Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL ನಲ್ಲಿ RCB ಬೌಲರ್​ಗಳ ರೆಡ್ ಅಲರ್ಟ್

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 141 ರನ್​ ಕಲೆಹಾಕಿದರೆ, ಆರ್​ಸಿಬಿ ಪಡೆ ಈ ಗುರಿಯನ್ನು 16.2 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಸ್ಮೃತಿ ಮಂಧಾನ ಮುಂದಾಳತ್ವದ ಆರ್​ಸಿಬಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on:Feb 18, 2025 | 9:24 AM

ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ಎದುರಾಳಿ ತಂಡವನ್ನು ಅತ್ಯಧಿಕ ಬಾರಿ ಆಲೌಟ್​ ಮಾಡಿದ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿಗೆ ಸೇರ್ಪಡೆಯಾಗಿದೆ. ಅದು ಸಹ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡದ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ಎದುರಾಳಿ ತಂಡವನ್ನು ಅತ್ಯಧಿಕ ಬಾರಿ ಆಲೌಟ್​ ಮಾಡಿದ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿಗೆ ಸೇರ್ಪಡೆಯಾಗಿದೆ. ಅದು ಸಹ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡದ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ವಡೋದರಾದ ಕೋಟಂಬಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಆರ್​ಸಿಬಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 19.3 ಓವರ್​ಗಳಲ್ಲಿ 141 ರನ್​ಗಳಿಗೆ ಆಲೌಟ್ ಮಾಡಿತ್ತು. ಈ ಆಲೌಟ್​ನೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಅತೀ ಹೆಚ್ಚು ಬಾರಿ ಎದುರಾಳಿ ಪಡೆಯನ್ನು ಸರ್ವಪತನಗೊಳಿಸಿದ ತಂಡವೆಂಬ ಕೀರ್ತಿ ಆರ್​ಸಿಬಿ ಪಾಲಾಯಿತು.

ವಡೋದರಾದ ಕೋಟಂಬಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಆರ್​ಸಿಬಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 19.3 ಓವರ್​ಗಳಲ್ಲಿ 141 ರನ್​ಗಳಿಗೆ ಆಲೌಟ್ ಮಾಡಿತ್ತು. ಈ ಆಲೌಟ್​ನೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಅತೀ ಹೆಚ್ಚು ಬಾರಿ ಎದುರಾಳಿ ಪಡೆಯನ್ನು ಸರ್ವಪತನಗೊಳಿಸಿದ ತಂಡವೆಂಬ ಕೀರ್ತಿ ಆರ್​ಸಿಬಿ ಪಾಲಾಯಿತು.

2 / 5
ಇದಕ್ಕೂ ಮುನ್ನ ಈ ದಾಖಲೆ ಹರ್ಮನ್​ಪ್ರೀತ್ ಕೌರ್ ಮುಂದಾಳತ್ವದ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳ ಹೆಸರಿನಲ್ಲಿತ್ತು. ಮುಂಬೈ ಇಂಡಿಯನ್ಸ್ ತಂಡವು 20 ಪಂದ್ಯಗಳಲ್ಲಿ 3 ಬಾರಿ ಎದುರಾಳಿ ತಂಡವನ್ನು ಆಲೌಟ್ ಮಾಡಿದೆ. ಹಾಗೆಯೇ ಯುಪಿ ವಾರಿಯರ್ಸ್ 18 ಮ್ಯಾಚ್​ಗಳಲ್ಲಿ 3 ಬಾರಿ ಈ ಸಾಧನೆ ಮಾಡಿದೆ.

ಇದಕ್ಕೂ ಮುನ್ನ ಈ ದಾಖಲೆ ಹರ್ಮನ್​ಪ್ರೀತ್ ಕೌರ್ ಮುಂದಾಳತ್ವದ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳ ಹೆಸರಿನಲ್ಲಿತ್ತು. ಮುಂಬೈ ಇಂಡಿಯನ್ಸ್ ತಂಡವು 20 ಪಂದ್ಯಗಳಲ್ಲಿ 3 ಬಾರಿ ಎದುರಾಳಿ ತಂಡವನ್ನು ಆಲೌಟ್ ಮಾಡಿದೆ. ಹಾಗೆಯೇ ಯುಪಿ ವಾರಿಯರ್ಸ್ 18 ಮ್ಯಾಚ್​ಗಳಲ್ಲಿ 3 ಬಾರಿ ಈ ಸಾಧನೆ ಮಾಡಿದೆ.

3 / 5
ಇದೀಗ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳನ್ನು ಹಿಂದಿಕ್ಕುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ. ಆರ್​ಸಿಬಿ ತಂಡವು 20 ಪಂದ್ಯಗಳಲ್ಲಿ ಒಟ್ಟು 4 ಬಾರಿ ಎದುರಾಳಿ ತಂಡವನ್ನು ಆಲೌಟ್ ಮಾಡಿ ಹೊಸ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿದೆ.

ಇದೀಗ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳನ್ನು ಹಿಂದಿಕ್ಕುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ. ಆರ್​ಸಿಬಿ ತಂಡವು 20 ಪಂದ್ಯಗಳಲ್ಲಿ ಒಟ್ಟು 4 ಬಾರಿ ಎದುರಾಳಿ ತಂಡವನ್ನು ಆಲೌಟ್ ಮಾಡಿ ಹೊಸ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿದೆ.

4 / 5
ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಅತೀ ಹೆಚ್ಚು ಬಾರಿ ಎದುರಾಳಿ ತಂಡವನ್ನು ಆಲೌಟ್ ಮಾಡಿದ ಕೀರ್ತಿಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ. ಇದೀಗ 20 ಪಂದ್ಯಗಳಲ್ಲಿ 10 ಜಯದೊಂದಿಗೆ ಯಶಸ್ವಿ ತಂಡಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಆರ್​ಸಿಬಿ, ಇದೇ ಗೆಲುವಿನ ನಾಗಾಲೋಟ ಮುಂದುವರೆಸಿದರೆ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ (13 ಜಯ) ತಂಡಗಳನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಬಹುದು.

ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಅತೀ ಹೆಚ್ಚು ಬಾರಿ ಎದುರಾಳಿ ತಂಡವನ್ನು ಆಲೌಟ್ ಮಾಡಿದ ಕೀರ್ತಿಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ. ಇದೀಗ 20 ಪಂದ್ಯಗಳಲ್ಲಿ 10 ಜಯದೊಂದಿಗೆ ಯಶಸ್ವಿ ತಂಡಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಆರ್​ಸಿಬಿ, ಇದೇ ಗೆಲುವಿನ ನಾಗಾಲೋಟ ಮುಂದುವರೆಸಿದರೆ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ (13 ಜಯ) ತಂಡಗಳನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಬಹುದು.

5 / 5

Published On - 9:04 am, Tue, 18 February 25

Follow us
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!