AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB New Captain: ಶಾಕಿಂಗ್: ಆರ್​ಸಿಬಿ ತಂಡಕ್ಕೆ ಕ್ಯಾಪ್ಟನ್ ಫಿಕ್ಸ್?: ಹೊಸ ನಾಯಕ ಯಾರು ಗೊತ್ತೇ?

Royal Challengers Bangalore New Captain: ಐಪಿಎಲ್ 2022 ಮೆಗಾ ಆಕ್ಷನ್ ಕೂಡ ಹತ್ತಿರವಾಗುತ್ತಿದೆ. ಆದರೆ, ಆರ್​ಸಿಬಿ ಫ್ರಾಂಚೈಸಿ ಹೊಸ ನಾಯಕನ ಬಗ್ಗೆ ಯಾವುದೇ ಸುಳಿವು ಕೂಡ ಕೊಟ್ಟಿಲ್ಲ. ಹೀಗಿರುವಾಗ ಮೂಲಗಳಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಅದು ಏನು..?

TV9 Web
| Updated By: Vinay Bhat|

Updated on: Dec 25, 2021 | 9:29 AM

Share
ಇಂಡಿಯನ್ ಪ್ರೀಮಿಯರ್ ಲೀಗ್ 2021ರ ಮಧ್ಯ ಭಾಗದಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದ ಕೆಳಿಗಿಳಿಯುವುದಾಗಿ ಘೋಷಣೆ ಮಾಡಿದ ತಕ್ಷಣ ಆರ್​ಸಿಬಿ ಮುಂದಿನ ಕ್ಯಾಪ್ಟನ್ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಡೇವಿಡ್ ವಾರ್ನರ್ ಹೀಗೆ ಅನೇಕ ಹೆಸರುಗಳ ಆರ್​ಸಿಬಿ ಕ್ಯಾಪ್ಟನ್ ಸ್ಥಾನಕ್ಕೆ ಕೇಳಿಬಂದವು. ಆದರೆ, ಫ್ರಾಂಚೈಸಿ ಮಾತ್ರ ಇದುವರೆಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್ 2021ರ ಮಧ್ಯ ಭಾಗದಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದ ಕೆಳಿಗಿಳಿಯುವುದಾಗಿ ಘೋಷಣೆ ಮಾಡಿದ ತಕ್ಷಣ ಆರ್​ಸಿಬಿ ಮುಂದಿನ ಕ್ಯಾಪ್ಟನ್ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಡೇವಿಡ್ ವಾರ್ನರ್ ಹೀಗೆ ಅನೇಕ ಹೆಸರುಗಳ ಆರ್​ಸಿಬಿ ಕ್ಯಾಪ್ಟನ್ ಸ್ಥಾನಕ್ಕೆ ಕೇಳಿಬಂದವು. ಆದರೆ, ಫ್ರಾಂಚೈಸಿ ಮಾತ್ರ ಇದುವರೆಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.

1 / 8
ಐಪಿಎಲ್ 2022 ಮೆಗಾ ಆಕ್ಷನ್ ಕೂಡ ಹತ್ತಿರವಾಗುತ್ತಿದೆ. ಆದರೆ, ಆರ್​ಸಿಬಿ ಫ್ರಾಂಚೈಸಿ ಹೊಸ ನಾಯಕನ ಬಗ್ಗೆ ಯಾವುದೇ ಸುಳಿವು ಕೂಡ ಕೊಟ್ಟಿಲ್ಲ. ಹೀಗಿರುವಾಗ ಮೂಲಗಳಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಕರ್ನಾಟಕ ತಂಡದ ನಾಯಕ ಮನೀಶ್ ಪಾಂಡೆ ಮುಂದಿನ ಐಪಿಎಲ್ ಟೂರ್ನಿಯಲ್ಲಿ ಆರ್​ಸಿಬಿ ತಂಡದ ನಾಯಕ್ವ ವಹಿಸುವುದು ಬಹುತೇಕ ಖಚಿತ ಎಂದು ವರದಿಯಾಗಿದೆ.

ಐಪಿಎಲ್ 2022 ಮೆಗಾ ಆಕ್ಷನ್ ಕೂಡ ಹತ್ತಿರವಾಗುತ್ತಿದೆ. ಆದರೆ, ಆರ್​ಸಿಬಿ ಫ್ರಾಂಚೈಸಿ ಹೊಸ ನಾಯಕನ ಬಗ್ಗೆ ಯಾವುದೇ ಸುಳಿವು ಕೂಡ ಕೊಟ್ಟಿಲ್ಲ. ಹೀಗಿರುವಾಗ ಮೂಲಗಳಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಕರ್ನಾಟಕ ತಂಡದ ನಾಯಕ ಮನೀಶ್ ಪಾಂಡೆ ಮುಂದಿನ ಐಪಿಎಲ್ ಟೂರ್ನಿಯಲ್ಲಿ ಆರ್​ಸಿಬಿ ತಂಡದ ನಾಯಕ್ವ ವಹಿಸುವುದು ಬಹುತೇಕ ಖಚಿತ ಎಂದು ವರದಿಯಾಗಿದೆ.

2 / 8
ಹೌದು, 2009ರಲ್ಲಿ ಆರ್​ಸಿಬಿ ತಂಡದಲ್ಲಿದ್ದಾಗಲೇ ಐಪಿಎಲ್​ನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಎಂಬ ಸಾಧನೆ ಮಾಡಿದ್ದ ಮನೀಶ್ ಪಾಂಡೆ ಅವರನ್ನು ಮರಳಿ ತಂಡಕ್ಕೆ ಸೇರಿಸಿಕೊಂಡು ನಾಯಕನ ಜವಾಬ್ದಾರಿಯನ್ನೂ ನೀಡುವ ಬಗ್ಗೆ ಆರ್​ಸಿಬಿ ಟೀಮ್ ಮ್ಯಾನೇಜ್ಮೆಂಟ್ ಒಲವು ತೋರಿದೆ ಎನ್ನಲಾಗಿದೆ.

ಹೌದು, 2009ರಲ್ಲಿ ಆರ್​ಸಿಬಿ ತಂಡದಲ್ಲಿದ್ದಾಗಲೇ ಐಪಿಎಲ್​ನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಎಂಬ ಸಾಧನೆ ಮಾಡಿದ್ದ ಮನೀಶ್ ಪಾಂಡೆ ಅವರನ್ನು ಮರಳಿ ತಂಡಕ್ಕೆ ಸೇರಿಸಿಕೊಂಡು ನಾಯಕನ ಜವಾಬ್ದಾರಿಯನ್ನೂ ನೀಡುವ ಬಗ್ಗೆ ಆರ್​ಸಿಬಿ ಟೀಮ್ ಮ್ಯಾನೇಜ್ಮೆಂಟ್ ಒಲವು ತೋರಿದೆ ಎನ್ನಲಾಗಿದೆ.

3 / 8
ಮನೀಶ್ ಪಾಂಡೆ ನಾಯಕನಾಗಿ ಇದೇ ಮೊದಲ ಬಾರಿಗೆ ಏನು ಆಡುತ್ತಿಲ್ಲ. ಕ್ಯಾಪ್ಟನ್ ಆಗಿ ಇವರು ಕರ್ನಾಟಕ ತಂಡವನ್ನು ರಣಜಿ ಟ್ರೋಫಿ ಹಾಗೂ ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಳಲ್ಲಿ ಮುನ್ನಡೆಸಿ ಅಪಾರವಾದ ಅನುಭವವನ್ನ ಹೊಂದಿದ್ದಾರೆ.

ಮನೀಶ್ ಪಾಂಡೆ ನಾಯಕನಾಗಿ ಇದೇ ಮೊದಲ ಬಾರಿಗೆ ಏನು ಆಡುತ್ತಿಲ್ಲ. ಕ್ಯಾಪ್ಟನ್ ಆಗಿ ಇವರು ಕರ್ನಾಟಕ ತಂಡವನ್ನು ರಣಜಿ ಟ್ರೋಫಿ ಹಾಗೂ ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಳಲ್ಲಿ ಮುನ್ನಡೆಸಿ ಅಪಾರವಾದ ಅನುಭವವನ್ನ ಹೊಂದಿದ್ದಾರೆ.

4 / 8
ಐಪಿಎಲ್​ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಪಾಂಡೆ ಕೆಲವು ಪಂದ್ಯಗಳಲ್ಲಿ ನಾಯಕನಾಗಿ ಕಣಕ್ಕೆ ಇಳಿದಿದ್ದರು. ಹೀಗಾಗಿ ಮನೀಶ್ ಪಾಂಡೆ 15ನೇ ಆವೃತ್ತಿಯ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗುವುದು ಬಹುತೇಕ ಪಕ್ಕ ಎಂದು ಹೇಳಲಾಗುತ್ತಿದೆ.

ಐಪಿಎಲ್​ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಪಾಂಡೆ ಕೆಲವು ಪಂದ್ಯಗಳಲ್ಲಿ ನಾಯಕನಾಗಿ ಕಣಕ್ಕೆ ಇಳಿದಿದ್ದರು. ಹೀಗಾಗಿ ಮನೀಶ್ ಪಾಂಡೆ 15ನೇ ಆವೃತ್ತಿಯ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗುವುದು ಬಹುತೇಕ ಪಕ್ಕ ಎಂದು ಹೇಳಲಾಗುತ್ತಿದೆ.

5 / 8
32 ವರ್ಷದ ಮನೀಶ್ ಪಾಂಡೆ 3ನೇ ಕ್ರಮಾಂಕದಲ್ಲಿ ತಂಡದ ಬ್ಯಾಟಿಂಗ್ ವಿಭಾಗಕ್ಕೂ ಬಲ ತುಂಬುವ ನಿರೀಕ್ಷೆಯನ್ನು ಆರ್​ಸಿಬಿ ಹೊಂದಿದೆ. ಐಪಿಎಲ್​ನಲ್ಲಿ ಇದುವರೆಗೆ ಒಟ್ಟು 154 ಪಂದ್ಯ ಆಡಿರುವ ಮನೀಶ್ 30.68ರ ಸರಾಸರಿಯಲ್ಲಿ 3,560 ರನ್ ಬಾರಿಸಿದ್ದಾರೆ.

32 ವರ್ಷದ ಮನೀಶ್ ಪಾಂಡೆ 3ನೇ ಕ್ರಮಾಂಕದಲ್ಲಿ ತಂಡದ ಬ್ಯಾಟಿಂಗ್ ವಿಭಾಗಕ್ಕೂ ಬಲ ತುಂಬುವ ನಿರೀಕ್ಷೆಯನ್ನು ಆರ್​ಸಿಬಿ ಹೊಂದಿದೆ. ಐಪಿಎಲ್​ನಲ್ಲಿ ಇದುವರೆಗೆ ಒಟ್ಟು 154 ಪಂದ್ಯ ಆಡಿರುವ ಮನೀಶ್ 30.68ರ ಸರಾಸರಿಯಲ್ಲಿ 3,560 ರನ್ ಬಾರಿಸಿದ್ದಾರೆ.

6 / 8
ಪಾಂಡೆ 2009ರಲ್ಲಿ ಆರ್​ಸಿಬಿ ತಂಡದ ಪರ ಐಪಿಎಲ್ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಚೊಚ್ಚಲ ಐಪಿಎಲ್ ಶತಕ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ಹೊಂದಿರುವ ಪಾಂಡೆ ಕೋಲ್ಕತಾ ನೈಟ್ ರೈಡರ್ಸ್, ಪುಣೆ ವಾರಿಯರ್ಸ್ ಇಂಡಿಯಾ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ಪರ ಆಡಿರುವ ಅನುಭವವನ್ನು ಹೊಂದಿದ್ದಾರೆ.

ಪಾಂಡೆ 2009ರಲ್ಲಿ ಆರ್​ಸಿಬಿ ತಂಡದ ಪರ ಐಪಿಎಲ್ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಚೊಚ್ಚಲ ಐಪಿಎಲ್ ಶತಕ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ಹೊಂದಿರುವ ಪಾಂಡೆ ಕೋಲ್ಕತಾ ನೈಟ್ ರೈಡರ್ಸ್, ಪುಣೆ ವಾರಿಯರ್ಸ್ ಇಂಡಿಯಾ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ಪರ ಆಡಿರುವ ಅನುಭವವನ್ನು ಹೊಂದಿದ್ದಾರೆ.

7 / 8
ಕಳೆದ ಐಪಿಎಲ್​ನಲ್ಲಿ ಕೇನ್ ವಿಲಿಯಮ್ಸನ್ ಕೊನೇ ಪಂದ್ಯದಿಂದ ಹೊರಗುಳಿದಾಗ ಮನೀಶ್ ಪಾಂಡೆ ಅವರೇ ಸನ್ರೈಸರ್ಸ್ ತಂಡವನ್ನು ಮುನ್ನಡೆಸಿದ್ದರು. ಆದರೆ, ಸನ್ರೈಸರ್ಸ್ ತಂಡ ಮನೀಶ್​ರನ್ನು ರಿಟೇನ್ ಮಾಡಿಕೊಂಡಿಲ್ಲ. ಇತ್ತ ಆರ್​ಸಿಬಿ ತಂಡ ವಿರಾಟ್ ಕೊಹ್ಲಿ ಜೊತೆಗೆ ಗ್ಲೆನ್ ಮ್ಯಾಕ್ಸ್​ವೆಲ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ರಿಟೇನ್ ಮಾಡಿಕೊಂಡಿದೆ.

ಕಳೆದ ಐಪಿಎಲ್​ನಲ್ಲಿ ಕೇನ್ ವಿಲಿಯಮ್ಸನ್ ಕೊನೇ ಪಂದ್ಯದಿಂದ ಹೊರಗುಳಿದಾಗ ಮನೀಶ್ ಪಾಂಡೆ ಅವರೇ ಸನ್ರೈಸರ್ಸ್ ತಂಡವನ್ನು ಮುನ್ನಡೆಸಿದ್ದರು. ಆದರೆ, ಸನ್ರೈಸರ್ಸ್ ತಂಡ ಮನೀಶ್​ರನ್ನು ರಿಟೇನ್ ಮಾಡಿಕೊಂಡಿಲ್ಲ. ಇತ್ತ ಆರ್​ಸಿಬಿ ತಂಡ ವಿರಾಟ್ ಕೊಹ್ಲಿ ಜೊತೆಗೆ ಗ್ಲೆನ್ ಮ್ಯಾಕ್ಸ್​ವೆಲ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ರಿಟೇನ್ ಮಾಡಿಕೊಂಡಿದೆ.

8 / 8
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ