AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 31 ಸಿಕ್ಸ್​: ರಜತ್ ಪಾಟಿದಾರ್ ಪವರ್​ಗೆ ಸಿಕ್ಸರ್​ಗಳ ಸುರಿಮಳೆ..!

IPL 2025 RCB: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಜತ್ ಪಾಟಿದಾರ್ ಆರ್​ಸಿಬಿ ಪರ ಕಣಕ್ಕಿಳಿಯಲಿದ್ದಾರೆ. ಕಳೆದ ಎರಡು ಸೀಸನ್​​ಗಳಲ್ಲಿ ಆರ್​ಸಿಬಿ ಪರ ಬ್ಯಾಟ್ ಬೀಸಿದ್ದ ರಜತ್ 24 ಇನಿಂಗ್ಸ್​ಗಳ ಮೂಲಕ ಒಟ್ಟು 799 ರನ್ ಕಲೆಹಾಕಿದ್ದಾರೆ. ಇದೀಗ ಅದ್ಭುತ ಲಯದಲ್ಲಿರುವ ಪಾಟಿದಾರ್ ಕಡೆಯಿಂದ ಈ ಬಾರಿ ಕೂಡ ಸಿಡಿಲಬ್ಬರದ ನಿರೀಕ್ಷಿಸಬಹುದು.

ಝಾಹಿರ್ ಯೂಸುಫ್
|

Updated on: Dec 17, 2024 | 6:53 AM

Share
ದೇಶೀಯ ಅಂಗಳದ ಟಿ20 ಟೂರ್ನಿ ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿಗೆ ತೆರೆಬಿದ್ದಿದೆ. ಫೈನಲ್ ಪಂದ್ಯದಲ್ಲಿ ಮಧ್ಯ ಪ್ರದೇಶ್ ತಂಡವನ್ನು 5 ವಿಕೆಟ್​​ಗಳಿಂದ ಸೋಲಿಸಿ ಮುಂಬೈ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ವಿಶೇಷ ಎಂದರೆ ಈ ಬಾರಿ ಮಧ್ಯ ಪ್ರದೇಶ್ ತಂಡವನ್ನು ಮುನ್ನಡೆಸಿದ್ದು ಆರ್​ಸಿಬಿ ಆಟಗಾರ ರಜತ್ ಪಾಟಿದಾರ್.

ದೇಶೀಯ ಅಂಗಳದ ಟಿ20 ಟೂರ್ನಿ ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿಗೆ ತೆರೆಬಿದ್ದಿದೆ. ಫೈನಲ್ ಪಂದ್ಯದಲ್ಲಿ ಮಧ್ಯ ಪ್ರದೇಶ್ ತಂಡವನ್ನು 5 ವಿಕೆಟ್​​ಗಳಿಂದ ಸೋಲಿಸಿ ಮುಂಬೈ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ವಿಶೇಷ ಎಂದರೆ ಈ ಬಾರಿ ಮಧ್ಯ ಪ್ರದೇಶ್ ತಂಡವನ್ನು ಮುನ್ನಡೆಸಿದ್ದು ಆರ್​ಸಿಬಿ ಆಟಗಾರ ರಜತ್ ಪಾಟಿದಾರ್.

1 / 5
ಟೂರ್ನಿಯುದ್ದಕ್ಕೂ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ರಜತ್ ಪಾಟಿದಾರ್ ಮಧ್ಯ ಪ್ರದೇಶ್ ತಂಡ ಫೈನಲ್​ಗೆ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೆ ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಟೂರ್ನಿಯುದ್ದಕ್ಕೂ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ರಜತ್ ಪಾಟಿದಾರ್ ಮಧ್ಯ ಪ್ರದೇಶ್ ತಂಡ ಫೈನಲ್​ಗೆ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೆ ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

2 / 5
ಅದರಲ್ಲೂ ಸಿಕ್ಸ್​-ಫೋರ್​ಗಳ ವಿಷಯದಲ್ಲಿ ರಜತ್ ಪಾಟಿದಾರ್ ಅಗ್ರಸ್ಥಾನದಲ್ಲಿದ್ದಾರೆ. ಅಂದರೆ ಈ ಬಾರಿಯ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಪಾಟಿದಾರ್. 9 ಇನಿಂಗ್ಸ್​ಗಳಲ್ಲಿ ಕಣಕ್ಕಿಳಿದಿದ್ದ ರಜತ್ 186.09ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದರು.

ಅದರಲ್ಲೂ ಸಿಕ್ಸ್​-ಫೋರ್​ಗಳ ವಿಷಯದಲ್ಲಿ ರಜತ್ ಪಾಟಿದಾರ್ ಅಗ್ರಸ್ಥಾನದಲ್ಲಿದ್ದಾರೆ. ಅಂದರೆ ಈ ಬಾರಿಯ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಪಾಟಿದಾರ್. 9 ಇನಿಂಗ್ಸ್​ಗಳಲ್ಲಿ ಕಣಕ್ಕಿಳಿದಿದ್ದ ರಜತ್ 186.09ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದರು.

3 / 5
ಈ ವೇಳೆ ರಜತ್ ಪಾಟಿದಾರ್ ಬ್ಯಾಟ್​ನಿಂದ ಮೂಡಿಬಂದ ಸಿಕ್ಸ್​​ಗಳ ಸಂಖ್ಯೆ 31. ಅಲ್ಲದೆ ಈ ಬಾರಿಯ ಟೂರ್ನಿಯಲ್ಲಿ ಮೂವತ್ತಕ್ಕಿಂತ ಹೆಚ್ಚು ಸಿಕ್ಸ್ ಸಿಡಿಸಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ 32 ಫೋರ್​​ಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ 9 ಇನಿಂಗ್ಸ್​ಗಳಲ್ಲಿ 5 ಅರ್ಧಶತಕದೊಂದಿಗೆ 428 ರನ್ ಕಲೆಹಾಕಿದ್ದಾರೆ.

ಈ ವೇಳೆ ರಜತ್ ಪಾಟಿದಾರ್ ಬ್ಯಾಟ್​ನಿಂದ ಮೂಡಿಬಂದ ಸಿಕ್ಸ್​​ಗಳ ಸಂಖ್ಯೆ 31. ಅಲ್ಲದೆ ಈ ಬಾರಿಯ ಟೂರ್ನಿಯಲ್ಲಿ ಮೂವತ್ತಕ್ಕಿಂತ ಹೆಚ್ಚು ಸಿಕ್ಸ್ ಸಿಡಿಸಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ 32 ಫೋರ್​​ಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ 9 ಇನಿಂಗ್ಸ್​ಗಳಲ್ಲಿ 5 ಅರ್ಧಶತಕದೊಂದಿಗೆ 428 ರನ್ ಕಲೆಹಾಕಿದ್ದಾರೆ.

4 / 5
ಇದೀಗ ದೇಶೀಯ ಅಂಗಳದಲ್ಲಿ ಸಿಡಿಲಬ್ಬರ ಪ್ರದರ್ಶಿಸಿರುವ ರಜತ್ ಪಾಟಿದಾರ್ ಐಪಿಎಲ್​ನಲ್ಲೂ ಅಬ್ಬರಿಸುವ ನಿರೀಕ್ಷೆಯಿದೆ. ಏಕೆಂದರೆ RCB ಪರ 24 ಇನಿಂಗ್ಸ್ ಆಡಿರುವ ಪಾಟಿದಾರ್ 799 ರನ್ ಕಲೆಹಾಕಿದ್ದಾರೆ. ಈ ವೇಳೆ 54 ಸಿಕ್ಸ್ ಹಾಗೂ 51 ಫೋರ್ ಸಿಡಿಸಿದ್ದರು. ಇದೀಗ ಭರ್ಜರಿ ಫಾರ್ಮ್​ನಲ್ಲಿರುವ ಪಾಟಿದಾರ್ ಕಡೆಯಿಂದ ಈ ಬಾರಿಯ ಐಪಿಎಲ್​ನಲ್ಲಿ ಸಿಕ್ಸರ್​​ಗಳ ಸುರಿಮಳೆ ನಿರೀಕ್ಷಿಸಬಹುದು.

ಇದೀಗ ದೇಶೀಯ ಅಂಗಳದಲ್ಲಿ ಸಿಡಿಲಬ್ಬರ ಪ್ರದರ್ಶಿಸಿರುವ ರಜತ್ ಪಾಟಿದಾರ್ ಐಪಿಎಲ್​ನಲ್ಲೂ ಅಬ್ಬರಿಸುವ ನಿರೀಕ್ಷೆಯಿದೆ. ಏಕೆಂದರೆ RCB ಪರ 24 ಇನಿಂಗ್ಸ್ ಆಡಿರುವ ಪಾಟಿದಾರ್ 799 ರನ್ ಕಲೆಹಾಕಿದ್ದಾರೆ. ಈ ವೇಳೆ 54 ಸಿಕ್ಸ್ ಹಾಗೂ 51 ಫೋರ್ ಸಿಡಿಸಿದ್ದರು. ಇದೀಗ ಭರ್ಜರಿ ಫಾರ್ಮ್​ನಲ್ಲಿರುವ ಪಾಟಿದಾರ್ ಕಡೆಯಿಂದ ಈ ಬಾರಿಯ ಐಪಿಎಲ್​ನಲ್ಲಿ ಸಿಕ್ಸರ್​​ಗಳ ಸುರಿಮಳೆ ನಿರೀಕ್ಷಿಸಬಹುದು.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ