AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಇತಿಹಾಸದಲ್ಲಿ ಈ ಸಾಧನೆ ಮಾಡಿದ ಏಕೈಕ ಆಟಗಾರ ರಿಷಭ್ ಪಂತ್

Rishabh Pant's Record-Breaking Sixes: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ರಿಷಭ್ ಪಂತ್ ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಗಮನ ಸೆಳೆದಿದೆ. ಮೂರು ಪಂದ್ಯಗಳಲ್ಲಿ ಎರಡು ಶತಕ ಮತ್ತು ಎರಡು ಅರ್ಧಶತಕಗಳನ್ನು ಬಾರಿಸಿದ ಪಂತ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಪ್ರತಿ ಆವೃತ್ತಿಯಲ್ಲಿ 15 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನು ಸೃಷ್ಟಿಸಿದ್ದಾರೆ.

ಪೃಥ್ವಿಶಂಕರ
|

Updated on: Jul 17, 2025 | 7:21 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಈಗ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಐದು ಪಂದ್ಯಗಳಲ್ಲಿ ಮೂರು ಪಂದ್ಯಗಳು ಮುಗಿದಿದ್ದು, ಇಂಗ್ಲೆಂಡ್ 2-1 ಮುನ್ನಡೆಯಲ್ಲಿದೆ. ಲಾರ್ಡ್ಸ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯವನ್ನು ಭಾರತ ತಂಡ 22 ರನ್‌ಗಳಿಂದ ಸೋತಿರುವುದರಿಂದ ನಾಲ್ಕನೇ ಪಂದ್ಯವು ಗಿಲ್​ ಪಡೆಗೆ ಮಾಡು ಇಲ್ಲವೇ ಮಡಿ ಪರಿಸ್ಥಿತಿಯಾಗಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಈಗ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಐದು ಪಂದ್ಯಗಳಲ್ಲಿ ಮೂರು ಪಂದ್ಯಗಳು ಮುಗಿದಿದ್ದು, ಇಂಗ್ಲೆಂಡ್ 2-1 ಮುನ್ನಡೆಯಲ್ಲಿದೆ. ಲಾರ್ಡ್ಸ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯವನ್ನು ಭಾರತ ತಂಡ 22 ರನ್‌ಗಳಿಂದ ಸೋತಿರುವುದರಿಂದ ನಾಲ್ಕನೇ ಪಂದ್ಯವು ಗಿಲ್​ ಪಡೆಗೆ ಮಾಡು ಇಲ್ಲವೇ ಮಡಿ ಪರಿಸ್ಥಿತಿಯಾಗಿದೆ.

1 / 5
ಆದಾಗ್ಯೂ ಈ ಸರಣಿಯಲ್ಲಿ ತಂಡದ ಬ್ಯಾಟಿಂಗ್ ವಿಭಾಗ ಗಮನಾರ್ಹ ಪ್ರದರ್ಶನ ನೀಡಿದೆ. ಅದರಲ್ಲೂ ರಿಷಭ್ ಪಂತ್ ಇಲ್ಲಿಯವರೆಗೆ ನಡೆದ ಮೂರು ಪಂದ್ಯಗಳಲ್ಲಿ ರನ್​ಗಳ ಮಳೆ ಹರಿಸಿದ್ದು, ಇಲ್ಲಿಯವರೆಗೆ ಆಡಿದ ಮೂರು ಪಂದ್ಯಗಳಲ್ಲಿ 2 ಶತಕ ಮತ್ತು 2 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಇದರೊಂದಿಗೆ, ಅವರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ದೊಡ್ಡ ದಾಖಲೆಯನ್ನು ಸಹ ಸೃಷ್ಟಿಸಿದ್ದಾರೆ.

ಆದಾಗ್ಯೂ ಈ ಸರಣಿಯಲ್ಲಿ ತಂಡದ ಬ್ಯಾಟಿಂಗ್ ವಿಭಾಗ ಗಮನಾರ್ಹ ಪ್ರದರ್ಶನ ನೀಡಿದೆ. ಅದರಲ್ಲೂ ರಿಷಭ್ ಪಂತ್ ಇಲ್ಲಿಯವರೆಗೆ ನಡೆದ ಮೂರು ಪಂದ್ಯಗಳಲ್ಲಿ ರನ್​ಗಳ ಮಳೆ ಹರಿಸಿದ್ದು, ಇಲ್ಲಿಯವರೆಗೆ ಆಡಿದ ಮೂರು ಪಂದ್ಯಗಳಲ್ಲಿ 2 ಶತಕ ಮತ್ತು 2 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಇದರೊಂದಿಗೆ, ಅವರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ದೊಡ್ಡ ದಾಖಲೆಯನ್ನು ಸಹ ಸೃಷ್ಟಿಸಿದ್ದಾರೆ.

2 / 5
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಇದುವರೆಗೆ ಮೂರು ಆವೃತ್ತಿಗಳು ಮುಗಿದಿದ್ದು, ನಾಲ್ಕನೇ ಆವೃತ್ತಿ ಶುರುವಾಗಿದೆ. ಇದರಲ್ಲಿ ರಿಷಭ್ ಪಂತ್ ಪ್ರತಿಯೊಂದು ಆವೃತ್ತಿಯಲ್ಲೂ 15 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಪ್ರತಿ ಆವೃತ್ತಿಯಲ್ಲಿ 15ಕ್ಕೂ ಹೆಚ್ಚು ಸಿಕ್ಸರ್ ಬಾರಿಸಿದ ಮೊದಲ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಇದುವರೆಗೆ ಮೂರು ಆವೃತ್ತಿಗಳು ಮುಗಿದಿದ್ದು, ನಾಲ್ಕನೇ ಆವೃತ್ತಿ ಶುರುವಾಗಿದೆ. ಇದರಲ್ಲಿ ರಿಷಭ್ ಪಂತ್ ಪ್ರತಿಯೊಂದು ಆವೃತ್ತಿಯಲ್ಲೂ 15 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಪ್ರತಿ ಆವೃತ್ತಿಯಲ್ಲಿ 15ಕ್ಕೂ ಹೆಚ್ಚು ಸಿಕ್ಸರ್ ಬಾರಿಸಿದ ಮೊದಲ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

3 / 5
ಮೊದಲ ಸೀಸನ್‌ನಲ್ಲಿ 22 ಸಿಕ್ಸರ್‌ಗಳನ್ನು ಹೊಡಿದಿದ್ದ ರಿಷಭ್ ಪಂತ್, ಎರಡನೇ ಸೀಸನ್‌ನಲ್ಲಿ 16 ಸಿಕ್ಸರ್‌ಗಳು ಮತ್ತು ಮೂರನೇ ಸೀಸನ್‌ನಲ್ಲಿ 16 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈಗ ನಾಲ್ಕನೇ ಸೀಸನ್ ಆರಂಭವಾಗಿದ್ದು, ಈ ಸೀಸನ್‌ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಅವರು ಈಗಾಗಲೇ 15 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಮೊದಲ ಸೀಸನ್‌ನಲ್ಲಿ 22 ಸಿಕ್ಸರ್‌ಗಳನ್ನು ಹೊಡಿದಿದ್ದ ರಿಷಭ್ ಪಂತ್, ಎರಡನೇ ಸೀಸನ್‌ನಲ್ಲಿ 16 ಸಿಕ್ಸರ್‌ಗಳು ಮತ್ತು ಮೂರನೇ ಸೀಸನ್‌ನಲ್ಲಿ 16 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈಗ ನಾಲ್ಕನೇ ಸೀಸನ್ ಆರಂಭವಾಗಿದ್ದು, ಈ ಸೀಸನ್‌ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಅವರು ಈಗಾಗಲೇ 15 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

4 / 5
ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ದೊಡ್ಡ ದಾಖಲೆ ನಿರ್ಮಿಸುವ ಅವಕಾಶ ಹೊಂದಿದ್ದಾರೆ. ಆದರೆ ಬೆರಳಿನ ಗಾಯದಿಂದಾಗಿ ರಿಷಭ್ ಪಂತ್ ಆಡುವುದು ಅನುಮಾನವಾಗಿದೆ. ಈ ಪಂದ್ಯದಲ್ಲಿ ಅವರು ಆಡಿದರೆ, ಭಾರತ ಪರ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎನಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ವೀರೇಂದ್ರ ಸೆಹ್ವಾಗ್ 90 ಸಿಕ್ಸರ್ ಬಾರಿಸಿದ್ದರೆ, ಪಂತ್ ಅವರ ಹೆಸರಿನಲ್ಲಿ 88 ಸಿಕ್ಸರ್‌ಗಳಿವೆ.

ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ದೊಡ್ಡ ದಾಖಲೆ ನಿರ್ಮಿಸುವ ಅವಕಾಶ ಹೊಂದಿದ್ದಾರೆ. ಆದರೆ ಬೆರಳಿನ ಗಾಯದಿಂದಾಗಿ ರಿಷಭ್ ಪಂತ್ ಆಡುವುದು ಅನುಮಾನವಾಗಿದೆ. ಈ ಪಂದ್ಯದಲ್ಲಿ ಅವರು ಆಡಿದರೆ, ಭಾರತ ಪರ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎನಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ವೀರೇಂದ್ರ ಸೆಹ್ವಾಗ್ 90 ಸಿಕ್ಸರ್ ಬಾರಿಸಿದ್ದರೆ, ಪಂತ್ ಅವರ ಹೆಸರಿನಲ್ಲಿ 88 ಸಿಕ್ಸರ್‌ಗಳಿವೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ