AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರ್ವಸ್ 90: ನೈಂಟಿಯಲ್ಲೇ ಪಂತ್ ಪಲ್ಟಿ..!

Rishabh Pant: ಬೆಂಗಳೂರಿನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 2ನೇ ಇನಿಂಗ್ಸ್​ನಲ್ಲಿ ರಿಷಭ್ ಪಂತ್ ಶತಕವಂಚಿತರಾಗಿದ್ದಾರೆ. ಈ ಇನಿಂಗ್ಸ್​ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಂತ್ 105 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 99 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಟೆಸ್ಟ್​ನಲ್ಲಿ 7ನೇ ಶತಕ ಬಾರಿಸುವ ಅವಕಾಶವನ್ನು ಕೈಚೆಲ್ಲಿಕೊಂಡರು.

ಝಾಹಿರ್ ಯೂಸುಫ್
|

Updated on: Oct 20, 2024 | 9:59 AM

Share
ಟೆಸ್ಟ್ ಕ್ರಿಕೆಟ್​ನಲ್ಲಿ ರಿಷಭ್ ಪಂತ್ ಈವರೆಗೆ 6 ಶತಕಗಳನ್ನು ಬಾರಿಸಿದ್ದಾರೆ. ಆದರೆ ಅವರು ಶತಕದಂಚಿನಲ್ಲಿ ಎಡವಿರುವುದು 7 ಬಾರಿ. ಅಂದರೆ ಟೆಸ್ಟ್ ಇನಿಂಗ್ಸ್​ವೊಂದರಲ್ಲಿ 90 ಕ್ಕಿಂತ ಹೆಚ್ಚು ರನ್ ಕಲೆಹಾಕಿ ಒಟ್ಟು ಏಳು ಬಾರಿ ವಿಕೆಟ್ ಒಪ್ಪಿಸಿದ್ದಾರೆ. ಅದೇ 200 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ 90ರ ಅಸುಪಾಸಿನಲ್ಲಿ ಔಟ್ ಆಗಿರುವುದು ಕೇವಲ 10 ಬಾರಿ ಮಾತ್ರ.

ಟೆಸ್ಟ್ ಕ್ರಿಕೆಟ್​ನಲ್ಲಿ ರಿಷಭ್ ಪಂತ್ ಈವರೆಗೆ 6 ಶತಕಗಳನ್ನು ಬಾರಿಸಿದ್ದಾರೆ. ಆದರೆ ಅವರು ಶತಕದಂಚಿನಲ್ಲಿ ಎಡವಿರುವುದು 7 ಬಾರಿ. ಅಂದರೆ ಟೆಸ್ಟ್ ಇನಿಂಗ್ಸ್​ವೊಂದರಲ್ಲಿ 90 ಕ್ಕಿಂತ ಹೆಚ್ಚು ರನ್ ಕಲೆಹಾಕಿ ಒಟ್ಟು ಏಳು ಬಾರಿ ವಿಕೆಟ್ ಒಪ್ಪಿಸಿದ್ದಾರೆ. ಅದೇ 200 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ 90ರ ಅಸುಪಾಸಿನಲ್ಲಿ ಔಟ್ ಆಗಿರುವುದು ಕೇವಲ 10 ಬಾರಿ ಮಾತ್ರ.

1 / 5
ಆದರೆ 62 ಟೆಸ್ಟ್ ಇನಿಂಗ್ಸ್​ಗಳಲ್ಲಿ ರಿಷಭ್ ಪಂತ್ 7 ಬಾರಿ ಒಂದಂಕಿ ರನ್​ಗಳಿಂದ ಶತಕ ವಂಚಿತರಾಗಿದ್ದಾರೆ. 2018 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 92 ರನ್ ಬಾರಿಸಿ ಔಟಾಗುವ ಮೂಲಕ ಪಂತ್ ನರ್ವಸ್ ನೈಂಟಿಯನ್ನು ಆರಂಭಿಸಿದ್ದರು. ಇದಾದ ಬಳಿಕ 2018ರಲ್ಲೇ ವಿಂಡೀಸ್ ವಿರುದ್ಧ ಮತ್ತೊಮ್ಮೆ 92 ರನ್ ಬಾರಿಸಿ ಔಟಾಗಿದ್ದರು.

ಆದರೆ 62 ಟೆಸ್ಟ್ ಇನಿಂಗ್ಸ್​ಗಳಲ್ಲಿ ರಿಷಭ್ ಪಂತ್ 7 ಬಾರಿ ಒಂದಂಕಿ ರನ್​ಗಳಿಂದ ಶತಕ ವಂಚಿತರಾಗಿದ್ದಾರೆ. 2018 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 92 ರನ್ ಬಾರಿಸಿ ಔಟಾಗುವ ಮೂಲಕ ಪಂತ್ ನರ್ವಸ್ ನೈಂಟಿಯನ್ನು ಆರಂಭಿಸಿದ್ದರು. ಇದಾದ ಬಳಿಕ 2018ರಲ್ಲೇ ವಿಂಡೀಸ್ ವಿರುದ್ಧ ಮತ್ತೊಮ್ಮೆ 92 ರನ್ ಬಾರಿಸಿ ಔಟಾಗಿದ್ದರು.

2 / 5
ಇನ್ನು 2021 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 97, ಇಂಗ್ಲೆಂಡ್ ವಿರುದ್ಧ 91 ರನ್ ಬಾರಿಸಿ ಔಟಾಗಿದ್ದರು. ಹಾಗೆಯೇ 2022 ರಲ್ಲಿ ಶ್ರೀಲಂಕಾ ವಿರುದ್ಧ 96 ಹಾಗೂ ಬಾಂಗ್ಲಾದೇಶ್ ವಿರುದ್ಧ 93 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು.

ಇನ್ನು 2021 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 97, ಇಂಗ್ಲೆಂಡ್ ವಿರುದ್ಧ 91 ರನ್ ಬಾರಿಸಿ ಔಟಾಗಿದ್ದರು. ಹಾಗೆಯೇ 2022 ರಲ್ಲಿ ಶ್ರೀಲಂಕಾ ವಿರುದ್ಧ 96 ಹಾಗೂ ಬಾಂಗ್ಲಾದೇಶ್ ವಿರುದ್ಧ 93 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು.

3 / 5
ಇದೀಗ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ 99 ರನ್​ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ಕೇವಲ 1 ರನ್​ನಿಂದ ಶತಕ ವಂಚಿತರಾಗಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ನೈಂಟಿ+ ರನ್​ಗಳಿಸಿ ಶತಕ ವಂಚಿತನಾದ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ 99 ರನ್​ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ಕೇವಲ 1 ರನ್​ನಿಂದ ಶತಕ ವಂಚಿತರಾಗಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ನೈಂಟಿ+ ರನ್​ಗಳಿಸಿ ಶತಕ ವಂಚಿತನಾದ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಅಷ್ಟೇ ಅಲ್ಲದೆ ಈ ಶತಕ ಕೈ ತಪ್ಪುವುದರೊಂದಿಗೆ ಟೀಮ್ ಇಂಡಿಯಾ ಪರ ಅತ್ಯಧಿಕ ಸೆಂಚುರಿ ಸಿಡಿಸಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ರಿಷಭ್ ಪಂತ್ ಕೈತಪ್ಪಿದೆ. ಈ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ಪಂತ್ 6 ಶತಕಗಳೊಂದಿಗೆ ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ರಿಷಭ್ ಪಂತ್ ನರ್ವಸ್ ನೈಂಟಿ ದಾಟಿ ಮೂರಂಕಿ ಮೊತ್ತಗಳಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

ಅಷ್ಟೇ ಅಲ್ಲದೆ ಈ ಶತಕ ಕೈ ತಪ್ಪುವುದರೊಂದಿಗೆ ಟೀಮ್ ಇಂಡಿಯಾ ಪರ ಅತ್ಯಧಿಕ ಸೆಂಚುರಿ ಸಿಡಿಸಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ರಿಷಭ್ ಪಂತ್ ಕೈತಪ್ಪಿದೆ. ಈ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ಪಂತ್ 6 ಶತಕಗಳೊಂದಿಗೆ ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ರಿಷಭ್ ಪಂತ್ ನರ್ವಸ್ ನೈಂಟಿ ದಾಟಿ ಮೂರಂಕಿ ಮೊತ್ತಗಳಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

5 / 5
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ