AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ ೧೯ ಎಸೆತಗಳಲ್ಲಿ ‘ಪವರ್’ಫುಲ್ ದಾಖಲೆ ಬರೆದ ಟೀಮ್ ಇಂಡಿಯಾ

India vs New zealand: ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯವನ್ನು ಭಾರತ ತಂಡವು ಕೇವಲ 10 ಓವರ್​ಗಳಲ್ಲಿ ಮುಗಿಸಿದೆ. ಅದು ಕೂಡ ಬರೋಬ್ಬರಿ 154 ರನ್​ಗಳನ್ನು ಚೇಸ್ ಮಾಡುವ ಮೂಲಕ. ಈ ಪಂದ್ಯದ ಪವರ್​ ಪ್ಲೇನಲ್ಲಿ ಭಾರತ ತಂಡವು ಕಲೆಹಾಕಿದ್ದು ಬರೋಬ್ಬರಿ 94 ರನ್​ಗಳು. ಅದರಲ್ಲೂ ಮೊದಲ ಮೂರು ಓವರ್​ಗಳಲ್ಲಿ 52 ರನ್​ ಚಚ್ಚಿದ್ದರು.

ಝಾಹಿರ್ ಯೂಸುಫ್
|

Updated on: Jan 26, 2026 | 7:54 AM

Share
ಟೀಮ್ ಇಂಡಿಯಾ ಪವರ್​ಪ್ಲೇನಲ್ಲೇ ಪವರ್​ಫುಲ್ ದಾಖಲೆ ಬರೆದಿದೆ. ಅದು ಸಹ ಕೇವಲ 19 ಎಸೆತಗಳಲ್ಲಿ. ಈ 19 ಎಸೆತಗಳಲ್ಲಿ ಭಾರತೀಯ ಬ್ಯಾಟರ್​ಗಳು ಅರ್ಧಶತಕ ಪೂರೈಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಗುವಾಹಟಿಯಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು.

ಟೀಮ್ ಇಂಡಿಯಾ ಪವರ್​ಪ್ಲೇನಲ್ಲೇ ಪವರ್​ಫುಲ್ ದಾಖಲೆ ಬರೆದಿದೆ. ಅದು ಸಹ ಕೇವಲ 19 ಎಸೆತಗಳಲ್ಲಿ. ಈ 19 ಎಸೆತಗಳಲ್ಲಿ ಭಾರತೀಯ ಬ್ಯಾಟರ್​ಗಳು ಅರ್ಧಶತಕ ಪೂರೈಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಗುವಾಹಟಿಯಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು 153 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಇನಿಂಗ್ಸ್​ನ ಮೊದಲ ಎಸೆತದಲ್ಲೇ ಸಂಜು ಸ್ಯಾಮ್ಸನ್ ಗೋಲ್ಡನ್ ಡಕ್​ಗೆ ಔಟಾಗಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು 153 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಇನಿಂಗ್ಸ್​ನ ಮೊದಲ ಎಸೆತದಲ್ಲೇ ಸಂಜು ಸ್ಯಾಮ್ಸನ್ ಗೋಲ್ಡನ್ ಡಕ್​ಗೆ ಔಟಾಗಿದ್ದರು.

2 / 5
ಈ ವೇಳೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ ಮೊದಲ ಓವರ್​ನಲ್ಲೇ 2 ಸಿಕ್ಸ್ ಹಾಗೂ 1 ಫೋರ್​ ಬಾರಿಸಿ ಕೌಂಟರ್ ಅಟ್ಯಾಕ್ ಶುರು ಮಾಡಿದರು. ಕಿಶನ್ ಜೊತೆಗೆ ಅಭಿಷೇಕ್ ಶರ್ಮಾ ಕೂಡ ಅಬ್ಬರಿಸಲಾರಂಭಿಸಿದರು. ಪರಿಣಾಮ ಟೀಮ್ ಇಂಡಿಯಾ 3.1 ಓವರ್​ಗಳಲ್ಲಿ ಅರ್ಧಶತಕ ಪೂರೈಸಿತು.

ಈ ವೇಳೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ ಮೊದಲ ಓವರ್​ನಲ್ಲೇ 2 ಸಿಕ್ಸ್ ಹಾಗೂ 1 ಫೋರ್​ ಬಾರಿಸಿ ಕೌಂಟರ್ ಅಟ್ಯಾಕ್ ಶುರು ಮಾಡಿದರು. ಕಿಶನ್ ಜೊತೆಗೆ ಅಭಿಷೇಕ್ ಶರ್ಮಾ ಕೂಡ ಅಬ್ಬರಿಸಲಾರಂಭಿಸಿದರು. ಪರಿಣಾಮ ಟೀಮ್ ಇಂಡಿಯಾ 3.1 ಓವರ್​ಗಳಲ್ಲಿ ಅರ್ಧಶತಕ ಪೂರೈಸಿತು.

3 / 5
ಅಂದರೆ ಕೇವಲ 19 ಎಸೆತಗಳಲ್ಲಿ ಭಾರತ ತಂಡದ ಸ್ಕೋರ್ 52 ಕ್ಕೆ ಬಂದು ನಿಂತಿತ್ತು. ಇದು ಟಿ20 ಕ್ರಿಕೆಟ್ ಇತಿಹಾಸದಲ್ಲೇ ಭಾರತ ತಂಡದ ಅತೀ ವೇಗದ ಅರ್ಧಶತಕವಾಗಿದೆ. ಇದಕ್ಕೂ ಮುನ್ನ 2023 ರಲ್ಲಿ ಬಾಂಗ್ಲಾದೇಶ್ ವಿರುದ್ಧ 3.4 ಓವರ್​ಗಳಲ್ಲಿ ಅರ್ಧಶತಕ ಪೂರೈಸಿದ್ದರು. ಇದೀಗ 3.1 ಓವರ್​ಗಳಲ್ಲಿ 50+ ಸ್ಕೋರ್​ಗಳಿಸುವ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ.

ಅಂದರೆ ಕೇವಲ 19 ಎಸೆತಗಳಲ್ಲಿ ಭಾರತ ತಂಡದ ಸ್ಕೋರ್ 52 ಕ್ಕೆ ಬಂದು ನಿಂತಿತ್ತು. ಇದು ಟಿ20 ಕ್ರಿಕೆಟ್ ಇತಿಹಾಸದಲ್ಲೇ ಭಾರತ ತಂಡದ ಅತೀ ವೇಗದ ಅರ್ಧಶತಕವಾಗಿದೆ. ಇದಕ್ಕೂ ಮುನ್ನ 2023 ರಲ್ಲಿ ಬಾಂಗ್ಲಾದೇಶ್ ವಿರುದ್ಧ 3.4 ಓವರ್​ಗಳಲ್ಲಿ ಅರ್ಧಶತಕ ಪೂರೈಸಿದ್ದರು. ಇದೀಗ 3.1 ಓವರ್​ಗಳಲ್ಲಿ 50+ ಸ್ಕೋರ್​ಗಳಿಸುವ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ.

4 / 5
ಇಂಟ್ರೆಸ್ಟಿಂಗ್ ವಿಷಯ ಎಂದರೆ ಇದು ಟೀಮ್ ಇಂಡಿಯಾದ ಅತೀ ವೇಗದ ಅರ್ಧಶತಕವಲ್ಲ ಎಂಬುದು. ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡವು 3 ಓವರ್​ಗಳಲ್ಲಿ ಅರ್ಧಶತಕ ಪೂರೈಸಿದ ಇತಿಹಾಸವಿದೆ. 2024 ರಲ್ಲಿ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಕೇವಲ 3 ಓವರ್​ಗಳಲ್ಲಿ 50 ರನ್ ಕಲೆಹಾಕಿದ್ದರು. ಇದೀಗ ಟಿ20 ಕ್ರಿಕೆಟ್​ನಲ್ಲಿ 3.1 ಓವರ್​ಗಳ ಮೂಲಕ 52 ರನ್​ಗಳಿಸಿ ಇಶಾನ್ ಕಿಶನ್-ಅಭಿಷೇಕ್ ಶರ್ಮಾ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇಂಟ್ರೆಸ್ಟಿಂಗ್ ವಿಷಯ ಎಂದರೆ ಇದು ಟೀಮ್ ಇಂಡಿಯಾದ ಅತೀ ವೇಗದ ಅರ್ಧಶತಕವಲ್ಲ ಎಂಬುದು. ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡವು 3 ಓವರ್​ಗಳಲ್ಲಿ ಅರ್ಧಶತಕ ಪೂರೈಸಿದ ಇತಿಹಾಸವಿದೆ. 2024 ರಲ್ಲಿ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಕೇವಲ 3 ಓವರ್​ಗಳಲ್ಲಿ 50 ರನ್ ಕಲೆಹಾಕಿದ್ದರು. ಇದೀಗ ಟಿ20 ಕ್ರಿಕೆಟ್​ನಲ್ಲಿ 3.1 ಓವರ್​ಗಳ ಮೂಲಕ 52 ರನ್​ಗಳಿಸಿ ಇಶಾನ್ ಕಿಶನ್-ಅಭಿಷೇಕ್ ಶರ್ಮಾ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 5
ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ !
ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ !
ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿಗೆ ಕಲ್ಲೆಸೆತ
ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿಗೆ ಕಲ್ಲೆಸೆತ
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ