AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rinku Singh: ಆ 5 ಭರ್ಜರಿ ಸಿಕ್ಸ್​ಗಳನ್ನು ರಿಂಕು ಸಿಂಗ್ ಸಮರ್ಪಿಸಿದ್ದು ಯಾರಿಗೆ ಗೊತ್ತಾ?

IPL 2023 Kannada: ತಾನು ಬೆಳೆದ ಬಂದ ಹಾದಿಯನ್ನೂ ಮಾತ್ರ ಮರೆತಿಲ್ಲ ಎಂಬುದಕ್ಕೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ರಿಂಕು ಸಿಂಗ್ ಆಡಿರುವ ಮಾತುಗಳೇ ಸಾಕ್ಷಿ.

TV9 Web
| Updated By: ಝಾಹಿರ್ ಯೂಸುಫ್|

Updated on: Apr 10, 2023 | 6:23 PM

Share
IPL 2023: ಭಾನುವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ದದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಐತಿಹಾಸಿಕ ಗೆಲುವು ದಾಖಲಿಸಿತ್ತು. ಈ ಗೆಲುವಿನ ರುವಾರಿ ಸತತ ಐದು ಸಿಕ್ಸ್​ಗಳ ಸರದಾರ ರಿಂಕು ಸಿಂಗ್.

IPL 2023: ಭಾನುವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ದದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಐತಿಹಾಸಿಕ ಗೆಲುವು ದಾಖಲಿಸಿತ್ತು. ಈ ಗೆಲುವಿನ ರುವಾರಿ ಸತತ ಐದು ಸಿಕ್ಸ್​ಗಳ ಸರದಾರ ರಿಂಕು ಸಿಂಗ್.

1 / 7
ಕೊನೆಯ ಓವರ್​ನಲ್ಲಿ 29 ರನ್​ಗಳ ಕಠಿಣ ಗುರಿ ಪಡೆದಿದ್ದ ಕೆಕೆಆರ್​ ತಂಡಕ್ಕೆ 5 ಭರ್ಜರಿ ಸಿಕ್ಸ್​ ಸಿಡಿಸಿ ರಿಂಕು ಸಿಂಗ್ ಸ್ಮರಣೀಯ ಗೆಲುವು ತಂದುಕೊಟ್ಟಿದ್ದರು. ಈ ಅಮೋಘ ಗೆಲುವಿನೊಂದಿಗೆ 25 ವರ್ಷದ ರಿಂಕು ಸಿಂಗ್ ಮನೆಮಾತಾಗಿದ್ದಾರೆ.

ಕೊನೆಯ ಓವರ್​ನಲ್ಲಿ 29 ರನ್​ಗಳ ಕಠಿಣ ಗುರಿ ಪಡೆದಿದ್ದ ಕೆಕೆಆರ್​ ತಂಡಕ್ಕೆ 5 ಭರ್ಜರಿ ಸಿಕ್ಸ್​ ಸಿಡಿಸಿ ರಿಂಕು ಸಿಂಗ್ ಸ್ಮರಣೀಯ ಗೆಲುವು ತಂದುಕೊಟ್ಟಿದ್ದರು. ಈ ಅಮೋಘ ಗೆಲುವಿನೊಂದಿಗೆ 25 ವರ್ಷದ ರಿಂಕು ಸಿಂಗ್ ಮನೆಮಾತಾಗಿದ್ದಾರೆ.

2 / 7
ಉತ್ತರ ಪ್ರದೇಶದ ಅಲಿಗಢ ಮೂಲದ ರಿಂಕು ಸಿಂಗ್ ಕೆಳ ಮಧ್ಯಮ ವರ್ಗದ ಕುಟುಂಬದಿಂದ ಬೆಳೆದು ಬಂದ ಆಟಗಾರ. ಅದರಲ್ಲೂ ಬಾಲ್ಯದಲ್ಲೇ ಕಷ್ಟಕಾರ್ಪಣ್ಯಗಳನ್ನು ಮೆಟ್ಟಿ ನಿಂತು ಗುರಿ ಮುಟ್ಟಿದ ಯುವ ಆಟಗಾರ. ಏಕೆಂದರೆ ರಿಂಕು ಸಿಂಗ್ ಉತ್ತರ ಪ್ರದೇಶದ ಪರ ಅಂಡರ್ 19 ಆಡುವಾಗ ದೈನಂದಿನ ಭತ್ಯೆಗಾಗಿ ಗುಡಿಸುವ ಕೆಲಸನ್ನು ಮಾಡುತ್ತಿದ್ದರು. ಆದರೆ ಐಪಿಎಲ್​ನಲ್ಲಿ ಅವಕಾಶ ಪಡೆದ ಬಳಿಕ ಎಲ್ಲವೂ ಬದಲಾಗಿದೆ. ಆದರೆ...

ಉತ್ತರ ಪ್ರದೇಶದ ಅಲಿಗಢ ಮೂಲದ ರಿಂಕು ಸಿಂಗ್ ಕೆಳ ಮಧ್ಯಮ ವರ್ಗದ ಕುಟುಂಬದಿಂದ ಬೆಳೆದು ಬಂದ ಆಟಗಾರ. ಅದರಲ್ಲೂ ಬಾಲ್ಯದಲ್ಲೇ ಕಷ್ಟಕಾರ್ಪಣ್ಯಗಳನ್ನು ಮೆಟ್ಟಿ ನಿಂತು ಗುರಿ ಮುಟ್ಟಿದ ಯುವ ಆಟಗಾರ. ಏಕೆಂದರೆ ರಿಂಕು ಸಿಂಗ್ ಉತ್ತರ ಪ್ರದೇಶದ ಪರ ಅಂಡರ್ 19 ಆಡುವಾಗ ದೈನಂದಿನ ಭತ್ಯೆಗಾಗಿ ಗುಡಿಸುವ ಕೆಲಸನ್ನು ಮಾಡುತ್ತಿದ್ದರು. ಆದರೆ ಐಪಿಎಲ್​ನಲ್ಲಿ ಅವಕಾಶ ಪಡೆದ ಬಳಿಕ ಎಲ್ಲವೂ ಬದಲಾಗಿದೆ. ಆದರೆ...

3 / 7
ಆದರೆ ತಾನು ಬೆಳೆದ ಬಂದ ಹಾದಿಯನ್ನೂ ಮಾತ್ರ ಮರೆತಿಲ್ಲ ಎಂಬುದಕ್ಕೆ ರಿಂಕು ಸಿಂಗ್ ಆಡಿರುವ ಮಾತುಗಳೇ ಸಾಕ್ಷಿ. ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ರಿಂಕು ಸಿಂಗ್, ನನ್ನ ತಂದೆ ಸಾಕಷ್ಟು ಕಷ್ಟಪಟ್ಟಿದ್ದಾರೆ, ನನ್ನದು ರೈತ ಕುಟುಂಬ. ನಾನು ಈ ಪಿಚ್​ನಿಂದ ಬಾರಿಸಿದ ಪ್ರತಿ ಹೊಡೆತಗಳು ನನ್ನ ಬೆಳವಣಿಗೆಗೆ ತ್ಯಾಗ ಮಾಡಿದ ಪ್ರತಿಯೊಬ್ಬರಿಗೂ ಅರ್ಪಿಸುತ್ತಿದ್ದೇನೆ ಎಂದು ರಿಂಕು ಸಿಂಗ್ ಹೇಳಿದ್ದಾರೆ.

ಆದರೆ ತಾನು ಬೆಳೆದ ಬಂದ ಹಾದಿಯನ್ನೂ ಮಾತ್ರ ಮರೆತಿಲ್ಲ ಎಂಬುದಕ್ಕೆ ರಿಂಕು ಸಿಂಗ್ ಆಡಿರುವ ಮಾತುಗಳೇ ಸಾಕ್ಷಿ. ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ರಿಂಕು ಸಿಂಗ್, ನನ್ನ ತಂದೆ ಸಾಕಷ್ಟು ಕಷ್ಟಪಟ್ಟಿದ್ದಾರೆ, ನನ್ನದು ರೈತ ಕುಟುಂಬ. ನಾನು ಈ ಪಿಚ್​ನಿಂದ ಬಾರಿಸಿದ ಪ್ರತಿ ಹೊಡೆತಗಳು ನನ್ನ ಬೆಳವಣಿಗೆಗೆ ತ್ಯಾಗ ಮಾಡಿದ ಪ್ರತಿಯೊಬ್ಬರಿಗೂ ಅರ್ಪಿಸುತ್ತಿದ್ದೇನೆ ಎಂದು ರಿಂಕು ಸಿಂಗ್ ಹೇಳಿದ್ದಾರೆ.

4 / 7
ಅಂದಹಾಗೆ ರಿಂಕು ಸಿಂಗ್ ಅವರ ತಂದೆ ಸಿಲಿಂಡರ್​ ವಿತರಕ. ಮನೆಮನೆಗೆ ತೆರಳಿ ಗ್ಯಾಸ್‌ ಸಿಲಿಂಡರ್‌​​​ಗಳನ್ನು ಹಂಚುತ್ತಿದ್ದರು. ಹಾಗೆಯೇ ಅವರ ಅಣ್ಣ ಆಟೋ ಡ್ರೈವರ್. ಇತ್ತ ಕ್ರಿಕೆಟಿಗನಾಗಬೇಕೆಂಬ ಕನಸು ಹೊತ್ತಿದ್ದ ರಿಂಕು ಸಿಂಗ್​ಗೆ ಆರ್ಥಿಕ ಸಮಸ್ಯೆಯೇ ದೊಡ್ಡ ಸವಾಲಾಗಿತ್ತು.

ಅಂದಹಾಗೆ ರಿಂಕು ಸಿಂಗ್ ಅವರ ತಂದೆ ಸಿಲಿಂಡರ್​ ವಿತರಕ. ಮನೆಮನೆಗೆ ತೆರಳಿ ಗ್ಯಾಸ್‌ ಸಿಲಿಂಡರ್‌​​​ಗಳನ್ನು ಹಂಚುತ್ತಿದ್ದರು. ಹಾಗೆಯೇ ಅವರ ಅಣ್ಣ ಆಟೋ ಡ್ರೈವರ್. ಇತ್ತ ಕ್ರಿಕೆಟಿಗನಾಗಬೇಕೆಂಬ ಕನಸು ಹೊತ್ತಿದ್ದ ರಿಂಕು ಸಿಂಗ್​ಗೆ ಆರ್ಥಿಕ ಸಮಸ್ಯೆಯೇ ದೊಡ್ಡ ಸವಾಲಾಗಿತ್ತು.

5 / 7
ಇದಾಗ್ಯೂ ಕನಸು ನನಸು ಮಾಡಬೇಕೆಂಬ ಛಲದೊಂದಿಗೆ ಮೈದಾನಕ್ಕಿಳಿಯುತ್ತಿದ್ದ ರಿಂಕು ಸಿಂಗ್, ಕೋಚಿಂಗ್ ಸೆಂಟರ್​​ ಒಂದರಲ್ಲಿ ಕಸ ಗುಡಿಸಿ ಒರೆಸುವ ಕೆಲಸ ಮಾಡುತ್ತಾ ಹಣ ಹೊಂದಿಸಿಕೊಳ್ಳುತ್ತಿದ್ದರು. ಇದೀಗ ಅಂದಿನ ಪರಿಶ್ರಮಕ್ಕೆ ತಕ್ಕದಾದ ಫಲ ಸಿಕ್ಕಿದೆ. ಒಂದೇ ಒಂದು ಪಂದ್ಯದ ಮೂಲಕ ರಿಂಕು ಸಿಂಗ್ ಹೊಸ ಹೀರೋ ಆಗಿದ್ದಾರೆ.

ಇದಾಗ್ಯೂ ಕನಸು ನನಸು ಮಾಡಬೇಕೆಂಬ ಛಲದೊಂದಿಗೆ ಮೈದಾನಕ್ಕಿಳಿಯುತ್ತಿದ್ದ ರಿಂಕು ಸಿಂಗ್, ಕೋಚಿಂಗ್ ಸೆಂಟರ್​​ ಒಂದರಲ್ಲಿ ಕಸ ಗುಡಿಸಿ ಒರೆಸುವ ಕೆಲಸ ಮಾಡುತ್ತಾ ಹಣ ಹೊಂದಿಸಿಕೊಳ್ಳುತ್ತಿದ್ದರು. ಇದೀಗ ಅಂದಿನ ಪರಿಶ್ರಮಕ್ಕೆ ತಕ್ಕದಾದ ಫಲ ಸಿಕ್ಕಿದೆ. ಒಂದೇ ಒಂದು ಪಂದ್ಯದ ಮೂಲಕ ರಿಂಕು ಸಿಂಗ್ ಹೊಸ ಹೀರೋ ಆಗಿದ್ದಾರೆ.

6 / 7
ಯುವ ಆಟಗಾರನ ಪ್ರದರ್ಶನಕ್ಕೆ ವಿಶ್ವದಾದ್ಯಂತದಿಂದ ಭರಪೂರ ಅಭಿನಂದನೆಗಳ ಸುರಿಮಳೆಯಾಗುತ್ತಿದೆ. ಇದರ ನಡುವೆ ರಿಂಕು ಸಿಂಗ್ ತನ್ನ ಕಷ್ಟಕಾಲದಲ್ಲಿ ಸಹಾಯಕ್ಕೆ ನಿಂತ ಪ್ರತಿಯೊಬ್ಬರಿಗೂ ತಾನು ಬಾರಿಸಿದ ಪ್ರತಿಯೊಂದು ಹೊಡೆತಗಳನ್ನು ಸರ್ಮಪಿಸುವ ಮೂಲಕ ಎಲ್ಲರ ಮನಗೆದ್ದಿರುವುದು ವಿಶೇಷ.

ಯುವ ಆಟಗಾರನ ಪ್ರದರ್ಶನಕ್ಕೆ ವಿಶ್ವದಾದ್ಯಂತದಿಂದ ಭರಪೂರ ಅಭಿನಂದನೆಗಳ ಸುರಿಮಳೆಯಾಗುತ್ತಿದೆ. ಇದರ ನಡುವೆ ರಿಂಕು ಸಿಂಗ್ ತನ್ನ ಕಷ್ಟಕಾಲದಲ್ಲಿ ಸಹಾಯಕ್ಕೆ ನಿಂತ ಪ್ರತಿಯೊಬ್ಬರಿಗೂ ತಾನು ಬಾರಿಸಿದ ಪ್ರತಿಯೊಂದು ಹೊಡೆತಗಳನ್ನು ಸರ್ಮಪಿಸುವ ಮೂಲಕ ಎಲ್ಲರ ಮನಗೆದ್ದಿರುವುದು ವಿಶೇಷ.

7 / 7
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು