AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 17,587 ಕೋಟಿ ರೂ..! ಆರ್​ಸಿಬಿ ಖರೀದಿಗೆ ಆರು ಕಂಪನಿಗಳ ನಡುವೆ ಪೈಪೋಟಿ

RCB sale: ಹಾಲಿ ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 2026ರ ಟೂರ್ನಿಗೂ ಮುನ್ನ ಮಾರಾಟ ಮಾಡುವ ಕುರಿತು ಸುದ್ದಿಗಳು ಹರಿದಾಡುತ್ತಿವೆ. ಡಿಯಾಜಿಯೊ ಕಂಪನಿ ಮಾಲೀಕತ್ವದಲ್ಲಿರುವ ಆರ್​ಸಿಬಿಗೆ ಅದಾನಿ, ಜೆಎಸ್‌ಡಬ್ಲ್ಯೂ ಗ್ರೂಪ್, ಆದರ್ ಪೂನವಾಲ್ಲಾ ಸೇರಿದಂತೆ ಆರು ಕಂಪನಿಗಳು 17,587 ಕೋಟಿ ರೂ. ಬಿಡ್ ಮಾಡುವ ಆಸಕ್ತಿ ತೋರಿವೆ. ಡಿಯಾಜಿಯೊದಲ್ಲಿಯೇ ಆಂತರಿಕ ಭಿನ್ನಾಭಿಪ್ರಾಯಗಳಿದ್ದು, ಮುಂದಿನ ದಿನಗಳಲ್ಲಿ ಮಾಲೀಕತ್ವ ಸ್ಪಷ್ಟವಾಗಲಿದೆ.

ಪೃಥ್ವಿಶಂಕರ
|

Updated on: Oct 17, 2025 | 9:26 PM

Share
ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ಟೂರ್ನಮೆಂಟ್‌ಗೆ ಮುಂಚಿತವಾಗಿ ಹೊಸ ಮಾಲೀಕರ ಕೈಸೇರಲಿದೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ಕ್ರಿಕ್‌ಬಜ್ ಪ್ರಕಾರ, ಆರು ಕಂಪನಿಗಳು ಆರ್​ಸಿಬಿ ಫ್ರಾಂಚೈಸಿಯನ್ನು ಖರೀದಿಸಲು ಮುಂದಾಗಿದ್ದು, ಸುಮಾರು 17,587 ಕೋಟಿ ರೂ. ದರವನ್ನು ನಿಗದಿಪಡಿಲಾಗಿದೆ ಎಂದು ಹೇಳಲಾಗುತ್ತಿದೆ.

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ಟೂರ್ನಮೆಂಟ್‌ಗೆ ಮುಂಚಿತವಾಗಿ ಹೊಸ ಮಾಲೀಕರ ಕೈಸೇರಲಿದೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ಕ್ರಿಕ್‌ಬಜ್ ಪ್ರಕಾರ, ಆರು ಕಂಪನಿಗಳು ಆರ್​ಸಿಬಿ ಫ್ರಾಂಚೈಸಿಯನ್ನು ಖರೀದಿಸಲು ಮುಂದಾಗಿದ್ದು, ಸುಮಾರು 17,587 ಕೋಟಿ ರೂ. ದರವನ್ನು ನಿಗದಿಪಡಿಲಾಗಿದೆ ಎಂದು ಹೇಳಲಾಗುತ್ತಿದೆ.

1 / 5
ಪ್ರಸ್ತುತ ಆರ್​ಸಿಬಿ ತಂಡದ ಮಾಲೀಕತ್ವ ಡಿಯಾಜಿಯೊ ಕಂಪನಿಯ ಬಳಿ ಇದೆ. ಆದಾಗ್ಯೂ ಪ್ರಸ್ತುತ ಐಪಿಎಲ್ ಚಾಂಪಿಯನ್ ಆಗಿರುವ ಆರ್​ಸಿಬಿಯನ್ನು ಮಾರಾಟ ಮಾಡಲು ಕಂಪನಿಯಲ್ಲೇ ಭಿನ್ನ ಸ್ವರ ಮೂಡಿದೆ ಎನ್ನಲಾಗುತ್ತಿದೆ. ಏಕೆಂದರೆ ಡಿಯಾಜಿಯೊದ ಭಾರತೀಯ ಶಾಖೆಯು ಆರ್​ಸಿಬಿ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಅತ್ಯಂತ ಜನಪ್ರಿಯ ಐಪಿಎಲ್ ತಂಡವನ್ನು ತಮ್ಮಲ್ಲೇ ಎಂದು ಅಭಿಪ್ರಾಯಪಟ್ಟಿದೆ ಎಂದು ಹೇಳಲಾಗುತ್ತಿದೆ.

ಪ್ರಸ್ತುತ ಆರ್​ಸಿಬಿ ತಂಡದ ಮಾಲೀಕತ್ವ ಡಿಯಾಜಿಯೊ ಕಂಪನಿಯ ಬಳಿ ಇದೆ. ಆದಾಗ್ಯೂ ಪ್ರಸ್ತುತ ಐಪಿಎಲ್ ಚಾಂಪಿಯನ್ ಆಗಿರುವ ಆರ್​ಸಿಬಿಯನ್ನು ಮಾರಾಟ ಮಾಡಲು ಕಂಪನಿಯಲ್ಲೇ ಭಿನ್ನ ಸ್ವರ ಮೂಡಿದೆ ಎನ್ನಲಾಗುತ್ತಿದೆ. ಏಕೆಂದರೆ ಡಿಯಾಜಿಯೊದ ಭಾರತೀಯ ಶಾಖೆಯು ಆರ್​ಸಿಬಿ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಅತ್ಯಂತ ಜನಪ್ರಿಯ ಐಪಿಎಲ್ ತಂಡವನ್ನು ತಮ್ಮಲ್ಲೇ ಎಂದು ಅಭಿಪ್ರಾಯಪಟ್ಟಿದೆ ಎಂದು ಹೇಳಲಾಗುತ್ತಿದೆ.

2 / 5
ಆದಾಗ್ಯೂ ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಸೀರಮ್ ಇನ್‌ಸ್ಟಿಟ್ಯೂಟ್ ಮುಖ್ಯಸ್ಥ ಆದರ್ ಪೂನವಾಲ್ಲಾ ಫ್ರಾಂಚೈಸಿಯನ್ನು ಖರೀದಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಪೂನವಾಲ್ಲಾ ಜೊತೆಗೆ, ಜೆಎಸ್‌ಡಬ್ಲ್ಯೂ ಗ್ರೂಪ್ ಮತ್ತು ಅದಾನಿ ಗ್ರೂಪ್ ಕೂಡ ಆಸಕ್ತಿ ಹೊಂದಿವೆ. ದೆಹಲಿ ಮೂಲದ ಬಿಲಿಯನೇರ್ ಕೈಗಾರಿಕೋದ್ಯಮಿ ಮತ್ತು ಎರಡು ಅಮೇರಿಕನ್ ಖಾಸಗಿ ಇಕ್ವಿಟಿ ಸಂಸ್ಥೆಗಳು ಸಹ ಆರ್​ಸಿಬಿ ಖರೀದಿಸುವ ಇರಾದೆಯಲ್ಲಿವೆ ಎನ್ನಲಾಗುತ್ತಿದೆ.

ಆದಾಗ್ಯೂ ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಸೀರಮ್ ಇನ್‌ಸ್ಟಿಟ್ಯೂಟ್ ಮುಖ್ಯಸ್ಥ ಆದರ್ ಪೂನವಾಲ್ಲಾ ಫ್ರಾಂಚೈಸಿಯನ್ನು ಖರೀದಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಪೂನವಾಲ್ಲಾ ಜೊತೆಗೆ, ಜೆಎಸ್‌ಡಬ್ಲ್ಯೂ ಗ್ರೂಪ್ ಮತ್ತು ಅದಾನಿ ಗ್ರೂಪ್ ಕೂಡ ಆಸಕ್ತಿ ಹೊಂದಿವೆ. ದೆಹಲಿ ಮೂಲದ ಬಿಲಿಯನೇರ್ ಕೈಗಾರಿಕೋದ್ಯಮಿ ಮತ್ತು ಎರಡು ಅಮೇರಿಕನ್ ಖಾಸಗಿ ಇಕ್ವಿಟಿ ಸಂಸ್ಥೆಗಳು ಸಹ ಆರ್​ಸಿಬಿ ಖರೀದಿಸುವ ಇರಾದೆಯಲ್ಲಿವೆ ಎನ್ನಲಾಗುತ್ತಿದೆ.

3 / 5
ಐಪಿಎಲ್‌ನಲ್ಲಿ ತಂಡ ಖರೀದಿಸಬೇಕೆಂಬ ಬಯಕೆ ಅದಾನಿ ಗ್ರೂಪ್‌ಗೆ ಬಹಳ ಹಿಂದಿನಿಂದಲೂ ಇದೆ. 2022 ರಲ್ಲಿ ಬಿಸಿಸಿಐ ಎರಡು ಹೊಸ ತಂಡಗಳನ್ನು ಮಾರಾಟ ಮಾಡಿದಾಗ, ಅದಾನಿ ಗ್ರೂಪ್ ಗುಜರಾತ್ ತಂಡವನ್ನು ಖರೀದಿಸುವುದಕ್ಕೆ ಬಿಡ್ ಮಾಡಿತ್ತು. ಆದರೆ ಬಿಡ್ ಗೆಲ್ಲುವಲ್ಲಿ ವಿಫಲವಾಗಿತ್ತು. ಹೀಗಾಗಿ ಈ ಬಾರಿ ಆರ್​ಸಿಬಿ ತಂಡ ಖರೀದಿಸುವ ಪ್ರಯತ್ನದಲ್ಲಿದೆ. ಮತ್ತೊಂದೆಡೆ, ಜಿಂದಾಲ್ ಗ್ರೂಪ್ ಡೆಲ್ಲಿ ಕ್ಯಾಪಿಟಲ್ಸ್‌ನಲ್ಲಿ ಶೇಕಡಾ 50 ರಷ್ಟು ಪಾಲನ್ನು ಹೊಂದಿದೆ. ಹೀಗಾಗಿ ಒಂದು ವೇಳೆ ಜಿಂದಾಲ್ ಗ್ರೂಪ್, ಆರ್‌ಸಿಬಿಗೆ ಬಿಡ್ ಮಾಡಿದರೆ ಡೆಲ್ಲಿ ಫ್ರಾಂಚೈಸಿಯಿಂದ ಹೊರಬರಬೇಕಾಗುತ್ತದೆ.

ಐಪಿಎಲ್‌ನಲ್ಲಿ ತಂಡ ಖರೀದಿಸಬೇಕೆಂಬ ಬಯಕೆ ಅದಾನಿ ಗ್ರೂಪ್‌ಗೆ ಬಹಳ ಹಿಂದಿನಿಂದಲೂ ಇದೆ. 2022 ರಲ್ಲಿ ಬಿಸಿಸಿಐ ಎರಡು ಹೊಸ ತಂಡಗಳನ್ನು ಮಾರಾಟ ಮಾಡಿದಾಗ, ಅದಾನಿ ಗ್ರೂಪ್ ಗುಜರಾತ್ ತಂಡವನ್ನು ಖರೀದಿಸುವುದಕ್ಕೆ ಬಿಡ್ ಮಾಡಿತ್ತು. ಆದರೆ ಬಿಡ್ ಗೆಲ್ಲುವಲ್ಲಿ ವಿಫಲವಾಗಿತ್ತು. ಹೀಗಾಗಿ ಈ ಬಾರಿ ಆರ್​ಸಿಬಿ ತಂಡ ಖರೀದಿಸುವ ಪ್ರಯತ್ನದಲ್ಲಿದೆ. ಮತ್ತೊಂದೆಡೆ, ಜಿಂದಾಲ್ ಗ್ರೂಪ್ ಡೆಲ್ಲಿ ಕ್ಯಾಪಿಟಲ್ಸ್‌ನಲ್ಲಿ ಶೇಕಡಾ 50 ರಷ್ಟು ಪಾಲನ್ನು ಹೊಂದಿದೆ. ಹೀಗಾಗಿ ಒಂದು ವೇಳೆ ಜಿಂದಾಲ್ ಗ್ರೂಪ್, ಆರ್‌ಸಿಬಿಗೆ ಬಿಡ್ ಮಾಡಿದರೆ ಡೆಲ್ಲಿ ಫ್ರಾಂಚೈಸಿಯಿಂದ ಹೊರಬರಬೇಕಾಗುತ್ತದೆ.

4 / 5
ಮಾರಾಟದ ಕುರಿತು ಸಲಹೆ ನೀಡಲು ಡಿಯಾಜಿಯೊ ಸಿಟಿ ಸೇರಿದಂತೆ ಎರಡು ಖಾಸಗಿ ಬ್ಯಾಂಕ್‌ಗಳನ್ನು ನೇಮಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ ಈ ಖರೀದಿ ಒಪ್ಪಂದ ಪೂರ್ಣಗೊಳ್ಳುತ್ತದೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದ್ದರಿಂದ, ಟ್ರೇಡ್ ವಿಂಡೋ ಮತ್ತು ಮಿನಿ ಹರಾಜಿನ ಮೊದಲು ಆರ್​ಸಿಬಿ ಫ್ರಾಂಚೈಸಿ ಹೊಸ ಮಾಲೀಕನ ಕೈಸೇರುತ್ತದೋ ಅಥವಾ ಹಳೆ ಮಾಲೀಕರ ಬಳಿಯೇ ಉಳಿಯುತ್ತದೋ ಎಂಬುದು ಕುತೂಹಲ ಮೂಡಿಸಿದೆ.

ಮಾರಾಟದ ಕುರಿತು ಸಲಹೆ ನೀಡಲು ಡಿಯಾಜಿಯೊ ಸಿಟಿ ಸೇರಿದಂತೆ ಎರಡು ಖಾಸಗಿ ಬ್ಯಾಂಕ್‌ಗಳನ್ನು ನೇಮಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ ಈ ಖರೀದಿ ಒಪ್ಪಂದ ಪೂರ್ಣಗೊಳ್ಳುತ್ತದೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದ್ದರಿಂದ, ಟ್ರೇಡ್ ವಿಂಡೋ ಮತ್ತು ಮಿನಿ ಹರಾಜಿನ ಮೊದಲು ಆರ್​ಸಿಬಿ ಫ್ರಾಂಚೈಸಿ ಹೊಸ ಮಾಲೀಕನ ಕೈಸೇರುತ್ತದೋ ಅಥವಾ ಹಳೆ ಮಾಲೀಕರ ಬಳಿಯೇ ಉಳಿಯುತ್ತದೋ ಎಂಬುದು ಕುತೂಹಲ ಮೂಡಿಸಿದೆ.

5 / 5
Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ