AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ಪ್ಲೇಆಫ್​​ಗೆ ಪ್ರವೇಶಿಸಿದ RCB

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪ್ಲೇಆಫ್​ಗೆ ಪ್ರವೇಶಿಸಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪ್ಲೇಆಫ್​​ಗೆ ಅರ್ಹತೆ ಪಡೆದುಕೊಂಡಿತ್ತು. ಅದರಂತೆ ಈ ಬಾರಿಯ WPL ನಲ್ಲಿ ಪ್ಲೇಆಫ್ ಆಡಲಿರುವ ಮೂರು ತಂಡಗಳು ನಿರ್ಧಾರವಾಗಿದೆ.

TV9 Web
| Edited By: |

Updated on:Mar 13, 2024 | 6:59 AM

Share
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) 19ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡವು ಪ್ಲೇಆಫ್​ಗೆ ಪ್ರವೇಶಿಸಿದೆ. ಮುಂಬೈ ಇಂಡಿಯನ್ಸ್ (MI) ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು.

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) 19ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡವು ಪ್ಲೇಆಫ್​ಗೆ ಪ್ರವೇಶಿಸಿದೆ. ಮುಂಬೈ ಇಂಡಿಯನ್ಸ್ (MI) ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ಎಲ್ಲಿಸ್ ಪೆರ್ರಿ ಅವರ ಮಾರಕ ದಾಳಿಗೆ ತತ್ತರಿಸಿತು. ಲಯ ಬದ್ಧ ಬೌಲಿಂಗ್ ದಾಳಿ ಸಂಘಟಿಸಿದ ಪೆರ್ರಿ ಕೇವಲ 4 ಓವರ್​ಗಳಲ್ಲಿ ಕೇವಲ 15 ರನ್ ನೀಡಿ 6 ವಿಕೆಟ್ ಕಬಳಿಸಿದರು. ಪರಿಣಾಮ 19 ಓವರ್​ಗಳಲ್ಲಿ 113 ರನ್​ಗಳಿಸಿ ಮುಂಬೈ ಇಂಡಿಯನ್ಸ್ ಆಲೌಟ್ ಆಯಿತು.

ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ಎಲ್ಲಿಸ್ ಪೆರ್ರಿ ಅವರ ಮಾರಕ ದಾಳಿಗೆ ತತ್ತರಿಸಿತು. ಲಯ ಬದ್ಧ ಬೌಲಿಂಗ್ ದಾಳಿ ಸಂಘಟಿಸಿದ ಪೆರ್ರಿ ಕೇವಲ 4 ಓವರ್​ಗಳಲ್ಲಿ ಕೇವಲ 15 ರನ್ ನೀಡಿ 6 ವಿಕೆಟ್ ಕಬಳಿಸಿದರು. ಪರಿಣಾಮ 19 ಓವರ್​ಗಳಲ್ಲಿ 113 ರನ್​ಗಳಿಸಿ ಮುಂಬೈ ಇಂಡಿಯನ್ಸ್ ಆಲೌಟ್ ಆಯಿತು.

2 / 5
114 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಸ್ಮೃತಿ ಮಂಧಾನ 13 ರನ್​ಗಳಿಸಿ ಔಟಾದರೆ, ಸೋಫಿ ಮೊಲಿನೆಕ್ಸ್ 9 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಸೋಫಿ ಡಿವೈಲ್ (4) ಕೂಡ ಬೌಲ್ಡ್ ಆದರು. ಈ ಹಂತದಲ್ಲಿ ಆರ್​ಸಿಬಿ ತಂಡಕ್ಕೆ ಆಸರೆಯಾಗಿದ್ದು ಎಲ್ಲಿಸ್ ಪೆರ್ರಿ ಮತ್ತು ರಿಚಾ ಘೋಷ್.

114 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಸ್ಮೃತಿ ಮಂಧಾನ 13 ರನ್​ಗಳಿಸಿ ಔಟಾದರೆ, ಸೋಫಿ ಮೊಲಿನೆಕ್ಸ್ 9 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಸೋಫಿ ಡಿವೈಲ್ (4) ಕೂಡ ಬೌಲ್ಡ್ ಆದರು. ಈ ಹಂತದಲ್ಲಿ ಆರ್​ಸಿಬಿ ತಂಡಕ್ಕೆ ಆಸರೆಯಾಗಿದ್ದು ಎಲ್ಲಿಸ್ ಪೆರ್ರಿ ಮತ್ತು ರಿಚಾ ಘೋಷ್.

3 / 5
4ನೇ ವಿಕೆಟ್​ಗೆ ಜೊತೆಗೂಡಿದ ಪೆರ್ರಿ-ರಿಚಾ ಜೋಡಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ 74 ರನ್​ಗಳ ಜೊತೆಯಾಟವಾಡಿದರು. ಈ ಮೂಲಕ ಎಲ್ಲಿಸ್ ಪೆರ್ರಿ (40) ಹಾಗೂ ರಿಚಾ ಘೋಷ್ (36) ತಂಡವನ್ನು ಗೆಲುವಿನ ದಡ ಸೇರಿಸಿದರು. ಇದರೊಂದಿಗೆ ಆರ್​ಸಿಬಿ ತಂಡ 7 ವಿಕೆಟ್​ಗಳ ಜಯ ಸಾಧಿಸಿ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ.

4ನೇ ವಿಕೆಟ್​ಗೆ ಜೊತೆಗೂಡಿದ ಪೆರ್ರಿ-ರಿಚಾ ಜೋಡಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ 74 ರನ್​ಗಳ ಜೊತೆಯಾಟವಾಡಿದರು. ಈ ಮೂಲಕ ಎಲ್ಲಿಸ್ ಪೆರ್ರಿ (40) ಹಾಗೂ ರಿಚಾ ಘೋಷ್ (36) ತಂಡವನ್ನು ಗೆಲುವಿನ ದಡ ಸೇರಿಸಿದರು. ಇದರೊಂದಿಗೆ ಆರ್​ಸಿಬಿ ತಂಡ 7 ವಿಕೆಟ್​ಗಳ ಜಯ ಸಾಧಿಸಿ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ.

4 / 5
ಲೀಗ್ ಹಂತದಲ್ಲಿ ಆಡಿರುವ 4 ಜಯ ಸಾಧಿಸಿದ್ದು, ಈ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದೆ. ಅತ್ತ ನಾಲ್ಕನೇ ಮತ್ತು ಐದನೇ ಸ್ಥಾನಗಳಲ್ಲಿದ್ದ ಯುಪಿ ವಾರಿಯರ್ಸ್, ಗುಜರಾತ್ ಜೈಂಟ್ಸ್ ತಂಡಗಳು ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹೊರಬಿದ್ದಿದೆ. ಇತ್ತ ಪ್ಲೇಆಫ್ ಪ್ರವೇಶಿಸಿರುವ ಆರ್​ಸಿಬಿ ತಂಡವು ಶುಕ್ರವಾರ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

ಲೀಗ್ ಹಂತದಲ್ಲಿ ಆಡಿರುವ 4 ಜಯ ಸಾಧಿಸಿದ್ದು, ಈ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದೆ. ಅತ್ತ ನಾಲ್ಕನೇ ಮತ್ತು ಐದನೇ ಸ್ಥಾನಗಳಲ್ಲಿದ್ದ ಯುಪಿ ವಾರಿಯರ್ಸ್, ಗುಜರಾತ್ ಜೈಂಟ್ಸ್ ತಂಡಗಳು ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹೊರಬಿದ್ದಿದೆ. ಇತ್ತ ಪ್ಲೇಆಫ್ ಪ್ರವೇಶಿಸಿರುವ ಆರ್​ಸಿಬಿ ತಂಡವು ಶುಕ್ರವಾರ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

5 / 5

Published On - 6:30 am, Wed, 13 March 24

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!