AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 17,587 ಕೋಟಿ ರೂ..! ಆರ್​ಸಿಬಿ ಖರೀದಿಗೆ ಆರು ಕಂಪನಿಗಳ ನಡುವೆ ಪೈಪೋಟಿ

RCB sale: ಹಾಲಿ ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 2026ರ ಟೂರ್ನಿಗೂ ಮುನ್ನ ಮಾರಾಟ ಮಾಡುವ ಕುರಿತು ಸುದ್ದಿಗಳು ಹರಿದಾಡುತ್ತಿವೆ. ಡಿಯಾಜಿಯೊ ಕಂಪನಿ ಮಾಲೀಕತ್ವದಲ್ಲಿರುವ ಆರ್​ಸಿಬಿಗೆ ಅದಾನಿ, ಜೆಎಸ್‌ಡಬ್ಲ್ಯೂ ಗ್ರೂಪ್, ಆದರ್ ಪೂನವಾಲ್ಲಾ ಸೇರಿದಂತೆ ಆರು ಕಂಪನಿಗಳು 17,587 ಕೋಟಿ ರೂ. ಬಿಡ್ ಮಾಡುವ ಆಸಕ್ತಿ ತೋರಿವೆ. ಡಿಯಾಜಿಯೊದಲ್ಲಿಯೇ ಆಂತರಿಕ ಭಿನ್ನಾಭಿಪ್ರಾಯಗಳಿದ್ದು, ಮುಂದಿನ ದಿನಗಳಲ್ಲಿ ಮಾಲೀಕತ್ವ ಸ್ಪಷ್ಟವಾಗಲಿದೆ.

ಪೃಥ್ವಿಶಂಕರ
|

Updated on: Oct 17, 2025 | 9:26 PM

Share
ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ಟೂರ್ನಮೆಂಟ್‌ಗೆ ಮುಂಚಿತವಾಗಿ ಹೊಸ ಮಾಲೀಕರ ಕೈಸೇರಲಿದೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ಕ್ರಿಕ್‌ಬಜ್ ಪ್ರಕಾರ, ಆರು ಕಂಪನಿಗಳು ಆರ್​ಸಿಬಿ ಫ್ರಾಂಚೈಸಿಯನ್ನು ಖರೀದಿಸಲು ಮುಂದಾಗಿದ್ದು, ಸುಮಾರು 17,587 ಕೋಟಿ ರೂ. ದರವನ್ನು ನಿಗದಿಪಡಿಲಾಗಿದೆ ಎಂದು ಹೇಳಲಾಗುತ್ತಿದೆ.

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ಟೂರ್ನಮೆಂಟ್‌ಗೆ ಮುಂಚಿತವಾಗಿ ಹೊಸ ಮಾಲೀಕರ ಕೈಸೇರಲಿದೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ಕ್ರಿಕ್‌ಬಜ್ ಪ್ರಕಾರ, ಆರು ಕಂಪನಿಗಳು ಆರ್​ಸಿಬಿ ಫ್ರಾಂಚೈಸಿಯನ್ನು ಖರೀದಿಸಲು ಮುಂದಾಗಿದ್ದು, ಸುಮಾರು 17,587 ಕೋಟಿ ರೂ. ದರವನ್ನು ನಿಗದಿಪಡಿಲಾಗಿದೆ ಎಂದು ಹೇಳಲಾಗುತ್ತಿದೆ.

1 / 5
ಪ್ರಸ್ತುತ ಆರ್​ಸಿಬಿ ತಂಡದ ಮಾಲೀಕತ್ವ ಡಿಯಾಜಿಯೊ ಕಂಪನಿಯ ಬಳಿ ಇದೆ. ಆದಾಗ್ಯೂ ಪ್ರಸ್ತುತ ಐಪಿಎಲ್ ಚಾಂಪಿಯನ್ ಆಗಿರುವ ಆರ್​ಸಿಬಿಯನ್ನು ಮಾರಾಟ ಮಾಡಲು ಕಂಪನಿಯಲ್ಲೇ ಭಿನ್ನ ಸ್ವರ ಮೂಡಿದೆ ಎನ್ನಲಾಗುತ್ತಿದೆ. ಏಕೆಂದರೆ ಡಿಯಾಜಿಯೊದ ಭಾರತೀಯ ಶಾಖೆಯು ಆರ್​ಸಿಬಿ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಅತ್ಯಂತ ಜನಪ್ರಿಯ ಐಪಿಎಲ್ ತಂಡವನ್ನು ತಮ್ಮಲ್ಲೇ ಎಂದು ಅಭಿಪ್ರಾಯಪಟ್ಟಿದೆ ಎಂದು ಹೇಳಲಾಗುತ್ತಿದೆ.

ಪ್ರಸ್ತುತ ಆರ್​ಸಿಬಿ ತಂಡದ ಮಾಲೀಕತ್ವ ಡಿಯಾಜಿಯೊ ಕಂಪನಿಯ ಬಳಿ ಇದೆ. ಆದಾಗ್ಯೂ ಪ್ರಸ್ತುತ ಐಪಿಎಲ್ ಚಾಂಪಿಯನ್ ಆಗಿರುವ ಆರ್​ಸಿಬಿಯನ್ನು ಮಾರಾಟ ಮಾಡಲು ಕಂಪನಿಯಲ್ಲೇ ಭಿನ್ನ ಸ್ವರ ಮೂಡಿದೆ ಎನ್ನಲಾಗುತ್ತಿದೆ. ಏಕೆಂದರೆ ಡಿಯಾಜಿಯೊದ ಭಾರತೀಯ ಶಾಖೆಯು ಆರ್​ಸಿಬಿ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಅತ್ಯಂತ ಜನಪ್ರಿಯ ಐಪಿಎಲ್ ತಂಡವನ್ನು ತಮ್ಮಲ್ಲೇ ಎಂದು ಅಭಿಪ್ರಾಯಪಟ್ಟಿದೆ ಎಂದು ಹೇಳಲಾಗುತ್ತಿದೆ.

2 / 5
ಆದಾಗ್ಯೂ ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಸೀರಮ್ ಇನ್‌ಸ್ಟಿಟ್ಯೂಟ್ ಮುಖ್ಯಸ್ಥ ಆದರ್ ಪೂನವಾಲ್ಲಾ ಫ್ರಾಂಚೈಸಿಯನ್ನು ಖರೀದಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಪೂನವಾಲ್ಲಾ ಜೊತೆಗೆ, ಜೆಎಸ್‌ಡಬ್ಲ್ಯೂ ಗ್ರೂಪ್ ಮತ್ತು ಅದಾನಿ ಗ್ರೂಪ್ ಕೂಡ ಆಸಕ್ತಿ ಹೊಂದಿವೆ. ದೆಹಲಿ ಮೂಲದ ಬಿಲಿಯನೇರ್ ಕೈಗಾರಿಕೋದ್ಯಮಿ ಮತ್ತು ಎರಡು ಅಮೇರಿಕನ್ ಖಾಸಗಿ ಇಕ್ವಿಟಿ ಸಂಸ್ಥೆಗಳು ಸಹ ಆರ್​ಸಿಬಿ ಖರೀದಿಸುವ ಇರಾದೆಯಲ್ಲಿವೆ ಎನ್ನಲಾಗುತ್ತಿದೆ.

ಆದಾಗ್ಯೂ ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಸೀರಮ್ ಇನ್‌ಸ್ಟಿಟ್ಯೂಟ್ ಮುಖ್ಯಸ್ಥ ಆದರ್ ಪೂನವಾಲ್ಲಾ ಫ್ರಾಂಚೈಸಿಯನ್ನು ಖರೀದಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಪೂನವಾಲ್ಲಾ ಜೊತೆಗೆ, ಜೆಎಸ್‌ಡಬ್ಲ್ಯೂ ಗ್ರೂಪ್ ಮತ್ತು ಅದಾನಿ ಗ್ರೂಪ್ ಕೂಡ ಆಸಕ್ತಿ ಹೊಂದಿವೆ. ದೆಹಲಿ ಮೂಲದ ಬಿಲಿಯನೇರ್ ಕೈಗಾರಿಕೋದ್ಯಮಿ ಮತ್ತು ಎರಡು ಅಮೇರಿಕನ್ ಖಾಸಗಿ ಇಕ್ವಿಟಿ ಸಂಸ್ಥೆಗಳು ಸಹ ಆರ್​ಸಿಬಿ ಖರೀದಿಸುವ ಇರಾದೆಯಲ್ಲಿವೆ ಎನ್ನಲಾಗುತ್ತಿದೆ.

3 / 5
ಐಪಿಎಲ್‌ನಲ್ಲಿ ತಂಡ ಖರೀದಿಸಬೇಕೆಂಬ ಬಯಕೆ ಅದಾನಿ ಗ್ರೂಪ್‌ಗೆ ಬಹಳ ಹಿಂದಿನಿಂದಲೂ ಇದೆ. 2022 ರಲ್ಲಿ ಬಿಸಿಸಿಐ ಎರಡು ಹೊಸ ತಂಡಗಳನ್ನು ಮಾರಾಟ ಮಾಡಿದಾಗ, ಅದಾನಿ ಗ್ರೂಪ್ ಗುಜರಾತ್ ತಂಡವನ್ನು ಖರೀದಿಸುವುದಕ್ಕೆ ಬಿಡ್ ಮಾಡಿತ್ತು. ಆದರೆ ಬಿಡ್ ಗೆಲ್ಲುವಲ್ಲಿ ವಿಫಲವಾಗಿತ್ತು. ಹೀಗಾಗಿ ಈ ಬಾರಿ ಆರ್​ಸಿಬಿ ತಂಡ ಖರೀದಿಸುವ ಪ್ರಯತ್ನದಲ್ಲಿದೆ. ಮತ್ತೊಂದೆಡೆ, ಜಿಂದಾಲ್ ಗ್ರೂಪ್ ಡೆಲ್ಲಿ ಕ್ಯಾಪಿಟಲ್ಸ್‌ನಲ್ಲಿ ಶೇಕಡಾ 50 ರಷ್ಟು ಪಾಲನ್ನು ಹೊಂದಿದೆ. ಹೀಗಾಗಿ ಒಂದು ವೇಳೆ ಜಿಂದಾಲ್ ಗ್ರೂಪ್, ಆರ್‌ಸಿಬಿಗೆ ಬಿಡ್ ಮಾಡಿದರೆ ಡೆಲ್ಲಿ ಫ್ರಾಂಚೈಸಿಯಿಂದ ಹೊರಬರಬೇಕಾಗುತ್ತದೆ.

ಐಪಿಎಲ್‌ನಲ್ಲಿ ತಂಡ ಖರೀದಿಸಬೇಕೆಂಬ ಬಯಕೆ ಅದಾನಿ ಗ್ರೂಪ್‌ಗೆ ಬಹಳ ಹಿಂದಿನಿಂದಲೂ ಇದೆ. 2022 ರಲ್ಲಿ ಬಿಸಿಸಿಐ ಎರಡು ಹೊಸ ತಂಡಗಳನ್ನು ಮಾರಾಟ ಮಾಡಿದಾಗ, ಅದಾನಿ ಗ್ರೂಪ್ ಗುಜರಾತ್ ತಂಡವನ್ನು ಖರೀದಿಸುವುದಕ್ಕೆ ಬಿಡ್ ಮಾಡಿತ್ತು. ಆದರೆ ಬಿಡ್ ಗೆಲ್ಲುವಲ್ಲಿ ವಿಫಲವಾಗಿತ್ತು. ಹೀಗಾಗಿ ಈ ಬಾರಿ ಆರ್​ಸಿಬಿ ತಂಡ ಖರೀದಿಸುವ ಪ್ರಯತ್ನದಲ್ಲಿದೆ. ಮತ್ತೊಂದೆಡೆ, ಜಿಂದಾಲ್ ಗ್ರೂಪ್ ಡೆಲ್ಲಿ ಕ್ಯಾಪಿಟಲ್ಸ್‌ನಲ್ಲಿ ಶೇಕಡಾ 50 ರಷ್ಟು ಪಾಲನ್ನು ಹೊಂದಿದೆ. ಹೀಗಾಗಿ ಒಂದು ವೇಳೆ ಜಿಂದಾಲ್ ಗ್ರೂಪ್, ಆರ್‌ಸಿಬಿಗೆ ಬಿಡ್ ಮಾಡಿದರೆ ಡೆಲ್ಲಿ ಫ್ರಾಂಚೈಸಿಯಿಂದ ಹೊರಬರಬೇಕಾಗುತ್ತದೆ.

4 / 5
ಮಾರಾಟದ ಕುರಿತು ಸಲಹೆ ನೀಡಲು ಡಿಯಾಜಿಯೊ ಸಿಟಿ ಸೇರಿದಂತೆ ಎರಡು ಖಾಸಗಿ ಬ್ಯಾಂಕ್‌ಗಳನ್ನು ನೇಮಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ ಈ ಖರೀದಿ ಒಪ್ಪಂದ ಪೂರ್ಣಗೊಳ್ಳುತ್ತದೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದ್ದರಿಂದ, ಟ್ರೇಡ್ ವಿಂಡೋ ಮತ್ತು ಮಿನಿ ಹರಾಜಿನ ಮೊದಲು ಆರ್​ಸಿಬಿ ಫ್ರಾಂಚೈಸಿ ಹೊಸ ಮಾಲೀಕನ ಕೈಸೇರುತ್ತದೋ ಅಥವಾ ಹಳೆ ಮಾಲೀಕರ ಬಳಿಯೇ ಉಳಿಯುತ್ತದೋ ಎಂಬುದು ಕುತೂಹಲ ಮೂಡಿಸಿದೆ.

ಮಾರಾಟದ ಕುರಿತು ಸಲಹೆ ನೀಡಲು ಡಿಯಾಜಿಯೊ ಸಿಟಿ ಸೇರಿದಂತೆ ಎರಡು ಖಾಸಗಿ ಬ್ಯಾಂಕ್‌ಗಳನ್ನು ನೇಮಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ ಈ ಖರೀದಿ ಒಪ್ಪಂದ ಪೂರ್ಣಗೊಳ್ಳುತ್ತದೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದ್ದರಿಂದ, ಟ್ರೇಡ್ ವಿಂಡೋ ಮತ್ತು ಮಿನಿ ಹರಾಜಿನ ಮೊದಲು ಆರ್​ಸಿಬಿ ಫ್ರಾಂಚೈಸಿ ಹೊಸ ಮಾಲೀಕನ ಕೈಸೇರುತ್ತದೋ ಅಥವಾ ಹಳೆ ಮಾಲೀಕರ ಬಳಿಯೇ ಉಳಿಯುತ್ತದೋ ಎಂಬುದು ಕುತೂಹಲ ಮೂಡಿಸಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ