AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು ಇವರೇ..!

RCB's hat trick wicket takers: ಆರ್​ಸಿಬಿ ಪರ ಇಬ್ಬರು ಬೌಲರುಗಳು ಮಾತ್ರ ಹ್ಯಾಟ್ರಿಕ್​ ವಿಕೆಟ್ ಪಡೆದಿದ್ದರು. ಮೊದಲ ಬಾರಿಗೆ ಆರ್​ಸಿಬಿ ಪರ ಹ್ಯಾಟ್ರಿಕ್ ಪಡೆದಿದ್ದು ವೇಗಿ ಪ್ರವೀಣ್ ಕುಮಾರ್.

TV9 Web
| Updated By: ಝಾಹಿರ್ ಯೂಸುಫ್

Updated on: Sep 27, 2021 | 3:11 PM

ಬಲಿಷ್ಠ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸುವ ಮೂಲಕ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ದ್ವಿತಿಯಾರ್ಧದಲ್ಲಿ ಗೆಲುವಿನ ಖಾತೆ ತೆರೆದಿದೆ. 166 ರನ್​ಗಳ ಸ್ಪರ್ಧಾತ್ಮಕ ಸವಾಲನ್ನು ಬೆನ್ನತ್ತಿದ ಮುಂಬೈ ಒಂದು ಹಂತದಲ್ಲಿ ಚೇಸ್ ಮಾಡುವ ಸ್ಥಿತಿಯಲ್ಲಿತ್ತು. ಆದರೆ ಇಡೀ ಪಂದ್ಯದ ಚಿತ್ರಣ ಬದಲಾಗಿದ್ದು 17ನೇ ಓವರ್​ನಲ್ಲಿ. ವಿರಾಟ್ ಕೊಹ್ಲಿ ಮಾಡಿದ ಬೌಲಿಂಗ್ ಚೇಂಜ್ ಇಡೀ ಪಂದ್ಯದ ಗತಿಯನ್ನೇ ಬದಲಿಸಿತು. ಏಕೆಂದರೆ ಒಂದೇ ಓವರ್​ನಲ್ಲಿ 3 ವಿಕೆಟ್​ ಉರುಳಿದ್ದವು. ಈ ಮೂವರಲ್ಲಿ ಇಬ್ಬರು ಟಿ20 ಕ್ರಿಕೆಟ್​ನ ಡೇಂಜರಸ್​ ಬ್ಯಾಟ್ಸ್​ಮನ್ ಎಂಬುದು ವಿಶೇಷ.

ಬಲಿಷ್ಠ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸುವ ಮೂಲಕ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ದ್ವಿತಿಯಾರ್ಧದಲ್ಲಿ ಗೆಲುವಿನ ಖಾತೆ ತೆರೆದಿದೆ. 166 ರನ್​ಗಳ ಸ್ಪರ್ಧಾತ್ಮಕ ಸವಾಲನ್ನು ಬೆನ್ನತ್ತಿದ ಮುಂಬೈ ಒಂದು ಹಂತದಲ್ಲಿ ಚೇಸ್ ಮಾಡುವ ಸ್ಥಿತಿಯಲ್ಲಿತ್ತು. ಆದರೆ ಇಡೀ ಪಂದ್ಯದ ಚಿತ್ರಣ ಬದಲಾಗಿದ್ದು 17ನೇ ಓವರ್​ನಲ್ಲಿ. ವಿರಾಟ್ ಕೊಹ್ಲಿ ಮಾಡಿದ ಬೌಲಿಂಗ್ ಚೇಂಜ್ ಇಡೀ ಪಂದ್ಯದ ಗತಿಯನ್ನೇ ಬದಲಿಸಿತು. ಏಕೆಂದರೆ ಒಂದೇ ಓವರ್​ನಲ್ಲಿ 3 ವಿಕೆಟ್​ ಉರುಳಿದ್ದವು. ಈ ಮೂವರಲ್ಲಿ ಇಬ್ಬರು ಟಿ20 ಕ್ರಿಕೆಟ್​ನ ಡೇಂಜರಸ್​ ಬ್ಯಾಟ್ಸ್​ಮನ್ ಎಂಬುದು ವಿಶೇಷ.

1 / 5
 ಹೌದು, 17ನೇ ಓವರ್​ನಲ್ಲಿ ಹರ್ಷಲ್ ಪಟೇಲ್ ಹಾರ್ದಿಕ್ ಪಾಂಡ್ಯ ವಿಕೆಟ್ ಪಡೆಯುವುದರೊಂದಿಗೆ ಆರ್​ಸಿಬಿ ಗೆಲುವಿನ ಆಸೆ ಚಿಗುರಿಸಿದರು. ಇದರ ಬೆನ್ನಲ್ಲೇ ಕೀರನ್ ಪೊಲಾರ್ಡ್​​​ರನ್ನು ಬೌಲ್ಡ್​ ಮಾಡಿ ಗೆಲುವನ್ನು ಖಚಿತಪಡಿಸಿದರು. ಆ ಬಳಿಕ ಬಂದ ರಾಹುಲ್ ಚಹರ್​ರನ್ನು ಎಲ್​ಬಿ ಬಲೆಗೆ ಬೀಳಿಸಿ ಐಪಿಎಲ್​ನಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದರು. ಅದರಲ್ಲೂ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂರನೇ ಬೌಲರ್​ ಎಂಬ ಹೆಗ್ಗಳಿಕೆಗೆ ಹರ್ಷಲ್ ಪಟೇಲ್ ಪಾತ್ರರಾದರು.

ಹೌದು, 17ನೇ ಓವರ್​ನಲ್ಲಿ ಹರ್ಷಲ್ ಪಟೇಲ್ ಹಾರ್ದಿಕ್ ಪಾಂಡ್ಯ ವಿಕೆಟ್ ಪಡೆಯುವುದರೊಂದಿಗೆ ಆರ್​ಸಿಬಿ ಗೆಲುವಿನ ಆಸೆ ಚಿಗುರಿಸಿದರು. ಇದರ ಬೆನ್ನಲ್ಲೇ ಕೀರನ್ ಪೊಲಾರ್ಡ್​​​ರನ್ನು ಬೌಲ್ಡ್​ ಮಾಡಿ ಗೆಲುವನ್ನು ಖಚಿತಪಡಿಸಿದರು. ಆ ಬಳಿಕ ಬಂದ ರಾಹುಲ್ ಚಹರ್​ರನ್ನು ಎಲ್​ಬಿ ಬಲೆಗೆ ಬೀಳಿಸಿ ಐಪಿಎಲ್​ನಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದರು. ಅದರಲ್ಲೂ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂರನೇ ಬೌಲರ್​ ಎಂಬ ಹೆಗ್ಗಳಿಕೆಗೆ ಹರ್ಷಲ್ ಪಟೇಲ್ ಪಾತ್ರರಾದರು.

2 / 5
ಇದಕ್ಕೂ ಮುನ್ನ ಆರ್​ಸಿಬಿ ಪರ ಇಬ್ಬರು ಬೌಲರುಗಳು ಮಾತ್ರ ಹ್ಯಾಟ್ರಿಕ್​ ವಿಕೆಟ್ ಪಡೆದಿದ್ದರು. ಮೊದಲ ಬಾರಿಗೆ ಆರ್​ಸಿಬಿ ಪರ ಹ್ಯಾಟ್ರಿಕ್ ಪಡೆದಿದ್ದು ವೇಗಿ ಪ್ರವೀಣ್ ಕುಮಾರ್. 2010 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪ್ರವೀಣ್ ಕುಮಾರ್ ರಾಜಸ್ಥಾನ್ ರಾಯಲ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ದಾಖಲೆ ಬರೆದಿದ್ದರು.

ಇದಕ್ಕೂ ಮುನ್ನ ಆರ್​ಸಿಬಿ ಪರ ಇಬ್ಬರು ಬೌಲರುಗಳು ಮಾತ್ರ ಹ್ಯಾಟ್ರಿಕ್​ ವಿಕೆಟ್ ಪಡೆದಿದ್ದರು. ಮೊದಲ ಬಾರಿಗೆ ಆರ್​ಸಿಬಿ ಪರ ಹ್ಯಾಟ್ರಿಕ್ ಪಡೆದಿದ್ದು ವೇಗಿ ಪ್ರವೀಣ್ ಕುಮಾರ್. 2010 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪ್ರವೀಣ್ ಕುಮಾರ್ ರಾಜಸ್ಥಾನ್ ರಾಯಲ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ದಾಖಲೆ ಬರೆದಿದ್ದರು.

3 / 5
ಅದಾದ ಬಳಿಕ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಬಂದಿದ್ದು 2017 ರಲ್ಲಿ. ಮುಂಬೈ ಇಂಡಿಯನ್ಸ್​ ವಿರುದ್ದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸ್ಯಾಮ್ಯುಯೆಲ್ ಬದ್ರಿ (ವೆಸ್ಟ್ ಇಂಡೀಸ್) ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು.

ಅದಾದ ಬಳಿಕ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಬಂದಿದ್ದು 2017 ರಲ್ಲಿ. ಮುಂಬೈ ಇಂಡಿಯನ್ಸ್​ ವಿರುದ್ದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸ್ಯಾಮ್ಯುಯೆಲ್ ಬದ್ರಿ (ವೆಸ್ಟ್ ಇಂಡೀಸ್) ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು.

4 / 5
ಇದೀಗ ಹರ್ಷಲ್ ಪಟೇಲ್ ಕೂಡ ಮುಂಬೈ ಇಂಡಿಯನ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ಇತಿಹಾಸ ಬರೆದಿದ್ದಾರೆ.

ಇದೀಗ ಹರ್ಷಲ್ ಪಟೇಲ್ ಕೂಡ ಮುಂಬೈ ಇಂಡಿಯನ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ಇತಿಹಾಸ ಬರೆದಿದ್ದಾರೆ.

5 / 5
Follow us
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?