AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyanka Patil: ಕನ್ನಡತಿಯಿಂದಲೇ ಗೆದ್ದು ಬೀಗಿದ RCB

WPL 2024 RCB: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​ಸಿಬಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿ ಟ್ರೋಫಿ ಗೆದ್ದುಕೊಂಡಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Mar 18, 2024 | 6:55 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ರಾಯಲ್ಲಾಗಿಯೇ ಟ್ರೋಫಿ ಗೆದ್ದುಕೊಂಡಿದೆ. ಹೀಗೆ ಚೊಚ್ಚಲ ಬಾರಿ ಕಿರೀಟ ಮುಡಿಗೇರಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಕನ್ನಡತಿ ಶ್ರೇಯಾಂಕ ಪಾಟೀಲ್ (Shreyanka Patil) ಎಂಬುದು ವಿಶೇಷ. ಆದರೆ ಇದೇ ಶ್ರೇಯಾಂಕಾ ಆರಂಭಿಕ ಪಂದ್ಯಗಳಲ್ಲಿ ಮಿಂಚಿರಲಿಲ್ಲ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ರಾಯಲ್ಲಾಗಿಯೇ ಟ್ರೋಫಿ ಗೆದ್ದುಕೊಂಡಿದೆ. ಹೀಗೆ ಚೊಚ್ಚಲ ಬಾರಿ ಕಿರೀಟ ಮುಡಿಗೇರಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಕನ್ನಡತಿ ಶ್ರೇಯಾಂಕ ಪಾಟೀಲ್ (Shreyanka Patil) ಎಂಬುದು ವಿಶೇಷ. ಆದರೆ ಇದೇ ಶ್ರೇಯಾಂಕಾ ಆರಂಭಿಕ ಪಂದ್ಯಗಳಲ್ಲಿ ಮಿಂಚಿರಲಿಲ್ಲ.

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧ ಪಂದ್ಯದಲ್ಲಿ ಶ್ರೇಯಾಂಕಾ 3 ಓವರ್​ಗಳಲ್ಲಿ 32 ರನ್ ನೀಡಿದ್ದರು. ಇನ್ನು ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಒಂದೇ ಓವರ್​ನಲ್ಲಿ 13 ರನ್ ಬಿಟ್ಟುಕೊಟ್ಟಿದ್ದರು. ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 3 ಓವರ್​ಗಳಲ್ಲಿ ನೀಡಿದ್ದು ಬರೋಬ್ಬರಿ 40 ರನ್​ಗಳು. ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 2 ಓವರ್​ಗಳಲ್ಲಿ 15 ರನ್ ನೀಡಿ ಒಂದು ವಿಕೆಟ್ ಮಾತ್ರ ಪಡೆದಿದ್ದರು.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧ ಪಂದ್ಯದಲ್ಲಿ ಶ್ರೇಯಾಂಕಾ 3 ಓವರ್​ಗಳಲ್ಲಿ 32 ರನ್ ನೀಡಿದ್ದರು. ಇನ್ನು ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಒಂದೇ ಓವರ್​ನಲ್ಲಿ 13 ರನ್ ಬಿಟ್ಟುಕೊಟ್ಟಿದ್ದರು. ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 3 ಓವರ್​ಗಳಲ್ಲಿ ನೀಡಿದ್ದು ಬರೋಬ್ಬರಿ 40 ರನ್​ಗಳು. ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 2 ಓವರ್​ಗಳಲ್ಲಿ 15 ರನ್ ನೀಡಿ ಒಂದು ವಿಕೆಟ್ ಮಾತ್ರ ಪಡೆದಿದ್ದರು.

2 / 5
ಹೀಗಾಗಿಯೇ ಕೆಲ ಪಂದ್ಯಗಳಿಂದ ಶ್ರೇಯಾಂಕಾ ಪಾಟೀಲ್ ಅವರನ್ನು ಕೈ ಬಿಡಲಾಗಿತ್ತು. ಆದರೆ ಮತ್ತೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಪಡೆದ ಬಳಿಕ ಕನ್ನಡತಿ ಕಮಾಲ್ ಮಾಡಲಾರಂಭಿಸಿದಳು. ಅದರಲ್ಲೂ ಮುಂಬೈ ಇಂಡಿಯನ್ಸ್ ವಿರುದ್ಧ ಎಲಿಮಿನೇಟರ್ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ಶ್ರೇಯಾಂಕಾ, ಕೇವಲ 16 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು.

ಹೀಗಾಗಿಯೇ ಕೆಲ ಪಂದ್ಯಗಳಿಂದ ಶ್ರೇಯಾಂಕಾ ಪಾಟೀಲ್ ಅವರನ್ನು ಕೈ ಬಿಡಲಾಗಿತ್ತು. ಆದರೆ ಮತ್ತೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಪಡೆದ ಬಳಿಕ ಕನ್ನಡತಿ ಕಮಾಲ್ ಮಾಡಲಾರಂಭಿಸಿದಳು. ಅದರಲ್ಲೂ ಮುಂಬೈ ಇಂಡಿಯನ್ಸ್ ವಿರುದ್ಧ ಎಲಿಮಿನೇಟರ್ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ಶ್ರೇಯಾಂಕಾ, ಕೇವಲ 16 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು.

3 / 5
ಹಾಗೆಯೇ ಫೈನಲ್ ಪಂದ್ಯದಲ್ಲಿ ಸ್ಪಿನ್ ಮೋಡಿ ಮಾಡಿದ ಶ್ರೇಯಾಂಕಾ ಪಾಟೀಲ್ 3.3 ಓವರ್​ಗಳಲ್ಲಿ ಕೇವಲ 12 ರನ್ ನೀಡಿ 4 ವಿಕೆಟ್ ಉರುಳಿಸಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎಡೆಮುರಿ ಕಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದರು.

ಹಾಗೆಯೇ ಫೈನಲ್ ಪಂದ್ಯದಲ್ಲಿ ಸ್ಪಿನ್ ಮೋಡಿ ಮಾಡಿದ ಶ್ರೇಯಾಂಕಾ ಪಾಟೀಲ್ 3.3 ಓವರ್​ಗಳಲ್ಲಿ ಕೇವಲ 12 ರನ್ ನೀಡಿ 4 ವಿಕೆಟ್ ಉರುಳಿಸಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎಡೆಮುರಿ ಕಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದರು.

4 / 5
ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲಾರ್ಧದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಕನ್ನಡತಿ ದ್ವಿತೀಯಾರ್ಧದಲ್ಲಿ ಕಮಾಲ್ ಮಾಡಿದ್ದರು. ಈ ಕಮಾಲ್​ನೊಂದಿಗೆ 21 ವರ್ಷದ ಶ್ರೇಯಾಂಕಾ ಪಾಟೀಲ್ ಒಟ್ಟು 13 ವಿಕೆಟ್ ಉರುಳಿಸಿ ಪರ್ಪಲ್ ಕ್ಯಾಪ್ ವಿನ್ನರ್ ಆಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡಕ್ಕೆ ಚೊಚ್ಚಲ ಟ್ರೋಫಿ ಗೆದ್ದುಕೊಡುವಲ್ಲಿ ಕನ್ನಡತಿ ಪ್ರಮುಖ ಪಾತ್ರವಹಿಸಿದ್ದಾರೆ.

ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲಾರ್ಧದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಕನ್ನಡತಿ ದ್ವಿತೀಯಾರ್ಧದಲ್ಲಿ ಕಮಾಲ್ ಮಾಡಿದ್ದರು. ಈ ಕಮಾಲ್​ನೊಂದಿಗೆ 21 ವರ್ಷದ ಶ್ರೇಯಾಂಕಾ ಪಾಟೀಲ್ ಒಟ್ಟು 13 ವಿಕೆಟ್ ಉರುಳಿಸಿ ಪರ್ಪಲ್ ಕ್ಯಾಪ್ ವಿನ್ನರ್ ಆಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡಕ್ಕೆ ಚೊಚ್ಚಲ ಟ್ರೋಫಿ ಗೆದ್ದುಕೊಡುವಲ್ಲಿ ಕನ್ನಡತಿ ಪ್ರಮುಖ ಪಾತ್ರವಹಿಸಿದ್ದಾರೆ.

5 / 5
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!