AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಫ್ಯಾನ್ಸ್​ಗೆ ಗುಡ್​ ನ್ಯೂಸ್; ಬೆಂಗಳೂರಿನಲ್ಲೇ ನಡೆಯಲಿವೆ ಪಂದ್ಯಗಳು! ಆದ್ರೆ ಕಂಡೀಷನ್ ಅಪ್ಲೈ

RCB IPL 2026 Home Ground: ಐಪಿಎಲ್ 2026 ರಲ್ಲಿ ಆರ್​ಸಿಬಿ ತವರು ಪಂದ್ಯಗಳನ್ನು ಎಲ್ಲಿ ಆಡಲಿದೆ ಎಂಬುದು ಕುತೂಹಲ ಮೂಡಿಸಿದೆ. ಕಳೆದ ವರ್ಷದ ಕಾಲ್ತುಳಿತದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತೆ ಹೆಚ್ಚಿಸಲು 4.5 ಕೋಟಿ ರೂ. ವೆಚ್ಚದಲ್ಲಿ ಎಐ ಕ್ಯಾಮೆರಾಗಳನ್ನು ಅಳವಡಿಸಲು ಆರ್​ಸಿಬಿ ಕೆಎಸ್‌ಸಿಎಗೆ ಪ್ರಸ್ತಾಪಿಸಿದೆ. ಈ ವೆಚ್ಚವನ್ನು ತಾನೇ ಭರಿಸುವುದಾಗಿಯೂ ತಿಳಿಸಿದೆ. ರಾಯ್‌ಪುರ್ ಮತ್ತು ಪುಣೆ ಪರ್ಯಾಯ ತವರು ಮೈದಾನಗಳಾಗಿ ಗುರುತಿಸಲ್ಪಟ್ಟಿವೆ.

ಪೃಥ್ವಿಶಂಕರ
|

Updated on: Jan 16, 2026 | 5:45 PM

Share
2026 ರ ಐಪಿಎಲ್ ಮಾರ್ಚ್​ ತಿಂಗಳ ಕೊನೆಯ ವಾರದಿಂದ ಆರಂಭವಾಗುವ ಸಾಧ್ಯತೆಗಳಿವೆ. ಈ ಲೀಗ್​ಗಾಗಿ ಎಲ್ಲಾ ಸಿದ್ಧತೆಗಳು ಕೂಡ ಅಂತಿಮಗೊಂಡಿದೆ. ಎಲ್ಲಾ 10 ಫ್ರಾಂಚೈಸಿಗಳು ಕೂಡ ಈಗಾಗಲೇ ತಯಾರಿಯಲ್ಲಿ ತೊಡಗಿವೆ. ಆದಾಗ್ಯೂ ಹಾಲಿ ಚಾಂಪಿಯನ್ ಆರ್​ಸಿಬಿ ಮಾತ್ರ ಯಾವ ಕ್ರೀಡಾಂಗಣದಲ್ಲಿ ತನ್ನ ತವರು ಪಂದ್ಯಗಳನ್ನು ಆಡಲಿದೆ ಎಂಬುದು ಇನ್ನು ಖಚಿತವಾಗಿಲ್ಲ.

2026 ರ ಐಪಿಎಲ್ ಮಾರ್ಚ್​ ತಿಂಗಳ ಕೊನೆಯ ವಾರದಿಂದ ಆರಂಭವಾಗುವ ಸಾಧ್ಯತೆಗಳಿವೆ. ಈ ಲೀಗ್​ಗಾಗಿ ಎಲ್ಲಾ ಸಿದ್ಧತೆಗಳು ಕೂಡ ಅಂತಿಮಗೊಂಡಿದೆ. ಎಲ್ಲಾ 10 ಫ್ರಾಂಚೈಸಿಗಳು ಕೂಡ ಈಗಾಗಲೇ ತಯಾರಿಯಲ್ಲಿ ತೊಡಗಿವೆ. ಆದಾಗ್ಯೂ ಹಾಲಿ ಚಾಂಪಿಯನ್ ಆರ್​ಸಿಬಿ ಮಾತ್ರ ಯಾವ ಕ್ರೀಡಾಂಗಣದಲ್ಲಿ ತನ್ನ ತವರು ಪಂದ್ಯಗಳನ್ನು ಆಡಲಿದೆ ಎಂಬುದು ಇನ್ನು ಖಚಿತವಾಗಿಲ್ಲ.

1 / 8
ವಾಸ್ತವವಾಗಿ ಕಳೆದ ವರ್ಷ ಅಂದರೆ 2025 ರಲ್ಲಿ ಆರ್​ಸಿಬಿ ಸಂಭ್ರಮಾಚರಣೆಯಲ್ಲಿ ಉಂಟಾದ ಕಾಲ್ತುಳಿತದಿಂದ 11 ಅಮಾಯಕರು ಪ್ರಾಣಬಿಟ್ಟಿದ್ದರು. ಆ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದುವರೆಗೆ ಯಾವುದೇ ಪಂದ್ಯಗಳು ನಡೆದಿಲ್ಲ. ಇದೀಗ ಮುಂಬರುವ ಐಪಿಎಲ್ ಪಂದ್ಯಗಳು ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.

ವಾಸ್ತವವಾಗಿ ಕಳೆದ ವರ್ಷ ಅಂದರೆ 2025 ರಲ್ಲಿ ಆರ್​ಸಿಬಿ ಸಂಭ್ರಮಾಚರಣೆಯಲ್ಲಿ ಉಂಟಾದ ಕಾಲ್ತುಳಿತದಿಂದ 11 ಅಮಾಯಕರು ಪ್ರಾಣಬಿಟ್ಟಿದ್ದರು. ಆ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದುವರೆಗೆ ಯಾವುದೇ ಪಂದ್ಯಗಳು ನಡೆದಿಲ್ಲ. ಇದೀಗ ಮುಂಬರುವ ಐಪಿಎಲ್ ಪಂದ್ಯಗಳು ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.

2 / 8
ಇದೆಲ್ಲದರ ನಡುವೆ ಆರ್​ಸಿಬಿ ಫ್ರಾಂಚೈಸಿ ತನ್ನ ತವರು ಮೈದಾನಗಳನ್ನು ನಡೆಸಲು ಎರಡು ಮೈದಾನಗಳನ್ನು ಆಯ್ಕೆ ಮಾಡಿದೆ ಎಂತಲೂ ವರದಿಯಾಗಿತ್ತು. ಇದೀಗ ಇದೆಲ್ಲದರ ನಡುವೆ ಆರ್​ಸಿಬಿ ಫ್ರಾಂಚೈಸಿ ಚಿನ್ನಸ್ವಾಮಿ ಮೈದಾನದಲ್ಲಿ ತವರು ಪಂದ್ಯಗಳನ್ನು ನಡೆಸಲು ಉತ್ಸುಕತೆ ತೋರಿದೆ. ಆದರೆ ಪಂದ್ಯಗಳು ನಡೆಯಬೇಕೆಂದರೆ ಕೆಲವು ಷರತ್ತುಗಳನ್ನು ಪೂರ್ಣಗೊಳಿಸುವಂತೆ ಕೆಎಸ್​ಸಿಎ ಬಳಿ ಕೇಳಿದೆ.

ಇದೆಲ್ಲದರ ನಡುವೆ ಆರ್​ಸಿಬಿ ಫ್ರಾಂಚೈಸಿ ತನ್ನ ತವರು ಮೈದಾನಗಳನ್ನು ನಡೆಸಲು ಎರಡು ಮೈದಾನಗಳನ್ನು ಆಯ್ಕೆ ಮಾಡಿದೆ ಎಂತಲೂ ವರದಿಯಾಗಿತ್ತು. ಇದೀಗ ಇದೆಲ್ಲದರ ನಡುವೆ ಆರ್​ಸಿಬಿ ಫ್ರಾಂಚೈಸಿ ಚಿನ್ನಸ್ವಾಮಿ ಮೈದಾನದಲ್ಲಿ ತವರು ಪಂದ್ಯಗಳನ್ನು ನಡೆಸಲು ಉತ್ಸುಕತೆ ತೋರಿದೆ. ಆದರೆ ಪಂದ್ಯಗಳು ನಡೆಯಬೇಕೆಂದರೆ ಕೆಲವು ಷರತ್ತುಗಳನ್ನು ಪೂರ್ಣಗೊಳಿಸುವಂತೆ ಕೆಎಸ್​ಸಿಎ ಬಳಿ ಕೇಳಿದೆ.

3 / 8
ಜನವರಿ 16 ರಂದು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಆರ್​ಸಿಬಿ ಅದರಲ್ಲಿ, ‘ಕ್ರೀಡಾಂಗಣದಲ್ಲಿ 300 ರಿಂದ 350 ಎಐ ಕ್ಯಾಮೆರಾಗಳನ್ನು ಅಳವಡಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ಬಳಿ ಔಪಚಾರಿಕವಾಗಿ ಪ್ರಸ್ತಾಪಿಸಲಾಗಿದೆ. ಈ ಕ್ಯಾಮೆರಾಗಳು ಕ್ರೀಡಾಂಗಣ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳನ್ನು ಮೇಲ್ವಿಚಾರಣೆ ಮಾಡುತ್ತವೆ ಮತ್ತು ಜನಸಂದಣಿಯ ನಿರ್ವಹಣೆಗೆ ಸಹಾಯ ಮಾಡುತ್ತವೆ.

ಜನವರಿ 16 ರಂದು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಆರ್​ಸಿಬಿ ಅದರಲ್ಲಿ, ‘ಕ್ರೀಡಾಂಗಣದಲ್ಲಿ 300 ರಿಂದ 350 ಎಐ ಕ್ಯಾಮೆರಾಗಳನ್ನು ಅಳವಡಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ಬಳಿ ಔಪಚಾರಿಕವಾಗಿ ಪ್ರಸ್ತಾಪಿಸಲಾಗಿದೆ. ಈ ಕ್ಯಾಮೆರಾಗಳು ಕ್ರೀಡಾಂಗಣ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳನ್ನು ಮೇಲ್ವಿಚಾರಣೆ ಮಾಡುತ್ತವೆ ಮತ್ತು ಜನಸಂದಣಿಯ ನಿರ್ವಹಣೆಗೆ ಸಹಾಯ ಮಾಡುತ್ತವೆ.

4 / 8
ಫ್ರಾಂಚೈಸಿಯ ಪ್ರಕಾರ, ಈ ಕ್ಯಾಮೆರಾಗಳು ಕೆಎಸ್‌ಸಿಎ ಮತ್ತು ಭದ್ರತಾ ಸಂಸ್ಥೆಗಳು ಜನಸಂದಣಿಯನ್ನು ಮೇಲ್ವಿಚಾರಣೆ ಮಾಡಲು, ಕ್ರೀಡಾಂಗಣದ ಹೊರಗೆ ಸರತಿ ಸಾಲುಗಳನ್ನು ನಿರ್ವಹಿಸಲು ಮತ್ತು ಅಕ್ರಮವಾಗಿ ಕ್ರೀಡಾಂಗಣಕ್ಕೆ ಪ್ರವೇಶಿಸಲು ಪ್ರಯತ್ನಿಸುವವರನ್ನು ಮೇಲ್ವಿಚಾರಣೆ ಮಾಡಲು ಸಹಾಯ ಮಾಡುತ್ತದೆ.

ಫ್ರಾಂಚೈಸಿಯ ಪ್ರಕಾರ, ಈ ಕ್ಯಾಮೆರಾಗಳು ಕೆಎಸ್‌ಸಿಎ ಮತ್ತು ಭದ್ರತಾ ಸಂಸ್ಥೆಗಳು ಜನಸಂದಣಿಯನ್ನು ಮೇಲ್ವಿಚಾರಣೆ ಮಾಡಲು, ಕ್ರೀಡಾಂಗಣದ ಹೊರಗೆ ಸರತಿ ಸಾಲುಗಳನ್ನು ನಿರ್ವಹಿಸಲು ಮತ್ತು ಅಕ್ರಮವಾಗಿ ಕ್ರೀಡಾಂಗಣಕ್ಕೆ ಪ್ರವೇಶಿಸಲು ಪ್ರಯತ್ನಿಸುವವರನ್ನು ಮೇಲ್ವಿಚಾರಣೆ ಮಾಡಲು ಸಹಾಯ ಮಾಡುತ್ತದೆ.

5 / 8
ಆರ್​ಸಿಬಿ ಫ್ರಾಂಚೈಸಿ ಈ ಪ್ರಸ್ತಾವನೆಯನ್ನು ಕೆಎಸ್​ಸಿಎ ಮುಂದಿಟ್ಟಿರುವುದು ಮಾತ್ರವಲ್ಲದೆ, ಎಐ ಕ್ಯಾಮೆರಾಗಳನ್ನು ಅಳವಡಿಸಲು ತಗಲುವ ವೆಚ್ಚವನ್ನು ತಾನೇ ಬರಿಸುವುದಾಗಿ ತಿಳಿಸಿದೆ. ಕ್ಯಾಮೆರಾಗಳನ್ನು ಅಳವಡಿಸಲು ಬೇಕಾಗುವ ಸರಿಸುಮಾರು 4.5 ಕೋಟಿ ವೆಚ್ಚವನ್ನು ಸಂಪೂರ್ಣವಾಗಿ ಭರಿಸುವುದಾಗಿ ಆರ್​ಸಿಬಿ ತಿಳಿಸಿದೆ.

ಆರ್​ಸಿಬಿ ಫ್ರಾಂಚೈಸಿ ಈ ಪ್ರಸ್ತಾವನೆಯನ್ನು ಕೆಎಸ್​ಸಿಎ ಮುಂದಿಟ್ಟಿರುವುದು ಮಾತ್ರವಲ್ಲದೆ, ಎಐ ಕ್ಯಾಮೆರಾಗಳನ್ನು ಅಳವಡಿಸಲು ತಗಲುವ ವೆಚ್ಚವನ್ನು ತಾನೇ ಬರಿಸುವುದಾಗಿ ತಿಳಿಸಿದೆ. ಕ್ಯಾಮೆರಾಗಳನ್ನು ಅಳವಡಿಸಲು ಬೇಕಾಗುವ ಸರಿಸುಮಾರು 4.5 ಕೋಟಿ ವೆಚ್ಚವನ್ನು ಸಂಪೂರ್ಣವಾಗಿ ಭರಿಸುವುದಾಗಿ ಆರ್​ಸಿಬಿ ತಿಳಿಸಿದೆ.

6 / 8
ಇದೆಲ್ಲದರ ನಡುವೆ ಮುಂಬರುವ ಐಪಿಎಲ್​ನಲ್ಲಿ ತನ್ನ ತವರು ಪಂದ್ಯಗಳನ್ನು ಆರ್‌ಸಿಬಿ ಎರಡು ವಿಭಿನ್ನ ಕ್ರೀಡಾಂಗಣಗಳಲ್ಲಿ ಆಡಲಿದೆ ಎಂದು ವರದಿಯಾಗಿದೆ. ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಆರ್​ಸಿಬಿಯ ಎರಡು ಪಂದ್ಯಗಳನ್ನು ನಡೆಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿ ಅವರೇ ಸ್ವತಃ ಘೋಷಿಸಿದ್ದಾರೆ.

ಇದೆಲ್ಲದರ ನಡುವೆ ಮುಂಬರುವ ಐಪಿಎಲ್​ನಲ್ಲಿ ತನ್ನ ತವರು ಪಂದ್ಯಗಳನ್ನು ಆರ್‌ಸಿಬಿ ಎರಡು ವಿಭಿನ್ನ ಕ್ರೀಡಾಂಗಣಗಳಲ್ಲಿ ಆಡಲಿದೆ ಎಂದು ವರದಿಯಾಗಿದೆ. ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಆರ್​ಸಿಬಿಯ ಎರಡು ಪಂದ್ಯಗಳನ್ನು ನಡೆಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿ ಅವರೇ ಸ್ವತಃ ಘೋಷಿಸಿದ್ದಾರೆ.

7 / 8
ಹಾಗೆಯೇ ಉಳಿದ ಪಂದ್ಯಗಳನ್ನು ಮಹಾರಾಷ್ಟ್ರದ ಪುಣೆಯಲ್ಲಿ ನಡೆಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಫ್ರಾಂಚೈಸಿ ಈಗಾಗಲೇ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್‌ನೊಂದಿಗೆ ಈ ಬಗ್ಗೆ ಚರ್ಚಿಸಿದ್ದು, ಪುಣೆ ಕ್ರೀಡಾಂಗಣವನ್ನು ಸಹ ಪರಿಶೀಲಿಸಿದೆ. ಆದಾಗ್ಯೂ, ಇನ್ನೂ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ.

ಹಾಗೆಯೇ ಉಳಿದ ಪಂದ್ಯಗಳನ್ನು ಮಹಾರಾಷ್ಟ್ರದ ಪುಣೆಯಲ್ಲಿ ನಡೆಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಫ್ರಾಂಚೈಸಿ ಈಗಾಗಲೇ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್‌ನೊಂದಿಗೆ ಈ ಬಗ್ಗೆ ಚರ್ಚಿಸಿದ್ದು, ಪುಣೆ ಕ್ರೀಡಾಂಗಣವನ್ನು ಸಹ ಪರಿಶೀಲಿಸಿದೆ. ಆದಾಗ್ಯೂ, ಇನ್ನೂ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ.

8 / 8
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ