AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ನಡುವೆಯೂ RCB ತಂಡದ ಭರ್ಜರಿ ದಾಖಲೆ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ ಬರೋಬ್ಬರಿ 199 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 184 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 15 ರನ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on:Jan 27, 2026 | 8:35 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.

1 / 5
ಮುಂಬೈ ಇಂಡಿಯನ್ಸ್ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನ್ಯಾಟ್ ಸೀವರ್ ಬ್ರಂಟ್ 57 ಎಸೆತಗಳಲ್ಲಿ ಅಜೇಯ 100 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಿತು.

ಮುಂಬೈ ಇಂಡಿಯನ್ಸ್ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನ್ಯಾಟ್ ಸೀವರ್ ಬ್ರಂಟ್ 57 ಎಸೆತಗಳಲ್ಲಿ ಅಜೇಯ 100 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಿತು.

2 / 5
ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಪರಿಣಾಮ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪಡೆಯು ಕೇವಲ 35 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಈ ಆರಂಭಿಕ ಆಘಾತದ ಹೊರತಾಗಿಯೂ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ದಿಟ್ಟ ಹೋರಾಟ ಪ್ರದರ್ಶಿಸಿದ್ದರು.

ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಪರಿಣಾಮ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪಡೆಯು ಕೇವಲ 35 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಈ ಆರಂಭಿಕ ಆಘಾತದ ಹೊರತಾಗಿಯೂ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ದಿಟ್ಟ ಹೋರಾಟ ಪ್ರದರ್ಶಿಸಿದ್ದರು.

3 / 5
ಅದರಲ್ಲೂ ರಿಚಾ ಘೋಷ್ ಸ್ಫೋಟಕ ಬ್ಯಾಟಿಂಗ್​ನೊಂದಿಗೆ 90 ರನ್​ ಸಿಡಿಸಿದ್ದರು. ಈ ಮೂಲಕ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 184 ರನ್​ಗಳಿಸಿ 15 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು. ಈ ಸೋಲಿನ ಹೊರತಾಗಿಯೂ ಆರ್​ಸಿಬಿ ತಂಡದ ಹೆಸರಿಗೆ ವಿಶೇಷ ದಾಖಲೆ ಸೇರ್ಪಡೆಯಾಗಿದೆ.

ಅದರಲ್ಲೂ ರಿಚಾ ಘೋಷ್ ಸ್ಫೋಟಕ ಬ್ಯಾಟಿಂಗ್​ನೊಂದಿಗೆ 90 ರನ್​ ಸಿಡಿಸಿದ್ದರು. ಈ ಮೂಲಕ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 184 ರನ್​ಗಳಿಸಿ 15 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು. ಈ ಸೋಲಿನ ಹೊರತಾಗಿಯೂ ಆರ್​ಸಿಬಿ ತಂಡದ ಹೆಸರಿಗೆ ವಿಶೇಷ ದಾಖಲೆ ಸೇರ್ಪಡೆಯಾಗಿದೆ.

4 / 5
ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ 50 ಕ್ಕಿಂತ ಕಡಿಮೆ ಮೊತ್ತಕ್ಕೆ 5 ವಿಕೆಟ್ ಕಳೆದುಕೊಂಡು 150 ಕ್ಕಿಂತ ಅಧಿಕ ರನ್​ಗಳಿಸಿದ ಮೊದಲ ತಂಡವೆಂಬ ಭರ್ಜರಿ ದಾಖಲೆಯೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಆರ್​ಸಿಬಿ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 35 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಅಂತಿಮವಾಗಿ 184 ರನ್​ಗಳಿಸಿ ಈ ವಿಶೇಷ ದಾಖಲೆಯನ್ನು ನಿರ್ಮಿಸಿದೆ.

ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ 50 ಕ್ಕಿಂತ ಕಡಿಮೆ ಮೊತ್ತಕ್ಕೆ 5 ವಿಕೆಟ್ ಕಳೆದುಕೊಂಡು 150 ಕ್ಕಿಂತ ಅಧಿಕ ರನ್​ಗಳಿಸಿದ ಮೊದಲ ತಂಡವೆಂಬ ಭರ್ಜರಿ ದಾಖಲೆಯೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಆರ್​ಸಿಬಿ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 35 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಅಂತಿಮವಾಗಿ 184 ರನ್​ಗಳಿಸಿ ಈ ವಿಶೇಷ ದಾಖಲೆಯನ್ನು ನಿರ್ಮಿಸಿದೆ.

5 / 5

Published On - 8:33 am, Tue, 27 January 26

Follow Us
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ: ವಿಡಿಯೋ ನೋಡಿ
ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ: ವಿಡಿಯೋ ನೋಡಿ