ್ ಕೊಹ್ಲಿ ಮತ್ತು ಸ್ಮೃತಿ ಮಂಧಾನರಂತಹ ಲೆಜೆಂಡರಿ ಆಟಗಾರರು ಆಡುತ್ತಿರುವುದರಿಂದ ಐಪಿಎಲ್‌ನಲ್ಲಿ ಇದು ಅತ್ಯಂತ ದುಬಾರಿ ತಂಡಗಳಲ್ಲಿ ಒಂದಾಗಿದೆ.

5 / 6
ಔಷಧ ಉದ್ಯಮಿ ಆದಾರ್ ಪೂನವಾಲ್ಲಾ ಭಾರತದ ಕೋಟ್ಯಾಧಿಪತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಅವರ ಸಂಪತ್ತು  ಸುಮಾರು 2 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. ಆದಾರ್ ಪೂನವಾಲ್ಲಾ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆಗಿದ್ದು, ಇದೀಗ ಐಪಿಎಲ್‌ನಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಔಷಧ ಉದ್ಯಮಿ ಆದಾರ್ ಪೂನವಾಲ್ಲಾ ಭಾರತದ ಕೋಟ್ಯಾಧಿಪತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಅವರ ಸಂಪತ್ತು ಸುಮಾರು 2 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. ಆದಾರ್ ಪೂನವಾಲ್ಲಾ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆಗಿದ್ದು, ಇದೀಗ ಐಪಿಎಲ್‌ನಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

6 / 6
Follow Us
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!