AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 31 ಸಿಕ್ಸ್​: ರಜತ್ ಪಾಟಿದಾರ್ ಪವರ್​ಗೆ ಸಿಕ್ಸರ್​ಗಳ ಸುರಿಮಳೆ..!

IPL 2025 RCB: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಜತ್ ಪಾಟಿದಾರ್ ಆರ್​ಸಿಬಿ ಪರ ಕಣಕ್ಕಿಳಿಯಲಿದ್ದಾರೆ. ಕಳೆದ ಎರಡು ಸೀಸನ್​​ಗಳಲ್ಲಿ ಆರ್​ಸಿಬಿ ಪರ ಬ್ಯಾಟ್ ಬೀಸಿದ್ದ ರಜತ್ 24 ಇನಿಂಗ್ಸ್​ಗಳ ಮೂಲಕ ಒಟ್ಟು 799 ರನ್ ಕಲೆಹಾಕಿದ್ದಾರೆ. ಇದೀಗ ಅದ್ಭುತ ಲಯದಲ್ಲಿರುವ ಪಾಟಿದಾರ್ ಕಡೆಯಿಂದ ಈ ಬಾರಿ ಕೂಡ ಸಿಡಿಲಬ್ಬರದ ನಿರೀಕ್ಷಿಸಬಹುದು.

ಝಾಹಿರ್ ಯೂಸುಫ್
|

Updated on: Dec 17, 2024 | 6:53 AM

ದೇಶೀಯ ಅಂಗಳದ ಟಿ20 ಟೂರ್ನಿ ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿಗೆ ತೆರೆಬಿದ್ದಿದೆ. ಫೈನಲ್ ಪಂದ್ಯದಲ್ಲಿ ಮಧ್ಯ ಪ್ರದೇಶ್ ತಂಡವನ್ನು 5 ವಿಕೆಟ್​​ಗಳಿಂದ ಸೋಲಿಸಿ ಮುಂಬೈ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ವಿಶೇಷ ಎಂದರೆ ಈ ಬಾರಿ ಮಧ್ಯ ಪ್ರದೇಶ್ ತಂಡವನ್ನು ಮುನ್ನಡೆಸಿದ್ದು ಆರ್​ಸಿಬಿ ಆಟಗಾರ ರಜತ್ ಪಾಟಿದಾರ್.

ದೇಶೀಯ ಅಂಗಳದ ಟಿ20 ಟೂರ್ನಿ ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿಗೆ ತೆರೆಬಿದ್ದಿದೆ. ಫೈನಲ್ ಪಂದ್ಯದಲ್ಲಿ ಮಧ್ಯ ಪ್ರದೇಶ್ ತಂಡವನ್ನು 5 ವಿಕೆಟ್​​ಗಳಿಂದ ಸೋಲಿಸಿ ಮುಂಬೈ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ವಿಶೇಷ ಎಂದರೆ ಈ ಬಾರಿ ಮಧ್ಯ ಪ್ರದೇಶ್ ತಂಡವನ್ನು ಮುನ್ನಡೆಸಿದ್ದು ಆರ್​ಸಿಬಿ ಆಟಗಾರ ರಜತ್ ಪಾಟಿದಾರ್.

1 / 5
ಟೂರ್ನಿಯುದ್ದಕ್ಕೂ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ರಜತ್ ಪಾಟಿದಾರ್ ಮಧ್ಯ ಪ್ರದೇಶ್ ತಂಡ ಫೈನಲ್​ಗೆ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೆ ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಟೂರ್ನಿಯುದ್ದಕ್ಕೂ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ರಜತ್ ಪಾಟಿದಾರ್ ಮಧ್ಯ ಪ್ರದೇಶ್ ತಂಡ ಫೈನಲ್​ಗೆ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೆ ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

2 / 5
ಅದರಲ್ಲೂ ಸಿಕ್ಸ್​-ಫೋರ್​ಗಳ ವಿಷಯದಲ್ಲಿ ರಜತ್ ಪಾಟಿದಾರ್ ಅಗ್ರಸ್ಥಾನದಲ್ಲಿದ್ದಾರೆ. ಅಂದರೆ ಈ ಬಾರಿಯ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಪಾಟಿದಾರ್. 9 ಇನಿಂಗ್ಸ್​ಗಳಲ್ಲಿ ಕಣಕ್ಕಿಳಿದಿದ್ದ ರಜತ್ 186.09ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದರು.

ಅದರಲ್ಲೂ ಸಿಕ್ಸ್​-ಫೋರ್​ಗಳ ವಿಷಯದಲ್ಲಿ ರಜತ್ ಪಾಟಿದಾರ್ ಅಗ್ರಸ್ಥಾನದಲ್ಲಿದ್ದಾರೆ. ಅಂದರೆ ಈ ಬಾರಿಯ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಪಾಟಿದಾರ್. 9 ಇನಿಂಗ್ಸ್​ಗಳಲ್ಲಿ ಕಣಕ್ಕಿಳಿದಿದ್ದ ರಜತ್ 186.09ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದರು.

3 / 5
ಈ ವೇಳೆ ರಜತ್ ಪಾಟಿದಾರ್ ಬ್ಯಾಟ್​ನಿಂದ ಮೂಡಿಬಂದ ಸಿಕ್ಸ್​​ಗಳ ಸಂಖ್ಯೆ 31. ಅಲ್ಲದೆ ಈ ಬಾರಿಯ ಟೂರ್ನಿಯಲ್ಲಿ ಮೂವತ್ತಕ್ಕಿಂತ ಹೆಚ್ಚು ಸಿಕ್ಸ್ ಸಿಡಿಸಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ 32 ಫೋರ್​​ಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ 9 ಇನಿಂಗ್ಸ್​ಗಳಲ್ಲಿ 5 ಅರ್ಧಶತಕದೊಂದಿಗೆ 428 ರನ್ ಕಲೆಹಾಕಿದ್ದಾರೆ.

ಈ ವೇಳೆ ರಜತ್ ಪಾಟಿದಾರ್ ಬ್ಯಾಟ್​ನಿಂದ ಮೂಡಿಬಂದ ಸಿಕ್ಸ್​​ಗಳ ಸಂಖ್ಯೆ 31. ಅಲ್ಲದೆ ಈ ಬಾರಿಯ ಟೂರ್ನಿಯಲ್ಲಿ ಮೂವತ್ತಕ್ಕಿಂತ ಹೆಚ್ಚು ಸಿಕ್ಸ್ ಸಿಡಿಸಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ 32 ಫೋರ್​​ಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ 9 ಇನಿಂಗ್ಸ್​ಗಳಲ್ಲಿ 5 ಅರ್ಧಶತಕದೊಂದಿಗೆ 428 ರನ್ ಕಲೆಹಾಕಿದ್ದಾರೆ.

4 / 5
ಇದೀಗ ದೇಶೀಯ ಅಂಗಳದಲ್ಲಿ ಸಿಡಿಲಬ್ಬರ ಪ್ರದರ್ಶಿಸಿರುವ ರಜತ್ ಪಾಟಿದಾರ್ ಐಪಿಎಲ್​ನಲ್ಲೂ ಅಬ್ಬರಿಸುವ ನಿರೀಕ್ಷೆಯಿದೆ. ಏಕೆಂದರೆ RCB ಪರ 24 ಇನಿಂಗ್ಸ್ ಆಡಿರುವ ಪಾಟಿದಾರ್ 799 ರನ್ ಕಲೆಹಾಕಿದ್ದಾರೆ. ಈ ವೇಳೆ 54 ಸಿಕ್ಸ್ ಹಾಗೂ 51 ಫೋರ್ ಸಿಡಿಸಿದ್ದರು. ಇದೀಗ ಭರ್ಜರಿ ಫಾರ್ಮ್​ನಲ್ಲಿರುವ ಪಾಟಿದಾರ್ ಕಡೆಯಿಂದ ಈ ಬಾರಿಯ ಐಪಿಎಲ್​ನಲ್ಲಿ ಸಿಕ್ಸರ್​​ಗಳ ಸುರಿಮಳೆ ನಿರೀಕ್ಷಿಸಬಹುದು.

ಇದೀಗ ದೇಶೀಯ ಅಂಗಳದಲ್ಲಿ ಸಿಡಿಲಬ್ಬರ ಪ್ರದರ್ಶಿಸಿರುವ ರಜತ್ ಪಾಟಿದಾರ್ ಐಪಿಎಲ್​ನಲ್ಲೂ ಅಬ್ಬರಿಸುವ ನಿರೀಕ್ಷೆಯಿದೆ. ಏಕೆಂದರೆ RCB ಪರ 24 ಇನಿಂಗ್ಸ್ ಆಡಿರುವ ಪಾಟಿದಾರ್ 799 ರನ್ ಕಲೆಹಾಕಿದ್ದಾರೆ. ಈ ವೇಳೆ 54 ಸಿಕ್ಸ್ ಹಾಗೂ 51 ಫೋರ್ ಸಿಡಿಸಿದ್ದರು. ಇದೀಗ ಭರ್ಜರಿ ಫಾರ್ಮ್​ನಲ್ಲಿರುವ ಪಾಟಿದಾರ್ ಕಡೆಯಿಂದ ಈ ಬಾರಿಯ ಐಪಿಎಲ್​ನಲ್ಲಿ ಸಿಕ್ಸರ್​​ಗಳ ಸುರಿಮಳೆ ನಿರೀಕ್ಷಿಸಬಹುದು.

5 / 5
Follow us
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ