AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ನಡುವೆಯೂ RCB ತಂಡದ ಭರ್ಜರಿ ದಾಖಲೆ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ ಬರೋಬ್ಬರಿ 199 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 184 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 15 ರನ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on:Jan 27, 2026 | 8:35 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.

1 / 5
ಮುಂಬೈ ಇಂಡಿಯನ್ಸ್ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನ್ಯಾಟ್ ಸೀವರ್ ಬ್ರಂಟ್ 57 ಎಸೆತಗಳಲ್ಲಿ ಅಜೇಯ 100 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಿತು.

ಮುಂಬೈ ಇಂಡಿಯನ್ಸ್ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನ್ಯಾಟ್ ಸೀವರ್ ಬ್ರಂಟ್ 57 ಎಸೆತಗಳಲ್ಲಿ ಅಜೇಯ 100 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಿತು.

2 / 5
ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಪರಿಣಾಮ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪಡೆಯು ಕೇವಲ 35 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಈ ಆರಂಭಿಕ ಆಘಾತದ ಹೊರತಾಗಿಯೂ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ದಿಟ್ಟ ಹೋರಾಟ ಪ್ರದರ್ಶಿಸಿದ್ದರು.

ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಪರಿಣಾಮ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪಡೆಯು ಕೇವಲ 35 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಈ ಆರಂಭಿಕ ಆಘಾತದ ಹೊರತಾಗಿಯೂ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ದಿಟ್ಟ ಹೋರಾಟ ಪ್ರದರ್ಶಿಸಿದ್ದರು.

3 / 5
ಅದರಲ್ಲೂ ರಿಚಾ ಘೋಷ್ ಸ್ಫೋಟಕ ಬ್ಯಾಟಿಂಗ್​ನೊಂದಿಗೆ 90 ರನ್​ ಸಿಡಿಸಿದ್ದರು. ಈ ಮೂಲಕ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 184 ರನ್​ಗಳಿಸಿ 15 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು. ಈ ಸೋಲಿನ ಹೊರತಾಗಿಯೂ ಆರ್​ಸಿಬಿ ತಂಡದ ಹೆಸರಿಗೆ ವಿಶೇಷ ದಾಖಲೆ ಸೇರ್ಪಡೆಯಾಗಿದೆ.

ಅದರಲ್ಲೂ ರಿಚಾ ಘೋಷ್ ಸ್ಫೋಟಕ ಬ್ಯಾಟಿಂಗ್​ನೊಂದಿಗೆ 90 ರನ್​ ಸಿಡಿಸಿದ್ದರು. ಈ ಮೂಲಕ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 184 ರನ್​ಗಳಿಸಿ 15 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು. ಈ ಸೋಲಿನ ಹೊರತಾಗಿಯೂ ಆರ್​ಸಿಬಿ ತಂಡದ ಹೆಸರಿಗೆ ವಿಶೇಷ ದಾಖಲೆ ಸೇರ್ಪಡೆಯಾಗಿದೆ.

4 / 5
ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ 50 ಕ್ಕಿಂತ ಕಡಿಮೆ ಮೊತ್ತಕ್ಕೆ 5 ವಿಕೆಟ್ ಕಳೆದುಕೊಂಡು 150 ಕ್ಕಿಂತ ಅಧಿಕ ರನ್​ಗಳಿಸಿದ ಮೊದಲ ತಂಡವೆಂಬ ಭರ್ಜರಿ ದಾಖಲೆಯೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಆರ್​ಸಿಬಿ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 35 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಅಂತಿಮವಾಗಿ 184 ರನ್​ಗಳಿಸಿ ಈ ವಿಶೇಷ ದಾಖಲೆಯನ್ನು ನಿರ್ಮಿಸಿದೆ.

ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ 50 ಕ್ಕಿಂತ ಕಡಿಮೆ ಮೊತ್ತಕ್ಕೆ 5 ವಿಕೆಟ್ ಕಳೆದುಕೊಂಡು 150 ಕ್ಕಿಂತ ಅಧಿಕ ರನ್​ಗಳಿಸಿದ ಮೊದಲ ತಂಡವೆಂಬ ಭರ್ಜರಿ ದಾಖಲೆಯೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಆರ್​ಸಿಬಿ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 35 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಅಂತಿಮವಾಗಿ 184 ರನ್​ಗಳಿಸಿ ಈ ವಿಶೇಷ ದಾಖಲೆಯನ್ನು ನಿರ್ಮಿಸಿದೆ.

5 / 5

Published On - 8:33 am, Tue, 27 January 26

ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು