AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSL ನಿಂದ RCB ವೇಗಿ ಔಟ್: ಐಪಿಎಲ್​ಗೆ ಡೌಟ್..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವೇಗಿ ರೀಸ್ ಟೋಪ್ಲಿ ಹೊರಗುಳಿಯುವ ಸಾಧ್ಯತೆಯಿದೆ. ಏಕೆಂದರೆ ಲೀಗ್​ ಕ್ರಿಕೆಟ್​ನಲ್ಲಿ ಕಣಕ್ಕಿಳಿಯಲು ಟೋಪ್ಲಿಗೆ ಎನ್​ಒಸಿ ನೀಡಲು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ನಿರಾಕರಿಸಿದೆ. ಹೀಗಾಗಿ ಅವರು ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಣಕ್ಕಿಳಿಯುತ್ತಿಲ್ಲ.

TV9 Web
| Edited By: |

Updated on: Feb 12, 2024 | 3:25 PM

Share
ಇಂಗ್ಲೆಂಡ್ ತಂಡದ ವೇಗದ ಬೌಲರ್ ರೀಸ್ ಟೋಪ್ಲಿ ಮುಂಬರುವ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹೊರಬಿದ್ದಿದ್ದಾರೆ. ಗಾಯದ ಸಮಸ್ಯೆಯ ಕಾರಣ ಟೋಪ್ಲಿಗೆ ಎನ್​ಒಸಿ ನೀಡಲು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ನಿರಾಕರಿಸಿದೆ. ಹೀಗಾಗಿ ಇಂಗ್ಲೆಂಡ್ ವೇಗಿ ಪಿಎಸ್​ಎಲ್​ನಲ್ಲಿ ಕಣಕ್ಕಿಳಿಯುತ್ತಿಲ್ಲ.

ಇಂಗ್ಲೆಂಡ್ ತಂಡದ ವೇಗದ ಬೌಲರ್ ರೀಸ್ ಟೋಪ್ಲಿ ಮುಂಬರುವ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹೊರಬಿದ್ದಿದ್ದಾರೆ. ಗಾಯದ ಸಮಸ್ಯೆಯ ಕಾರಣ ಟೋಪ್ಲಿಗೆ ಎನ್​ಒಸಿ ನೀಡಲು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ನಿರಾಕರಿಸಿದೆ. ಹೀಗಾಗಿ ಇಂಗ್ಲೆಂಡ್ ವೇಗಿ ಪಿಎಸ್​ಎಲ್​ನಲ್ಲಿ ಕಣಕ್ಕಿಳಿಯುತ್ತಿಲ್ಲ.

1 / 7
ಪಾಕಿಸ್ತಾನ್ ಸೂಪರ್ ಲೀಗ್​ನ 9ನೇ ಆವೃತ್ತಿಗಾಗಿ ರೀಸ್ ಟೋಪ್ಲಿಯನ್ನು ಮುಲ್ತಾನ್ ಸುಲ್ತಾನ್ ತಂಡವು ಖರೀದಿಸಿತ್ತು. ಅದರಂತೆ ಪಾಕ್ ಲೀಗ್​ನಲ್ಲಿ ಕಾಣಿಸಿಕೊಳ್ಳಲು ಟೋಪ್ಲಿ ಕೂಡ ಬಯಸಿದ್ದರು. ಆದರೆ ಸತತವಾಗಿ ಗಾಯಗೊಳ್ಳುತ್ತಿರುವ ಕಾರಣ ರೀಸ್​ ಟೋಪ್ಲಿಗೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನೀಡಲು ಇಂಗ್ಲೆಂಡ್ ಕ್ರಿಕೆಟ್​ ಬೋರ್ಡ್​ ನಿರಾಕರಿಸಿದೆ.

ಪಾಕಿಸ್ತಾನ್ ಸೂಪರ್ ಲೀಗ್​ನ 9ನೇ ಆವೃತ್ತಿಗಾಗಿ ರೀಸ್ ಟೋಪ್ಲಿಯನ್ನು ಮುಲ್ತಾನ್ ಸುಲ್ತಾನ್ ತಂಡವು ಖರೀದಿಸಿತ್ತು. ಅದರಂತೆ ಪಾಕ್ ಲೀಗ್​ನಲ್ಲಿ ಕಾಣಿಸಿಕೊಳ್ಳಲು ಟೋಪ್ಲಿ ಕೂಡ ಬಯಸಿದ್ದರು. ಆದರೆ ಸತತವಾಗಿ ಗಾಯಗೊಳ್ಳುತ್ತಿರುವ ಕಾರಣ ರೀಸ್​ ಟೋಪ್ಲಿಗೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನೀಡಲು ಇಂಗ್ಲೆಂಡ್ ಕ್ರಿಕೆಟ್​ ಬೋರ್ಡ್​ ನಿರಾಕರಿಸಿದೆ.

2 / 7
ಇದರ ಬೆನ್ನಲ್ಲೇ ಐಪಿಎಲ್​ ಆಡಲು ಟೋಪ್ಲಿಗೆ ಇಸಿಬಿ ನಿರಾಕ್ಷೇಪಣಾ ಪತ್ರ ನೀಡಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಕಳೆದ ಬಾರಿಯ ಐಪಿಎಲ್​ನಲ್ಲಿ ಟೋಪ್ಲಿ ಗಾಯಗೊಂಡಿದ್ದರು. ಹೀಗಾಗಿ ಅವರು ಅರ್ಧದಲ್ಲೇ ಟೂರ್ನಿ ತೊರೆದಿದ್ದರು. ಇದಾದ ಬಳಿಕ ಕಂಬ್ಯಾಕ್ ಮಾಡಿದರೂ ಏಕದಿನ ವಿಶ್ವಕಪ್​ನಲ್ಲಿ ಸಂಪೂರ್ಣ ಪಂದ್ಯಗಳನ್ನಾಡಿರಲಿಲ್ಲ.

ಇದರ ಬೆನ್ನಲ್ಲೇ ಐಪಿಎಲ್​ ಆಡಲು ಟೋಪ್ಲಿಗೆ ಇಸಿಬಿ ನಿರಾಕ್ಷೇಪಣಾ ಪತ್ರ ನೀಡಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಕಳೆದ ಬಾರಿಯ ಐಪಿಎಲ್​ನಲ್ಲಿ ಟೋಪ್ಲಿ ಗಾಯಗೊಂಡಿದ್ದರು. ಹೀಗಾಗಿ ಅವರು ಅರ್ಧದಲ್ಲೇ ಟೂರ್ನಿ ತೊರೆದಿದ್ದರು. ಇದಾದ ಬಳಿಕ ಕಂಬ್ಯಾಕ್ ಮಾಡಿದರೂ ಏಕದಿನ ವಿಶ್ವಕಪ್​ನಲ್ಲಿ ಸಂಪೂರ್ಣ ಪಂದ್ಯಗಳನ್ನಾಡಿರಲಿಲ್ಲ.

3 / 7
ಇದೀಗ ಮುಂಬರುವ ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ರೀಸ್ ಟೋಪ್ಲಿ ಫಿಟ್​ನೆಸ್ ಬಗ್ಗೆ ಎಚ್ಚರಿಕೆವಹಿಸಲು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಮುಂದಾಗಿದೆ. ಇದೇ ಕಾರಣದಿಂದಾಗಿ ಪಾಕಿಸ್ತಾನ್ ಸೂಪರ್ ಲೀಗ್ ಆಡದಂತೆ ಇಸಿಬಿ ಸೂಚಿಸಿದೆ. ಹೀಗಾಗಿ ಐಪಿಎಲ್​ನಲ್ಲಿ ಕಣಕ್ಕಿಳಿಯಲು ಅವಕಾಶ ನೀಡುತ್ತಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇದೀಗ ಮುಂಬರುವ ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ರೀಸ್ ಟೋಪ್ಲಿ ಫಿಟ್​ನೆಸ್ ಬಗ್ಗೆ ಎಚ್ಚರಿಕೆವಹಿಸಲು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಮುಂದಾಗಿದೆ. ಇದೇ ಕಾರಣದಿಂದಾಗಿ ಪಾಕಿಸ್ತಾನ್ ಸೂಪರ್ ಲೀಗ್ ಆಡದಂತೆ ಇಸಿಬಿ ಸೂಚಿಸಿದೆ. ಹೀಗಾಗಿ ಐಪಿಎಲ್​ನಲ್ಲಿ ಕಣಕ್ಕಿಳಿಯಲು ಅವಕಾಶ ನೀಡುತ್ತಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

4 / 7
ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಒಂದು ಪಂದ್ಯವಾಡಿದ್ದ ರೀಸ್ ಟೋಪ್ಲಿ ಕೇವಲ 2 ಓವರ್ ಎಸೆದಿದ್ದರು. ಈ ವೇಳೆ 1 ವಿಕೆಟ್ ಕಬಳಿಸುವಲ್ಲಿಯೂ ಯಶಸ್ವಿಯಾಗಿದ್ದರು. ಇದಾದ ಬಳಿಕ ಫೀಲ್ಡಿಂಗ್ ಮಾಡುವ ವೇಳೆ ಅವರ ಭುಜಕ್ಕೆ ಗಾಯವಾಗಿತ್ತು.

ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಒಂದು ಪಂದ್ಯವಾಡಿದ್ದ ರೀಸ್ ಟೋಪ್ಲಿ ಕೇವಲ 2 ಓವರ್ ಎಸೆದಿದ್ದರು. ಈ ವೇಳೆ 1 ವಿಕೆಟ್ ಕಬಳಿಸುವಲ್ಲಿಯೂ ಯಶಸ್ವಿಯಾಗಿದ್ದರು. ಇದಾದ ಬಳಿಕ ಫೀಲ್ಡಿಂಗ್ ಮಾಡುವ ವೇಳೆ ಅವರ ಭುಜಕ್ಕೆ ಗಾಯವಾಗಿತ್ತು.

5 / 7
ಇದಾಗ್ಯೂ ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಆರ್​ಸಿಬಿ ಫ್ರಾಂಚೈಸಿ ಎಡಗೈ ವೇಗದ ಬೌಲರ್ ರೀಸ್ ಟೋಪ್ಲಿಯನ್ನು ತಂಡದಲ್ಲೇ ಉಳಿಸಿಕೊಂಡಿದ್ದರು. ಆದರೀಗ ಐಪಿಎಲ್ ಆರಂಭಕ್ಕೆ ತಿಂಗಳು ಮಾತ್ರ ಉಳಿದಿರುವಾಗ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಲೀಗ್​ ಕ್ರಿಕೆಟ್ ಆಡಲು ರೀಸ್ ಟೋಪ್ಲಿಗೆ ನಿರ್ಬಂಧ ಹೇರಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲೂ ಅವರು ಕಣಕ್ಕಿಳಿಯುವುದು ಅನುಮಾನ ಎನ್ನಲಾಗುತ್ತಿದೆ.

ಇದಾಗ್ಯೂ ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಆರ್​ಸಿಬಿ ಫ್ರಾಂಚೈಸಿ ಎಡಗೈ ವೇಗದ ಬೌಲರ್ ರೀಸ್ ಟೋಪ್ಲಿಯನ್ನು ತಂಡದಲ್ಲೇ ಉಳಿಸಿಕೊಂಡಿದ್ದರು. ಆದರೀಗ ಐಪಿಎಲ್ ಆರಂಭಕ್ಕೆ ತಿಂಗಳು ಮಾತ್ರ ಉಳಿದಿರುವಾಗ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಲೀಗ್​ ಕ್ರಿಕೆಟ್ ಆಡಲು ರೀಸ್ ಟೋಪ್ಲಿಗೆ ನಿರ್ಬಂಧ ಹೇರಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲೂ ಅವರು ಕಣಕ್ಕಿಳಿಯುವುದು ಅನುಮಾನ ಎನ್ನಲಾಗುತ್ತಿದೆ.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

7 / 7
Web contact
Web contact

TV9 Kannada

Read More
Follow Us
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ