AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB Retention List for IPL 2025: ಆರ್​ಸಿಬಿಯ ಅಚ್ಚರಿಯ ಆಯ್ಕೆ; ಕೇವಲ 3 ಆಟಗಾರರನ್ನು ಉಳಿಸಿಕೊಂಡ ಫ್ರಾಂಚೈಸಿ

Royal Challengers Bangalore Retention Players List for IPL 2025: ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಅವರುಗಳ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on:Oct 31, 2024 | 6:31 PM

Share
2025 ರ ಮೆಗಾ ಹರಾಜಿಗೂ ಮುನ್ನ ಬಿಸಿಸಿಐ ಎಲ್ಲಾ ಐಪಿಎಲ್ ತಂಡಗಳಿಗೆ ತಮ್ಮ ತಮ್ಮ ಧಾರಣ ಪಟ್ಟಿಯನ್ನು ಬಿಡುಗಡೆ ಮಾಡಲು ಅಕ್ಟೋಬರ್ 31 ರ ಗಡುವು ನೀಡಿತ್ತು. ಇದರ ಜೊತೆಗೆ ಪ್ರತಿ ತಂಡವು ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿತ್ತು. ಇದರಲ್ಲಿ ಒಂದು ತಂಡವು ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬೇಕು ಮತ್ತು ಎಷ್ಟು ಆಟಗಾರರ ಮೇಲೆ ರೈಟ್ ಟು ಮ್ಯಾಚ್ ಕಾರ್ಡ್ ಅನ್ನು ಬಳಸಬೇಕು ಎಂಬುದನ್ನು ನಿರ್ಧರಿಸಲು ಫ್ರಾಂಚೈಸಿಗೆ ಅವಕಾಶ ನೀಡಲಾಗಿತ್ತು.

2025 ರ ಮೆಗಾ ಹರಾಜಿಗೂ ಮುನ್ನ ಬಿಸಿಸಿಐ ಎಲ್ಲಾ ಐಪಿಎಲ್ ತಂಡಗಳಿಗೆ ತಮ್ಮ ತಮ್ಮ ಧಾರಣ ಪಟ್ಟಿಯನ್ನು ಬಿಡುಗಡೆ ಮಾಡಲು ಅಕ್ಟೋಬರ್ 31 ರ ಗಡುವು ನೀಡಿತ್ತು. ಇದರ ಜೊತೆಗೆ ಪ್ರತಿ ತಂಡವು ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿತ್ತು. ಇದರಲ್ಲಿ ಒಂದು ತಂಡವು ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬೇಕು ಮತ್ತು ಎಷ್ಟು ಆಟಗಾರರ ಮೇಲೆ ರೈಟ್ ಟು ಮ್ಯಾಚ್ ಕಾರ್ಡ್ ಅನ್ನು ಬಳಸಬೇಕು ಎಂಬುದನ್ನು ನಿರ್ಧರಿಸಲು ಫ್ರಾಂಚೈಸಿಗೆ ಅವಕಾಶ ನೀಡಲಾಗಿತ್ತು.

1 / 6
ಆ ಪ್ರಕಾರ ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಅವರುಗಳ ವಿವರ ಇಲ್ಲಿದೆ.

ಆ ಪ್ರಕಾರ ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಅವರುಗಳ ವಿವರ ಇಲ್ಲಿದೆ.

2 / 6
ಆರ್​ಸಿಬಿ ತನ್ನ ಮೊದಲ ಆಯ್ಕೆಯಾಗಿ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಉಳಿಸಿಕೊಂಡಿದೆ. ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಆರ್​ಸಿಬಿ ಬರೋಬ್ಬರಿ 21 ಕೋಟಿ ರೂ. ನೀಡಿದೆ. ಈ ಮೊದಲೇ ವರದಿಯಾಗಿದ್ದಂತೆ ಕೊಹ್ಲಿ ತಂಡದಲ್ಲೇ ಉಳಿಯುವುದು ಖಚಿತವಾಗಿತ್ತು. ಆದರೆ ಅವರಿಗೆ ಇಷ್ಟು ಹಣ ವ್ಯಯಿಸಿರುವುದು ಅಚ್ಚರಿಯ ಸಂಗತಿಯಾಗಿದೆ.

ಆರ್​ಸಿಬಿ ತನ್ನ ಮೊದಲ ಆಯ್ಕೆಯಾಗಿ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಉಳಿಸಿಕೊಂಡಿದೆ. ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಆರ್​ಸಿಬಿ ಬರೋಬ್ಬರಿ 21 ಕೋಟಿ ರೂ. ನೀಡಿದೆ. ಈ ಮೊದಲೇ ವರದಿಯಾಗಿದ್ದಂತೆ ಕೊಹ್ಲಿ ತಂಡದಲ್ಲೇ ಉಳಿಯುವುದು ಖಚಿತವಾಗಿತ್ತು. ಆದರೆ ಅವರಿಗೆ ಇಷ್ಟು ಹಣ ವ್ಯಯಿಸಿರುವುದು ಅಚ್ಚರಿಯ ಸಂಗತಿಯಾಗಿದೆ.

3 / 6
ಆರ್​ಸಿಬಿ ತನ್ನ ಎರಡನೇ ಆಯ್ಕೆಯಾಗಿ ಭಾರತದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ರಜತ್ ಪಾಟಿದರ್ ಅವರನ್ನು ತಂಡದಲ್ಲಿ ಉಳಿಸಿಕೊಂಡಿದ್ದು, ಅವರಿಗೆ 11 ಕೋಟಿ ರೂಗಳನ್ನು ನೀಡಲು ಮುಂದಾಗಿದೆ. ರಜತ್ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿದ್ದು, ತಮ್ಮ ಸ್ಫೋಟಕ ಬ್ಯಾಟಿಂಗ್​ನಿಂದಲೇ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರು. ಇದಲ್ಲದೆ ರಜತ್ ಐಪಿಎಲ್​ನಲ್ಲಿ ಆರ್​ಸಿಬಿ ಪರ ಸ್ಫೋಟಕ ಶತಕವನ್ನು ಸಿಡಿಸಿದ್ದರು.

ಆರ್​ಸಿಬಿ ತನ್ನ ಎರಡನೇ ಆಯ್ಕೆಯಾಗಿ ಭಾರತದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ರಜತ್ ಪಾಟಿದರ್ ಅವರನ್ನು ತಂಡದಲ್ಲಿ ಉಳಿಸಿಕೊಂಡಿದ್ದು, ಅವರಿಗೆ 11 ಕೋಟಿ ರೂಗಳನ್ನು ನೀಡಲು ಮುಂದಾಗಿದೆ. ರಜತ್ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿದ್ದು, ತಮ್ಮ ಸ್ಫೋಟಕ ಬ್ಯಾಟಿಂಗ್​ನಿಂದಲೇ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರು. ಇದಲ್ಲದೆ ರಜತ್ ಐಪಿಎಲ್​ನಲ್ಲಿ ಆರ್​ಸಿಬಿ ಪರ ಸ್ಫೋಟಕ ಶತಕವನ್ನು ಸಿಡಿಸಿದ್ದರು.

4 / 6
ಮೂರನೇ ಆಯ್ಕೆಯಾಗಿ ಆರ್​ಸಿಬಿ ಯುವ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಉಳಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದ ಯಶ್ ದಯಾಳ್ ಮುಂದಿನ ಆವೃತ್ತಿಯಲ್ಲಿ ಆಡಲು 5 ಕೋಟಿ ರೂ. ವೇತನ ಪಡೆಯಲ್ಲಿದ್ದಾರೆ.

ಮೂರನೇ ಆಯ್ಕೆಯಾಗಿ ಆರ್​ಸಿಬಿ ಯುವ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಉಳಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದ ಯಶ್ ದಯಾಳ್ ಮುಂದಿನ ಆವೃತ್ತಿಯಲ್ಲಿ ಆಡಲು 5 ಕೋಟಿ ರೂ. ವೇತನ ಪಡೆಯಲ್ಲಿದ್ದಾರೆ.

5 / 6
ಪ್ರಸ್ತುತ ಆರ್​ಸಿಬಿ ಕೇವಲ 3 ಆಟಗಾರರನ್ನು ತಂಡದಲ್ಲಿ ಉಳಸಿಕೊಂಡಿರುವ ಕಾರಣ ಮೂವರು ಆಟಗಾರರ ಮೇಲೆ ಆರ್​ಟಿಎಮ್ ಕಾರ್ಡ್​ ಬಳಸುವ ಅವಕಾಶ ಹೊಂದಿದೆ. ಈ ನಿಯಮದಡಿಯಲ್ಲಿ ಆರ್​ಸಿಬಿ, ಮೊಹಮ್ಮದ್ ಸಿರಾಜ್, ವಿಲ್ ಜಾಕ್ಸ್ ಹಾಗೂ ಫಾಫ್ ಡುಪ್ಲೆಸಿಸ್ ಅವರನ್ನು ಖರೀದಿಸುವ ಸಾಧ್ಯತೆಗಳಿವೆ.

ಪ್ರಸ್ತುತ ಆರ್​ಸಿಬಿ ಕೇವಲ 3 ಆಟಗಾರರನ್ನು ತಂಡದಲ್ಲಿ ಉಳಸಿಕೊಂಡಿರುವ ಕಾರಣ ಮೂವರು ಆಟಗಾರರ ಮೇಲೆ ಆರ್​ಟಿಎಮ್ ಕಾರ್ಡ್​ ಬಳಸುವ ಅವಕಾಶ ಹೊಂದಿದೆ. ಈ ನಿಯಮದಡಿಯಲ್ಲಿ ಆರ್​ಸಿಬಿ, ಮೊಹಮ್ಮದ್ ಸಿರಾಜ್, ವಿಲ್ ಜಾಕ್ಸ್ ಹಾಗೂ ಫಾಫ್ ಡುಪ್ಲೆಸಿಸ್ ಅವರನ್ನು ಖರೀದಿಸುವ ಸಾಧ್ಯತೆಗಳಿವೆ.

6 / 6

Published On - 5:36 pm, Thu, 31 October 24

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?