AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಗೆ ಧೋನಿ ನಾಯಕರಾಗಿದ್ರೆ, ಈಗಾಗಲೇ 3 ಕಪ್​ ಆದ್ರೂ ಗೆಲ್ಲುತ್ತಿತ್ತು: ವಾಸಿಂ ಅಕ್ರಂ

IPL 2023 Kannada: ಐಪಿಎಲ್​ 2023 ರಲ್ಲೂ ಆರ್​ಸಿಬಿ ತಂಡದ ಹೋರಾಟ ಮುಂದುವರೆದಿದೆ. ಆಡಿರುವ 10 ಪಂದ್ಯಗಳಲ್ಲಿ 5 ಜಯ ಸಾಧಿಸಿದೆ. ಇನ್ನುಳಿದಿರುವ 4 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಪ್ಲೇಆಫ್ ಪ್ರವೇಶಿಸುವ ಇರಾದೆಯಲ್ಲಿದೆ.

TV9 Web
| Edited By: |

Updated on: May 08, 2023 | 3:57 PM

Share
IPL 2023: RCB ಗೆ ಧೋನಿ ನಾಯಕರಾಗಿದ್ರೆ, ಈಗಾಗಲೇ 3 ಕಪ್​ ಆದ್ರೂ ಗೆಲ್ಲುತ್ತಿತ್ತು: ವಾಸಿಂ ಅಕ್ರಂ

1 / 9
ಒಂದು ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಹೇಂದ್ರ ಸಿಂಗ್ ಧೋನಿ ಮುನ್ನಡೆಸಿದ್ದರೆ ಕನಿಷ್ಠ 3 ಕಪ್​ಗಳನ್ನಾದರೂ ಗೆಲ್ಲುತ್ತಿತ್ತು. ಹೀಗಂದಿದ್ದು ಮಾತ್ಯಾರೂ ಅಲ್ಲ, ಪಾಕಿಸ್ತಾನ ತಂಡದ ಮಾಜಿ ಆಟಗಾರ ವಾಸಿಂ ಅಕ್ರಮ್.

ಒಂದು ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಹೇಂದ್ರ ಸಿಂಗ್ ಧೋನಿ ಮುನ್ನಡೆಸಿದ್ದರೆ ಕನಿಷ್ಠ 3 ಕಪ್​ಗಳನ್ನಾದರೂ ಗೆಲ್ಲುತ್ತಿತ್ತು. ಹೀಗಂದಿದ್ದು ಮಾತ್ಯಾರೂ ಅಲ್ಲ, ಪಾಕಿಸ್ತಾನ ತಂಡದ ಮಾಜಿ ಆಟಗಾರ ವಾಸಿಂ ಅಕ್ರಮ್.

2 / 9
ವೆಬ್​ಸೈಟ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ವಾಸಿಂ ಅಕ್ರಮ್, ಆರ್​ಸಿಬಿ ಪ್ರತಿ ಸೀಸನ್​ನಲ್ಲೂ ಉತ್ತಮ ತಂಡವನ್ನೇ ರೂಪಿಸಿದೆ. ಆದರೆ ಕಪ್ ಗೆಲ್ಲಲು ಸಾಧ್ಯವಾಗಲಿಲ್ಲ. ಅದರಲ್ಲೂ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ತಂಡವು ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವಲ್ಲಿ ವಿಫಲವಾಗಿತ್ತು.

ವೆಬ್​ಸೈಟ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ವಾಸಿಂ ಅಕ್ರಮ್, ಆರ್​ಸಿಬಿ ಪ್ರತಿ ಸೀಸನ್​ನಲ್ಲೂ ಉತ್ತಮ ತಂಡವನ್ನೇ ರೂಪಿಸಿದೆ. ಆದರೆ ಕಪ್ ಗೆಲ್ಲಲು ಸಾಧ್ಯವಾಗಲಿಲ್ಲ. ಅದರಲ್ಲೂ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ತಂಡವು ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವಲ್ಲಿ ವಿಫಲವಾಗಿತ್ತು.

3 / 9
ಒಂದು ವೇಳೆ ಆರ್​ಸಿಬಿ ತಂಡವನ್ನು ಮಹೇಂದ್ರ ಸಿಂಗ್ ಧೋನಿ ಏನಾದರೂ ಮುನ್ನಡೆಸಿದ್ದರೆ, ಈಗಾಗಲೇ 3 ಕಪ್​ಗಳನ್ನಾದರೂ ಗೆದ್ದಿರುತ್ತಿತ್ತು. ಏಕೆಂದರೆ ಧೋನಿ ಅತ್ಯುತ್ತಮ ನಾಯಕ. ಅವರಿಗೆ ತಂಡವನ್ನು ಯಾವ ಪರಿಸ್ಥಿತಿಯಲ್ಲಿ ಹೇಗೆ ಮುನ್ನಡೆಸಬೇಕೆಂದು ಚೆನ್ನಾಗಿ ತಿಳಿದಿದೆ ಎಂದು ಅಕ್ರಮ್ ಅಭಿಪ್ರಾಯಪಟ್ಟಿದ್ದಾರೆ.

ಒಂದು ವೇಳೆ ಆರ್​ಸಿಬಿ ತಂಡವನ್ನು ಮಹೇಂದ್ರ ಸಿಂಗ್ ಧೋನಿ ಏನಾದರೂ ಮುನ್ನಡೆಸಿದ್ದರೆ, ಈಗಾಗಲೇ 3 ಕಪ್​ಗಳನ್ನಾದರೂ ಗೆದ್ದಿರುತ್ತಿತ್ತು. ಏಕೆಂದರೆ ಧೋನಿ ಅತ್ಯುತ್ತಮ ನಾಯಕ. ಅವರಿಗೆ ತಂಡವನ್ನು ಯಾವ ಪರಿಸ್ಥಿತಿಯಲ್ಲಿ ಹೇಗೆ ಮುನ್ನಡೆಸಬೇಕೆಂದು ಚೆನ್ನಾಗಿ ತಿಳಿದಿದೆ ಎಂದು ಅಕ್ರಮ್ ಅಭಿಪ್ರಾಯಪಟ್ಟಿದ್ದಾರೆ.

4 / 9
ನನ್ನ ಪ್ರಕಾರ, ಮಹೇಂದ್ರ ಸಿಂಗ್ ಧೋನಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಾರಥ್ಯವಹಿಸಿದ್ದರೆ ಖಂಡಿತವಾಗಿಯೂ ಕನಿಷ್ಠ ಮೂರು ಕಪ್​ಗಳನ್ನಾದರೂ ಗೆಲ್ಲುತ್ತಿದ್ದರು ಎಂದು ವಾಸಿಂ ಅಕ್ರಮ್ ಹೇಳಿದ್ದಾರೆ.

ನನ್ನ ಪ್ರಕಾರ, ಮಹೇಂದ್ರ ಸಿಂಗ್ ಧೋನಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಾರಥ್ಯವಹಿಸಿದ್ದರೆ ಖಂಡಿತವಾಗಿಯೂ ಕನಿಷ್ಠ ಮೂರು ಕಪ್​ಗಳನ್ನಾದರೂ ಗೆಲ್ಲುತ್ತಿದ್ದರು ಎಂದು ವಾಸಿಂ ಅಕ್ರಮ್ ಹೇಳಿದ್ದಾರೆ.

5 / 9
ಅಂದಹಾಗೆ 2009 ರಲ್ಲಿ ಅನಿಲ್ ಕುಂಬ್ಳೆ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಬಾರಿಗೆ ಫೈನಲ್ ಪ್ರವೇಶಿಸಿತ್ತು. ಆದರೆ ಅಂತಿಮ ಪಂದ್ಯದಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 6 ರನ್​ಗಳಿಂದ ಸೋಲುವ ಮೂಲಕ ಆರ್​ಸಿಬಿ ಚೊಚ್ಚಲ ಬಾರಿಗೆ ಟ್ರೋಫಿಗೆ ಮುತ್ತಿಕ್ಕುವ ಅವಕಾಶ ಕಳೆದುಕೊಂಡಿತು.

ಅಂದಹಾಗೆ 2009 ರಲ್ಲಿ ಅನಿಲ್ ಕುಂಬ್ಳೆ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಬಾರಿಗೆ ಫೈನಲ್ ಪ್ರವೇಶಿಸಿತ್ತು. ಆದರೆ ಅಂತಿಮ ಪಂದ್ಯದಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 6 ರನ್​ಗಳಿಂದ ಸೋಲುವ ಮೂಲಕ ಆರ್​ಸಿಬಿ ಚೊಚ್ಚಲ ಬಾರಿಗೆ ಟ್ರೋಫಿಗೆ ಮುತ್ತಿಕ್ಕುವ ಅವಕಾಶ ಕಳೆದುಕೊಂಡಿತು.

6 / 9
ಇದಾದ ಬಳಿಕ 2011 ರಲ್ಲಿ ಡೇನಿಯಲ್ ವೆಟ್ಟೋರಿ ನಾಯಕತ್ವದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಮತ್ತೆ ಫೈನಲ್​​ಗೆ ಪ್ರವೇಶಿಸಿತ್ತು. ಅಂದು ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ 58 ರನ್​ಗಳಿಂದ ಸೋತು ಚಾಂಪಿಯನ್​ ಪಟ್ಟಕ್ಕೇರುವ ಅವಕಾಶವನ್ನು ರಾಯಲ್ ಚಾಲೆಂಜರ್ಸ್ ಹುಡುಗರು ಕೈಚೆಲ್ಲಿಕೊಂಡಿದ್ದರು.

ಇದಾದ ಬಳಿಕ 2011 ರಲ್ಲಿ ಡೇನಿಯಲ್ ವೆಟ್ಟೋರಿ ನಾಯಕತ್ವದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಮತ್ತೆ ಫೈನಲ್​​ಗೆ ಪ್ರವೇಶಿಸಿತ್ತು. ಅಂದು ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ 58 ರನ್​ಗಳಿಂದ ಸೋತು ಚಾಂಪಿಯನ್​ ಪಟ್ಟಕ್ಕೇರುವ ಅವಕಾಶವನ್ನು ರಾಯಲ್ ಚಾಲೆಂಜರ್ಸ್ ಹುಡುಗರು ಕೈಚೆಲ್ಲಿಕೊಂಡಿದ್ದರು.

7 / 9
ಇನ್ನು 2016 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಮೂರನೇ ಬಾರಿಗೆ ಫೈನಲ್​ಗೆ ಎಂಟ್ರಿ ಕೊಟ್ಟಿತ್ತು. ಆದರೆ ಅಂತಿಮ ಹಣಾಹಣಿಯಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ​ಕೇವಲ 8 ರನ್​ಗಳಿಂದ ಪರಾಜಯಗೊಳ್ಳುವ ಮೂಲಕ ಮೂರನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಳ್ಳುವ ಅವಕಾಶವನ್ನು ಕೈಚೆಲ್ಲಿಕೊಂಡಿದ್ದರು.

ಇನ್ನು 2016 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಮೂರನೇ ಬಾರಿಗೆ ಫೈನಲ್​ಗೆ ಎಂಟ್ರಿ ಕೊಟ್ಟಿತ್ತು. ಆದರೆ ಅಂತಿಮ ಹಣಾಹಣಿಯಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ​ಕೇವಲ 8 ರನ್​ಗಳಿಂದ ಪರಾಜಯಗೊಳ್ಳುವ ಮೂಲಕ ಮೂರನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಳ್ಳುವ ಅವಕಾಶವನ್ನು ಕೈಚೆಲ್ಲಿಕೊಂಡಿದ್ದರು.

8 / 9
ಇದೀಗ ಐಪಿಎಲ್​ 2023 ರಲ್ಲೂ ಆರ್​ಸಿಬಿ ತಂಡದ ಹೋರಾಟ ಮುಂದುವರೆದಿದೆ. ಆಡಿರುವ 10 ಪಂದ್ಯಗಳಲ್ಲಿ 5 ಜಯ ಸಾಧಿಸಿದೆ. ಇನ್ನುಳಿದಿರುವ 4 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಪ್ಲೇಆಫ್ ಪ್ರವೇಶಿಸುವ ಇರಾದೆಯಲ್ಲಿದೆ. ಅಲ್ಲದೆ ನಾಲ್ಕರ ಘಟ್ಟದಲ್ಲಿ ಗೆಲುವು ಸಾಧಿಸುವ ಮೂಲಕ ಈ ಬಾರಿ ಆರ್​ಸಿಬಿ 4ನೇ ಬಾರಿ ಫೈನಲ್ ಪ್ರವೇಶಿಸಲಿದೆಯಾ ಕಾದು ನೋಡಬೇಕಿದೆ.

ಇದೀಗ ಐಪಿಎಲ್​ 2023 ರಲ್ಲೂ ಆರ್​ಸಿಬಿ ತಂಡದ ಹೋರಾಟ ಮುಂದುವರೆದಿದೆ. ಆಡಿರುವ 10 ಪಂದ್ಯಗಳಲ್ಲಿ 5 ಜಯ ಸಾಧಿಸಿದೆ. ಇನ್ನುಳಿದಿರುವ 4 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಪ್ಲೇಆಫ್ ಪ್ರವೇಶಿಸುವ ಇರಾದೆಯಲ್ಲಿದೆ. ಅಲ್ಲದೆ ನಾಲ್ಕರ ಘಟ್ಟದಲ್ಲಿ ಗೆಲುವು ಸಾಧಿಸುವ ಮೂಲಕ ಈ ಬಾರಿ ಆರ್​ಸಿಬಿ 4ನೇ ಬಾರಿ ಫೈನಲ್ ಪ್ರವೇಶಿಸಲಿದೆಯಾ ಕಾದು ನೋಡಬೇಕಿದೆ.

9 / 9
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್