AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಪಂಟರ್ ಪಂತ್: ಸ್ಪೋಟಕ ಸೆಂಚುರಿ ಸಿಡಿಸಿದ ರಿಷಭ್

India vs Bangladesh 1st Test: ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದೆ. ಮೊದಲ ಇನಿಂಗ್ಸ್​ನಲ್ಲಿ ಭಾರತದ ಪರ ರವಿಚಂದ್ರನ್ ಅಶ್ವಿನ್ ಸೆಂಚುರಿ ಸಿಡಿಸಿದ್ದರು. ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಮೂರಂಕಿ ರನ್ ಕಲೆಹಾಕಿದ್ದಾರೆ.

TV9 Web
| Edited By: |

Updated on:Sep 21, 2024 | 12:47 PM

Share
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಂತ್ 123 ಎಸೆತಗಳಲ್ಲಿ ಶತಕ ಪೂರೈಸಿದರು.  ಈ ಶತಕದೊಂದಿಗೆ ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ವಿಕೆಟ್ ಕೀಪರ್​ಗಳ ಪಟ್ಟಿಯಲ್ಲಿ ರಿಷಭ್ ಪಂತ್ ಅಗ್ರಸ್ಥಾನಕ್ಕೇರಿದ್ದಾರೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಂತ್ 123 ಎಸೆತಗಳಲ್ಲಿ ಶತಕ ಪೂರೈಸಿದರು.  ಈ ಶತಕದೊಂದಿಗೆ ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ವಿಕೆಟ್ ಕೀಪರ್​ಗಳ ಪಟ್ಟಿಯಲ್ಲಿ ರಿಷಭ್ ಪಂತ್ ಅಗ್ರಸ್ಥಾನಕ್ಕೇರಿದ್ದಾರೆ.

1 / 5
ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ಪರ 144 ಟೆಸ್ಟ್ ಇನಿಂಗ್ಸ್ ಆಡಿರುವ ಧೋನಿ ಕೇವಲ 6 ​ ಶತಕಗಳನ್ನು ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ರಿಷಭ್ ಪಂತ್ ಅಗ್ರಸ್ಥಾನಕ್ಕೇರಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ಪರ 144 ಟೆಸ್ಟ್ ಇನಿಂಗ್ಸ್ ಆಡಿರುವ ಧೋನಿ ಕೇವಲ 6 ​ ಶತಕಗಳನ್ನು ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ರಿಷಭ್ ಪಂತ್ ಅಗ್ರಸ್ಥಾನಕ್ಕೇರಿದ್ದಾರೆ.

2 / 5
26 ವರ್ಷದ ರಿಷಭ್ ಪಂತ್ ಕೇವಲ 58 ಇನಿಂಗ್ಸ್​ಗಳಲ್ಲಿ ಒಟ್ಟು 6 ಟೆಸ್ಟ್ ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಟೆಸ್ಟ್ ಶತಕ ಸಿಡಿಸಿದ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

26 ವರ್ಷದ ರಿಷಭ್ ಪಂತ್ ಕೇವಲ 58 ಇನಿಂಗ್ಸ್​ಗಳಲ್ಲಿ ಒಟ್ಟು 6 ಟೆಸ್ಟ್ ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಟೆಸ್ಟ್ ಶತಕ ಸಿಡಿಸಿದ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ಇನ್ನು ಈ ಪಂದ್ಯದಲ್ಲಿ 128 ಎಸೆತಗಳನ್ನು ಎದುರಿಸಿದ ರಿಷಭ್ ಪಂತ್ 4 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 109 ರನ್ ಬಾರಿಸಿ ಮೆಹದಿ ಹಸನ್ ಮಿರಾಝ್ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದರು. ಈ ವೇಳೆಗೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 4 ವಿಕೆಟ್ ಕಳೆದುಕೊಂಡು 234 ರನ್​ ಕಲೆಹಾಕಿತ್ತು.

ಇನ್ನು ಈ ಪಂದ್ಯದಲ್ಲಿ 128 ಎಸೆತಗಳನ್ನು ಎದುರಿಸಿದ ರಿಷಭ್ ಪಂತ್ 4 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 109 ರನ್ ಬಾರಿಸಿ ಮೆಹದಿ ಹಸನ್ ಮಿರಾಝ್ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದರು. ಈ ವೇಳೆಗೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 4 ವಿಕೆಟ್ ಕಳೆದುಕೊಂಡು 234 ರನ್​ ಕಲೆಹಾಕಿತ್ತು.

4 / 5
ಮೊದಲ ಇನಿಂಗ್ಸ್​ನ 227 ರನ್​ಗಳ ಮುನ್ನಡೆಯೊಂದಿಗೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ ಒಟ್ಟು 470+ ರನ್ ಕಲೆಹಾಕಿದ್ದು, ಈ ಮೂಲಕ ಮೂರನೇ ದಿನದಾಟದಲ್ಲೇ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ. ಅಲ್ಲದೆ ಮೂರನೇ ದಿನದಾಟದ ಅಂತ್ಯದವರೆಗೆ ಟೀಮ್ ಇಂಡಿಯಾ ಬ್ಯಾಟರ್​ಗಳು ಇನಿಂಗ್ಸ್ ಮುಂದುವರೆಸುವ ಸಾಧ್ಯತೆಯಿದೆ. ಈ ಮೂಲಕ ಬಾಂಗ್ಲಾದೇಶ್ ತಂಡಕ್ಕೆ ಕಠಿಣ ಗುರಿ ನೀಡಬಹುದು.

ಮೊದಲ ಇನಿಂಗ್ಸ್​ನ 227 ರನ್​ಗಳ ಮುನ್ನಡೆಯೊಂದಿಗೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ ಒಟ್ಟು 470+ ರನ್ ಕಲೆಹಾಕಿದ್ದು, ಈ ಮೂಲಕ ಮೂರನೇ ದಿನದಾಟದಲ್ಲೇ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ. ಅಲ್ಲದೆ ಮೂರನೇ ದಿನದಾಟದ ಅಂತ್ಯದವರೆಗೆ ಟೀಮ್ ಇಂಡಿಯಾ ಬ್ಯಾಟರ್​ಗಳು ಇನಿಂಗ್ಸ್ ಮುಂದುವರೆಸುವ ಸಾಧ್ಯತೆಯಿದೆ. ಈ ಮೂಲಕ ಬಾಂಗ್ಲಾದೇಶ್ ತಂಡಕ್ಕೆ ಕಠಿಣ ಗುರಿ ನೀಡಬಹುದು.

5 / 5

Published On - 12:28 pm, Sat, 21 September 24

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ