AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB Retention List for IPL 2025: ಆರ್​ಸಿಬಿಯ ಅಚ್ಚರಿಯ ಆಯ್ಕೆ; ಕೇವಲ 3 ಆಟಗಾರರನ್ನು ಉಳಿಸಿಕೊಂಡ ಫ್ರಾಂಚೈಸಿ

Royal Challengers Bangalore Retention Players List for IPL 2025: ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಅವರುಗಳ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on:Oct 31, 2024 | 6:31 PM

Share
2025 ರ ಮೆಗಾ ಹರಾಜಿಗೂ ಮುನ್ನ ಬಿಸಿಸಿಐ ಎಲ್ಲಾ ಐಪಿಎಲ್ ತಂಡಗಳಿಗೆ ತಮ್ಮ ತಮ್ಮ ಧಾರಣ ಪಟ್ಟಿಯನ್ನು ಬಿಡುಗಡೆ ಮಾಡಲು ಅಕ್ಟೋಬರ್ 31 ರ ಗಡುವು ನೀಡಿತ್ತು. ಇದರ ಜೊತೆಗೆ ಪ್ರತಿ ತಂಡವು ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿತ್ತು. ಇದರಲ್ಲಿ ಒಂದು ತಂಡವು ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬೇಕು ಮತ್ತು ಎಷ್ಟು ಆಟಗಾರರ ಮೇಲೆ ರೈಟ್ ಟು ಮ್ಯಾಚ್ ಕಾರ್ಡ್ ಅನ್ನು ಬಳಸಬೇಕು ಎಂಬುದನ್ನು ನಿರ್ಧರಿಸಲು ಫ್ರಾಂಚೈಸಿಗೆ ಅವಕಾಶ ನೀಡಲಾಗಿತ್ತು.

2025 ರ ಮೆಗಾ ಹರಾಜಿಗೂ ಮುನ್ನ ಬಿಸಿಸಿಐ ಎಲ್ಲಾ ಐಪಿಎಲ್ ತಂಡಗಳಿಗೆ ತಮ್ಮ ತಮ್ಮ ಧಾರಣ ಪಟ್ಟಿಯನ್ನು ಬಿಡುಗಡೆ ಮಾಡಲು ಅಕ್ಟೋಬರ್ 31 ರ ಗಡುವು ನೀಡಿತ್ತು. ಇದರ ಜೊತೆಗೆ ಪ್ರತಿ ತಂಡವು ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿತ್ತು. ಇದರಲ್ಲಿ ಒಂದು ತಂಡವು ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬೇಕು ಮತ್ತು ಎಷ್ಟು ಆಟಗಾರರ ಮೇಲೆ ರೈಟ್ ಟು ಮ್ಯಾಚ್ ಕಾರ್ಡ್ ಅನ್ನು ಬಳಸಬೇಕು ಎಂಬುದನ್ನು ನಿರ್ಧರಿಸಲು ಫ್ರಾಂಚೈಸಿಗೆ ಅವಕಾಶ ನೀಡಲಾಗಿತ್ತು.

1 / 6
ಆ ಪ್ರಕಾರ ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಅವರುಗಳ ವಿವರ ಇಲ್ಲಿದೆ.

ಆ ಪ್ರಕಾರ ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಅವರುಗಳ ವಿವರ ಇಲ್ಲಿದೆ.

2 / 6
ಆರ್​ಸಿಬಿ ತನ್ನ ಮೊದಲ ಆಯ್ಕೆಯಾಗಿ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಉಳಿಸಿಕೊಂಡಿದೆ. ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಆರ್​ಸಿಬಿ ಬರೋಬ್ಬರಿ 21 ಕೋಟಿ ರೂ. ನೀಡಿದೆ. ಈ ಮೊದಲೇ ವರದಿಯಾಗಿದ್ದಂತೆ ಕೊಹ್ಲಿ ತಂಡದಲ್ಲೇ ಉಳಿಯುವುದು ಖಚಿತವಾಗಿತ್ತು. ಆದರೆ ಅವರಿಗೆ ಇಷ್ಟು ಹಣ ವ್ಯಯಿಸಿರುವುದು ಅಚ್ಚರಿಯ ಸಂಗತಿಯಾಗಿದೆ.

ಆರ್​ಸಿಬಿ ತನ್ನ ಮೊದಲ ಆಯ್ಕೆಯಾಗಿ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಉಳಿಸಿಕೊಂಡಿದೆ. ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಆರ್​ಸಿಬಿ ಬರೋಬ್ಬರಿ 21 ಕೋಟಿ ರೂ. ನೀಡಿದೆ. ಈ ಮೊದಲೇ ವರದಿಯಾಗಿದ್ದಂತೆ ಕೊಹ್ಲಿ ತಂಡದಲ್ಲೇ ಉಳಿಯುವುದು ಖಚಿತವಾಗಿತ್ತು. ಆದರೆ ಅವರಿಗೆ ಇಷ್ಟು ಹಣ ವ್ಯಯಿಸಿರುವುದು ಅಚ್ಚರಿಯ ಸಂಗತಿಯಾಗಿದೆ.

3 / 6
ಆರ್​ಸಿಬಿ ತನ್ನ ಎರಡನೇ ಆಯ್ಕೆಯಾಗಿ ಭಾರತದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ರಜತ್ ಪಾಟಿದರ್ ಅವರನ್ನು ತಂಡದಲ್ಲಿ ಉಳಿಸಿಕೊಂಡಿದ್ದು, ಅವರಿಗೆ 11 ಕೋಟಿ ರೂಗಳನ್ನು ನೀಡಲು ಮುಂದಾಗಿದೆ. ರಜತ್ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿದ್ದು, ತಮ್ಮ ಸ್ಫೋಟಕ ಬ್ಯಾಟಿಂಗ್​ನಿಂದಲೇ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರು. ಇದಲ್ಲದೆ ರಜತ್ ಐಪಿಎಲ್​ನಲ್ಲಿ ಆರ್​ಸಿಬಿ ಪರ ಸ್ಫೋಟಕ ಶತಕವನ್ನು ಸಿಡಿಸಿದ್ದರು.

ಆರ್​ಸಿಬಿ ತನ್ನ ಎರಡನೇ ಆಯ್ಕೆಯಾಗಿ ಭಾರತದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ರಜತ್ ಪಾಟಿದರ್ ಅವರನ್ನು ತಂಡದಲ್ಲಿ ಉಳಿಸಿಕೊಂಡಿದ್ದು, ಅವರಿಗೆ 11 ಕೋಟಿ ರೂಗಳನ್ನು ನೀಡಲು ಮುಂದಾಗಿದೆ. ರಜತ್ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿದ್ದು, ತಮ್ಮ ಸ್ಫೋಟಕ ಬ್ಯಾಟಿಂಗ್​ನಿಂದಲೇ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರು. ಇದಲ್ಲದೆ ರಜತ್ ಐಪಿಎಲ್​ನಲ್ಲಿ ಆರ್​ಸಿಬಿ ಪರ ಸ್ಫೋಟಕ ಶತಕವನ್ನು ಸಿಡಿಸಿದ್ದರು.

4 / 6
ಮೂರನೇ ಆಯ್ಕೆಯಾಗಿ ಆರ್​ಸಿಬಿ ಯುವ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಉಳಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದ ಯಶ್ ದಯಾಳ್ ಮುಂದಿನ ಆವೃತ್ತಿಯಲ್ಲಿ ಆಡಲು 5 ಕೋಟಿ ರೂ. ವೇತನ ಪಡೆಯಲ್ಲಿದ್ದಾರೆ.

ಮೂರನೇ ಆಯ್ಕೆಯಾಗಿ ಆರ್​ಸಿಬಿ ಯುವ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಉಳಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದ ಯಶ್ ದಯಾಳ್ ಮುಂದಿನ ಆವೃತ್ತಿಯಲ್ಲಿ ಆಡಲು 5 ಕೋಟಿ ರೂ. ವೇತನ ಪಡೆಯಲ್ಲಿದ್ದಾರೆ.

5 / 6
ಪ್ರಸ್ತುತ ಆರ್​ಸಿಬಿ ಕೇವಲ 3 ಆಟಗಾರರನ್ನು ತಂಡದಲ್ಲಿ ಉಳಸಿಕೊಂಡಿರುವ ಕಾರಣ ಮೂವರು ಆಟಗಾರರ ಮೇಲೆ ಆರ್​ಟಿಎಮ್ ಕಾರ್ಡ್​ ಬಳಸುವ ಅವಕಾಶ ಹೊಂದಿದೆ. ಈ ನಿಯಮದಡಿಯಲ್ಲಿ ಆರ್​ಸಿಬಿ, ಮೊಹಮ್ಮದ್ ಸಿರಾಜ್, ವಿಲ್ ಜಾಕ್ಸ್ ಹಾಗೂ ಫಾಫ್ ಡುಪ್ಲೆಸಿಸ್ ಅವರನ್ನು ಖರೀದಿಸುವ ಸಾಧ್ಯತೆಗಳಿವೆ.

ಪ್ರಸ್ತುತ ಆರ್​ಸಿಬಿ ಕೇವಲ 3 ಆಟಗಾರರನ್ನು ತಂಡದಲ್ಲಿ ಉಳಸಿಕೊಂಡಿರುವ ಕಾರಣ ಮೂವರು ಆಟಗಾರರ ಮೇಲೆ ಆರ್​ಟಿಎಮ್ ಕಾರ್ಡ್​ ಬಳಸುವ ಅವಕಾಶ ಹೊಂದಿದೆ. ಈ ನಿಯಮದಡಿಯಲ್ಲಿ ಆರ್​ಸಿಬಿ, ಮೊಹಮ್ಮದ್ ಸಿರಾಜ್, ವಿಲ್ ಜಾಕ್ಸ್ ಹಾಗೂ ಫಾಫ್ ಡುಪ್ಲೆಸಿಸ್ ಅವರನ್ನು ಖರೀದಿಸುವ ಸಾಧ್ಯತೆಗಳಿವೆ.

6 / 6

Published On - 5:36 pm, Thu, 31 October 24

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ