AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andy Flower RCB Coach: ಆರ್​ಸಿಬಿ ಹೊಸ ಅಧ್ಯಾಯ: ಮಾಜಿ ಜಿಂಬಾಬ್ವೆ ಆಟಗಾರ ಆ್ಯಂಡಿ ಫ್ಲವರ್ ಆರ್​ಸಿಬಿಯ ಹೆಡ್ ಕೋಚ್

RCB New Coach: ಆರ್​ಸಿಬಿ ಫ್ರಾಂಚೈಸಿ ನೂತನ ಕೋಚ್​ನ ಹುಡುಕಾಟದಲ್ಲಿತ್ತು. ಇದೀಗ ಬೆಂಗಳೂರು ಫ್ರಾಂಚೈಸಿಗೆ ಹೊಸ ಕೋಚ್ ಒಬ್ಬರು ಆಯ್ಕೆ ಆಗಿದ್ದಾರೆ ಎನ್ನಲಾಗಿದೆ. ಜಿಂಬಾಬ್ವೆ ತಂಡದ ಮಾಜಿ ಆಟಗಾರ ಆ್ಯಂಡಿ ಫ್ಲವರ್ ಆರ್​ಸಿಬಿಯ ನೂತನ ಕೋಚ್ ಎಂದು ಕ್ರಿಕ್ ಬುಜ್ ವರದಿ ಮಾಡಿದೆ.

Vinay Bhat
|

Updated on: Aug 04, 2023 | 8:44 AM

ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಗೆ ಕೆಲ ತಂಡಗಳು ಈಗಾಗಲೇ ತಯಾರಿ ಆರಂಭಿಸಿದೆ. ಐಪಿಎಲ್ 2023 ಕ್ಕೆ ನಡೆದ ಮೆಗಾ ಹರಾಜು ಕೆಲ ಫ್ರಾಂಚೈಸಿಗೆ ಉಪಯೋಗ ಆಗಲಿಲ್ಲ. ಹೀಗಾಗಿ ಮೇಜರ್ ಸರ್ಜರಿಗೆ ಮುಂದಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಗೆ ಕೆಲ ತಂಡಗಳು ಈಗಾಗಲೇ ತಯಾರಿ ಆರಂಭಿಸಿದೆ. ಐಪಿಎಲ್ 2023 ಕ್ಕೆ ನಡೆದ ಮೆಗಾ ಹರಾಜು ಕೆಲ ಫ್ರಾಂಚೈಸಿಗೆ ಉಪಯೋಗ ಆಗಲಿಲ್ಲ. ಹೀಗಾಗಿ ಮೇಜರ್ ಸರ್ಜರಿಗೆ ಮುಂದಾಗಿದೆ.

1 / 7
ಇತ್ತೀಚೆಗಷ್ಟೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಐಪಿಎಲ್ 2024 ಕ್ಕೂ ಮುನ್ನ ಮಹತ್ವದ ನಿರ್ಧಾರವೊಂದು ತೆಗೆದುಕೊಂಡಿತು. ಆರ್​ಸಿಬಿಯ ಮುಖ್ಯ ಕೋಚ್ ಸಂಜಯ್ ಬಂಗಾರ್ ಹಾಗೂ ತಂಡದ ನಿರ್ದೇಶಕ ಮೈಕ್ ಹೆಸ್ಸನ್ ಅವರನ್ನು ಕೈಬಿಟ್ಟು ಶಾಕ್ ನೀಡಿತ್ತು.

ಇತ್ತೀಚೆಗಷ್ಟೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಐಪಿಎಲ್ 2024 ಕ್ಕೂ ಮುನ್ನ ಮಹತ್ವದ ನಿರ್ಧಾರವೊಂದು ತೆಗೆದುಕೊಂಡಿತು. ಆರ್​ಸಿಬಿಯ ಮುಖ್ಯ ಕೋಚ್ ಸಂಜಯ್ ಬಂಗಾರ್ ಹಾಗೂ ತಂಡದ ನಿರ್ದೇಶಕ ಮೈಕ್ ಹೆಸ್ಸನ್ ಅವರನ್ನು ಕೈಬಿಟ್ಟು ಶಾಕ್ ನೀಡಿತ್ತು.

2 / 7
ಇದಾದ ಬಳಿಕ ಆರ್​ಸಿಬಿ ಫ್ರಾಂಚೈಸಿ ನೂತನ ಕೋಚ್​ನ ಹುಡುಕಾಟದಲ್ಲಿತ್ತು. ಇದೀಗ ಬೆಂಗಳೂರು ಫ್ರಾಂಚೈಸಿಗೆ ಹೊಸ ಕೋಚ್ ಒಬ್ಬರು ಆಯ್ಕೆ ಆಗಿದ್ದಾರೆ ಎನ್ನಲಾಗಿದೆ. ಜಿಂಬಾಬ್ವೆ ತಂಡದ ಮಾಜಿ ಆಟಗಾರ ಆ್ಯಂಡಿ ಫ್ಲವರ್ ಆರ್​ಸಿಬಿಯ ನೂತನ ಕೋಚ್ ಎಂದು ಕ್ರಿಕ್ ಬುಜ್ ವರದಿ ಮಾಡಿದೆ.

ಇದಾದ ಬಳಿಕ ಆರ್​ಸಿಬಿ ಫ್ರಾಂಚೈಸಿ ನೂತನ ಕೋಚ್​ನ ಹುಡುಕಾಟದಲ್ಲಿತ್ತು. ಇದೀಗ ಬೆಂಗಳೂರು ಫ್ರಾಂಚೈಸಿಗೆ ಹೊಸ ಕೋಚ್ ಒಬ್ಬರು ಆಯ್ಕೆ ಆಗಿದ್ದಾರೆ ಎನ್ನಲಾಗಿದೆ. ಜಿಂಬಾಬ್ವೆ ತಂಡದ ಮಾಜಿ ಆಟಗಾರ ಆ್ಯಂಡಿ ಫ್ಲವರ್ ಆರ್​ಸಿಬಿಯ ನೂತನ ಕೋಚ್ ಎಂದು ಕ್ರಿಕ್ ಬುಜ್ ವರದಿ ಮಾಡಿದೆ.

3 / 7
ಈ ಬಗ್ಗೆ ಆರ್​ಸಿಬಿ ಫ್ರಾಂಚೈಸಿ ಇನ್ನಷ್ಟೆ ಖಚಿತ ಮಾಹಿತಿ ತಿಳಿಸಬೇಕಿದೆ. ಆದರೆ, ಆರ್​ಸಿಬಿ ಫ್ರಾಂಚೈಸಿಯ ಯಶಸ್ಸಿಗೆ ಮಹತ್ವದ ಕೊಡುಗೆ ನೀಡಿದ ಎಬಿ ಡಿವಿಲಿಯರ್ಸ್ ಕೂಡ ಆ್ಯಂಡಿ ಫ್ಲವರ್ ಅವರೊಂದಿಗೆ ಮಾರ್ಗದರ್ಶಕರಾಗಿ ಕೆಲಸ ಮಾಡಲಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಆರ್​ಸಿಬಿ ಫ್ರಾಂಚೈಸಿ ಇನ್ನಷ್ಟೆ ಖಚಿತ ಮಾಹಿತಿ ತಿಳಿಸಬೇಕಿದೆ. ಆದರೆ, ಆರ್​ಸಿಬಿ ಫ್ರಾಂಚೈಸಿಯ ಯಶಸ್ಸಿಗೆ ಮಹತ್ವದ ಕೊಡುಗೆ ನೀಡಿದ ಎಬಿ ಡಿವಿಲಿಯರ್ಸ್ ಕೂಡ ಆ್ಯಂಡಿ ಫ್ಲವರ್ ಅವರೊಂದಿಗೆ ಮಾರ್ಗದರ್ಶಕರಾಗಿ ಕೆಲಸ ಮಾಡಲಿದ್ದಾರೆ ಎನ್ನಲಾಗಿದೆ.

4 / 7
ಆ್ಯಂಡಿ ಫ್ಲವರ್ ಐಪಿಎಲ್ 2023 ರ ನಂತರ ಲಖನೌ ಸೂಪರ್ ಜೈಂಟ್ಸ್ ಜೊತೆಗಿನ ಎರಡು ವರ್ಷಗಳ ಒಪ್ಪಂದವು ಮುಕ್ತಾಯಗೊಂಡಿದೆ. ಹೀಗಾಗಿ ಇವರನ್ನು ಇದೀಗ ಆರ್​ಸಿಬಿ ಫ್ರಾಂಚೈಸಿ ತಂಡದ ಮುಖ್ಯ ಕೋಚ್ ಆಗಿ ಆಯ್ಕೆ ಮಾಡಿದೆ.

ಆ್ಯಂಡಿ ಫ್ಲವರ್ ಐಪಿಎಲ್ 2023 ರ ನಂತರ ಲಖನೌ ಸೂಪರ್ ಜೈಂಟ್ಸ್ ಜೊತೆಗಿನ ಎರಡು ವರ್ಷಗಳ ಒಪ್ಪಂದವು ಮುಕ್ತಾಯಗೊಂಡಿದೆ. ಹೀಗಾಗಿ ಇವರನ್ನು ಇದೀಗ ಆರ್​ಸಿಬಿ ಫ್ರಾಂಚೈಸಿ ತಂಡದ ಮುಖ್ಯ ಕೋಚ್ ಆಗಿ ಆಯ್ಕೆ ಮಾಡಿದೆ.

5 / 7
ಆ್ಯಂಡಿ ಫ್ಲವರ್ ಅವರು CPL (2020), PSL (2021), ILT20 (2023) ಹೀಗೆ ಜಾಗತಿಕ ಮಟ್ಟದ T20 ತಂಡಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಈಗಷ್ಟೇ ಪೂರ್ಣಗೊಂಡಿರುವ ಆ್ಯಶಸ್ ಸರಣಿಯ ಸಂದರ್ಭದಲ್ಲಿ ಅವರು ಆಸ್ಟ್ರೇಲಿಯಾ ತಂಡದ ಕೋಚಿಂಗ್ ಸಿಬ್ಬಂದಿಗೆ ಸಲಹೆಯನ್ನೂ ನೀಡಿದ್ದರು.

ಆ್ಯಂಡಿ ಫ್ಲವರ್ ಅವರು CPL (2020), PSL (2021), ILT20 (2023) ಹೀಗೆ ಜಾಗತಿಕ ಮಟ್ಟದ T20 ತಂಡಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಈಗಷ್ಟೇ ಪೂರ್ಣಗೊಂಡಿರುವ ಆ್ಯಶಸ್ ಸರಣಿಯ ಸಂದರ್ಭದಲ್ಲಿ ಅವರು ಆಸ್ಟ್ರೇಲಿಯಾ ತಂಡದ ಕೋಚಿಂಗ್ ಸಿಬ್ಬಂದಿಗೆ ಸಲಹೆಯನ್ನೂ ನೀಡಿದ್ದರು.

6 / 7
90ರ ದಶಕದಲ್ಲಿ ಜಿಂಬಾಬ್ವೆ ತಂಡದ ಪರ ಆಡಿದ್ದ ಆ್ಯಂಡಿ 63 ಟೆಸ್ಟ್ ಆಗೂ 213 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್​ನಲ್ಲಿ 4794 ರನ್ಸ್ ಮತ್ತು ಏಕದಿನದಲ್ಲಿ 6786 ರನ್ಸ್ ಗಳಿಸಿದ್ದಾರೆ. ಜಿಂಬಾಬ್ವೆ ತಂಡಕ್ಕೆ ಇವರು ಅಪಾರ ಕೊಡುಗೆ ಸಲ್ಲಿಸಿದ್ದಾರೆ.

90ರ ದಶಕದಲ್ಲಿ ಜಿಂಬಾಬ್ವೆ ತಂಡದ ಪರ ಆಡಿದ್ದ ಆ್ಯಂಡಿ 63 ಟೆಸ್ಟ್ ಆಗೂ 213 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್​ನಲ್ಲಿ 4794 ರನ್ಸ್ ಮತ್ತು ಏಕದಿನದಲ್ಲಿ 6786 ರನ್ಸ್ ಗಳಿಸಿದ್ದಾರೆ. ಜಿಂಬಾಬ್ವೆ ತಂಡಕ್ಕೆ ಇವರು ಅಪಾರ ಕೊಡುಗೆ ಸಲ್ಲಿಸಿದ್ದಾರೆ.

7 / 7
Follow us
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ