AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: RCBಗೆ ಕೈಕೊಟ್ಟ ಸೋಫಿ ಡಿವೈನ್

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೂರನೇ ಆವೃತ್ತಿ ಫೆಬ್ರವರಿ 14 ರಿಂದ ಶುರುವಾಗಲಿದೆ. ವಡೋದರಾದ ಕೊಟಂಬಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಆದರೆ ಈ ಬಾರಿಯ ಟೂರ್ನಿಗೆ ಆರ್​ಸಿಬಿ ಆಟಗಾರ್ತಿ ಸೋಫಿ ಡಿವೈನ್ ಅಲಭ್ಯರಾಗಲಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 26, 2025 | 11:08 AM

Share
ವುಮೆನ್ಸ್ ಪ್ರೀಮಿಯರ್ ಲೀಗ್ (WPL 2025) ಸೀಸನ್-3 ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಸ್ಟಾರ್​ ಆಟಗಾರ್ತಿ ಸೋಫಿ ಡಿವೈನ್ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ತಿಳಿಸಿದ್ದಾರೆ.

ವುಮೆನ್ಸ್ ಪ್ರೀಮಿಯರ್ ಲೀಗ್ (WPL 2025) ಸೀಸನ್-3 ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಸ್ಟಾರ್​ ಆಟಗಾರ್ತಿ ಸೋಫಿ ಡಿವೈನ್ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ತಿಳಿಸಿದ್ದಾರೆ.

1 / 5
ನ್ಯೂಝಿಲೆಂಡ್ ತಂಡದ ನಾಯಕಿ ಮತ್ತು ಆಲ್‌ರೌಂಡರ್ ಸೋಫಿ ಡಿವೈನ್ ಕೆಲ ಕಾಲ ಕ್ರಿಕೆಟ್ ಅಂಗಳದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ತನ್ನ ಯೋಗಕ್ಷೇಮಕ್ಕೆ ಆದ್ಯತೆ ನೀಡಲು ಈ ನಿರ್ಧಾರ ತೆಗೆದುಕೊಂಡಿದ್ದು, ಹೀಗಾಗಿ ಕೆಲ ಕಾಲ ಯಾವುದೇ ಸರಣಿ ಅಥವಾ ಟೂರ್ನಿ ಆಡದಿರಲು ನಿರ್ಧರಿಸಿದ್ದೇನೆ ಎಂದು ಸೋಫಿ ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್​ಗೆ ತಿಳಿಸಿದ್ದಾರೆ.

ನ್ಯೂಝಿಲೆಂಡ್ ತಂಡದ ನಾಯಕಿ ಮತ್ತು ಆಲ್‌ರೌಂಡರ್ ಸೋಫಿ ಡಿವೈನ್ ಕೆಲ ಕಾಲ ಕ್ರಿಕೆಟ್ ಅಂಗಳದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ತನ್ನ ಯೋಗಕ್ಷೇಮಕ್ಕೆ ಆದ್ಯತೆ ನೀಡಲು ಈ ನಿರ್ಧಾರ ತೆಗೆದುಕೊಂಡಿದ್ದು, ಹೀಗಾಗಿ ಕೆಲ ಕಾಲ ಯಾವುದೇ ಸರಣಿ ಅಥವಾ ಟೂರ್ನಿ ಆಡದಿರಲು ನಿರ್ಧರಿಸಿದ್ದೇನೆ ಎಂದು ಸೋಫಿ ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್​ಗೆ ತಿಳಿಸಿದ್ದಾರೆ.

2 / 5
ಅತ್ತ ಸೋಫಿ ಡಿವೈನ್ ಅವರ ತಾತ್ಕಾಲಿಕ ಬ್ರೇಕ್ ನಿರ್ಧಾರಕ್ಕೆ ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್​ನಿಂದ ಕೂಡ ಬೆಂಬಲ ವ್ಯಕ್ತವಾಗಿದ್ದು, ಅವರಿಗೆ ಕೆಲ ಕಾಲ ವಿಶ್ರಾಂತಿ ನೀಡುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಸೋಫಿ ಡಿವೈನ್ ಮುಂಬರುವ ಯಾವುದೇ ಟೂರ್ನಿ ಆಡುವುದಿಲ್ಲ ಎಂಬುದು ಸಹ ಖಚಿತವಾಗಿದೆ.

ಅತ್ತ ಸೋಫಿ ಡಿವೈನ್ ಅವರ ತಾತ್ಕಾಲಿಕ ಬ್ರೇಕ್ ನಿರ್ಧಾರಕ್ಕೆ ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್​ನಿಂದ ಕೂಡ ಬೆಂಬಲ ವ್ಯಕ್ತವಾಗಿದ್ದು, ಅವರಿಗೆ ಕೆಲ ಕಾಲ ವಿಶ್ರಾಂತಿ ನೀಡುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಸೋಫಿ ಡಿವೈನ್ ಮುಂಬರುವ ಯಾವುದೇ ಟೂರ್ನಿ ಆಡುವುದಿಲ್ಲ ಎಂಬುದು ಸಹ ಖಚಿತವಾಗಿದೆ.

3 / 5
ಸೋಫಿ ಡಿವೈನ್ ಕಳೆದ ಎರಡು ಸೀಸನ್​ಗಳಲ್ಲಿ ಆರ್​ಸಿಬಿ ಪರ ಆರಂಭಿಕಗಳಾಗಿ ಕಣಕ್ಕಿಳಿದಿದ್ದರು. ಈ ವೇಳೆ 18 ಇನಿಂಗ್ಸ್ ಆಡಿರುವ ಅವರು 2 ಅರ್ಧಶತಕಗಳೊಂದಿಗೆ ಒಟ್ಟು 402	ರನ್ ಕಲೆಹಾಕಿದ್ದಾರೆ. ಹಾಗೆಯೇ ಬೌಲಿಂಗ್​ನಲ್ಲಿ 9 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಸೋಫಿ ಡಿವೈನ್ ಹೊರಗುಳಿದಿರುವ ಕಾರಣ ಆರ್​ಸಿಬಿ ಬದಲಿ ಆಲ್​ರೌಂಡರ್​ನನ್ನು ಆಯ್ಕೆ ಮಾಡಬೇಕಿದೆ.

ಸೋಫಿ ಡಿವೈನ್ ಕಳೆದ ಎರಡು ಸೀಸನ್​ಗಳಲ್ಲಿ ಆರ್​ಸಿಬಿ ಪರ ಆರಂಭಿಕಗಳಾಗಿ ಕಣಕ್ಕಿಳಿದಿದ್ದರು. ಈ ವೇಳೆ 18 ಇನಿಂಗ್ಸ್ ಆಡಿರುವ ಅವರು 2 ಅರ್ಧಶತಕಗಳೊಂದಿಗೆ ಒಟ್ಟು 402 ರನ್ ಕಲೆಹಾಕಿದ್ದಾರೆ. ಹಾಗೆಯೇ ಬೌಲಿಂಗ್​ನಲ್ಲಿ 9 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಸೋಫಿ ಡಿವೈನ್ ಹೊರಗುಳಿದಿರುವ ಕಾರಣ ಆರ್​ಸಿಬಿ ಬದಲಿ ಆಲ್​ರೌಂಡರ್​ನನ್ನು ಆಯ್ಕೆ ಮಾಡಬೇಕಿದೆ.

4 / 5
RCB ಮಹಿಳಾ ತಂಡ: ಸ್ಮೃತಿ ಮಂಧಾನ, ಎಲ್ಲಿಸ್ ಪೆರ್ರಿ, ರಿಚಾ ಘೋಷ್, ರೇಣುಕಾ ಸಿಂಗ್, ಜಾರ್ಜಿಯಾ ವೇರ್‌ಹ್ಯಾಮ್, ಕೇಟ್ ಕ್ರಾಸ್, ಸಬ್ಬಿನೇನಿ ಮೇಘನಾ, ಶ್ರೇಯಾಂಕಾ ಪಾಟೀಲ್, ಆಶಾ ಸೊಭಾನಾ, ಏಕ್ತಾ ಬಿಷ್ತ್, ಕನಿಕಾ ಅಹುಜಾ, ಡೇನಿಯಲ್ ವ್ಯಾಟ್, ಪ್ರೇಮಾ ರಾವತ್, ಜೋಶಿತಾ ವಿಜೆ, ರಾಘವಿ ಬಿಸ್ತ್, ಜಾಗರವಿ ಪವಾರ್, ಚಾರ್ಲಿ ಡೀನ್.

RCB ಮಹಿಳಾ ತಂಡ: ಸ್ಮೃತಿ ಮಂಧಾನ, ಎಲ್ಲಿಸ್ ಪೆರ್ರಿ, ರಿಚಾ ಘೋಷ್, ರೇಣುಕಾ ಸಿಂಗ್, ಜಾರ್ಜಿಯಾ ವೇರ್‌ಹ್ಯಾಮ್, ಕೇಟ್ ಕ್ರಾಸ್, ಸಬ್ಬಿನೇನಿ ಮೇಘನಾ, ಶ್ರೇಯಾಂಕಾ ಪಾಟೀಲ್, ಆಶಾ ಸೊಭಾನಾ, ಏಕ್ತಾ ಬಿಷ್ತ್, ಕನಿಕಾ ಅಹುಜಾ, ಡೇನಿಯಲ್ ವ್ಯಾಟ್, ಪ್ರೇಮಾ ರಾವತ್, ಜೋಶಿತಾ ವಿಜೆ, ರಾಘವಿ ಬಿಸ್ತ್, ಜಾಗರವಿ ಪವಾರ್, ಚಾರ್ಲಿ ಡೀನ್.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ