Sign In

By signing in or creating an account, you agree with Associated Broadcasting Company's Terms & Conditions and Privacy Policy.

Jacob Bethell: ಆರ್​ಸಿಬಿ ಸೇರಿದ ಕೂಡಲೇ ಇಂಗ್ಲೆಂಡ್ ಆಟಗಾರನಿಗೆ ಖುಲಾಯಿಸಿದ ಅದೃಷ್ಟ

Jacob Bethell: ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಹೊಸ ಕೇಂದ್ರ ಒಪ್ಪಂದವನ್ನು ಪ್ರಕಟಿಸಿದ್ದು, ಈ ಒಪ್ಪಂದದಲ್ಲಿ ಇತ್ತೀಚಿಗಷ್ಟೆ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದ ಯುವ ಆಟಗಾರ ಜೇಕಬ್ ಬೆಥೆಲ್ ಅವರ ಹೆಸರನ್ನೂ ಈ ಪಟ್ಟಿಯಲ್ಲಿ ಸೇರಿಸಲಾಗಿದೆ. ಈ ಆಟಗಾರ 2 ವರ್ಷಗಳ ಕೇಂದ್ರ ಒಪ್ಪಂದವನ್ನು ಪಡೆದಿದ್ದಾರೆ.

ಪೃಥ್ವಿಶಂಕರ
|

Updated on: Dec 04, 2024 | 5:49 PM

ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ ಬೆಂಗಳೂರು ಅನೇಕ ಆಶ್ಚರ್ಯಕರ ನಿರ್ಧಾರಗಳನ್ನು ತೆಗೆದುಕೊಂಡಿತ್ತು. ಇಡೀ ಹರಾಜಿನಲ್ಲಿ ಯುವ ಆಟಗಾರರನ್ನು ಖರೀದಿಸುವುದರ ಮೇಲೆಯೇ ಹೆಚ್ಚಿನ ಗಮನಹರಿಸಿತ್ತು. ಆ ಪ್ರಕಾರ, ಇಂಗ್ಲೆಂಡ್‌ನ ಯುವ ಆಲ್‌ರೌಂಡರ್ ಜೇಕಬ್ ಬೆಥೆಲ್ ಆರ್​ಸಿಬಿ ತಂಡವನ್ನು ಸೇರಿಕೊಂಡಿದ್ದರು.

ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ ಬೆಂಗಳೂರು ಅನೇಕ ಆಶ್ಚರ್ಯಕರ ನಿರ್ಧಾರಗಳನ್ನು ತೆಗೆದುಕೊಂಡಿತ್ತು. ಇಡೀ ಹರಾಜಿನಲ್ಲಿ ಯುವ ಆಟಗಾರರನ್ನು ಖರೀದಿಸುವುದರ ಮೇಲೆಯೇ ಹೆಚ್ಚಿನ ಗಮನಹರಿಸಿತ್ತು. ಆ ಪ್ರಕಾರ, ಇಂಗ್ಲೆಂಡ್‌ನ ಯುವ ಆಲ್‌ರೌಂಡರ್ ಜೇಕಬ್ ಬೆಥೆಲ್ ಆರ್​ಸಿಬಿ ತಂಡವನ್ನು ಸೇರಿಕೊಂಡಿದ್ದರು.

1 / 6
21 ವರ್ಷದ ಜೇಕಬ್ ಬೆಥೆಲ್ ಐಪಿಎಲ್ 2025 ರ ಹರಾಜಿಗೆ 1.25 ಕೋಟಿ ರೂ ಮೂಲ ಬೆಲೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು. ಅವರನ್ನು ಆರ್​ಸಿಬಿ 2.60 ಕೋಟಿಗೆ ಖರೀದಿಸಿತು. ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿರುವ ಜೇಕಬ್ ಬೆಥೆಲ್, ಆರ್​ಸಿಬಿ ಫ್ರಾಂಚೈಸಿಯನ್ನು ಸೇರಿದ ಬಳಿಕ ಸಿಹಿ ಸುದ್ದಿಯೊಂದನ್ನು ಪಡೆದಿದ್ದಾರೆ.

21 ವರ್ಷದ ಜೇಕಬ್ ಬೆಥೆಲ್ ಐಪಿಎಲ್ 2025 ರ ಹರಾಜಿಗೆ 1.25 ಕೋಟಿ ರೂ ಮೂಲ ಬೆಲೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು. ಅವರನ್ನು ಆರ್​ಸಿಬಿ 2.60 ಕೋಟಿಗೆ ಖರೀದಿಸಿತು. ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿರುವ ಜೇಕಬ್ ಬೆಥೆಲ್, ಆರ್​ಸಿಬಿ ಫ್ರಾಂಚೈಸಿಯನ್ನು ಸೇರಿದ ಬಳಿಕ ಸಿಹಿ ಸುದ್ದಿಯೊಂದನ್ನು ಪಡೆದಿದ್ದಾರೆ.

2 / 6
ವಾಸ್ತವವಾಗಿ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ತನ್ನ ದೇಶದ ಆಟಗಾರರಿಗೆ ಹೊಸ ಒಪ್ಪಂದಗಳನ್ನು ಪ್ರಕಟಿಸಿದೆ. ಆ ಪ್ರಕಾರ, ಕೆಲವು ಆಟಗಾರರಿಗೆ 1 ವರ್ಷದ ಕೇಂದ್ರ ಗುತ್ತಿಗೆ ನೀಡಲಾಗಿದೆ. ಅದೇ ಸಮಯದಲ್ಲಿ, ಕೆಲವು ಆಟಗಾರರು 2 ವರ್ಷಗಳ ಕೇಂದ್ರ ಒಪ್ಪಂದವನ್ನು ಪಡೆದಿದ್ದಾರೆ. ಈ 2 ವರ್ಷಗಳ ಕೇಂದ್ರ ಒಪ್ಪಂದವನ್ನು ಪಡೆದ ಆಟಗಾರರಲ್ಲಿ ಜೇಕಬ್ ಬೆಥೆಲ್ ಅವರ ಹೆಸರನ್ನು ಸೇರಿಸಲಾಗಿದೆ.

ವಾಸ್ತವವಾಗಿ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ತನ್ನ ದೇಶದ ಆಟಗಾರರಿಗೆ ಹೊಸ ಒಪ್ಪಂದಗಳನ್ನು ಪ್ರಕಟಿಸಿದೆ. ಆ ಪ್ರಕಾರ, ಕೆಲವು ಆಟಗಾರರಿಗೆ 1 ವರ್ಷದ ಕೇಂದ್ರ ಗುತ್ತಿಗೆ ನೀಡಲಾಗಿದೆ. ಅದೇ ಸಮಯದಲ್ಲಿ, ಕೆಲವು ಆಟಗಾರರು 2 ವರ್ಷಗಳ ಕೇಂದ್ರ ಒಪ್ಪಂದವನ್ನು ಪಡೆದಿದ್ದಾರೆ. ಈ 2 ವರ್ಷಗಳ ಕೇಂದ್ರ ಒಪ್ಪಂದವನ್ನು ಪಡೆದ ಆಟಗಾರರಲ್ಲಿ ಜೇಕಬ್ ಬೆಥೆಲ್ ಅವರ ಹೆಸರನ್ನು ಸೇರಿಸಲಾಗಿದೆ.

3 / 6
ಜೇಕಬ್ ಬೆಥೆಲ್ ಅವರನ್ನು ಕಳೆದ ತಿಂಗಳಷ್ಟೇ ಅಭಿವೃದ್ಧಿ ಒಪ್ಪಂದದಲ್ಲಿ ಸೇರಿಸಲಾಗಿತ್ತು. ಆದರೆ ಈಗ ಅವರ ಒಪ್ಪಂದವನ್ನು ಕೇಂದ್ರ ಒಪ್ಪಂದಕ್ಕೆ ಅಪ್‌ಗ್ರೇಡ್ ಮಾಡಲಾಗಿದೆ. ಈ ಒಪ್ಪಂದ 2026 ರ  ಸೆಪ್ಟೆಂಬರ್​ವರೆಗೆ ಇರುತ್ತದೆ.

ಜೇಕಬ್ ಬೆಥೆಲ್ ಅವರನ್ನು ಕಳೆದ ತಿಂಗಳಷ್ಟೇ ಅಭಿವೃದ್ಧಿ ಒಪ್ಪಂದದಲ್ಲಿ ಸೇರಿಸಲಾಗಿತ್ತು. ಆದರೆ ಈಗ ಅವರ ಒಪ್ಪಂದವನ್ನು ಕೇಂದ್ರ ಒಪ್ಪಂದಕ್ಕೆ ಅಪ್‌ಗ್ರೇಡ್ ಮಾಡಲಾಗಿದೆ. ಈ ಒಪ್ಪಂದ 2026 ರ ಸೆಪ್ಟೆಂಬರ್​ವರೆಗೆ ಇರುತ್ತದೆ.

4 / 6
ಜೇಕಬ್ ಬೆಥೆಲ್ ಇದೇ ವರ್ಷ ಏಕದಿನ ಮತ್ತು ಟಿ20 ಮಾದರಿಗೆ ಪಾದಾರ್ಪಣೆ ಮಾಡಿದ್ದರು. ಇತ್ತೀಚೆಗಷ್ಟೇ ಅವರು ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ತಮ್ಮ ಮೊದಲ ಟೆಸ್ಟ್ ಪಂದ್ಯವನ್ನು ಆಡಿದ್ದರು. ಈ ಪಂದ್ಯದಲ್ಲಿ ಅವರು ನಾಲ್ಕನೇ ಇನ್ನಿಂಗ್ಸ್‌ನಲ್ಲಿ 37 ಎಸೆತಗಳಲ್ಲಿ ಅರ್ಧಶತಕವನ್ನೂ ಸಿಡಿಸಿದ್ದರು.

ಜೇಕಬ್ ಬೆಥೆಲ್ ಇದೇ ವರ್ಷ ಏಕದಿನ ಮತ್ತು ಟಿ20 ಮಾದರಿಗೆ ಪಾದಾರ್ಪಣೆ ಮಾಡಿದ್ದರು. ಇತ್ತೀಚೆಗಷ್ಟೇ ಅವರು ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ತಮ್ಮ ಮೊದಲ ಟೆಸ್ಟ್ ಪಂದ್ಯವನ್ನು ಆಡಿದ್ದರು. ಈ ಪಂದ್ಯದಲ್ಲಿ ಅವರು ನಾಲ್ಕನೇ ಇನ್ನಿಂಗ್ಸ್‌ನಲ್ಲಿ 37 ಎಸೆತಗಳಲ್ಲಿ ಅರ್ಧಶತಕವನ್ನೂ ಸಿಡಿಸಿದ್ದರು.

5 / 6
ಇಂಗ್ಲೆಂಡ್ ಪರ ಇದುವರೆಗೆ 8 ಏಕದಿನ ಮತ್ತು 7 ಟಿ20 ಪಂದ್ಯಗಳನ್ನು ಆಡಿರುವ ಜೇಕಬ್ ಬೆಥೆಲ್, 27.83 ಸರಾಸರಿಯಲ್ಲಿ 167 ರನ್ ಗಳಿಸಿದ್ದರೆ, ಟಿ20 ಯಲ್ಲಿ 57.66 ಸರಾಸರಿಯಲ್ಲಿ 173 ರನ್ ಗಳಿಸಿದ್ದಾರೆ.

ಇಂಗ್ಲೆಂಡ್ ಪರ ಇದುವರೆಗೆ 8 ಏಕದಿನ ಮತ್ತು 7 ಟಿ20 ಪಂದ್ಯಗಳನ್ನು ಆಡಿರುವ ಜೇಕಬ್ ಬೆಥೆಲ್, 27.83 ಸರಾಸರಿಯಲ್ಲಿ 167 ರನ್ ಗಳಿಸಿದ್ದರೆ, ಟಿ20 ಯಲ್ಲಿ 57.66 ಸರಾಸರಿಯಲ್ಲಿ 173 ರನ್ ಗಳಿಸಿದ್ದಾರೆ.

6 / 6
Follow us
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ