AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಸಿಐ ಕೇಂದ್ರ ಒಪ್ಪಂದದಲ್ಲಿ ಏಕೈಕ ಆಟಗಾರನಿಗೆ ಮುಂಬಡ್ತಿ; ಯಾರು ಆ ಅದೃಷ್ಟಶಾಲಿ?

BCCI Announces 2024-25 Central Contracts: ಬಿಸಿಸಿಐ 2024-25ನೇ ಸಾಲಿನ ಕೇಂದ್ರ ಒಪ್ಪಂದದ ಪಟ್ಟಿಯನ್ನು ಪ್ರಕಟಿಸಿದ್ದು, ಒಟ್ಟು 34 ಆಟಗಾರರು ಸ್ಥಾನ ಪಡೆದಿದ್ದಾರೆ. ರಿಷಭ್ ಪಂತ್ ಅವರಿಗೆ ಬಿ ಗ್ರೇಡ್‌ನಿಂದ ಎ ಗ್ರೇಡ್‌ಗೆ ಬಡ್ತಿ ನೀಡಲಾಗಿದೆ. 9 ಹೊಸ ಆಟಗಾರರು ಒಪ್ಪಂದ ಪಡೆದಿದ್ದಾರೆ. ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರಿಗೂ ಸ್ಥಾನ ದೊರೆತಿದೆ.

ಪೃಥ್ವಿಶಂಕರ
|

Updated on: Apr 21, 2025 | 4:45 PM

Share
2024-25 ರ ಸೀಸನ್​ನ ಕೇಂದ್ರ ಗುತ್ತಿಗೆ ಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ. ಆ ಪ್ರಕಾರ ಬಿಸಿಸಿಐ ಒಪ್ಪಂದದಲ್ಲಿ ಒಟ್ಟು 34 ಆಟಗಾರರು ಸ್ಥಾನ ಪಡೆದಿದ್ದಾರೆ. ಇದರಲ್ಲಿ 9 ಆಟಗಾರರಿಗೆ ಇದೇ ಮೊದಲ ಬಾರಿಗೆ ಬಿಸಿಸಿಐನ ಕೇಂದ್ರ ಒಪ್ಪಂದದಲ್ಲಿ ಸ್ಥಾನ ಸಿಕ್ಕಿದೆ. ಇವರ ಜೊತೆಗೆ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್​ಗೂ ಬಿಸಿಸಿಐನಿಂದ ಕ್ಷಮಾಧಾನ ಸಿಕ್ಕಿದೆ.

2024-25 ರ ಸೀಸನ್​ನ ಕೇಂದ್ರ ಗುತ್ತಿಗೆ ಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ. ಆ ಪ್ರಕಾರ ಬಿಸಿಸಿಐ ಒಪ್ಪಂದದಲ್ಲಿ ಒಟ್ಟು 34 ಆಟಗಾರರು ಸ್ಥಾನ ಪಡೆದಿದ್ದಾರೆ. ಇದರಲ್ಲಿ 9 ಆಟಗಾರರಿಗೆ ಇದೇ ಮೊದಲ ಬಾರಿಗೆ ಬಿಸಿಸಿಐನ ಕೇಂದ್ರ ಒಪ್ಪಂದದಲ್ಲಿ ಸ್ಥಾನ ಸಿಕ್ಕಿದೆ. ಇವರ ಜೊತೆಗೆ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್​ಗೂ ಬಿಸಿಸಿಐನಿಂದ ಕ್ಷಮಾಧಾನ ಸಿಕ್ಕಿದೆ.

1 / 5
ಆದರೆ, ಈ ಬಾರಿ ಬಿಸಿಸಿಐ ತನ್ನ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ಒಬ್ಬ ಆಟಗಾರನಿಗೆ ಮಾತ್ರ ಬಡ್ತಿ ನೀಡಿದೆ. ಕಾರು ಅಪಘಾತದಲ್ಲಿ ಸಾವು ಗೆದ್ದು ಬಂದು ಟೀಂ ಇಂಡಿಯಾದಲ್ಲೂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿರುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್​ ಪಂತ್​ಗೆ ಬಿ ಗ್ರೇಡ್‌ನಿಂದ ಎ ಗ್ರೇಡ್‌ಗೆ ಬಡ್ತಿ ನೀಡಲಾಗಿದೆ.

ಆದರೆ, ಈ ಬಾರಿ ಬಿಸಿಸಿಐ ತನ್ನ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ಒಬ್ಬ ಆಟಗಾರನಿಗೆ ಮಾತ್ರ ಬಡ್ತಿ ನೀಡಿದೆ. ಕಾರು ಅಪಘಾತದಲ್ಲಿ ಸಾವು ಗೆದ್ದು ಬಂದು ಟೀಂ ಇಂಡಿಯಾದಲ್ಲೂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿರುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್​ ಪಂತ್​ಗೆ ಬಿ ಗ್ರೇಡ್‌ನಿಂದ ಎ ಗ್ರೇಡ್‌ಗೆ ಬಡ್ತಿ ನೀಡಲಾಗಿದೆ.

2 / 5
ಕಳೆದ ಕೆಲವು ವರ್ಷಗಳಿಂದ ರಿಷಭ್ ಪಂತ್ ಎಂತಹ ಆಟಗಾರ ಎಂಬುದು ಸಾಬೀತಾಗಿದೆ. 2022 ರಲ್ಲಿ ಸಂಭವಿಸಿದ ಮಾರಕ ಕಾರು ಅಪಘಾತವು ಪಂತ್ ಅವರ ವೃತ್ತಿಜೀವನದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿತು, ಆದರೆ ಅವರು ಅದ್ಭುತ ಪುನರಾಗಮನ ಮಾಡಿ ಅಸಾಧ್ಯವನ್ನು ಸಾಧ್ಯವಾಗಿಸಿದರು. ಅಲ್ಲದೆ ಟೀಂ ಇಂಡಿಯಾ 2024 ರ ಟಿ20 ವಿಶ್ವಕಪ್ ಗೆಲ್ಲುವಲ್ಲು ಪಂತ್ ಪ್ರಮುಖ ಪಾತ್ರವಹಿಸಿದ್ದರು.

ಕಳೆದ ಕೆಲವು ವರ್ಷಗಳಿಂದ ರಿಷಭ್ ಪಂತ್ ಎಂತಹ ಆಟಗಾರ ಎಂಬುದು ಸಾಬೀತಾಗಿದೆ. 2022 ರಲ್ಲಿ ಸಂಭವಿಸಿದ ಮಾರಕ ಕಾರು ಅಪಘಾತವು ಪಂತ್ ಅವರ ವೃತ್ತಿಜೀವನದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿತು, ಆದರೆ ಅವರು ಅದ್ಭುತ ಪುನರಾಗಮನ ಮಾಡಿ ಅಸಾಧ್ಯವನ್ನು ಸಾಧ್ಯವಾಗಿಸಿದರು. ಅಲ್ಲದೆ ಟೀಂ ಇಂಡಿಯಾ 2024 ರ ಟಿ20 ವಿಶ್ವಕಪ್ ಗೆಲ್ಲುವಲ್ಲು ಪಂತ್ ಪ್ರಮುಖ ಪಾತ್ರವಹಿಸಿದ್ದರು.

3 / 5
ಇದು ಮಾತ್ರವಲ್ಲದೆ 2025 ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ಭಾರತ ತಂಡದ ಭಾಗವೂ ಆಗಿದ್ದರು. ಬಿಸಿಸಿಐನ ಗ್ರೇಡ್ ಎ ಕೇಂದ್ರ ಒಪ್ಪಂದವು ಆಟಗಾರನಿಗೆ ಕೇವಲ ಆರ್ಥಿಕ ಪ್ರತಿಫಲವಲ್ಲ, ಬದಲಿಗೆ ಆಟಗಾರನ ಮೇಲಿನ ಮಂಡಳಿಯ ನಂಬಿಕೆ ಮತ್ತು ಪ್ರಾಮುಖ್ಯತೆಯನ್ನು ಪ್ರತಿಬಿಂಬಿಸುತ್ತದೆ. ಬಿಸಿಸಿಐ ವಾರ್ಷಿಕವಾಗಿ ಬಿ ಗ್ರೇಡ್ ಆಟಗಾರರಿಗೆ 3 ಕೋಟಿ ರೂ. ಮತ್ತು ಎ ಗ್ರೇಡ್ ಆಟಗಾರರಿಗೆ 5 ಕೋಟಿ ರೂ. ನೀಡುತ್ತದೆ. ಇದರರ್ಥ ಈ ಬಾರಿ ಪಂತ್ ಬಿಸಿಸಿಐನಿಂದ 3 ಕೋಟಿ ರೂ.ಗಳ ಬದಲಿಗೆ 5 ಕೋಟಿ ರೂ.ಗಳನ್ನು ಪಡೆಯಲಿದ್ದಾರೆ.

ಇದು ಮಾತ್ರವಲ್ಲದೆ 2025 ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ಭಾರತ ತಂಡದ ಭಾಗವೂ ಆಗಿದ್ದರು. ಬಿಸಿಸಿಐನ ಗ್ರೇಡ್ ಎ ಕೇಂದ್ರ ಒಪ್ಪಂದವು ಆಟಗಾರನಿಗೆ ಕೇವಲ ಆರ್ಥಿಕ ಪ್ರತಿಫಲವಲ್ಲ, ಬದಲಿಗೆ ಆಟಗಾರನ ಮೇಲಿನ ಮಂಡಳಿಯ ನಂಬಿಕೆ ಮತ್ತು ಪ್ರಾಮುಖ್ಯತೆಯನ್ನು ಪ್ರತಿಬಿಂಬಿಸುತ್ತದೆ. ಬಿಸಿಸಿಐ ವಾರ್ಷಿಕವಾಗಿ ಬಿ ಗ್ರೇಡ್ ಆಟಗಾರರಿಗೆ 3 ಕೋಟಿ ರೂ. ಮತ್ತು ಎ ಗ್ರೇಡ್ ಆಟಗಾರರಿಗೆ 5 ಕೋಟಿ ರೂ. ನೀಡುತ್ತದೆ. ಇದರರ್ಥ ಈ ಬಾರಿ ಪಂತ್ ಬಿಸಿಸಿಐನಿಂದ 3 ಕೋಟಿ ರೂ.ಗಳ ಬದಲಿಗೆ 5 ಕೋಟಿ ರೂ.ಗಳನ್ನು ಪಡೆಯಲಿದ್ದಾರೆ.

4 / 5
ಕಳೆದ ಬಾರಿಯಂತೆ ಈ ಬಾರಿಯೂ ಬಿಸಿಸಿಐ ಒಟ್ಟು 6 ಆಟಗಾರರನ್ನು ಎ ಗ್ರೇಡ್‌ನಲ್ಲಿ ಸೇರಿಸಿಕೊಂಡಿದೆ. ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ ಮತ್ತು ಮೊಹಮ್ಮದ್ ಶಮಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆರ್ ಅಶ್ವಿನ್ ಈ ಪಟ್ಟಿಯಿಂದ ಹೊರಬಿದ್ದಿದ್ದು, ಅವರ ಸ್ಥಾನದಲ್ಲಿ ರಿಷಭ್ ಪಂತ್ ಸ್ಥಾನ ಪಡೆದಿದ್ದಾರೆ.

ಕಳೆದ ಬಾರಿಯಂತೆ ಈ ಬಾರಿಯೂ ಬಿಸಿಸಿಐ ಒಟ್ಟು 6 ಆಟಗಾರರನ್ನು ಎ ಗ್ರೇಡ್‌ನಲ್ಲಿ ಸೇರಿಸಿಕೊಂಡಿದೆ. ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ ಮತ್ತು ಮೊಹಮ್ಮದ್ ಶಮಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆರ್ ಅಶ್ವಿನ್ ಈ ಪಟ್ಟಿಯಿಂದ ಹೊರಬಿದ್ದಿದ್ದು, ಅವರ ಸ್ಥಾನದಲ್ಲಿ ರಿಷಭ್ ಪಂತ್ ಸ್ಥಾನ ಪಡೆದಿದ್ದಾರೆ.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ