RCB vs KKR: ಐಪಿಎಲ್​ನಲ್ಲಿಂದು ಆರ್​ಸಿಬಿ ಪಂದ್ಯ: ಕೊನೆಗೂ ಕಣಕ್ಕಿಳಿಯಲು ಸಜ್ಜಾದ ಈ ಸ್ಟಾರ್ ಆಟಗಾರ?

RCB Playing XI vs KKR: ಐಪಿಎಲ್ 2024 ರಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಬೌಲಿಂಗ್​ನಲ್ಲಿ ಸತತವಾಗಿ ವೈಫಲ್ಯ ಅನುಭವಿಸಿರುವ ಆರ್​ಸಿಬಿ ಇಂದಿನ ಪಂದ್ಯಕ್ಕೆ ಕೆಲ ಬದಲಾವಣೆ ಮಾಡುವ ಸಂಭವವಿದೆ. ಇಲ್ಲಿದೆ ನೋಡಿ ಆರ್​ಸಿಬಿಯ ಸಂಭಾವ್ಯ ಪ್ಲೇಯಿಂಗ್ ಇಲೆವೆನ್.

|

Updated on:Mar 29, 2024 | 7:04 AM

ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯಲ್ಲಿಂದು (ಮಾರ್ಚ್ 29) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ. ಐಪಿಎಲ್ 2024 ರಲ್ಲಿ ಇದು ಆರ್‌ಸಿಬಿಯ ಮೂರನೇ ಪಂದ್ಯವಾಗಿದ್ದು, ಕೆಕೆಆರ್ ತನ್ನ ಎರಡನೇ ಪಂದ್ಯವನ್ನು ಆಡಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯಲ್ಲಿಂದು (ಮಾರ್ಚ್ 29) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ. ಐಪಿಎಲ್ 2024 ರಲ್ಲಿ ಇದು ಆರ್‌ಸಿಬಿಯ ಮೂರನೇ ಪಂದ್ಯವಾಗಿದ್ದು, ಕೆಕೆಆರ್ ತನ್ನ ಎರಡನೇ ಪಂದ್ಯವನ್ನು ಆಡಲಿದೆ.

1 / 7
ಆಡಿರುವ ಎರಡು ಪಂದ್ಯಗಳಿಂದ ಎರಡು ಅಂಕ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಕೋಲ್ಕತ್ತಾ ಒಂದು ಪಂದ್ಯದಿಂದ 2 ಅಂಕಗಳನ್ನು ಹೊಂದಿ ನಾಲ್ಕನೇ ಸ್ಥಾನದಲ್ಲಿದೆ. ಪಾಯಿಂಟ್ಸ್ ಟೇಬಲ್​ನಲ್ಲಿ ಮೇಲೇಳಲು ಆರ್​ಸಿಬಿ ಈ ಪಂದ್ಯ ಗೆಲ್ಲಲೇ ಬೇಕಿದೆ.

ಆಡಿರುವ ಎರಡು ಪಂದ್ಯಗಳಿಂದ ಎರಡು ಅಂಕ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಕೋಲ್ಕತ್ತಾ ಒಂದು ಪಂದ್ಯದಿಂದ 2 ಅಂಕಗಳನ್ನು ಹೊಂದಿ ನಾಲ್ಕನೇ ಸ್ಥಾನದಲ್ಲಿದೆ. ಪಾಯಿಂಟ್ಸ್ ಟೇಬಲ್​ನಲ್ಲಿ ಮೇಲೇಳಲು ಆರ್​ಸಿಬಿ ಈ ಪಂದ್ಯ ಗೆಲ್ಲಲೇ ಬೇಕಿದೆ.

2 / 7
ಮಾರ್ಚ್ 22 ರಂದು ನಡೆದ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ ಆರ್​ಸಿಬಿ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿತು. ಬಳಿಕ ಮಾರ್ಚ್ 25 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಕೊನೆಯ ಓವರ್​ನಲ್ಲಿ ಗೆದ್ದು ಜಯದ ಖಾತೆ ತೆರೆದಿದೆ. ಕೆಕೆಆರ್ ಸಹ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಕೊನೆಯ ಓವರ್‌ನಲ್ಲಿ ಗೆದ್ದು ಬೀಗಿತ್ತು. ಉಭಯ ತಂಡಗಳಿಗೆ ಗೆಲುವು ಮುಖ್ಯವಾಗಿರುವ ಕಾರಣ ಬೆಂಗಳೂರಿನಲ್ಲಿ ಹೈವೋಲ್ಟೇಜ್ ಮ್ಯಾಚ್ ಆಗುವುದು ಖಚಿತ.

ಮಾರ್ಚ್ 22 ರಂದು ನಡೆದ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ ಆರ್​ಸಿಬಿ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿತು. ಬಳಿಕ ಮಾರ್ಚ್ 25 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಕೊನೆಯ ಓವರ್​ನಲ್ಲಿ ಗೆದ್ದು ಜಯದ ಖಾತೆ ತೆರೆದಿದೆ. ಕೆಕೆಆರ್ ಸಹ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಕೊನೆಯ ಓವರ್‌ನಲ್ಲಿ ಗೆದ್ದು ಬೀಗಿತ್ತು. ಉಭಯ ತಂಡಗಳಿಗೆ ಗೆಲುವು ಮುಖ್ಯವಾಗಿರುವ ಕಾರಣ ಬೆಂಗಳೂರಿನಲ್ಲಿ ಹೈವೋಲ್ಟೇಜ್ ಮ್ಯಾಚ್ ಆಗುವುದು ಖಚಿತ.

3 / 7
ಸಿಎಸ್​ಕೆ ಮತ್ತು ಪಂಜಾಬ್ ವಿರುದ್ಧ ಆರ್​ಸಿಬಿ ನೀಡಿದ ಪ್ರದರ್ಶನ ಬೌಲಿಂಗ್​ನಲ್ಲಿ ತೀರಾ ಕಳಪೆಯಾಗಿತ್ತು. ಹೀಗಾಗಿ ಇಂದಿನ ಪಂದ್ಯಕ್ಕೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಆಗುವುದು ಖಚಿತ. ಬೆಂಗಳೂರಿನಲ್ಲಿರುವ ಬ್ಯಾಟಿಂಗ್ ಸ್ನೇಹಿ ಪಿಚ್‌ಗಳ ಸ್ವರೂಪವನ್ನು ಗಮನಿಸಿದರೆ, ಆರ್​ಸಿಬಿ ತಂಡಕ್ಕೆ ಬಲಿಷ್ಠ ಅನುಭವಿ ಬೌಲರ್ ಬೇಕೇಬೇಕು.

ಸಿಎಸ್​ಕೆ ಮತ್ತು ಪಂಜಾಬ್ ವಿರುದ್ಧ ಆರ್​ಸಿಬಿ ನೀಡಿದ ಪ್ರದರ್ಶನ ಬೌಲಿಂಗ್​ನಲ್ಲಿ ತೀರಾ ಕಳಪೆಯಾಗಿತ್ತು. ಹೀಗಾಗಿ ಇಂದಿನ ಪಂದ್ಯಕ್ಕೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಆಗುವುದು ಖಚಿತ. ಬೆಂಗಳೂರಿನಲ್ಲಿರುವ ಬ್ಯಾಟಿಂಗ್ ಸ್ನೇಹಿ ಪಿಚ್‌ಗಳ ಸ್ವರೂಪವನ್ನು ಗಮನಿಸಿದರೆ, ಆರ್​ಸಿಬಿ ತಂಡಕ್ಕೆ ಬಲಿಷ್ಠ ಅನುಭವಿ ಬೌಲರ್ ಬೇಕೇಬೇಕು.

4 / 7
ಕಳೆದ ಎರಡೂ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಸೀಮರ್ ಅಲ್ಜಾರಿ ಜೋಸೆಫ್ ದುಬಾರಿಯಾದರು. ಜೋಸೆಫ್‌ರ ನೀರಸ ಪ್ರದರ್ಶನದಿಂದ ಇವರು ಪ್ಲೇಯಿಂಗ್ XI ನಿಂದ ಔಟ್ ಆಗುವ ಸಾಧ್ಯತೆ ಇದೆ. ಇವರ ಸ್ಥಾನಕ್ಕೆ ಸ್ಟಾರ್ ವೇಗಿ ಲಾಕಿ ಫರ್ಗುಸನ್ ಬರುವುದು ಬಹುತೇಕ ಖಚಿತ. ಅವಕಾಶಕ್ಕಾಗಿ ಕಾಯುತ್ತಿರುವ ಇವರು ಇಂದು ಕಣಕ್ಕಿಳಿಯಬಹುದು.

ಕಳೆದ ಎರಡೂ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಸೀಮರ್ ಅಲ್ಜಾರಿ ಜೋಸೆಫ್ ದುಬಾರಿಯಾದರು. ಜೋಸೆಫ್‌ರ ನೀರಸ ಪ್ರದರ್ಶನದಿಂದ ಇವರು ಪ್ಲೇಯಿಂಗ್ XI ನಿಂದ ಔಟ್ ಆಗುವ ಸಾಧ್ಯತೆ ಇದೆ. ಇವರ ಸ್ಥಾನಕ್ಕೆ ಸ್ಟಾರ್ ವೇಗಿ ಲಾಕಿ ಫರ್ಗುಸನ್ ಬರುವುದು ಬಹುತೇಕ ಖಚಿತ. ಅವಕಾಶಕ್ಕಾಗಿ ಕಾಯುತ್ತಿರುವ ಇವರು ಇಂದು ಕಣಕ್ಕಿಳಿಯಬಹುದು.

5 / 7
ಹಾಗೆಯೆ ಆರ್​ಸಿಬಿ ತಂಡದ ಬ್ಯಾಟಿಂಗ್ ವಿಭಾಗದಲ್ಲೂ ಒಂದು ಬದಲಾವಣೆ ನಿರೀಕ್ಷಿಸಲಾಗಿದೆ. ಕಳೆದ ಇಂಗ್ಲೆಂಡ್ ಟೆಸ್ಟ್ ಸರಣಿಯಿಂದಲೂ ಕಳಪೆ ಫಾರ್ಮ್​ನಿಂದ ಕಂಗೆಟ್ಟಿರುವ ರಜತ್ ಪಾಟಿದರ್​ಗೆ ಇಂದು ಅವಕಾಶ ಸಿಗುವುದು ಅನುಮಾನ. ಇವರ ಜಾಗಕ್ಕೆ ಸುಯೇಶ್ ಪ್ರಭುದೇಸಾಯಿ ಅಥವಾ ಮಹಿಪಾಲ್ ಲುಮ್ರೂರ್ ಬರುವ ಸಾಧ್ಯತೆ ಇದೆ.

ಹಾಗೆಯೆ ಆರ್​ಸಿಬಿ ತಂಡದ ಬ್ಯಾಟಿಂಗ್ ವಿಭಾಗದಲ್ಲೂ ಒಂದು ಬದಲಾವಣೆ ನಿರೀಕ್ಷಿಸಲಾಗಿದೆ. ಕಳೆದ ಇಂಗ್ಲೆಂಡ್ ಟೆಸ್ಟ್ ಸರಣಿಯಿಂದಲೂ ಕಳಪೆ ಫಾರ್ಮ್​ನಿಂದ ಕಂಗೆಟ್ಟಿರುವ ರಜತ್ ಪಾಟಿದರ್​ಗೆ ಇಂದು ಅವಕಾಶ ಸಿಗುವುದು ಅನುಮಾನ. ಇವರ ಜಾಗಕ್ಕೆ ಸುಯೇಶ್ ಪ್ರಭುದೇಸಾಯಿ ಅಥವಾ ಮಹಿಪಾಲ್ ಲುಮ್ರೂರ್ ಬರುವ ಸಾಧ್ಯತೆ ಇದೆ.

6 / 7
ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ಸಂಭಾವ್ಯ ಪ್ಲೇಯಿಂಗ್ XI: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ , ಸುಯೇಶ್ ಪ್ರಭುದೇಸಾಯಿ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್.

ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ಸಂಭಾವ್ಯ ಪ್ಲೇಯಿಂಗ್ XI: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ , ಸುಯೇಶ್ ಪ್ರಭುದೇಸಾಯಿ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್.

7 / 7

Published On - 7:02 am, Fri, 29 March 24

Follow us
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ