IPL 2021: RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು ಇವರೇ..!

RCB's hat trick wicket takers: ಆರ್​ಸಿಬಿ ಪರ ಇಬ್ಬರು ಬೌಲರುಗಳು ಮಾತ್ರ ಹ್ಯಾಟ್ರಿಕ್​ ವಿಕೆಟ್ ಪಡೆದಿದ್ದರು. ಮೊದಲ ಬಾರಿಗೆ ಆರ್​ಸಿಬಿ ಪರ ಹ್ಯಾಟ್ರಿಕ್ ಪಡೆದಿದ್ದು ವೇಗಿ ಪ್ರವೀಣ್ ಕುಮಾರ್.

| Updated By: ಝಾಹಿರ್ ಯೂಸುಫ್

Updated on: Sep 27, 2021 | 3:11 PM

ಬಲಿಷ್ಠ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸುವ ಮೂಲಕ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ದ್ವಿತಿಯಾರ್ಧದಲ್ಲಿ ಗೆಲುವಿನ ಖಾತೆ ತೆರೆದಿದೆ. 166 ರನ್​ಗಳ ಸ್ಪರ್ಧಾತ್ಮಕ ಸವಾಲನ್ನು ಬೆನ್ನತ್ತಿದ ಮುಂಬೈ ಒಂದು ಹಂತದಲ್ಲಿ ಚೇಸ್ ಮಾಡುವ ಸ್ಥಿತಿಯಲ್ಲಿತ್ತು. ಆದರೆ ಇಡೀ ಪಂದ್ಯದ ಚಿತ್ರಣ ಬದಲಾಗಿದ್ದು 17ನೇ ಓವರ್​ನಲ್ಲಿ. ವಿರಾಟ್ ಕೊಹ್ಲಿ ಮಾಡಿದ ಬೌಲಿಂಗ್ ಚೇಂಜ್ ಇಡೀ ಪಂದ್ಯದ ಗತಿಯನ್ನೇ ಬದಲಿಸಿತು. ಏಕೆಂದರೆ ಒಂದೇ ಓವರ್​ನಲ್ಲಿ 3 ವಿಕೆಟ್​ ಉರುಳಿದ್ದವು. ಈ ಮೂವರಲ್ಲಿ ಇಬ್ಬರು ಟಿ20 ಕ್ರಿಕೆಟ್​ನ ಡೇಂಜರಸ್​ ಬ್ಯಾಟ್ಸ್​ಮನ್ ಎಂಬುದು ವಿಶೇಷ.

ಬಲಿಷ್ಠ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸುವ ಮೂಲಕ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ದ್ವಿತಿಯಾರ್ಧದಲ್ಲಿ ಗೆಲುವಿನ ಖಾತೆ ತೆರೆದಿದೆ. 166 ರನ್​ಗಳ ಸ್ಪರ್ಧಾತ್ಮಕ ಸವಾಲನ್ನು ಬೆನ್ನತ್ತಿದ ಮುಂಬೈ ಒಂದು ಹಂತದಲ್ಲಿ ಚೇಸ್ ಮಾಡುವ ಸ್ಥಿತಿಯಲ್ಲಿತ್ತು. ಆದರೆ ಇಡೀ ಪಂದ್ಯದ ಚಿತ್ರಣ ಬದಲಾಗಿದ್ದು 17ನೇ ಓವರ್​ನಲ್ಲಿ. ವಿರಾಟ್ ಕೊಹ್ಲಿ ಮಾಡಿದ ಬೌಲಿಂಗ್ ಚೇಂಜ್ ಇಡೀ ಪಂದ್ಯದ ಗತಿಯನ್ನೇ ಬದಲಿಸಿತು. ಏಕೆಂದರೆ ಒಂದೇ ಓವರ್​ನಲ್ಲಿ 3 ವಿಕೆಟ್​ ಉರುಳಿದ್ದವು. ಈ ಮೂವರಲ್ಲಿ ಇಬ್ಬರು ಟಿ20 ಕ್ರಿಕೆಟ್​ನ ಡೇಂಜರಸ್​ ಬ್ಯಾಟ್ಸ್​ಮನ್ ಎಂಬುದು ವಿಶೇಷ.

1 / 5
 ಹೌದು, 17ನೇ ಓವರ್​ನಲ್ಲಿ ಹರ್ಷಲ್ ಪಟೇಲ್ ಹಾರ್ದಿಕ್ ಪಾಂಡ್ಯ ವಿಕೆಟ್ ಪಡೆಯುವುದರೊಂದಿಗೆ ಆರ್​ಸಿಬಿ ಗೆಲುವಿನ ಆಸೆ ಚಿಗುರಿಸಿದರು. ಇದರ ಬೆನ್ನಲ್ಲೇ ಕೀರನ್ ಪೊಲಾರ್ಡ್​​​ರನ್ನು ಬೌಲ್ಡ್​ ಮಾಡಿ ಗೆಲುವನ್ನು ಖಚಿತಪಡಿಸಿದರು. ಆ ಬಳಿಕ ಬಂದ ರಾಹುಲ್ ಚಹರ್​ರನ್ನು ಎಲ್​ಬಿ ಬಲೆಗೆ ಬೀಳಿಸಿ ಐಪಿಎಲ್​ನಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದರು. ಅದರಲ್ಲೂ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂರನೇ ಬೌಲರ್​ ಎಂಬ ಹೆಗ್ಗಳಿಕೆಗೆ ಹರ್ಷಲ್ ಪಟೇಲ್ ಪಾತ್ರರಾದರು.

ಹೌದು, 17ನೇ ಓವರ್​ನಲ್ಲಿ ಹರ್ಷಲ್ ಪಟೇಲ್ ಹಾರ್ದಿಕ್ ಪಾಂಡ್ಯ ವಿಕೆಟ್ ಪಡೆಯುವುದರೊಂದಿಗೆ ಆರ್​ಸಿಬಿ ಗೆಲುವಿನ ಆಸೆ ಚಿಗುರಿಸಿದರು. ಇದರ ಬೆನ್ನಲ್ಲೇ ಕೀರನ್ ಪೊಲಾರ್ಡ್​​​ರನ್ನು ಬೌಲ್ಡ್​ ಮಾಡಿ ಗೆಲುವನ್ನು ಖಚಿತಪಡಿಸಿದರು. ಆ ಬಳಿಕ ಬಂದ ರಾಹುಲ್ ಚಹರ್​ರನ್ನು ಎಲ್​ಬಿ ಬಲೆಗೆ ಬೀಳಿಸಿ ಐಪಿಎಲ್​ನಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದರು. ಅದರಲ್ಲೂ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂರನೇ ಬೌಲರ್​ ಎಂಬ ಹೆಗ್ಗಳಿಕೆಗೆ ಹರ್ಷಲ್ ಪಟೇಲ್ ಪಾತ್ರರಾದರು.

2 / 5
ಇದಕ್ಕೂ ಮುನ್ನ ಆರ್​ಸಿಬಿ ಪರ ಇಬ್ಬರು ಬೌಲರುಗಳು ಮಾತ್ರ ಹ್ಯಾಟ್ರಿಕ್​ ವಿಕೆಟ್ ಪಡೆದಿದ್ದರು. ಮೊದಲ ಬಾರಿಗೆ ಆರ್​ಸಿಬಿ ಪರ ಹ್ಯಾಟ್ರಿಕ್ ಪಡೆದಿದ್ದು ವೇಗಿ ಪ್ರವೀಣ್ ಕುಮಾರ್. 2010 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪ್ರವೀಣ್ ಕುಮಾರ್ ರಾಜಸ್ಥಾನ್ ರಾಯಲ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ದಾಖಲೆ ಬರೆದಿದ್ದರು.

ಇದಕ್ಕೂ ಮುನ್ನ ಆರ್​ಸಿಬಿ ಪರ ಇಬ್ಬರು ಬೌಲರುಗಳು ಮಾತ್ರ ಹ್ಯಾಟ್ರಿಕ್​ ವಿಕೆಟ್ ಪಡೆದಿದ್ದರು. ಮೊದಲ ಬಾರಿಗೆ ಆರ್​ಸಿಬಿ ಪರ ಹ್ಯಾಟ್ರಿಕ್ ಪಡೆದಿದ್ದು ವೇಗಿ ಪ್ರವೀಣ್ ಕುಮಾರ್. 2010 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪ್ರವೀಣ್ ಕುಮಾರ್ ರಾಜಸ್ಥಾನ್ ರಾಯಲ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ದಾಖಲೆ ಬರೆದಿದ್ದರು.

3 / 5
ಅದಾದ ಬಳಿಕ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಬಂದಿದ್ದು 2017 ರಲ್ಲಿ. ಮುಂಬೈ ಇಂಡಿಯನ್ಸ್​ ವಿರುದ್ದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸ್ಯಾಮ್ಯುಯೆಲ್ ಬದ್ರಿ (ವೆಸ್ಟ್ ಇಂಡೀಸ್) ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು.

ಅದಾದ ಬಳಿಕ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಬಂದಿದ್ದು 2017 ರಲ್ಲಿ. ಮುಂಬೈ ಇಂಡಿಯನ್ಸ್​ ವಿರುದ್ದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸ್ಯಾಮ್ಯುಯೆಲ್ ಬದ್ರಿ (ವೆಸ್ಟ್ ಇಂಡೀಸ್) ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು.

4 / 5
ಇದೀಗ ಹರ್ಷಲ್ ಪಟೇಲ್ ಕೂಡ ಮುಂಬೈ ಇಂಡಿಯನ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ಇತಿಹಾಸ ಬರೆದಿದ್ದಾರೆ.

ಇದೀಗ ಹರ್ಷಲ್ ಪಟೇಲ್ ಕೂಡ ಮುಂಬೈ ಇಂಡಿಯನ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ಇತಿಹಾಸ ಬರೆದಿದ್ದಾರೆ.

5 / 5
Follow us
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ