AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Riyan Parag: ರಾಜಸ್ಥಾನ್ ಸೋಲಲು ನೀನೇ ಕಾರಣ: ಸಖತ್ ಟ್ರೋಲ್ ಆದ ರಿಯಾನ್ ಪರಾಗ್

RR vs LSG, IPL 2023: ಲಖನೌ ಸೂಪರ್ ಜೇಂಟ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಸೋತ ಬೆನ್ನಲ್ಲೇ ತಂಡದ ಬ್ಯಾಟರ್ ರಿಯಾನ್ ಪರಾಗ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೋಲ್ ಆಗಿದ್ದಾರೆ.

Vinay Bhat
|

Updated on:Apr 20, 2023 | 9:39 AM

ಬುಧವಾರ ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಲಖನೌ ಸೂಪರ್ ಜೇಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 10 ರನ್​ಗಳಿಂದ ಸೋಲು ಕಂಡಿತು. ದೊಡ್ಡ ಮೊತ್ತದ ಟಾರ್ಗೆಟ್ ಇರದಿದ್ದರೂ ಆರ್​ಆರ್​ ತಂಡ ಗೆಲ್ಲಲು ಸಾಧ್ಯವಾಗಲಿಲ್ಲ.

ಬುಧವಾರ ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಲಖನೌ ಸೂಪರ್ ಜೇಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 10 ರನ್​ಗಳಿಂದ ಸೋಲು ಕಂಡಿತು. ದೊಡ್ಡ ಮೊತ್ತದ ಟಾರ್ಗೆಟ್ ಇರದಿದ್ದರೂ ಆರ್​ಆರ್​ ತಂಡ ಗೆಲ್ಲಲು ಸಾಧ್ಯವಾಗಲಿಲ್ಲ.

1 / 8
ರಾಜಸ್ಥಾನ್ ಸೋತ ಬೆನ್ನಲ್ಲೇ ತಂಡದ ಬ್ಯಾಟರ್ ರಿಯಾನ್ ಪರಾಗ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೋಲ್ ಆಗಿದ್ದಾರೆ. ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯದಲ್ಲಿ ಸಾಕಷ್ಟು ಬಾಲ್ ತಿಂದು ಪರಾಗ್ ಸೋಲಿಗೆ ಕಾರಣರಾದರು ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.

ರಾಜಸ್ಥಾನ್ ಸೋತ ಬೆನ್ನಲ್ಲೇ ತಂಡದ ಬ್ಯಾಟರ್ ರಿಯಾನ್ ಪರಾಗ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೋಲ್ ಆಗಿದ್ದಾರೆ. ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯದಲ್ಲಿ ಸಾಕಷ್ಟು ಬಾಲ್ ತಿಂದು ಪರಾಗ್ ಸೋಲಿಗೆ ಕಾರಣರಾದರು ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.

2 / 8
ಸತತ ಕಳಪೆ ಪ್ರದರ್ಶನ ತೋರುತ್ತಿದ್ದರೂ ಪರಾಗ್​ಗೆ ಯಾಕೆ ಇಷ್ಟೊಂದು ಅವಕಾಶ ನೀಡುತ್ತಿದ್ದೀರಿ ಎಂದು ಕೆಲವರು ಬರೆದುಕೊಂಡಿದ್ದಾರೆ. ಪರಾಗ್ 36 ಐಪಿಎಲ್ ಪಂದ್ಯಗಳಲ್ಲಿ ಗಳಿಸಿರುವುದು ಕೇವಲ 401 ರನ್ ಗಳನ್ನು ಮಾತ್ರ.

ಸತತ ಕಳಪೆ ಪ್ರದರ್ಶನ ತೋರುತ್ತಿದ್ದರೂ ಪರಾಗ್​ಗೆ ಯಾಕೆ ಇಷ್ಟೊಂದು ಅವಕಾಶ ನೀಡುತ್ತಿದ್ದೀರಿ ಎಂದು ಕೆಲವರು ಬರೆದುಕೊಂಡಿದ್ದಾರೆ. ಪರಾಗ್ 36 ಐಪಿಎಲ್ ಪಂದ್ಯಗಳಲ್ಲಿ ಗಳಿಸಿರುವುದು ಕೇವಲ 401 ರನ್ ಗಳನ್ನು ಮಾತ್ರ.

3 / 8
ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಲಖನೌ ತಂಡದ ಪರ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದರೂ ನಾಯಕ ಕೆಎಲ್. ರಾಹುಲ್ (39) ಹಾಗೂ ಕೈಲ್ ಮೇಯರ್ಸ್ (51) ಉತ್ತಮ ಆರಂಭ ನೀಡಿದರು. ಬಳಿಕ ಬಂದ ಆಯುಶ್ ಬದೋನಿ(1), ದೀಪಕ್ ಹೂಡಾ(2) ನಿರಾಸೆ ಮೂಡಿಸಿದರು. ಹೀಗಾಗಿ, ಬೃಹತ್ ಮೊತ್ತ ಪೇರಿಸಲು ಲಖನೌ ತಂಡಕ್ಕೆ ಸಾಧ್ಯವಾಗಲಿಲ್ಲ.

ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಲಖನೌ ತಂಡದ ಪರ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದರೂ ನಾಯಕ ಕೆಎಲ್. ರಾಹುಲ್ (39) ಹಾಗೂ ಕೈಲ್ ಮೇಯರ್ಸ್ (51) ಉತ್ತಮ ಆರಂಭ ನೀಡಿದರು. ಬಳಿಕ ಬಂದ ಆಯುಶ್ ಬದೋನಿ(1), ದೀಪಕ್ ಹೂಡಾ(2) ನಿರಾಸೆ ಮೂಡಿಸಿದರು. ಹೀಗಾಗಿ, ಬೃಹತ್ ಮೊತ್ತ ಪೇರಿಸಲು ಲಖನೌ ತಂಡಕ್ಕೆ ಸಾಧ್ಯವಾಗಲಿಲ್ಲ.

4 / 8
ಎಲ್​ಎಸ್​ಜಿ ಪರ ಮಾರ್ಕಸ್ ಸ್ಟೋಯ್ನಿಸ್(21), ನಿಕೋಲಸ್ ಪೂರನ್(29) ತಂಡದ ಗೌರವಾನ್ವಿತ ಮೊತ್ತಕ್ಕೆ ಕಾರಣರಾದರು. ಲಖನೌ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. 4 ಓವರ್‌ಗಳಲ್ಲಿ 23 ರನ್ ನೀಡಿ ರವಿಚಂದ್ರನ್ ಅಶ್ವಿನ್ 2 ವಿಕೆಟ್ ಪಡೆದರು.

ಎಲ್​ಎಸ್​ಜಿ ಪರ ಮಾರ್ಕಸ್ ಸ್ಟೋಯ್ನಿಸ್(21), ನಿಕೋಲಸ್ ಪೂರನ್(29) ತಂಡದ ಗೌರವಾನ್ವಿತ ಮೊತ್ತಕ್ಕೆ ಕಾರಣರಾದರು. ಲಖನೌ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. 4 ಓವರ್‌ಗಳಲ್ಲಿ 23 ರನ್ ನೀಡಿ ರವಿಚಂದ್ರನ್ ಅಶ್ವಿನ್ 2 ವಿಕೆಟ್ ಪಡೆದರು.

5 / 8
ಟಾರ್ಗೆಟ್ ಬೆನ್ನಟ್ಟಿದ ಆರ್​ಆರ್​ ಪರ ಇನ್ನಿಂಗ್ಸ್​ ಆರಂಭಿಸಿದ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಉತ್ತಮ ಆರಂಭವನ್ನೇ ಒದಗಿಸಿದರು. ಮೊದಲ ವಿಕೆಟ್‌ಗೆ ಈ ಜೋಡಿ 87 ರನ್ ಜೊತೆಯಾಟ ನೀಡಿತು.

ಟಾರ್ಗೆಟ್ ಬೆನ್ನಟ್ಟಿದ ಆರ್​ಆರ್​ ಪರ ಇನ್ನಿಂಗ್ಸ್​ ಆರಂಭಿಸಿದ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಉತ್ತಮ ಆರಂಭವನ್ನೇ ಒದಗಿಸಿದರು. ಮೊದಲ ವಿಕೆಟ್‌ಗೆ ಈ ಜೋಡಿ 87 ರನ್ ಜೊತೆಯಾಟ ನೀಡಿತು.

6 / 8
35 ಬಾಲ್​ಗಳಲ್ಲಿ ನಾಲ್ಕು ಬೌಂಡರಿ ಮತ್ತು ಎರಡು ಸಿಕ್ಸರ್ ಸಮೇತ ಜೈಸ್ವಾಲ್ 44 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ನಾಯಕ ಸಂಜು ಸ್ಯಾಮ್ಸನ್ ಕೇವಲ 2 ರನ್​ಗೆ ರನೌಟ್‌ ಬಲಿಗೆ ಸಿಲುಕಿದರು. ಜೋಸ್​ ಬಟ್ಲರ್ 41 ಎಸೆತಗಳಲ್ಲಿ ನಾಲ್ಕು ಬೌಂಡರಿ, ಒಂದು ಸಿಕ್ಸರ್​ 40 ರನ್ ಸಿಡಿಸಿ ನಿರ್ಗಮಿಸಿದರು.

35 ಬಾಲ್​ಗಳಲ್ಲಿ ನಾಲ್ಕು ಬೌಂಡರಿ ಮತ್ತು ಎರಡು ಸಿಕ್ಸರ್ ಸಮೇತ ಜೈಸ್ವಾಲ್ 44 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ನಾಯಕ ಸಂಜು ಸ್ಯಾಮ್ಸನ್ ಕೇವಲ 2 ರನ್​ಗೆ ರನೌಟ್‌ ಬಲಿಗೆ ಸಿಲುಕಿದರು. ಜೋಸ್​ ಬಟ್ಲರ್ 41 ಎಸೆತಗಳಲ್ಲಿ ನಾಲ್ಕು ಬೌಂಡರಿ, ಒಂದು ಸಿಕ್ಸರ್​ 40 ರನ್ ಸಿಡಿಸಿ ನಿರ್ಗಮಿಸಿದರು.

7 / 8
ನಂತರ ದೇವದತ್ ಪಡಿಕ್ಕಲ್ (26) ಜವಾಬ್ದಾರಿಯುತ ಆಟ ಆಡಿದರೂ ತಂಡ ಗೆಲ್ಲಲು ಸಾಧ್ಯವಾಗಲಿಲ್ಲ. ಕೊನೆಯ ಓವರ್​ನಲ್ಲಿ 19 ರನ್​ಗಳ ಅಗತ್ಯವಿತ್ತು. ಆದರೆ, ಹೆಟ್ಮೆಯರ್ ಕೇವಲ 2 ರನ್​ಗೆ ವಿಕೆಟ್​ ಒಪ್ಪಿಸಿದರು. ಧ್ರುವ್ ಜುರೆಲ್ 0 ಸುತ್ತಿದರು. ಆರ್​ಆರ್​ 144 ರನ್​ ಗಳಿಸಲಷ್ಟೆ ಸಾಧ್ಯವಾಯಿತು.

ನಂತರ ದೇವದತ್ ಪಡಿಕ್ಕಲ್ (26) ಜವಾಬ್ದಾರಿಯುತ ಆಟ ಆಡಿದರೂ ತಂಡ ಗೆಲ್ಲಲು ಸಾಧ್ಯವಾಗಲಿಲ್ಲ. ಕೊನೆಯ ಓವರ್​ನಲ್ಲಿ 19 ರನ್​ಗಳ ಅಗತ್ಯವಿತ್ತು. ಆದರೆ, ಹೆಟ್ಮೆಯರ್ ಕೇವಲ 2 ರನ್​ಗೆ ವಿಕೆಟ್​ ಒಪ್ಪಿಸಿದರು. ಧ್ರುವ್ ಜುರೆಲ್ 0 ಸುತ್ತಿದರು. ಆರ್​ಆರ್​ 144 ರನ್​ ಗಳಿಸಲಷ್ಟೆ ಸಾಧ್ಯವಾಯಿತು.

8 / 8

Published On - 9:39 am, Thu, 20 April 23

Follow us
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ