AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ಪ್ಲೇಆಫ್​​ಗೆ ಪ್ರವೇಶಿಸಿದ RCB

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪ್ಲೇಆಫ್​ಗೆ ಪ್ರವೇಶಿಸಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪ್ಲೇಆಫ್​​ಗೆ ಅರ್ಹತೆ ಪಡೆದುಕೊಂಡಿತ್ತು. ಅದರಂತೆ ಈ ಬಾರಿಯ WPL ನಲ್ಲಿ ಪ್ಲೇಆಫ್ ಆಡಲಿರುವ ಮೂರು ತಂಡಗಳು ನಿರ್ಧಾರವಾಗಿದೆ.

TV9 Web
| Edited By: |

Updated on:Mar 13, 2024 | 6:59 AM

Share
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) 19ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡವು ಪ್ಲೇಆಫ್​ಗೆ ಪ್ರವೇಶಿಸಿದೆ. ಮುಂಬೈ ಇಂಡಿಯನ್ಸ್ (MI) ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು.

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) 19ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡವು ಪ್ಲೇಆಫ್​ಗೆ ಪ್ರವೇಶಿಸಿದೆ. ಮುಂಬೈ ಇಂಡಿಯನ್ಸ್ (MI) ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ಎಲ್ಲಿಸ್ ಪೆರ್ರಿ ಅವರ ಮಾರಕ ದಾಳಿಗೆ ತತ್ತರಿಸಿತು. ಲಯ ಬದ್ಧ ಬೌಲಿಂಗ್ ದಾಳಿ ಸಂಘಟಿಸಿದ ಪೆರ್ರಿ ಕೇವಲ 4 ಓವರ್​ಗಳಲ್ಲಿ ಕೇವಲ 15 ರನ್ ನೀಡಿ 6 ವಿಕೆಟ್ ಕಬಳಿಸಿದರು. ಪರಿಣಾಮ 19 ಓವರ್​ಗಳಲ್ಲಿ 113 ರನ್​ಗಳಿಸಿ ಮುಂಬೈ ಇಂಡಿಯನ್ಸ್ ಆಲೌಟ್ ಆಯಿತು.

ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ಎಲ್ಲಿಸ್ ಪೆರ್ರಿ ಅವರ ಮಾರಕ ದಾಳಿಗೆ ತತ್ತರಿಸಿತು. ಲಯ ಬದ್ಧ ಬೌಲಿಂಗ್ ದಾಳಿ ಸಂಘಟಿಸಿದ ಪೆರ್ರಿ ಕೇವಲ 4 ಓವರ್​ಗಳಲ್ಲಿ ಕೇವಲ 15 ರನ್ ನೀಡಿ 6 ವಿಕೆಟ್ ಕಬಳಿಸಿದರು. ಪರಿಣಾಮ 19 ಓವರ್​ಗಳಲ್ಲಿ 113 ರನ್​ಗಳಿಸಿ ಮುಂಬೈ ಇಂಡಿಯನ್ಸ್ ಆಲೌಟ್ ಆಯಿತು.

2 / 5
114 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಸ್ಮೃತಿ ಮಂಧಾನ 13 ರನ್​ಗಳಿಸಿ ಔಟಾದರೆ, ಸೋಫಿ ಮೊಲಿನೆಕ್ಸ್ 9 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಸೋಫಿ ಡಿವೈಲ್ (4) ಕೂಡ ಬೌಲ್ಡ್ ಆದರು. ಈ ಹಂತದಲ್ಲಿ ಆರ್​ಸಿಬಿ ತಂಡಕ್ಕೆ ಆಸರೆಯಾಗಿದ್ದು ಎಲ್ಲಿಸ್ ಪೆರ್ರಿ ಮತ್ತು ರಿಚಾ ಘೋಷ್.

114 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಸ್ಮೃತಿ ಮಂಧಾನ 13 ರನ್​ಗಳಿಸಿ ಔಟಾದರೆ, ಸೋಫಿ ಮೊಲಿನೆಕ್ಸ್ 9 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಸೋಫಿ ಡಿವೈಲ್ (4) ಕೂಡ ಬೌಲ್ಡ್ ಆದರು. ಈ ಹಂತದಲ್ಲಿ ಆರ್​ಸಿಬಿ ತಂಡಕ್ಕೆ ಆಸರೆಯಾಗಿದ್ದು ಎಲ್ಲಿಸ್ ಪೆರ್ರಿ ಮತ್ತು ರಿಚಾ ಘೋಷ್.

3 / 5
4ನೇ ವಿಕೆಟ್​ಗೆ ಜೊತೆಗೂಡಿದ ಪೆರ್ರಿ-ರಿಚಾ ಜೋಡಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ 74 ರನ್​ಗಳ ಜೊತೆಯಾಟವಾಡಿದರು. ಈ ಮೂಲಕ ಎಲ್ಲಿಸ್ ಪೆರ್ರಿ (40) ಹಾಗೂ ರಿಚಾ ಘೋಷ್ (36) ತಂಡವನ್ನು ಗೆಲುವಿನ ದಡ ಸೇರಿಸಿದರು. ಇದರೊಂದಿಗೆ ಆರ್​ಸಿಬಿ ತಂಡ 7 ವಿಕೆಟ್​ಗಳ ಜಯ ಸಾಧಿಸಿ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ.

4ನೇ ವಿಕೆಟ್​ಗೆ ಜೊತೆಗೂಡಿದ ಪೆರ್ರಿ-ರಿಚಾ ಜೋಡಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ 74 ರನ್​ಗಳ ಜೊತೆಯಾಟವಾಡಿದರು. ಈ ಮೂಲಕ ಎಲ್ಲಿಸ್ ಪೆರ್ರಿ (40) ಹಾಗೂ ರಿಚಾ ಘೋಷ್ (36) ತಂಡವನ್ನು ಗೆಲುವಿನ ದಡ ಸೇರಿಸಿದರು. ಇದರೊಂದಿಗೆ ಆರ್​ಸಿಬಿ ತಂಡ 7 ವಿಕೆಟ್​ಗಳ ಜಯ ಸಾಧಿಸಿ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ.

4 / 5
ಲೀಗ್ ಹಂತದಲ್ಲಿ ಆಡಿರುವ 4 ಜಯ ಸಾಧಿಸಿದ್ದು, ಈ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದೆ. ಅತ್ತ ನಾಲ್ಕನೇ ಮತ್ತು ಐದನೇ ಸ್ಥಾನಗಳಲ್ಲಿದ್ದ ಯುಪಿ ವಾರಿಯರ್ಸ್, ಗುಜರಾತ್ ಜೈಂಟ್ಸ್ ತಂಡಗಳು ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹೊರಬಿದ್ದಿದೆ. ಇತ್ತ ಪ್ಲೇಆಫ್ ಪ್ರವೇಶಿಸಿರುವ ಆರ್​ಸಿಬಿ ತಂಡವು ಶುಕ್ರವಾರ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

ಲೀಗ್ ಹಂತದಲ್ಲಿ ಆಡಿರುವ 4 ಜಯ ಸಾಧಿಸಿದ್ದು, ಈ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದೆ. ಅತ್ತ ನಾಲ್ಕನೇ ಮತ್ತು ಐದನೇ ಸ್ಥಾನಗಳಲ್ಲಿದ್ದ ಯುಪಿ ವಾರಿಯರ್ಸ್, ಗುಜರಾತ್ ಜೈಂಟ್ಸ್ ತಂಡಗಳು ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹೊರಬಿದ್ದಿದೆ. ಇತ್ತ ಪ್ಲೇಆಫ್ ಪ್ರವೇಶಿಸಿರುವ ಆರ್​ಸಿಬಿ ತಂಡವು ಶುಕ್ರವಾರ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

5 / 5

Published On - 6:30 am, Wed, 13 March 24

Web contact
Web contact

TV9 Kannada

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?