AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs LSG: ಏಳನೇ ಸ್ಥಾನದಲ್ಲಿರುವ ಆರ್​ಸಿಬಿ ಇಂದಿನ ಪಂದ್ಯ ಗೆದ್ದರೆ ಏನಾಗಲಿದೆ?: ಸೋತರೆ ಗತಿಯೇನು?

IPL 2023, Bangalore vs Lucknow: ಪಾಯಿಂಟ್ ಟೇಬಲ್​ನಲ್ಲಿ ಏಳನೇ ಸ್ಥಾನದಲ್ಲಿರುವ ಆರ್​ಸಿಬಿ -1.256 ರನ್​ರೇಟ್ ಹೊಂದಿದೆ. ಇಂದಿನ ಲಖನೌ ವಿರುದ್ಧದ ಪಂದ್ಯದಲ್ಲಿ ಸಣ್ಣ ಮಟ್ಟದಲ್ಲಿ ಗೆದ್ದರೆ ಇದೇ ಸ್ಥಾನದಲ್ಲಿ ಬೆಂಗಳೂರು ಮುಂದುವರೆಯಲಿದೆ.

Vinay Bhat
|

Updated on:Apr 10, 2023 | 12:40 PM

ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಯಲ್ಲಿಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜೇಂಟ್ಸ್ ಮುಖಾಮುಖಿ ಆಗಲಿದ್ದು ಸಾಕಷ್ಟು ರೋಚಕತೆ ಸೃಷ್ಟಿಸಿದೆ. ತವರು ಮೈದಾನದಲ್ಲಿ ಎರಡನೇ ಪಂದ್ಯವನ್ನಾಡುತ್ತಿರುವ ಫಾಫ್ ಪಡೆಯ ಪ್ರದರ್ಶನ ಹೇಗಿರುತ್ತೆ ನೋಡಬೇಕಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಯಲ್ಲಿಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜೇಂಟ್ಸ್ ಮುಖಾಮುಖಿ ಆಗಲಿದ್ದು ಸಾಕಷ್ಟು ರೋಚಕತೆ ಸೃಷ್ಟಿಸಿದೆ. ತವರು ಮೈದಾನದಲ್ಲಿ ಎರಡನೇ ಪಂದ್ಯವನ್ನಾಡುತ್ತಿರುವ ಫಾಫ್ ಪಡೆಯ ಪ್ರದರ್ಶನ ಹೇಗಿರುತ್ತೆ ನೋಡಬೇಕಿದೆ.

1 / 8
ರಾಯಲ್ ಚಾಲೆಂಜರ್ಸ್ ತಂಡ ಆಡಿದ ಎರಡು ಪಂದ್ಯಗಳ ಪೈಕಿ ಮೊದಲ ಪಂದ್ಯದಲ್ಲಿ ಗೆದ್ದರೆ ದ್ವಿತೀಯ ಮ್ಯಾಚ್​ನಲ್ಲಿ ಸೋಲುಂಡಿತ್ತು. ಕೆಕೆಆರ್ ವಿರುದ್ಧ ಆಡಿದ ಎರಡನೇ ಪಂದ್ಯದಲ್ಲಿ ಕೇವಲ 123 ರನ್​ಗೆ ಆಲೌಟ್ ಆಗುವ ಹೀನಾಯ ಪ್ರದರ್ಶನ ತೋರಿತ್ತು. ಗೆಲುವಿನ ಲಯಕ್ಕೆ ಮರಳಲು ಇಂದಿನ ಪಂದ್ಯ ಮುಖ್ಯವಾಗಿದೆ.

ರಾಯಲ್ ಚಾಲೆಂಜರ್ಸ್ ತಂಡ ಆಡಿದ ಎರಡು ಪಂದ್ಯಗಳ ಪೈಕಿ ಮೊದಲ ಪಂದ್ಯದಲ್ಲಿ ಗೆದ್ದರೆ ದ್ವಿತೀಯ ಮ್ಯಾಚ್​ನಲ್ಲಿ ಸೋಲುಂಡಿತ್ತು. ಕೆಕೆಆರ್ ವಿರುದ್ಧ ಆಡಿದ ಎರಡನೇ ಪಂದ್ಯದಲ್ಲಿ ಕೇವಲ 123 ರನ್​ಗೆ ಆಲೌಟ್ ಆಗುವ ಹೀನಾಯ ಪ್ರದರ್ಶನ ತೋರಿತ್ತು. ಗೆಲುವಿನ ಲಯಕ್ಕೆ ಮರಳಲು ಇಂದಿನ ಪಂದ್ಯ ಮುಖ್ಯವಾಗಿದೆ.

2 / 8
ಪಾಯಿಂಟ್ ಟೇಬಲ್​ನಲ್ಲಿ ಏಳನೇ ಸ್ಥಾನದಲ್ಲಿರುವ ಆರ್​ಸಿಬಿ -1.256 ರನ್​ರೇಟ್ ಹೊಂದಿದೆ. ಇಂದಿನ ಪಂದ್ಯದಲ್ಲಿ ಸಣ್ಣ ಮಟ್ಟದಲ್ಲಿ ಗೆದ್ದರೆ ಇದೇ ಸ್ಥಾನದಲ್ಲಿ ಬೆಂಗಳೂರು ಮುಂದುವರೆಯಲಿದೆ. ಎಲ್ಲಾದರು ದೊಡ್ಡ ಮೊತ್ತದ ಅಂತರದಲ್ಲಿ ಜಯ ಸಾಧಿಸಿದರೆ 4 ಅಂಕ ಸಂಪಾದಿಸಿ ಮೇಲಕ್ಕೆ ಜಿಗಿಯುವ ಸಾಧ್ಯತೆ ಇದೆ.

ಪಾಯಿಂಟ್ ಟೇಬಲ್​ನಲ್ಲಿ ಏಳನೇ ಸ್ಥಾನದಲ್ಲಿರುವ ಆರ್​ಸಿಬಿ -1.256 ರನ್​ರೇಟ್ ಹೊಂದಿದೆ. ಇಂದಿನ ಪಂದ್ಯದಲ್ಲಿ ಸಣ್ಣ ಮಟ್ಟದಲ್ಲಿ ಗೆದ್ದರೆ ಇದೇ ಸ್ಥಾನದಲ್ಲಿ ಬೆಂಗಳೂರು ಮುಂದುವರೆಯಲಿದೆ. ಎಲ್ಲಾದರು ದೊಡ್ಡ ಮೊತ್ತದ ಅಂತರದಲ್ಲಿ ಜಯ ಸಾಧಿಸಿದರೆ 4 ಅಂಕ ಸಂಪಾದಿಸಿ ಮೇಲಕ್ಕೆ ಜಿಗಿಯುವ ಸಾಧ್ಯತೆ ಇದೆ.

3 / 8
ಆರ್​ಸಿಬಿ ಗೆಲುವು ಸಾಧಿಸಲು ವಿಫಲವಾದರೆ ಮುಂದಿನ ಹಾದಿ ಕೊಂಚ ಕಠಿಣವಾಗಲಿದೆ. ಯಾಕೆಂದರೆ ಆರ್​ಸಿಬಿಗಿಂತ ಮೇಲಿರುವ ಉಳಿದ ಆರು ತಂಡಗಳು 4 ಅಂಕ ಪಡೆದುಕೊಂಡಿದೆ. ಎಲ್ಲಾದರು ಸೋತರೆ -ರನ್​ರೇಟ್ ಇನ್ನೂ ಅಧಿಕವಾಗಲಿದ್ದು ಎಂಟನೇ ಸ್ಥಾನಕ್ಕೆ ಕುಸಿಯಬಹುದು. ಹೀಗಾಗಿ ಬೆಂಗಳೂರಿಗೆ ಗೆಲುವು ಮುಖ್ಯವಾಗಿದೆ.

ಆರ್​ಸಿಬಿ ಗೆಲುವು ಸಾಧಿಸಲು ವಿಫಲವಾದರೆ ಮುಂದಿನ ಹಾದಿ ಕೊಂಚ ಕಠಿಣವಾಗಲಿದೆ. ಯಾಕೆಂದರೆ ಆರ್​ಸಿಬಿಗಿಂತ ಮೇಲಿರುವ ಉಳಿದ ಆರು ತಂಡಗಳು 4 ಅಂಕ ಪಡೆದುಕೊಂಡಿದೆ. ಎಲ್ಲಾದರು ಸೋತರೆ -ರನ್​ರೇಟ್ ಇನ್ನೂ ಅಧಿಕವಾಗಲಿದ್ದು ಎಂಟನೇ ಸ್ಥಾನಕ್ಕೆ ಕುಸಿಯಬಹುದು. ಹೀಗಾಗಿ ಬೆಂಗಳೂರಿಗೆ ಗೆಲುವು ಮುಖ್ಯವಾಗಿದೆ.

4 / 8
ಫಾಫ್ ಪಡೆಯ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ಶಹಬಾಜ್ ಅಹಮದ್ ಬದಲು ಮಹಿಪಾಲ್ ಲೊಮ್ರೂರ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಫಾಫ್ ಪಡೆಯ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ಶಹಬಾಜ್ ಅಹಮದ್ ಬದಲು ಮಹಿಪಾಲ್ ಲೊಮ್ರೂರ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

5 / 8
ಇಂಜುರಿಯಿಂದಾಗಿ ಟೂರ್ನಿಯಿಂದ ಹೊರಬಿದ್ದಿರುವ ರಿಸೆ ಟೋಪ್ಲೆ ಜಾಗಕ್ಕೆ ದಕ್ಷಿಣಾ ಆಫ್ರಿಕಾ ವೇಗಿ ವೇಯ್ನ್ ಪಾರ್ನೆಲ್ ಆಯ್ಕೆ ಆಗಿದ್ದು ತಂಡ ಸೇರಿಕೊಂಡಿದ್ದಾರೆ. ಇವರು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಾಣಿಸುವ ಸಾಧ್ಯತೆ ಇದೆ.

ಇಂಜುರಿಯಿಂದಾಗಿ ಟೂರ್ನಿಯಿಂದ ಹೊರಬಿದ್ದಿರುವ ರಿಸೆ ಟೋಪ್ಲೆ ಜಾಗಕ್ಕೆ ದಕ್ಷಿಣಾ ಆಫ್ರಿಕಾ ವೇಗಿ ವೇಯ್ನ್ ಪಾರ್ನೆಲ್ ಆಯ್ಕೆ ಆಗಿದ್ದು ತಂಡ ಸೇರಿಕೊಂಡಿದ್ದಾರೆ. ಇವರು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಾಣಿಸುವ ಸಾಧ್ಯತೆ ಇದೆ.

6 / 8
ಆರ್​ಸಿಬಿ ಮೊದಲ ಪಂದ್ಯದಲ್ಲಿ ಉತ್ತಮ ಆರಂಭ ಪಡೆದುಕೊಂಡಿತ್ತು. ಆದರೆ, ದ್ವಿತೀಯ ಪಂದ್ಯದಲ್ಲಿ ಕೊಹ್ಲಿ-ಫಾಫ್ ಕಡೆಯಿಂದ ನಿರೀಕ್ಷೆಗೆ ತಕ್ಕ ಆಟ ಬರಲಿಲ್ಲ. ಗ್ಲೆನ್ ಮ್ಯಾಕ್ಸ್​ವೆಲ್, ದಿನೇಶ್ ಕಾರ್ತಿಕ್ ಕೂಡ ಸಂಪೂರ್ಣ ವೈಫಲ್ಯ ಅನುಭವಿಸಿದ್ದರು. ಮಿಚೆಲ್ ಬ್ರೇಸ್​ವೆಲ್ ಕಡೆಯಿಂದ ಆಕ್ರಮಣಕಾರಿ ಆಟ ಹೊರಬರಬೇಕಿದೆ.

ಆರ್​ಸಿಬಿ ಮೊದಲ ಪಂದ್ಯದಲ್ಲಿ ಉತ್ತಮ ಆರಂಭ ಪಡೆದುಕೊಂಡಿತ್ತು. ಆದರೆ, ದ್ವಿತೀಯ ಪಂದ್ಯದಲ್ಲಿ ಕೊಹ್ಲಿ-ಫಾಫ್ ಕಡೆಯಿಂದ ನಿರೀಕ್ಷೆಗೆ ತಕ್ಕ ಆಟ ಬರಲಿಲ್ಲ. ಗ್ಲೆನ್ ಮ್ಯಾಕ್ಸ್​ವೆಲ್, ದಿನೇಶ್ ಕಾರ್ತಿಕ್ ಕೂಡ ಸಂಪೂರ್ಣ ವೈಫಲ್ಯ ಅನುಭವಿಸಿದ್ದರು. ಮಿಚೆಲ್ ಬ್ರೇಸ್​ವೆಲ್ ಕಡೆಯಿಂದ ಆಕ್ರಮಣಕಾರಿ ಆಟ ಹೊರಬರಬೇಕಿದೆ.

7 / 8
ಕರ್ಣ್​ ಶರ್ಮಾ ಹಾಗೂ ಮೊಹಮ್ಮದ್ ಸಿರಾಜ್ ಅಪಾಯಕಾರಿ ಆಗಿ ಕಾಣಿಸಿಕೊಂಡಿದ್ದಾರೆ. ಹರ್ಷಲ್ ಪಟೇಲ್ ದುಬಾರಿ ಆಗುತ್ತಿದ್ದು ಲೆಂತ್​ನಲ್ಲಿ ಎಡವುತ್ತಿದ್ದಾರೆ. ಹಿಂದಿನ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಸರಿ ಪಡಿಸಿ ಆರ್​ಸಿಬಿ ಇಂದು ಉತ್ತಮ ಪ್ರದರ್ಶನ ನೀಡ ಬೇಕಾದ ಒತ್ತಡದಲ್ಲಿದೆ.

ಕರ್ಣ್​ ಶರ್ಮಾ ಹಾಗೂ ಮೊಹಮ್ಮದ್ ಸಿರಾಜ್ ಅಪಾಯಕಾರಿ ಆಗಿ ಕಾಣಿಸಿಕೊಂಡಿದ್ದಾರೆ. ಹರ್ಷಲ್ ಪಟೇಲ್ ದುಬಾರಿ ಆಗುತ್ತಿದ್ದು ಲೆಂತ್​ನಲ್ಲಿ ಎಡವುತ್ತಿದ್ದಾರೆ. ಹಿಂದಿನ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಸರಿ ಪಡಿಸಿ ಆರ್​ಸಿಬಿ ಇಂದು ಉತ್ತಮ ಪ್ರದರ್ಶನ ನೀಡ ಬೇಕಾದ ಒತ್ತಡದಲ್ಲಿದೆ.

8 / 8

Published On - 12:40 pm, Mon, 10 April 23

Follow us
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ