AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ತವರು ಮೈದಾನ: 2 ಸ್ಟೇಡಿಯಂಗಳಲ್ಲಿ ಕಣಕ್ಕಿಳಿಯಲಿದೆ RCB

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ​ಸಿ ಬಿ) ತಂಡವು ಮುಂದಿನ ಸೀಸನ್​ನಲ್ಲಿ ಹೊಸ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹೊಸ ತವರು ಮೈದಾನವನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Jan 14, 2026 | 7:30 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಇದೀಗ ಎರಡು ಉತ್ತರಗಳು ಕೇಳಿ ಬರುತ್ತಿದೆ. ಅದು ಕೂಡ ನವಿ ಮುಂಬೈ ಮತ್ತು ರಾಯ್​ಪುರ್ ಕಡೆಯಿಂದ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಇದೀಗ ಎರಡು ಉತ್ತರಗಳು ಕೇಳಿ ಬರುತ್ತಿದೆ. ಅದು ಕೂಡ ನವಿ ಮುಂಬೈ ಮತ್ತು ರಾಯ್​ಪುರ್ ಕಡೆಯಿಂದ.

1 / 6
ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮುಂದಿನ ಸೀಸನ್ ಗಾಗಿ ಎರಡು ತವರು ಮೈದಾನಗಳನ್ನು ಆಯ್ಕೆ ಮಾಡಿಕೊಂಡಿದೆ ಎಂದು ವರದಿಯಾಗಿದೆ. ಅಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಬಾರಿ RCB ಕಣಕ್ಕಿಳಿಯುವುದು ಡೌಟ್.

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮುಂದಿನ ಸೀಸನ್ ಗಾಗಿ ಎರಡು ತವರು ಮೈದಾನಗಳನ್ನು ಆಯ್ಕೆ ಮಾಡಿಕೊಂಡಿದೆ ಎಂದು ವರದಿಯಾಗಿದೆ. ಅಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಬಾರಿ RCB ಕಣಕ್ಕಿಳಿಯುವುದು ಡೌಟ್.

2 / 6
2025ರಲ್ಲಿ ಚಾಂಪಿಯನ್ ಪಟ್ಟಕ್ಕೇರಿದ RCB ಬೆಂಗಳೂರಿನಲ್ಲಿ ವಿಜಯೋತ್ಸವವನ್ನು ಏರ್ಪಡಿಸಿತ್ತು. ಈ ವೇಳೆ ಉಂಟಾದ ಕಾಲ್ತುತಿದಿಂದಾಗಿ 11 ಮಂದಿ ಮೃತಪಟ್ಟಿದ್ದರು. ದುರಂತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.

2025ರಲ್ಲಿ ಚಾಂಪಿಯನ್ ಪಟ್ಟಕ್ಕೇರಿದ RCB ಬೆಂಗಳೂರಿನಲ್ಲಿ ವಿಜಯೋತ್ಸವವನ್ನು ಏರ್ಪಡಿಸಿತ್ತು. ಈ ವೇಳೆ ಉಂಟಾದ ಕಾಲ್ತುತಿದಿಂದಾಗಿ 11 ಮಂದಿ ಮೃತಪಟ್ಟಿದ್ದರು. ದುರಂತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.

3 / 6
ಈ ತನಿಖೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಮೂಲಸೌಕರ್ಯಗಳ ಕೊರತೆ ಬಹಿರಂಗವಾಗಿದ್ದವು. ಅಲ್ಲದೆ ಕ್ರೀಡಾಂಗಣದ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನೆಗಳೆದ್ದಿದ್ದವು. ಇದೇ ಕಾರಣದಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಾಟವನ್ನು ನಿಷೇಧಿಸಲಾಗಿದೆ. ಅಲ್ಲದೆ ಮುಂಬರುವ ಐಪಿಎಲ್​ ಪಂದ್ಯಗಳಿಗೂ ಎನ್​ಒಸಿ ಸಿಗುವುದು ಅನುಮಾನ ಎನ್ನಲಾಗಿದೆ.

ಈ ತನಿಖೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಮೂಲಸೌಕರ್ಯಗಳ ಕೊರತೆ ಬಹಿರಂಗವಾಗಿದ್ದವು. ಅಲ್ಲದೆ ಕ್ರೀಡಾಂಗಣದ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನೆಗಳೆದ್ದಿದ್ದವು. ಇದೇ ಕಾರಣದಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಾಟವನ್ನು ನಿಷೇಧಿಸಲಾಗಿದೆ. ಅಲ್ಲದೆ ಮುಂಬರುವ ಐಪಿಎಲ್​ ಪಂದ್ಯಗಳಿಗೂ ಎನ್​ಒಸಿ ಸಿಗುವುದು ಅನುಮಾನ ಎನ್ನಲಾಗಿದೆ.

4 / 6
ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ನವಿ ಮುಂಬೈ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತನ್ನ ಹೊಸ ತವರು ಮೈದಾನವಾಗಿ ಆಯ್ಕೆ ಮಾಡಿಕೊಂಡಿದೆ. ಅಲ್ಲದೆ ಈ ಸ್ಟೇಡಿಯಂನಲ್ಲಿ ಒಟ್ಟು 5 ಮ್ಯಾಚ್ ಗಳನ್ನು ಆಡಲು ನಿರ್ಧರಿಸಿದೆ ಎಂದು ವರದಿಯಾಗಿದೆ.

ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ನವಿ ಮುಂಬೈ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತನ್ನ ಹೊಸ ತವರು ಮೈದಾನವಾಗಿ ಆಯ್ಕೆ ಮಾಡಿಕೊಂಡಿದೆ. ಅಲ್ಲದೆ ಈ ಸ್ಟೇಡಿಯಂನಲ್ಲಿ ಒಟ್ಟು 5 ಮ್ಯಾಚ್ ಗಳನ್ನು ಆಡಲು ನಿರ್ಧರಿಸಿದೆ ಎಂದು ವರದಿಯಾಗಿದೆ.

5 / 6
ಇನ್ನುಳಿದ 2 ಹೋಮ್ ಮ್ಯಾಚ್ ಗಳನ್ನು ಚಂಡೀಗಢದ ರಾಯ್​ಪುರ್​ನಲ್ಲಿರುವ ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ಆಡಲು ಪ್ಲ್ಯಾನ್ ರೂಪಿಸಲಾಗಿದೆ. ಅಂದರೆ ಈ ಬಾರಿ RCB ತನ್ನ ಹೋಮ್ ಮ್ಯಾಚ್ ಗಳನ್ನು ನವಿ‌ ಮುಂಬೈ ಮತ್ತು ರಾಯ್​ಪುರ್ ನಲ್ಲಿ ಆಡುವುದು ಬಹುತೇಕ ಖಚಿತ. ಅದಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂ ಮೇಲಿನ ನಿಷೇಧ ತೆರವಾದರೆ ಮಾತ್ರ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲಿದೆ.

ಇನ್ನುಳಿದ 2 ಹೋಮ್ ಮ್ಯಾಚ್ ಗಳನ್ನು ಚಂಡೀಗಢದ ರಾಯ್​ಪುರ್​ನಲ್ಲಿರುವ ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ಆಡಲು ಪ್ಲ್ಯಾನ್ ರೂಪಿಸಲಾಗಿದೆ. ಅಂದರೆ ಈ ಬಾರಿ RCB ತನ್ನ ಹೋಮ್ ಮ್ಯಾಚ್ ಗಳನ್ನು ನವಿ‌ ಮುಂಬೈ ಮತ್ತು ರಾಯ್​ಪುರ್ ನಲ್ಲಿ ಆಡುವುದು ಬಹುತೇಕ ಖಚಿತ. ಅದಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂ ಮೇಲಿನ ನಿಷೇಧ ತೆರವಾದರೆ ಮಾತ್ರ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲಿದೆ.

6 / 6
Follow Us
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ರೂಲ್ಸ್ ಏಕೆ?
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ರೂಲ್ಸ್ ಏಕೆ?
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?