AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಗೆ ಧೋನಿ ನಾಯಕರಾಗಿದ್ರೆ, ಈಗಾಗಲೇ 3 ಕಪ್​ ಆದ್ರೂ ಗೆಲ್ಲುತ್ತಿತ್ತು: ವಾಸಿಂ ಅಕ್ರಂ

IPL 2023 Kannada: ಐಪಿಎಲ್​ 2023 ರಲ್ಲೂ ಆರ್​ಸಿಬಿ ತಂಡದ ಹೋರಾಟ ಮುಂದುವರೆದಿದೆ. ಆಡಿರುವ 10 ಪಂದ್ಯಗಳಲ್ಲಿ 5 ಜಯ ಸಾಧಿಸಿದೆ. ಇನ್ನುಳಿದಿರುವ 4 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಪ್ಲೇಆಫ್ ಪ್ರವೇಶಿಸುವ ಇರಾದೆಯಲ್ಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 08, 2023 | 3:57 PM

IPL 2023: RCB ಗೆ ಧೋನಿ ನಾಯಕರಾಗಿದ್ರೆ, ಈಗಾಗಲೇ 3 ಕಪ್​ ಆದ್ರೂ ಗೆಲ್ಲುತ್ತಿತ್ತು: ವಾಸಿಂ ಅಕ್ರಂ

1 / 9
ಒಂದು ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಹೇಂದ್ರ ಸಿಂಗ್ ಧೋನಿ ಮುನ್ನಡೆಸಿದ್ದರೆ ಕನಿಷ್ಠ 3 ಕಪ್​ಗಳನ್ನಾದರೂ ಗೆಲ್ಲುತ್ತಿತ್ತು. ಹೀಗಂದಿದ್ದು ಮಾತ್ಯಾರೂ ಅಲ್ಲ, ಪಾಕಿಸ್ತಾನ ತಂಡದ ಮಾಜಿ ಆಟಗಾರ ವಾಸಿಂ ಅಕ್ರಮ್.

ಒಂದು ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಹೇಂದ್ರ ಸಿಂಗ್ ಧೋನಿ ಮುನ್ನಡೆಸಿದ್ದರೆ ಕನಿಷ್ಠ 3 ಕಪ್​ಗಳನ್ನಾದರೂ ಗೆಲ್ಲುತ್ತಿತ್ತು. ಹೀಗಂದಿದ್ದು ಮಾತ್ಯಾರೂ ಅಲ್ಲ, ಪಾಕಿಸ್ತಾನ ತಂಡದ ಮಾಜಿ ಆಟಗಾರ ವಾಸಿಂ ಅಕ್ರಮ್.

2 / 9
ವೆಬ್​ಸೈಟ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ವಾಸಿಂ ಅಕ್ರಮ್, ಆರ್​ಸಿಬಿ ಪ್ರತಿ ಸೀಸನ್​ನಲ್ಲೂ ಉತ್ತಮ ತಂಡವನ್ನೇ ರೂಪಿಸಿದೆ. ಆದರೆ ಕಪ್ ಗೆಲ್ಲಲು ಸಾಧ್ಯವಾಗಲಿಲ್ಲ. ಅದರಲ್ಲೂ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ತಂಡವು ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವಲ್ಲಿ ವಿಫಲವಾಗಿತ್ತು.

ವೆಬ್​ಸೈಟ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ವಾಸಿಂ ಅಕ್ರಮ್, ಆರ್​ಸಿಬಿ ಪ್ರತಿ ಸೀಸನ್​ನಲ್ಲೂ ಉತ್ತಮ ತಂಡವನ್ನೇ ರೂಪಿಸಿದೆ. ಆದರೆ ಕಪ್ ಗೆಲ್ಲಲು ಸಾಧ್ಯವಾಗಲಿಲ್ಲ. ಅದರಲ್ಲೂ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ತಂಡವು ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವಲ್ಲಿ ವಿಫಲವಾಗಿತ್ತು.

3 / 9
ಒಂದು ವೇಳೆ ಆರ್​ಸಿಬಿ ತಂಡವನ್ನು ಮಹೇಂದ್ರ ಸಿಂಗ್ ಧೋನಿ ಏನಾದರೂ ಮುನ್ನಡೆಸಿದ್ದರೆ, ಈಗಾಗಲೇ 3 ಕಪ್​ಗಳನ್ನಾದರೂ ಗೆದ್ದಿರುತ್ತಿತ್ತು. ಏಕೆಂದರೆ ಧೋನಿ ಅತ್ಯುತ್ತಮ ನಾಯಕ. ಅವರಿಗೆ ತಂಡವನ್ನು ಯಾವ ಪರಿಸ್ಥಿತಿಯಲ್ಲಿ ಹೇಗೆ ಮುನ್ನಡೆಸಬೇಕೆಂದು ಚೆನ್ನಾಗಿ ತಿಳಿದಿದೆ ಎಂದು ಅಕ್ರಮ್ ಅಭಿಪ್ರಾಯಪಟ್ಟಿದ್ದಾರೆ.

ಒಂದು ವೇಳೆ ಆರ್​ಸಿಬಿ ತಂಡವನ್ನು ಮಹೇಂದ್ರ ಸಿಂಗ್ ಧೋನಿ ಏನಾದರೂ ಮುನ್ನಡೆಸಿದ್ದರೆ, ಈಗಾಗಲೇ 3 ಕಪ್​ಗಳನ್ನಾದರೂ ಗೆದ್ದಿರುತ್ತಿತ್ತು. ಏಕೆಂದರೆ ಧೋನಿ ಅತ್ಯುತ್ತಮ ನಾಯಕ. ಅವರಿಗೆ ತಂಡವನ್ನು ಯಾವ ಪರಿಸ್ಥಿತಿಯಲ್ಲಿ ಹೇಗೆ ಮುನ್ನಡೆಸಬೇಕೆಂದು ಚೆನ್ನಾಗಿ ತಿಳಿದಿದೆ ಎಂದು ಅಕ್ರಮ್ ಅಭಿಪ್ರಾಯಪಟ್ಟಿದ್ದಾರೆ.

4 / 9
ನನ್ನ ಪ್ರಕಾರ, ಮಹೇಂದ್ರ ಸಿಂಗ್ ಧೋನಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಾರಥ್ಯವಹಿಸಿದ್ದರೆ ಖಂಡಿತವಾಗಿಯೂ ಕನಿಷ್ಠ ಮೂರು ಕಪ್​ಗಳನ್ನಾದರೂ ಗೆಲ್ಲುತ್ತಿದ್ದರು ಎಂದು ವಾಸಿಂ ಅಕ್ರಮ್ ಹೇಳಿದ್ದಾರೆ.

ನನ್ನ ಪ್ರಕಾರ, ಮಹೇಂದ್ರ ಸಿಂಗ್ ಧೋನಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಾರಥ್ಯವಹಿಸಿದ್ದರೆ ಖಂಡಿತವಾಗಿಯೂ ಕನಿಷ್ಠ ಮೂರು ಕಪ್​ಗಳನ್ನಾದರೂ ಗೆಲ್ಲುತ್ತಿದ್ದರು ಎಂದು ವಾಸಿಂ ಅಕ್ರಮ್ ಹೇಳಿದ್ದಾರೆ.

5 / 9
ಅಂದಹಾಗೆ 2009 ರಲ್ಲಿ ಅನಿಲ್ ಕುಂಬ್ಳೆ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಬಾರಿಗೆ ಫೈನಲ್ ಪ್ರವೇಶಿಸಿತ್ತು. ಆದರೆ ಅಂತಿಮ ಪಂದ್ಯದಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 6 ರನ್​ಗಳಿಂದ ಸೋಲುವ ಮೂಲಕ ಆರ್​ಸಿಬಿ ಚೊಚ್ಚಲ ಬಾರಿಗೆ ಟ್ರೋಫಿಗೆ ಮುತ್ತಿಕ್ಕುವ ಅವಕಾಶ ಕಳೆದುಕೊಂಡಿತು.

ಅಂದಹಾಗೆ 2009 ರಲ್ಲಿ ಅನಿಲ್ ಕುಂಬ್ಳೆ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಬಾರಿಗೆ ಫೈನಲ್ ಪ್ರವೇಶಿಸಿತ್ತು. ಆದರೆ ಅಂತಿಮ ಪಂದ್ಯದಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 6 ರನ್​ಗಳಿಂದ ಸೋಲುವ ಮೂಲಕ ಆರ್​ಸಿಬಿ ಚೊಚ್ಚಲ ಬಾರಿಗೆ ಟ್ರೋಫಿಗೆ ಮುತ್ತಿಕ್ಕುವ ಅವಕಾಶ ಕಳೆದುಕೊಂಡಿತು.

6 / 9
ಇದಾದ ಬಳಿಕ 2011 ರಲ್ಲಿ ಡೇನಿಯಲ್ ವೆಟ್ಟೋರಿ ನಾಯಕತ್ವದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಮತ್ತೆ ಫೈನಲ್​​ಗೆ ಪ್ರವೇಶಿಸಿತ್ತು. ಅಂದು ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ 58 ರನ್​ಗಳಿಂದ ಸೋತು ಚಾಂಪಿಯನ್​ ಪಟ್ಟಕ್ಕೇರುವ ಅವಕಾಶವನ್ನು ರಾಯಲ್ ಚಾಲೆಂಜರ್ಸ್ ಹುಡುಗರು ಕೈಚೆಲ್ಲಿಕೊಂಡಿದ್ದರು.

ಇದಾದ ಬಳಿಕ 2011 ರಲ್ಲಿ ಡೇನಿಯಲ್ ವೆಟ್ಟೋರಿ ನಾಯಕತ್ವದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಮತ್ತೆ ಫೈನಲ್​​ಗೆ ಪ್ರವೇಶಿಸಿತ್ತು. ಅಂದು ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ 58 ರನ್​ಗಳಿಂದ ಸೋತು ಚಾಂಪಿಯನ್​ ಪಟ್ಟಕ್ಕೇರುವ ಅವಕಾಶವನ್ನು ರಾಯಲ್ ಚಾಲೆಂಜರ್ಸ್ ಹುಡುಗರು ಕೈಚೆಲ್ಲಿಕೊಂಡಿದ್ದರು.

7 / 9
ಇನ್ನು 2016 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಮೂರನೇ ಬಾರಿಗೆ ಫೈನಲ್​ಗೆ ಎಂಟ್ರಿ ಕೊಟ್ಟಿತ್ತು. ಆದರೆ ಅಂತಿಮ ಹಣಾಹಣಿಯಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ​ಕೇವಲ 8 ರನ್​ಗಳಿಂದ ಪರಾಜಯಗೊಳ್ಳುವ ಮೂಲಕ ಮೂರನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಳ್ಳುವ ಅವಕಾಶವನ್ನು ಕೈಚೆಲ್ಲಿಕೊಂಡಿದ್ದರು.

ಇನ್ನು 2016 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಮೂರನೇ ಬಾರಿಗೆ ಫೈನಲ್​ಗೆ ಎಂಟ್ರಿ ಕೊಟ್ಟಿತ್ತು. ಆದರೆ ಅಂತಿಮ ಹಣಾಹಣಿಯಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ​ಕೇವಲ 8 ರನ್​ಗಳಿಂದ ಪರಾಜಯಗೊಳ್ಳುವ ಮೂಲಕ ಮೂರನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಳ್ಳುವ ಅವಕಾಶವನ್ನು ಕೈಚೆಲ್ಲಿಕೊಂಡಿದ್ದರು.

8 / 9
ಇದೀಗ ಐಪಿಎಲ್​ 2023 ರಲ್ಲೂ ಆರ್​ಸಿಬಿ ತಂಡದ ಹೋರಾಟ ಮುಂದುವರೆದಿದೆ. ಆಡಿರುವ 10 ಪಂದ್ಯಗಳಲ್ಲಿ 5 ಜಯ ಸಾಧಿಸಿದೆ. ಇನ್ನುಳಿದಿರುವ 4 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಪ್ಲೇಆಫ್ ಪ್ರವೇಶಿಸುವ ಇರಾದೆಯಲ್ಲಿದೆ. ಅಲ್ಲದೆ ನಾಲ್ಕರ ಘಟ್ಟದಲ್ಲಿ ಗೆಲುವು ಸಾಧಿಸುವ ಮೂಲಕ ಈ ಬಾರಿ ಆರ್​ಸಿಬಿ 4ನೇ ಬಾರಿ ಫೈನಲ್ ಪ್ರವೇಶಿಸಲಿದೆಯಾ ಕಾದು ನೋಡಬೇಕಿದೆ.

ಇದೀಗ ಐಪಿಎಲ್​ 2023 ರಲ್ಲೂ ಆರ್​ಸಿಬಿ ತಂಡದ ಹೋರಾಟ ಮುಂದುವರೆದಿದೆ. ಆಡಿರುವ 10 ಪಂದ್ಯಗಳಲ್ಲಿ 5 ಜಯ ಸಾಧಿಸಿದೆ. ಇನ್ನುಳಿದಿರುವ 4 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಪ್ಲೇಆಫ್ ಪ್ರವೇಶಿಸುವ ಇರಾದೆಯಲ್ಲಿದೆ. ಅಲ್ಲದೆ ನಾಲ್ಕರ ಘಟ್ಟದಲ್ಲಿ ಗೆಲುವು ಸಾಧಿಸುವ ಮೂಲಕ ಈ ಬಾರಿ ಆರ್​ಸಿಬಿ 4ನೇ ಬಾರಿ ಫೈನಲ್ ಪ್ರವೇಶಿಸಲಿದೆಯಾ ಕಾದು ನೋಡಬೇಕಿದೆ.

9 / 9
Follow us
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?