Sign In

By signing in or creating an account, you agree with Associated Broadcasting Company's Terms & Conditions and Privacy Policy.

Riyan Parag: ಪರಾಗ್ ಪವರ್: ತೂಫಾನ್ ಸೆಂಚುರಿ ಸಿಡಿಸಿದ ರಿಯಾನ್

Riyan Parag: 87 ಎಸೆತಗಳನ್ನು ಎದುರಿಸಿದ ರಿಯಾನ್ ಪರಾಗ್ 12 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 155 ರನ್ ಬಾರಿಸಿ ಔಟಾದರು. ಪರಾಗ್ ಅವರ ಈ ಭರ್ಜರಿ ಶತಕದ ನೆರವಿನಿಂದ ಅಸ್ಸಾಂ ತಂಡ ದ್ವಿತೀಯ ಇನಿಂಗ್ಸ್​ನಲ್ಲಿ 254 ರನ್ ಕಲೆಹಾಕಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 08, 2024 | 12:23 PM

ರಾಯ್​ಪುರದಲ್ಲಿ ನಡೆಯುತ್ತಿರುವ ರಣಜಿ ಟೂರ್ನಿ ಗ್ರೂಪ್-ಸಿ ಪಂದ್ಯದಲ್ಲಿ ಅಸ್ಸಾಂ ತಂಡದ ಯುವ ಬ್ಯಾಟ್ಸ್​ಮನ್ ರಿಯಾನ್ ಪರಾಗ್ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಛತ್ತೀಸ್​ಗಢ್​ ವಿರುದ್ಧದ ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಪರಾಗ್ ಅಕ್ಷರಶಃ ಅಬ್ಬರಿಸಿದರು.

ರಾಯ್​ಪುರದಲ್ಲಿ ನಡೆಯುತ್ತಿರುವ ರಣಜಿ ಟೂರ್ನಿ ಗ್ರೂಪ್-ಸಿ ಪಂದ್ಯದಲ್ಲಿ ಅಸ್ಸಾಂ ತಂಡದ ಯುವ ಬ್ಯಾಟ್ಸ್​ಮನ್ ರಿಯಾನ್ ಪರಾಗ್ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಛತ್ತೀಸ್​ಗಢ್​ ವಿರುದ್ಧದ ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಪರಾಗ್ ಅಕ್ಷರಶಃ ಅಬ್ಬರಿಸಿದರು.

1 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಛತ್ತೀಸ್​ಗಢ್ ತಂಡವು 327 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್​ ಆಡಿದ ಅಸ್ಸಾಂ ಕೇವಲ 159 ರನ್​ಗಳಿಗೆ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ಫಾಲೋಆನ್​ ಹೇರುವ ಮೂಲಕ ಅಸ್ಸಾಂ ತಂಡವನ್ನು ದ್ವಿತೀಯ ಇನಿಂಗ್ಸ್​ಗೆ ಆಹ್ವಾನಿಸಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಛತ್ತೀಸ್​ಗಢ್ ತಂಡವು 327 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್​ ಆಡಿದ ಅಸ್ಸಾಂ ಕೇವಲ 159 ರನ್​ಗಳಿಗೆ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ಫಾಲೋಆನ್​ ಹೇರುವ ಮೂಲಕ ಅಸ್ಸಾಂ ತಂಡವನ್ನು ದ್ವಿತೀಯ ಇನಿಂಗ್ಸ್​ಗೆ ಆಹ್ವಾನಿಸಿತು.

2 / 6
ಅದರಂತೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಅಸ್ಸಾಂ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 78 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದಾಗ ಕ್ರೀಸ್​ಗೆ ಆಗಮಿಸಿದ ರಿಯಾನ್ ಪರಾಗ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ಅದರಂತೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಅಸ್ಸಾಂ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 78 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದಾಗ ಕ್ರೀಸ್​ಗೆ ಆಗಮಿಸಿದ ರಿಯಾನ್ ಪರಾಗ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

3 / 6
ಆರಂಭದಿಂದಲೇ ಛತ್ತೀಸ್​ಗಢ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ರಿಯಾನ್ ಪರಾಗ್ ಕೇವಲ 56 ಎಸೆತಗಳಲ್ಲಿ ಶತಕ ಪೂರೈಸಿದರು. ಒಂದೆಡೆ ವಿಕೆಟ್ ಬೀಳುತ್ತಿದ್ದರೂ ಮತ್ತೊಂದೆಡೆ ಅಮೋಘ ಬ್ಯಾಟಿಂಗ್ ಮುಂದುವರೆಸಿದ ಪರಾಗ್ ತಂಡದ ಮೊತ್ತವನ್ನು 200ರ ಗಡಿದಾಟಿಸಿದರು.

ಆರಂಭದಿಂದಲೇ ಛತ್ತೀಸ್​ಗಢ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ರಿಯಾನ್ ಪರಾಗ್ ಕೇವಲ 56 ಎಸೆತಗಳಲ್ಲಿ ಶತಕ ಪೂರೈಸಿದರು. ಒಂದೆಡೆ ವಿಕೆಟ್ ಬೀಳುತ್ತಿದ್ದರೂ ಮತ್ತೊಂದೆಡೆ ಅಮೋಘ ಬ್ಯಾಟಿಂಗ್ ಮುಂದುವರೆಸಿದ ಪರಾಗ್ ತಂಡದ ಮೊತ್ತವನ್ನು 200ರ ಗಡಿದಾಟಿಸಿದರು.

4 / 6
ಅಂತಿಮವಾಗಿ 87 ಎಸೆತಗಳನ್ನು ಎದುರಿಸಿದ ರಿಯಾನ್ ಪರಾಗ್ 12 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 155 ರನ್ ಬಾರಿಸಿ ಔಟಾದರು. ಪರಾಗ್ ಅವರ ಈ ಭರ್ಜರಿ ಶತಕದ ನೆರವಿನಿಂದ ಅಸ್ಸಾಂ ತಂಡ ದ್ವಿತೀಯ ಇನಿಂಗ್ಸ್​ನಲ್ಲಿ 254 ರನ್ ಕಲೆಹಾಕಿತು.

ಅಂತಿಮವಾಗಿ 87 ಎಸೆತಗಳನ್ನು ಎದುರಿಸಿದ ರಿಯಾನ್ ಪರಾಗ್ 12 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 155 ರನ್ ಬಾರಿಸಿ ಔಟಾದರು. ಪರಾಗ್ ಅವರ ಈ ಭರ್ಜರಿ ಶತಕದ ನೆರವಿನಿಂದ ಅಸ್ಸಾಂ ತಂಡ ದ್ವಿತೀಯ ಇನಿಂಗ್ಸ್​ನಲ್ಲಿ 254 ರನ್ ಕಲೆಹಾಕಿತು.

5 / 6
ಅಂದಹಾಗೆ ರಣಜಿ ಟೂರ್ನಿಯಲ್ಲಿ ಅತೀ ವೇಗದ ಶತಕ ಬಾರಿಸಿದ ದಾಖಲೆ ರಿಷಭ್ ಪಂತ್ ಹೆಸರಿನಲ್ಲಿದೆ. 2016 ರಲ್ಲಿ ಛತ್ತೀಸ್​ಗಢ್ ವಿರುದ್ಧ ಪಂತ್ ಕೇವಲ 48 ಎಸೆತಗಳಲ್ಲಿ ಶತಕ ಪೂರೈಸಿ ದಾಖಲೆ ಬರೆದಿದ್ದಾರೆ.

ಅಂದಹಾಗೆ ರಣಜಿ ಟೂರ್ನಿಯಲ್ಲಿ ಅತೀ ವೇಗದ ಶತಕ ಬಾರಿಸಿದ ದಾಖಲೆ ರಿಷಭ್ ಪಂತ್ ಹೆಸರಿನಲ್ಲಿದೆ. 2016 ರಲ್ಲಿ ಛತ್ತೀಸ್​ಗಢ್ ವಿರುದ್ಧ ಪಂತ್ ಕೇವಲ 48 ಎಸೆತಗಳಲ್ಲಿ ಶತಕ ಪೂರೈಸಿ ದಾಖಲೆ ಬರೆದಿದ್ದಾರೆ.

6 / 6
Follow us
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ