AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಚಾ ಘೋಷ್ ಸಿಡಿಲಬ್ಬರಕ್ಕೆ ದಾಖಲೆ ಧೂಳೀಪಟ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ ಬರೋಬ್ಬರಿ 199 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ರಿಚಾ ಘೋಷ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಭರ್ಜರಿ ಬ್ಯಾಟಿಂಗ್ ಹೊರತಾಗಿಯೂ ಈ ಪಂದ್ಯದಲ್ಲಿ ಆರ್​ಸಿಬಿ ತಂಡ 15 ರನ್​ಗಳಿಂದ ಸೋಲನುಭವಿಸಿದೆ.

ಝಾಹಿರ್ ಯೂಸುಫ್
|

Updated on: Jan 27, 2026 | 8:06 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ (Richa Ghosh) ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಕೂಡ ಸಿಡಿಲಬ್ಬರದ 90 ರನ್​ ಸಿಡಿಸುವ ಮೂಲಕ ಎಂಬುದು ವಿಶೇಷ. 

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ (Richa Ghosh) ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಕೂಡ ಸಿಡಿಲಬ್ಬರದ 90 ರನ್​ ಸಿಡಿಸುವ ಮೂಲಕ ಎಂಬುದು ವಿಶೇಷ. 

1 / 6
ವಡೋದರಾದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ನ್ಯಾಟ್ ಸೀವರ್ ಬ್ರಂಟ್ ಅಜೇಯ ಶತಕ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 199 ರನ್ ಕಲೆಹಾಕಿತು.

ವಡೋದರಾದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ನ್ಯಾಟ್ ಸೀವರ್ ಬ್ರಂಟ್ ಅಜೇಯ ಶತಕ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 199 ರನ್ ಕಲೆಹಾಕಿತು.

2 / 6
200 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಆರ್​ಸಿಬಿ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 35 ರನ್​ಗಳಿಸುವಷ್ಟರಲ್ಲಿ ಆರ್​ಸಿಬಿ ತಂಡವು 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಚಾ ಘೋಷ್ ದಿಟ್ಟ ಹೋರಾಟ ಪ್ರದರ್ಶಿಸಿದರು.

200 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಆರ್​ಸಿಬಿ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 35 ರನ್​ಗಳಿಸುವಷ್ಟರಲ್ಲಿ ಆರ್​ಸಿಬಿ ತಂಡವು 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಚಾ ಘೋಷ್ ದಿಟ್ಟ ಹೋರಾಟ ಪ್ರದರ್ಶಿಸಿದರು.

3 / 6
ಮುಂಬೈ ಇಂಡಿಯನ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ರಿಚಾ ಘೋಷ್ ಕೇವಲ 50 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 10 ಫೋರ್​ಗಳೊಂದಿಗೆ 90 ರನ್​ ಬಾರಿಸಿದರು. ಈ 90 ರನ್​ಗಳೊಂದಿಗೆ ರಿಚಾ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸವನ್ನು ಸಹ ಬರೆದರು.

ಮುಂಬೈ ಇಂಡಿಯನ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ರಿಚಾ ಘೋಷ್ ಕೇವಲ 50 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 10 ಫೋರ್​ಗಳೊಂದಿಗೆ 90 ರನ್​ ಬಾರಿಸಿದರು. ಈ 90 ರನ್​ಗಳೊಂದಿಗೆ ರಿಚಾ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸವನ್ನು ಸಹ ಬರೆದರು.

4 / 6
ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ 5 ಕ್ಕಿಂತ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಅತ್ಯಧಿಕ ರನ್ ಕಲೆಹಾಕಿದ ಭರ್ಜರಿ ದಾಖಲೆ ರಿಚಾ ಘೋಷ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಆರ್​ಸಿಬಿ ತಂಡ ನಾಡಿನ್ ಡಿ ಕ್ಲರ್ಕ್​ ಹೆಸರಿನಲ್ಲಿತ್ತು. ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಅಜೇಯ 63 ರನ್​ ಸಿಡಿಸುವ ಮೂಲಕ ನಾಡಿನ್ ಈ ದಾಖಲೆ ನಿರ್ಮಿಸಿದ್ದರು.

ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ 5 ಕ್ಕಿಂತ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಅತ್ಯಧಿಕ ರನ್ ಕಲೆಹಾಕಿದ ಭರ್ಜರಿ ದಾಖಲೆ ರಿಚಾ ಘೋಷ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಆರ್​ಸಿಬಿ ತಂಡ ನಾಡಿನ್ ಡಿ ಕ್ಲರ್ಕ್​ ಹೆಸರಿನಲ್ಲಿತ್ತು. ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಅಜೇಯ 63 ರನ್​ ಸಿಡಿಸುವ ಮೂಲಕ ನಾಡಿನ್ ಈ ದಾಖಲೆ ನಿರ್ಮಿಸಿದ್ದರು.

5 / 6
ಇದೀಗ ಕೇವಲ 50 ಎಸೆತಗಳಲ್ಲಿ 90 ರನ್ ಸಿಡಿಸಿ ರಿಚಾ ಘೋಷ್ ಈ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀ್ಗ್​ ಇತಿಹಾಸದಲ್ಲೇ ಟಾಪ್-5 ಕ್ಕಿಂತ ಕೆಳಗೆ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಗರಿಷ್ಠ ವೈಯುಕ್ತಿಕ ಸ್ಕೋರ್​ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ರಿಚಾ ಘೋಷ್ ಅವರ ಈ ಏಕಾಂಗಿ ಹೋರಾಟದ ಹೊರತಾಗಿಯೂ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು 15 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಇದೀಗ ಕೇವಲ 50 ಎಸೆತಗಳಲ್ಲಿ 90 ರನ್ ಸಿಡಿಸಿ ರಿಚಾ ಘೋಷ್ ಈ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀ್ಗ್​ ಇತಿಹಾಸದಲ್ಲೇ ಟಾಪ್-5 ಕ್ಕಿಂತ ಕೆಳಗೆ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಗರಿಷ್ಠ ವೈಯುಕ್ತಿಕ ಸ್ಕೋರ್​ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ರಿಚಾ ಘೋಷ್ ಅವರ ಈ ಏಕಾಂಗಿ ಹೋರಾಟದ ಹೊರತಾಗಿಯೂ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು 15 ರನ್​ಗಳಿಂದ ಸೋಲೊಪ್ಪಿಕೊಂಡಿತು.

6 / 6
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ