AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋತ RCB ತಂಡದ ಫೈನಲ್​ ಲೆಕ್ಕಾಚಾರ ಹೀಗಿದೆ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 15ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 109 ರನ್​ಗಳು ಮಾತ್ರ. ಈ ಗುರಿಯನ್ನು 15.4 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇದು ಈ ಬಾರಿಯ ಟೂರ್ನಿಯಲ್ಲಿ ಆರ್​ಸಿಬಿ ತಂಡದ ಮೊದಲ ಸೋಲು ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Jan 25, 2026 | 8:00 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಸತತ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಕೊನೆಗೂ ಸೋಲುಣಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡದ ಫೈನಲ್​ ಲೆಕ್ಕಾಚಾರ ಕೂಡ ಬದಲಾಗಿದೆ.

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಸತತ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಕೊನೆಗೂ ಸೋಲುಣಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡದ ಫೈನಲ್​ ಲೆಕ್ಕಾಚಾರ ಕೂಡ ಬದಲಾಗಿದೆ.

1 / 6
ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​ಸಿಬಿ ತಂಡವು ಗೆಲುವು ದಾಖಲಿಸಿದ್ದರೆ ನೇರವಾಗಿ ಫೈನಲ್​ಗೇರಬಹುದಿತ್ತು. ಆದರೆ ಇದೀಗ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮುಂದಿನ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಅನಿವಾರ್ಯವಾಗಿ ಮಾರ್ಪಟ್ಟಿದೆ.

ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​ಸಿಬಿ ತಂಡವು ಗೆಲುವು ದಾಖಲಿಸಿದ್ದರೆ ನೇರವಾಗಿ ಫೈನಲ್​ಗೇರಬಹುದಿತ್ತು. ಆದರೆ ಇದೀಗ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮುಂದಿನ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಅನಿವಾರ್ಯವಾಗಿ ಮಾರ್ಪಟ್ಟಿದೆ.

2 / 6
ವುಮೆನ್ಸ್ ಪ್ರೀಮಿಯರ್ ಲೀಗ್​ ಟೂರ್ನಿಯ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸುತ್ತದೆ. ಇನ್ನು 2ನೇ ಮತ್ತು 3ನೇ ಸ್ಥಾನಗಳನ್ನು ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್​ ಟೂರ್ನಿಯ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸುತ್ತದೆ. ಇನ್ನು 2ನೇ ಮತ್ತು 3ನೇ ಸ್ಥಾನಗಳನ್ನು ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

3 / 6
ಇತ್ತ ಆರ್​ಸಿಬಿ ತಂಡವು ಈಗಾಗಲೇ 10 ಅಂಕಗಳೊಂದಿಗೆ ಪ್ಲೇಆಫ್​ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಇದೀಗ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಆರ್​ಸಿಬಿ ತಂಡವು ಮುಂದಿನ ಎರಡು ಮ್ಯಾಚ್​ಗಳಲ್ಲಿ ಒಂದು ಪಂದ್ಯದಲ್ಲಿ ಗೆದ್ದರೆ ಫೈನಲ್​ಗೆ ಪ್ರವೇಶಿಸಲಿದೆ.

ಇತ್ತ ಆರ್​ಸಿಬಿ ತಂಡವು ಈಗಾಗಲೇ 10 ಅಂಕಗಳೊಂದಿಗೆ ಪ್ಲೇಆಫ್​ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಇದೀಗ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಆರ್​ಸಿಬಿ ತಂಡವು ಮುಂದಿನ ಎರಡು ಮ್ಯಾಚ್​ಗಳಲ್ಲಿ ಒಂದು ಪಂದ್ಯದಲ್ಲಿ ಗೆದ್ದರೆ ಫೈನಲ್​ಗೆ ಪ್ರವೇಶಿಸಲಿದೆ.

4 / 6
ಏಕೆಂದರೆ ಆರ್​ಸಿಬಿ ತಂಡವನ್ನು ಹೊರತುಪಡಿಸಿ ಬೇರೆ ಯಾವುದೇ ತಂಡಕ್ಕೆ 12 ಅಂಕಗಳನ್ನು ಪಡೆಯಲು ಅವಕಾಶವಿಲ್ಲ. ಉಳಿದ ನಾಲ್ಕು ತಂಡಗಳು ಮುಂದಿನ ಎಲ್ಲಾ ಮ್ಯಾಚ್​ಗಳನ್ನು ಗೆದ್ದರೂ ಒಟ್ಟು 10 ಅಂಕಗಳನ್ನು ಮಾತ್ರ ಪಡೆಯಬಹುದು. ಹೀಗಾಗಿ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಗೆದ್ದರೆ ಫೈನಲ್​ಗೇರುವುದು ಖಚಿತ.

ಏಕೆಂದರೆ ಆರ್​ಸಿಬಿ ತಂಡವನ್ನು ಹೊರತುಪಡಿಸಿ ಬೇರೆ ಯಾವುದೇ ತಂಡಕ್ಕೆ 12 ಅಂಕಗಳನ್ನು ಪಡೆಯಲು ಅವಕಾಶವಿಲ್ಲ. ಉಳಿದ ನಾಲ್ಕು ತಂಡಗಳು ಮುಂದಿನ ಎಲ್ಲಾ ಮ್ಯಾಚ್​ಗಳನ್ನು ಗೆದ್ದರೂ ಒಟ್ಟು 10 ಅಂಕಗಳನ್ನು ಮಾತ್ರ ಪಡೆಯಬಹುದು. ಹೀಗಾಗಿ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಗೆದ್ದರೆ ಫೈನಲ್​ಗೇರುವುದು ಖಚಿತ.

5 / 6
ಅದರಂತೆ ಜನವರಿ 26 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅಥವಾ ಜನವರಿ 29 ರಂದು ನಡೆಯಲಿರುವ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಫೈನಲ್​ಗೆ ಪ್ರವೇಶಿಸುತ್ತದೆ. ಹೀಗಾಗಿ ನೇರವಾಗಿ ಫೈನಲ್​ಗೆ ಪ್ರವೇಶಿಸಲು ಆರ್​ಸಿಬಿ ತಂಡವು ಮುಂದಿನ 2 ಪಂದ್ಯಗಳಲ್ಲಿ ಒಂದು ಮ್ಯಾಚ್ ಗೆಲ್ಲಲೇಬೇಕು.

ಅದರಂತೆ ಜನವರಿ 26 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅಥವಾ ಜನವರಿ 29 ರಂದು ನಡೆಯಲಿರುವ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಫೈನಲ್​ಗೆ ಪ್ರವೇಶಿಸುತ್ತದೆ. ಹೀಗಾಗಿ ನೇರವಾಗಿ ಫೈನಲ್​ಗೆ ಪ್ರವೇಶಿಸಲು ಆರ್​ಸಿಬಿ ತಂಡವು ಮುಂದಿನ 2 ಪಂದ್ಯಗಳಲ್ಲಿ ಒಂದು ಮ್ಯಾಚ್ ಗೆಲ್ಲಲೇಬೇಕು.

6 / 6
ಇಂದು ಈ ರಾಶಿಯವರ ಪ್ರೇಮಿಯಿಂದ ಮನ್ನಣೆ!
ಇಂದು ಈ ರಾಶಿಯವರ ಪ್ರೇಮಿಯಿಂದ ಮನ್ನಣೆ!
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ