AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs GT Pitch Report: ಆರ್​ಸಿಬಿ-ಜಿಟಿ ರಣರೋಚಕ ಕದನಕ್ಕೆ ಚಿನ್ನಸ್ವಾಮಿ ರೆಡಿ: ಪಿಚ್ ಹೇಗಿದೆ ನೋಡಿ

RCB vs GT, IPL 2023: ಸಾಕಷ್ಟು ಕುತೂಹಲ ಕೆರಳಿಸಿರುವ ಆರ್​ಸಿಬಿ-ಜಿಟಿ ಪಂದ್ಯಕ್ಕೆ ಅಭಿಮಾನಿಗಳು ಕಾದುಕುಳಿತಿದ್ದಾರೆ. ಆರ್​ಸಿಬಿ-ಜಿಟಿ ಪಂದ್ಯದ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್ ಆಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್‌ ಬಗ್ಗೆ ನೋಡುವುದಾದರೆ ಇದು ಸಂಪೂರ್ಣ ಬ್ಯಾಟಿಂಗ್ ಪಿಚ್ ಎನ್ನಬಹುದು.

Vinay Bhat
|

Updated on: May 21, 2023 | 9:28 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇಂದು ಎರಡು ರಣರೋಚಕ ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ಮುಂಬೈ-ಹೈದರಾಬಾದ್ ಮುಖಾಮುಖಿ ಆದರೆ, ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ ಅನ್ನು ಎದುರಿಸಲಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇಂದು ಎರಡು ರಣರೋಚಕ ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ಮುಂಬೈ-ಹೈದರಾಬಾದ್ ಮುಖಾಮುಖಿ ಆದರೆ, ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ ಅನ್ನು ಎದುರಿಸಲಿದೆ.

1 / 7
ಮಧ್ಯಾಹ್ನ ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ಹೈದರಾಬಾದ್ ಪಂದ್ಯದಲ್ಲಿ ಮುಂಬೈ ಗೆದ್ದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಬಹುದು. ಅಂತೆಯೆ 2ನೇ ಪಂದ್ಯದಲ್ಲಿ ಆರ್​ಸಿಬಿ ಜಯ ಸಾಧಿಸಿದರೆ ಮುಂಬೈ ತಂಡವನ್ನು ಹಿಂದಿಕ್ಕಿ ಆರ್​ಸಿಬಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆಯಬಹುದು. ಹೀಗಾದರೆ ಆರ್​ಸಿಬಿ ಪ್ಲೇ ಆಫ್ ಪ್ರವೇಶಿಸಲಿದೆ.

ಮಧ್ಯಾಹ್ನ ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ಹೈದರಾಬಾದ್ ಪಂದ್ಯದಲ್ಲಿ ಮುಂಬೈ ಗೆದ್ದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಬಹುದು. ಅಂತೆಯೆ 2ನೇ ಪಂದ್ಯದಲ್ಲಿ ಆರ್​ಸಿಬಿ ಜಯ ಸಾಧಿಸಿದರೆ ಮುಂಬೈ ತಂಡವನ್ನು ಹಿಂದಿಕ್ಕಿ ಆರ್​ಸಿಬಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆಯಬಹುದು. ಹೀಗಾದರೆ ಆರ್​ಸಿಬಿ ಪ್ಲೇ ಆಫ್ ಪ್ರವೇಶಿಸಲಿದೆ.

2 / 7
ಹೀಗೆ ಸಾಕಷ್ಟು ಕುತೂಹಲ ಕೆರಳಿಸಿರುವ ಈ ಪಂದ್ಯಕ್ಕೆ ಅಭಿಮಾನಿಗಳು ಕಾದುಕುಳಿತಿದ್ದಾರೆ. ಆರ್​ಸಿಬಿ-ಜಿಟಿ ಪಂದ್ಯದ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್ ಆಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್‌ ಬಗ್ಗೆ ನೋಡುವುದಾದರೆ ಇದು ಸಂಪೂರ್ಣ ಬ್ಯಾಟಿಂಗ್ ಪಿಚ್ ಎನ್ನಬಹುದು.

ಹೀಗೆ ಸಾಕಷ್ಟು ಕುತೂಹಲ ಕೆರಳಿಸಿರುವ ಈ ಪಂದ್ಯಕ್ಕೆ ಅಭಿಮಾನಿಗಳು ಕಾದುಕುಳಿತಿದ್ದಾರೆ. ಆರ್​ಸಿಬಿ-ಜಿಟಿ ಪಂದ್ಯದ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್ ಆಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್‌ ಬಗ್ಗೆ ನೋಡುವುದಾದರೆ ಇದು ಸಂಪೂರ್ಣ ಬ್ಯಾಟಿಂಗ್ ಪಿಚ್ ಎನ್ನಬಹುದು.

3 / 7
ಚಿನ್ನಸ್ವಾಮಿ ಪಿಚ್ ಟ್ರ್ಯಾಕ್‌ ಅತ್ಯುತ್ತಮವಾಗಿದೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟಿಂಗ್​ಗೆ ಹೇಳಿ ಮಾಡಿಸಿದಂತಿದೆ. ಹೀಗಾಗಿ ಇಂದು ಹೈ ಸ್ಕೋರ್​ ಪಂದ್ಯ ಆಗುವುದು ಖಚಿತ. ಅಲ್ಲದೆ ಇಲ್ಲಿ ಬೌಂಡರಿ ಗೆರೆ ಕೂಡ ಅಂತ್ಯಂತ ಸಮೀಪವಿರುವ ಕಾರಣ ಫೋರ್-ಸಿಕ್ಸರ್​ಗಳ ಮಳೆ ಸುರಿಯಲಿದೆ.

ಚಿನ್ನಸ್ವಾಮಿ ಪಿಚ್ ಟ್ರ್ಯಾಕ್‌ ಅತ್ಯುತ್ತಮವಾಗಿದೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟಿಂಗ್​ಗೆ ಹೇಳಿ ಮಾಡಿಸಿದಂತಿದೆ. ಹೀಗಾಗಿ ಇಂದು ಹೈ ಸ್ಕೋರ್​ ಪಂದ್ಯ ಆಗುವುದು ಖಚಿತ. ಅಲ್ಲದೆ ಇಲ್ಲಿ ಬೌಂಡರಿ ಗೆರೆ ಕೂಡ ಅಂತ್ಯಂತ ಸಮೀಪವಿರುವ ಕಾರಣ ಫೋರ್-ಸಿಕ್ಸರ್​ಗಳ ಮಳೆ ಸುರಿಯಲಿದೆ.

4 / 7
ಬೌಲರ್​ಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶಕ್ತಿ ಮೀರಿ ಪ್ರಯತ್ನ ತೋರಬೇಕು. ಎಷ್ಟೇ ದೊಡ್ಡ ಮೊತ್ತವನ್ನು ಬಾರಿಸಿದರೂ ಇಲ್ಲಿ ಚೇಸ್​ ಮಾಡಿ ಗೆಲುವು ಸಾಧಿಸಿಬಹುದು. ಹೀಗಾಗಿ ಟಾಸ್​ ಗೆದ್ದ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡುವುದು ಉತ್ತಮ.

ಬೌಲರ್​ಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶಕ್ತಿ ಮೀರಿ ಪ್ರಯತ್ನ ತೋರಬೇಕು. ಎಷ್ಟೇ ದೊಡ್ಡ ಮೊತ್ತವನ್ನು ಬಾರಿಸಿದರೂ ಇಲ್ಲಿ ಚೇಸ್​ ಮಾಡಿ ಗೆಲುವು ಸಾಧಿಸಿಬಹುದು. ಹೀಗಾಗಿ ಟಾಸ್​ ಗೆದ್ದ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡುವುದು ಉತ್ತಮ.

5 / 7
ಇನ್ನು ಈ ಪಂದ್ಯಕ್ಕೆ ವರುಣ ಅಡಚಣೆಯನ್ನುಂಟು ಮಾಡಲಿದೆ. ಸಂಜೆಯಿಂದ ಮಧ್ಯರಾತ್ರಿಯವರೆಗೂ ಮೋಡ ಕವಿದ ವಾತವರಣ ಇರಲಿದ್ದು, ಸಂಜೆ 5 ಗಂಟೆ, 7 ಗಂಟೆ ಹಾಗೂ 9 ಗಂಟೆಯ ವೇಳೆ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಹೀಗಾಗಿಯೇ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ನಡೆಯಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇನ್ನು ಈ ಪಂದ್ಯಕ್ಕೆ ವರುಣ ಅಡಚಣೆಯನ್ನುಂಟು ಮಾಡಲಿದೆ. ಸಂಜೆಯಿಂದ ಮಧ್ಯರಾತ್ರಿಯವರೆಗೂ ಮೋಡ ಕವಿದ ವಾತವರಣ ಇರಲಿದ್ದು, ಸಂಜೆ 5 ಗಂಟೆ, 7 ಗಂಟೆ ಹಾಗೂ 9 ಗಂಟೆಯ ವೇಳೆ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಹೀಗಾಗಿಯೇ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ನಡೆಯಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

6 / 7
ಆರ್​ಸಿಬಿ ಮತ್ತು ಜಿಟಿ ನಡುವಿನ ಪಂದ್ಯವು ಸಂಜೆ 7.30 ಕ್ಕೆ ಪ್ರಾರಂಭವಾಗುತ್ತದೆ. ಟಾಸ್ 7 ಗಂಟೆಗೆ ನಡೆಯಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ನೋಡಬಹುದು. ವೀಕ್ಷಕರು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಆರ್​ಸಿಬಿ ಮತ್ತು ಜಿಟಿ ನಡುವಿನ ಪಂದ್ಯವು ಸಂಜೆ 7.30 ಕ್ಕೆ ಪ್ರಾರಂಭವಾಗುತ್ತದೆ. ಟಾಸ್ 7 ಗಂಟೆಗೆ ನಡೆಯಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ನೋಡಬಹುದು. ವೀಕ್ಷಕರು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

7 / 7
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ