AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಫಿಟ್​ನೆಸ್ ಹೊಂದಿದ್ದರೂ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯದಿರಲು ಕಾರಣವೇನು?

IPL 2023 Kannada: ವಿರಾಟ್ ಕೊಹ್ಲಿ (ನಾಯಕ) , ಶಹಬಾಝ್ ಅಹ್ಮದ್ , ಗ್ಲೆನ್ ಮ್ಯಾಕ್ಸ್ ವೆಲ್ , ಮಹಿಪಾಲ್ ಲೊಮ್ರೋರ್ , ದಿನೇಶ್ ಕಾರ್ತಿಕ್ ( ವಿಕೆಟ್ ಕೀಪರ್ ) , ಸುಯಶ್ ಪ್ರಭುದೇಸಾಯಿ , ವನಿಂದು ಹಸರಂಗ , ಡೇವಿಡ್ ವಿಲ್ಲಿ.

TV9 Web
| Edited By: |

Updated on: Apr 26, 2023 | 9:12 PM

Share
IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲೂ ಆರ್​ಸಿಬಿ ವೇಗಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿದಿಲ್ಲ. ಇದರ ಬೆನ್ನಲ್ಲೇ ಸಂಪೂರ್ಣ ಫಿಟ್​ನೆಸ್ ಹೊಂದಿದ್ದರೂ ಆಸ್ಟ್ರೇಲಿಯಾ ವೇಗಿ ಕಣಕ್ಕಿಳಿಯದಿರಲು ಕಾರಣವೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲೂ ಆರ್​ಸಿಬಿ ವೇಗಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿದಿಲ್ಲ. ಇದರ ಬೆನ್ನಲ್ಲೇ ಸಂಪೂರ್ಣ ಫಿಟ್​ನೆಸ್ ಹೊಂದಿದ್ದರೂ ಆಸ್ಟ್ರೇಲಿಯಾ ವೇಗಿ ಕಣಕ್ಕಿಳಿಯದಿರಲು ಕಾರಣವೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

1 / 7
ಇದಕ್ಕೆ ಮುಖ್ಯ ಕಾರಣ ಕ್ರಿಕೆಟ್ ಆಸ್ಟ್ರೇಲಿಯಾ ಕಡೆಯಿಂದ ಸಿಗದ ಅನುಮತಿ. ಅಂದರೆ ಆಸೀಸ್ ಆಟಗಾರರು ಯಾವುದೇ ಲೀಗ್​ನಲ್ಲೂ ಭಾಗವಹಿಸುವ ಮುನ್ನ ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕಾಗುತ್ತದೆ. ಇಲ್ಲಿ ಫ್ರಾಂಚೈಸಿಯ ಆಕಾಂಕ್ಷೆಗಿಂತ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ತನ್ನ ಆಟಗಾರರ ಬಗ್ಗೆ ಹೆಚ್ಚಿನ ಕಾಳಜಿವಹಿಸುತ್ತದೆ.

ಇದಕ್ಕೆ ಮುಖ್ಯ ಕಾರಣ ಕ್ರಿಕೆಟ್ ಆಸ್ಟ್ರೇಲಿಯಾ ಕಡೆಯಿಂದ ಸಿಗದ ಅನುಮತಿ. ಅಂದರೆ ಆಸೀಸ್ ಆಟಗಾರರು ಯಾವುದೇ ಲೀಗ್​ನಲ್ಲೂ ಭಾಗವಹಿಸುವ ಮುನ್ನ ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕಾಗುತ್ತದೆ. ಇಲ್ಲಿ ಫ್ರಾಂಚೈಸಿಯ ಆಕಾಂಕ್ಷೆಗಿಂತ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ತನ್ನ ಆಟಗಾರರ ಬಗ್ಗೆ ಹೆಚ್ಚಿನ ಕಾಳಜಿವಹಿಸುತ್ತದೆ.

2 / 7
ಇದೀಗ ಜೋಶ್ ಹ್ಯಾಝಲ್​​ವುಡ್ ವಿಷಯದಲ್ಲೂ ಕ್ರಿಕೆಟ್ ಆಸ್ಟ್ರೇಲಿಯಾ ಅಂತಹದೊಂದು ನಿರ್ಧಾರ ತೆಗೆದುಕೊಂಡಿದೆ. ಇಲ್ಲಿ ಆಸೀಸ್ ವೇಗಿ ಫಿಟ್​ನೆಸ್ ಹೊಂದಿದ್ದರೂ ಕೆಲ ವಿಷಯಗಳಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸಂತೃಪ್ತಿಯನ್ನು ಹೊಂದಿಲ್ಲ. ಹೀಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಹ್ಯಾಝಲ್​ವುಡ್ ಫಿಟ್​ನೆಸ್ ಕ್ಲಿಯರೆನ್ಸ್​ಗಾಗಿ ಸಹಿ ಹಾಕಲು ಹಿಂದೇಟು ಹಾಕಿದೆ.

ಇದೀಗ ಜೋಶ್ ಹ್ಯಾಝಲ್​​ವುಡ್ ವಿಷಯದಲ್ಲೂ ಕ್ರಿಕೆಟ್ ಆಸ್ಟ್ರೇಲಿಯಾ ಅಂತಹದೊಂದು ನಿರ್ಧಾರ ತೆಗೆದುಕೊಂಡಿದೆ. ಇಲ್ಲಿ ಆಸೀಸ್ ವೇಗಿ ಫಿಟ್​ನೆಸ್ ಹೊಂದಿದ್ದರೂ ಕೆಲ ವಿಷಯಗಳಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸಂತೃಪ್ತಿಯನ್ನು ಹೊಂದಿಲ್ಲ. ಹೀಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಹ್ಯಾಝಲ್​ವುಡ್ ಫಿಟ್​ನೆಸ್ ಕ್ಲಿಯರೆನ್ಸ್​ಗಾಗಿ ಸಹಿ ಹಾಕಲು ಹಿಂದೇಟು ಹಾಕಿದೆ.

3 / 7
ಇದೇ ಕಾರಣದಿಂದಾಗಿ ಜೋಶ್ ಹ್ಯಾಝಲ್​ವುಡ್ ಕೆಕೆಆರ್ ವಿರುದ್ಧದ ಪಂದ್ಯದ ಆಯ್ಕೆಗೆ ಲಭ್ಯರಿರಲಿಲ್ಲ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಅನ್ನು ಗಮದಲ್ಲಿರಿಸಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಆಟಗಾರರ ಫಿಟ್​ನೆಸ್ ಬಗ್ಗೆ ಹೆಚ್ಚಿನ ಕಾಳಜಿವಹಿಸುತ್ತಿದ್ದು, ಹೀಗಾಗಿ ಹ್ಯಾಝಲ್​ವುಡ್​ಗೆ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಂತೆ ಆಡಲು ಅನುಮತಿ ನೀಡಿಲ್ಲ. ಬದಲಾಗಿ ಒಂದಷ್ಟು ಅಭ್ಯಾಸಗಳ ಬಳಿಕ ಕಣಕ್ಕಿಳಿಯುವಂತೆ ಸೂಚಿಸಲಾಗಿದೆ.

ಇದೇ ಕಾರಣದಿಂದಾಗಿ ಜೋಶ್ ಹ್ಯಾಝಲ್​ವುಡ್ ಕೆಕೆಆರ್ ವಿರುದ್ಧದ ಪಂದ್ಯದ ಆಯ್ಕೆಗೆ ಲಭ್ಯರಿರಲಿಲ್ಲ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಅನ್ನು ಗಮದಲ್ಲಿರಿಸಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಆಟಗಾರರ ಫಿಟ್​ನೆಸ್ ಬಗ್ಗೆ ಹೆಚ್ಚಿನ ಕಾಳಜಿವಹಿಸುತ್ತಿದ್ದು, ಹೀಗಾಗಿ ಹ್ಯಾಝಲ್​ವುಡ್​ಗೆ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಂತೆ ಆಡಲು ಅನುಮತಿ ನೀಡಿಲ್ಲ. ಬದಲಾಗಿ ಒಂದಷ್ಟು ಅಭ್ಯಾಸಗಳ ಬಳಿಕ ಕಣಕ್ಕಿಳಿಯುವಂತೆ ಸೂಚಿಸಲಾಗಿದೆ.

4 / 7
ಇತ್ತ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಈ ಪಂದ್ಯಕ್ಕೆ ಹ್ಯಾಝಲ್​ವುಡ್ ಲಭ್ಯರಿರಲಿದ್ದಾರೆ ಎಂದು RCB ಬೌಲಿಂಗ್ ಕೋಚ್ ಗ್ರಿಫಿತ್ ತಿಳಿಸಿದ್ದಾರೆ.

ಇತ್ತ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಈ ಪಂದ್ಯಕ್ಕೆ ಹ್ಯಾಝಲ್​ವುಡ್ ಲಭ್ಯರಿರಲಿದ್ದಾರೆ ಎಂದು RCB ಬೌಲಿಂಗ್ ಕೋಚ್ ಗ್ರಿಫಿತ್ ತಿಳಿಸಿದ್ದಾರೆ.

5 / 7
ಅಂದಹಾಗೆ ಬಾರ್ಡರ್-ಗವಾಸ್ಕರ್ ಸರಣಿ ವೇಳೆ ಮೊಣಕಾಲಿನ ಹಿಮ್ಮಡಿ ನೋವಿಗೆ ಒಳಗಾಗಿದ್ದ ಜೋಶ್ ಹ್ಯಾಝಲ್​ವುಡ್ ಇಡೀ ಸರಣಿಯಿಂದ ಹೊರಗುಳಿದಿದ್ದರು. ಅಲ್ಲದೆ ಇದೇ ಕಾರಣದಿಂದ ಐಪಿಎಲ್​ನ ಮೊದಲಾರ್ಧದಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಬೌಲಿಂಗ್ ಅಭ್ಯಾಸ ಆರಂಭಿಸಿದರೂ, ಕ್ರಿಕೆಟ್ ಆಸ್ಟ್ರೇಲಿಯಾ ಕಡೆಯಿಂದ ಫಿಟ್​ನೆಸ್ ಕ್ಲಿಯರೆನ್ಸ್ ಲಭಿಸಿಲ್ಲ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ.

ಅಂದಹಾಗೆ ಬಾರ್ಡರ್-ಗವಾಸ್ಕರ್ ಸರಣಿ ವೇಳೆ ಮೊಣಕಾಲಿನ ಹಿಮ್ಮಡಿ ನೋವಿಗೆ ಒಳಗಾಗಿದ್ದ ಜೋಶ್ ಹ್ಯಾಝಲ್​ವುಡ್ ಇಡೀ ಸರಣಿಯಿಂದ ಹೊರಗುಳಿದಿದ್ದರು. ಅಲ್ಲದೆ ಇದೇ ಕಾರಣದಿಂದ ಐಪಿಎಲ್​ನ ಮೊದಲಾರ್ಧದಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಬೌಲಿಂಗ್ ಅಭ್ಯಾಸ ಆರಂಭಿಸಿದರೂ, ಕ್ರಿಕೆಟ್ ಆಸ್ಟ್ರೇಲಿಯಾ ಕಡೆಯಿಂದ ಫಿಟ್​ನೆಸ್ ಕ್ಲಿಯರೆನ್ಸ್ ಲಭಿಸಿಲ್ಲ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ.

6 / 7
KKR ವಿರುದ್ಧ RCB ಪ್ಲೇಯಿಂಗ್ 11: ವಿರಾಟ್ ಕೊಹ್ಲಿ (ನಾಯಕ) , ಶಹಬಾಝ್ ಅಹ್ಮದ್ , ಗ್ಲೆನ್ ಮ್ಯಾಕ್ಸ್ ವೆಲ್ , ಮಹಿಪಾಲ್ ಲೊಮ್ರೋರ್ , ದಿನೇಶ್ ಕಾರ್ತಿಕ್ ( ವಿಕೆಟ್ ಕೀಪರ್ ) , ಸುಯಶ್ ಪ್ರಭುದೇಸಾಯಿ , ವನಿಂದು ಹಸರಂಗ , ಡೇವಿಡ್ ವಿಲ್ಲಿ , ವಿಜಯ್ ಕುಮಾರ್ ವೈಶಾಕ್ , ಹರ್ಷಲ್ ಪಟೇಲ್ , ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್ (ಇಂಪ್ಯಾಕ್ಟ್ ಪ್ಲೇಯರ್).

KKR ವಿರುದ್ಧ RCB ಪ್ಲೇಯಿಂಗ್ 11: ವಿರಾಟ್ ಕೊಹ್ಲಿ (ನಾಯಕ) , ಶಹಬಾಝ್ ಅಹ್ಮದ್ , ಗ್ಲೆನ್ ಮ್ಯಾಕ್ಸ್ ವೆಲ್ , ಮಹಿಪಾಲ್ ಲೊಮ್ರೋರ್ , ದಿನೇಶ್ ಕಾರ್ತಿಕ್ ( ವಿಕೆಟ್ ಕೀಪರ್ ) , ಸುಯಶ್ ಪ್ರಭುದೇಸಾಯಿ , ವನಿಂದು ಹಸರಂಗ , ಡೇವಿಡ್ ವಿಲ್ಲಿ , ವಿಜಯ್ ಕುಮಾರ್ ವೈಶಾಕ್ , ಹರ್ಷಲ್ ಪಟೇಲ್ , ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್ (ಇಂಪ್ಯಾಕ್ಟ್ ಪ್ಲೇಯರ್).

7 / 7
Follow Us
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?