AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ತಂಡ ಮಾರಾಟ..?

RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇದೀಗ ಡಿಯಾಜಿಯೋ ಕಂಪೆನಿಯು ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಮುಂದಾಗಿದ್ದಾರೆ ಎಂದು ಐಪಿಎಲ್​ನ ಮಾಜಿ ಅಧ್ಯಕ್ಷರು ಹೇಳಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 30, 2025 | 12:54 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಬದಲಾಗಲಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ, ಐಪಿಎಲ್​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಮುಂದಿಟ್ಟಿರುವ ಹೊಸ ಸುದ್ದಿ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಬದಲಾಗಲಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ, ಐಪಿಎಲ್​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಮುಂದಿಟ್ಟಿರುವ ಹೊಸ ಸುದ್ದಿ.

1 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ ಎಂದು ಲಲಿತ್ ಮೋದಿ ಹೇಳಿದ್ದಾರೆ. ಈ ಹಿಂದೆ ಆರ್​ಸಿಬಿ ಇಂತಹ ಸುದ್ದಿಯನ್ನು ನಿರಾಕರಿಸಿತ್ತು. ಆದರೆ ಇದೀಗ ಆರ್​ಸಿಬಿ ಮಾಲೀಕರು  ತಮ್ಮ ಬ್ಯಾಲೆನ್ಸ್ ಶೀಟ್‌ನಿಂದ ತೆಗೆದು ಮಾರಾಟ ಮಾಡಲು ನಿರ್ಧರಿಸಿದ್ದಾರೆಂದು ತೋರುತ್ತಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ ಎಂದು ಲಲಿತ್ ಮೋದಿ ಹೇಳಿದ್ದಾರೆ. ಈ ಹಿಂದೆ ಆರ್​ಸಿಬಿ ಇಂತಹ ಸುದ್ದಿಯನ್ನು ನಿರಾಕರಿಸಿತ್ತು. ಆದರೆ ಇದೀಗ ಆರ್​ಸಿಬಿ ಮಾಲೀಕರು  ತಮ್ಮ ಬ್ಯಾಲೆನ್ಸ್ ಶೀಟ್‌ನಿಂದ ತೆಗೆದು ಮಾರಾಟ ಮಾಡಲು ನಿರ್ಧರಿಸಿದ್ದಾರೆಂದು ತೋರುತ್ತಿದೆ.

2 / 6
ಆರ್​ಸಿಬಿ ತಂಡಕ್ಕೆ ಅಪಾರ ಅಭಿಮಾನಿಗಳಿದ್ದಾರೆ. ಇದೀಗ ತಂಡ ಚಾಂಪಿಯನ್ ಪಟ್ಟವನ್ನು ಸಹ ಅಲಂಕರಿಸಿದೆ. ಹೀಗಾಗಿ ಉತ್ತಮ ನಿರ್ವಹಣಾ ತಂಡವನ್ನು ಫ್ರಾಂಚೈಸಿ ಹೊಂದಿದೆ. ಇದೇ ಕಾರಣದಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಸಂಪೂರ್ಣ ಶೇರು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಆಸಕ್ತಿ ತೋರಿದೆ.

ಆರ್​ಸಿಬಿ ತಂಡಕ್ಕೆ ಅಪಾರ ಅಭಿಮಾನಿಗಳಿದ್ದಾರೆ. ಇದೀಗ ತಂಡ ಚಾಂಪಿಯನ್ ಪಟ್ಟವನ್ನು ಸಹ ಅಲಂಕರಿಸಿದೆ. ಹೀಗಾಗಿ ಉತ್ತಮ ನಿರ್ವಹಣಾ ತಂಡವನ್ನು ಫ್ರಾಂಚೈಸಿ ಹೊಂದಿದೆ. ಇದೇ ಕಾರಣದಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಸಂಪೂರ್ಣ ಶೇರು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಆಸಕ್ತಿ ತೋರಿದೆ.

3 / 6
ಅಲ್ಲದೆ ಐಪಿಎಲ್ 2026 ಕ್ಕೂ ಮುನ್ನ ಒಟ್ಟಾರೆಯಾಗಿ ಲಭ್ಯವಿರುವ ಏಕೈಕ ತಂಡವಾಗಿ ಆರ್​ಸಿಬಿ ಮಾರಾಟವಾಗಬಹುದು. ಬಿಗ್ ಗ್ಲೋಬಲ್ ಫಂಡ್‌ಗಳಲ್ಲಿ ಒಂದು ಅಥವಾ ಬೃಹತ್ ಹೂಡಿಕೆದಾರರು ಆರ್​ಸಿಬಿ ತಂಡವನ್ನು ಖರೀದಿಸುವ ಸಾಧ್ಯತೆಯಿದೆ. ಏಕೆಂದರೆ ಭಾರತದಲ್ಲಿ ಹೂಡಿಕೆ ಮಾಡಲು ಇದಕ್ಕಿಂತ ಉತ್ತಮ ಅವಕಾಶ ಇನ್ನೊಂದಿಲ್ಲ. ಅದನ್ನು ಬಳಸಿಕೊಳ್ಳುವ ಯಾರಿಗಾದರೂ ಶುಭವಾಗಲಿ ಎಂದು ಲಲಿತ್ ಮೋದಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಅಲ್ಲದೆ ಐಪಿಎಲ್ 2026 ಕ್ಕೂ ಮುನ್ನ ಒಟ್ಟಾರೆಯಾಗಿ ಲಭ್ಯವಿರುವ ಏಕೈಕ ತಂಡವಾಗಿ ಆರ್​ಸಿಬಿ ಮಾರಾಟವಾಗಬಹುದು. ಬಿಗ್ ಗ್ಲೋಬಲ್ ಫಂಡ್‌ಗಳಲ್ಲಿ ಒಂದು ಅಥವಾ ಬೃಹತ್ ಹೂಡಿಕೆದಾರರು ಆರ್​ಸಿಬಿ ತಂಡವನ್ನು ಖರೀದಿಸುವ ಸಾಧ್ಯತೆಯಿದೆ. ಏಕೆಂದರೆ ಭಾರತದಲ್ಲಿ ಹೂಡಿಕೆ ಮಾಡಲು ಇದಕ್ಕಿಂತ ಉತ್ತಮ ಅವಕಾಶ ಇನ್ನೊಂದಿಲ್ಲ. ಅದನ್ನು ಬಳಸಿಕೊಳ್ಳುವ ಯಾರಿಗಾದರೂ ಶುಭವಾಗಲಿ ಎಂದು ಲಲಿತ್ ಮೋದಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

4 / 6
ಇದಕ್ಕೂ ಮುನ್ನ ಜುಲೈ ತಿಂಗಳಲ್ಲಿ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲಾಗುತ್ತದೆ ಎಂದು ವರದಿಯಾಗಿತ್ತು. ಅದು ಕೂಡ ಸುಮಾರು 2 ಬಿಲಿಯನ್ ಡಾಲರ್​ಗೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಬರೋಬ್ಬರಿ 17 ಸಾವಿರ ಕೋಟಿ ರೂ.ಗೆ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಆ ಬಳಿಕ ಈ ಸುದ್ದಿಯನ್ನು ಆರ್​ಸಿಬಿ ನಿರಾಕರಿಸಿತ್ತು.

ಇದಕ್ಕೂ ಮುನ್ನ ಜುಲೈ ತಿಂಗಳಲ್ಲಿ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲಾಗುತ್ತದೆ ಎಂದು ವರದಿಯಾಗಿತ್ತು. ಅದು ಕೂಡ ಸುಮಾರು 2 ಬಿಲಿಯನ್ ಡಾಲರ್​ಗೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಬರೋಬ್ಬರಿ 17 ಸಾವಿರ ಕೋಟಿ ರೂ.ಗೆ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಆ ಬಳಿಕ ಈ ಸುದ್ದಿಯನ್ನು ಆರ್​ಸಿಬಿ ನಿರಾಕರಿಸಿತ್ತು.

5 / 6
ಇದೀಗ ಲಲಿತ್ ಮೋದಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಮಾರಾಟ ಮಾಡಲು ತೆರೆ ಮರೆಯ ಸಿದ್ಧತೆಗಳು ಶುರುವಾಗಿದೆ. ಈ ಮಾರಾಟಕ್ಕಾಗಿ ಸಿಟಿ ಬ್ಯಾಂಕ್ ಮಧ್ಯವರ್ತಿಯಾಗಿ ಕಾರ್ಯ ನಿರ್ವಹಿಸಲಿದೆ ಎಂಬುದನ್ನು ಸಹ ಖಚಿತಪಡಿಸಿದ್ದಾರೆ. ಹೀಗಾಗಿ ಐಪಿಎಲ್ ಸೀಸನ್-19 ಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮಾರಾಟವಾದರೂ ಅಚ್ಚರಿಪಡಬೇಕಿಲ್ಲ.

ಇದೀಗ ಲಲಿತ್ ಮೋದಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಮಾರಾಟ ಮಾಡಲು ತೆರೆ ಮರೆಯ ಸಿದ್ಧತೆಗಳು ಶುರುವಾಗಿದೆ. ಈ ಮಾರಾಟಕ್ಕಾಗಿ ಸಿಟಿ ಬ್ಯಾಂಕ್ ಮಧ್ಯವರ್ತಿಯಾಗಿ ಕಾರ್ಯ ನಿರ್ವಹಿಸಲಿದೆ ಎಂಬುದನ್ನು ಸಹ ಖಚಿತಪಡಿಸಿದ್ದಾರೆ. ಹೀಗಾಗಿ ಐಪಿಎಲ್ ಸೀಸನ್-19 ಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮಾರಾಟವಾದರೂ ಅಚ್ಚರಿಪಡಬೇಕಿಲ್ಲ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ